Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾರ್ವಜನಿಕರ ಅಸಡ್ಡೆ: ತಿಪ್ಪೆಗುಂಡಿಯಾದ...

ಸಾರ್ವಜನಿಕರ ಅಸಡ್ಡೆ: ತಿಪ್ಪೆಗುಂಡಿಯಾದ ‘ಜ್ಞಾನದೇಗುಲ’!

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್31 Jan 2026 2:25 PM IST
share
ಸಾರ್ವಜನಿಕರ ಅಸಡ್ಡೆ: ತಿಪ್ಪೆಗುಂಡಿಯಾದ ‘ಜ್ಞಾನದೇಗುಲ’!
ನವಬಾಗ ಸರಕಾರಿ ಕಾಲೇಜು ಆವರಣದಲ್ಲಿ ಕಸದ ರಾಶಿ: ವಿದ್ಯಾರ್ಥಿಗಳ ಬದುಕು ದುಸ್ಥಿತಿಗೆ

ವಿಜಯಪುರ: ಜ್ಞಾನಾರ್ಜನೆಗೆ ದೇಗುಲವಾಗಬೇಕಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂದು ಕಸದ ರಾಶಿ, ಮಳೆ ನೀರು ಮತ್ತು ಚರಂಡಿ ನೀರಿನ ಮಧ್ಯೆ ನಲುಗುತ್ತಿರುವುದು ದುರಂತಕರ ಚಿತ್ರಣವಾಗಿದೆ. ವಿಜಯಪುರ ನಗರದ ನವಬಾಗ ಪ್ರದೇಶದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಸ ಸಂಗ್ರಹಗೊಂಡು ಗಬ್ಬು ವಾಸನೆ ಹರಡಿದ್ದು, ಇದರಿಂದ ಸಾವಿರಾರು ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯ ಅಪಾಯದಲ್ಲಿದೆ.

ಈ ಕಾಲೇಜಿನಲ್ಲಿ ಒಟ್ಟು 1,411 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಹೆಚ್ಚಿನವರು ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಾಗಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಓದಲು ಸಾಧ್ಯವಾಗದ ಬಡ ವಿದ್ಯಾರ್ಥಿಗಳಿಗೆ ಇದು ಪ್ರಮುಖ ವಿದ್ಯಾ ಕೇಂದ್ರವಾಗಿದೆ. ಕೆಲ ವಿದ್ಯಾರ್ಥಿಗಳು ರಾತ್ರಿ ಹೊಟೇಲ್, ಅಂಗಡಿಗಳಲ್ಲಿ ಕೆಲಸ ಮಾಡಿಕೊಂಡು ಶಿಕ್ಷಣ ಮುಂದುವರಿಸುತ್ತಿದ್ದಾರೆ. ಆದರೆ ಇಂತಹ ವಿದ್ಯಾರ್ಥಿಗಳ ಬದುಕು ಇಂದು ಕಸದ ರಾಶಿಗಳ ಮಧ್ಯೆ ಸಿಲುಕಿರುವುದು ಮನಕಲಕುವ ಸಂಗತಿಯಾಗಿದೆ.

ಕಲುಷಿತ ನೀರಿನಿಂದ ನಡುಗಡ್ಡೆಯಾದ ಆವರಣ

ಕಾಲೇಜಿನ ವಿಶಾಲ ಕಟ್ಟಡಗಳ ಸುತ್ತ ಮಳೆ ಹಾಗೂ ಚರಂಡಿ ನೀರು ನಿಂತಿದ್ದು, ಆವರಣ ಸಂಪೂರ್ಣವಾಗಿ ಕಲುಷಿತಗೊಂಡಿದೆ. ನೀರು ಹೊರಹಾಕುವ ವ್ಯವಸ್ಥೆ ಇಲ್ಲದ ಕಾರಣ ಸೊಳ್ಳೆಗಳ ಕಾಟ ಹೆಚ್ಚಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಮನೆಮಾಡಿದೆ. ಕೆಲ ವಿದ್ಯಾರ್ಥಿಗಳು ಕಲುಷಿತ ವಾತಾವರಣದ ಕಾರಣ ಕಾಲೇಜಿಗೆ ಬರಲು ಹಿಂಜರಿಯುತ್ತಿದ್ದಾರೆ.

ಕಸದ ವಾಹನವೇ ಕಾರಣ?

ಸ್ಥಳೀಯ ನಿವಾಸಿಗಳ ಪ್ರಕಾರ, ಮಹಾನಗರ ಪಾಲಿಕೆಯ ಕಸದ ವಾಹನಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಮೂರು ದಿನಕ್ಕೆ ಒಮ್ಮೆ ಮಾತ್ರ ವಾಹನ ಬರುತ್ತದೆ. ಅಷ್ಟರವರೆಗೆ ಕಸ ಮನೆಯಲ್ಲಿ ಇಟ್ಟುಕೊಳ್ಳಲು ಆಗುವುದಿಲ್ಲ. ಅನಿವಾರ್ಯವಾಗಿ ಕಾಲೇಜು ಆವರಣದಲ್ಲಿ ಹಾಕಬೇಕು ಎಂದು ನಿವಾಸಿಗಳು ಹೇಳುತ್ತಾರೆ. ಸಣ್ಣ ರಸ್ತೆಗಳಿರುವ ಬಡಾವಣೆಗಳಿಗೆ ವಾಹನ ಹೋಗದಿರುವುದೂ ಸಮಸ್ಯೆಗೆ ಕಾರಣವಾಗಿದೆ.

ಸಿಸಿ ಕ್ಯಾಮೆರಾಗಳಿಗೂ ಕಲ್ಲು

ಕಸ ಹಾಕುವುದನ್ನು ತಡೆಯಲು ಕಾಲೇಜು ಆಡಳಿತ ಕಾಂಪೌಂಡ್ ಬಳಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದಾಗ, ಅವುಗಳಿಗೆ ಕಲ್ಲು ಹೊಡೆದು ಒಡೆದು ಹಾಕಿರುವ ಘಟನೆಗಳು ನಡೆದಿವೆ. ಇದರಿಂದಾಗಿ ಶುಚಿತ್ವ ಕಾಪಾಡುವುದು ಇಲ್ಲಿ ಸವಾಲಾಗಿ.

ಕಾಲೇಜು ಹೆಸರು ಹೇಳಲು ಮುಜುಗರ

ಕಾಲೇಜಿನ ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ, ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ತಾವು ಯಾವ ಕಾಲೇಜಿನಲ್ಲಿ ಓದುತ್ತಿದ್ದೇವೆ ಎಂದು ಹೇಳಲು ಕೂಡ ಮುಜುಗರಪಡುವಂತಾಗಿದೆ.

‘‘ನಾವು ನವಬಾಗ್ ಕಾಲೇಜು ಎಂದರೆ, ಅದೇ ಕಸದ ಕಾಲೇಜಾ ಎಂದು ಕೆಲವರು ನಗುತ್ತಾರೆ. ಅದಕ್ಕೇ ಕಾಲೇಜು ಹೆಸರು ಹೇಳುವುದೇ ಬೇಡ ಎಂದುಕೊಳ್ಳುತ್ತೇವೆ,’’ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡಿದ್ದಾರೆ.

ಕಸದ ತೊಟ್ಟಿಯಾದ ಕಾಲೇಜು ಆವರಣ

‘ಊರ ಕಸ ಮನೆ ಮುಂದೆ’ ಎನ್ನುವ ಗಾದೆ ಮಾತಿನಂತೆ, ಸುತ್ತಮುತ್ತಲ ಬಡಾವಣೆಗಳ ಜನರು ಕಾಲೇಜು ಕಾಂಪೌಂಡ್ ಅನ್ನು ಕಸದ ತೊಟ್ಟಿಯಾಗಿ ಬಳಸುತ್ತಿದ್ದಾರೆ. ಕಸ ಹಾಕಬೇಡಿ ಎಂದು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹಲವು ಬಾರಿ ಜಾಗೃತಿ ಅಭಿಯಾನ ನಡೆಸಿದರೂ ಪ್ರಯೋಜನವಾಗಿಲ್ಲ. ತಿಂಗಳಲ್ಲಿ ಒಮ್ಮೆ ಸ್ವಚ್ಛತೆ ಮಾಡಿದರೂ ಕೆಲವೇ ದಿನಗಳಲ್ಲಿ ಮತ್ತೆ ಕಸದ ರಾಶಿಗಳು ಕಾಣಿಸಿಕೊಳ್ಳುತ್ತಿವೆ.

ಸುತ್ತಮುತ್ತಲ ನಿವಾಸಿಗಳು ಮನವಿ ಮಾಡಿದರೂ ಕಸ ಹಾಕುವುದನ್ನು ನಿಲ್ಲಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಶಾಸಕರಿಗೂ ಮನವಿ ಮಾಡಿದ್ದು, ಅವರು ಅಧಿವೇಶನದಿಂದ ಬಂದ ಬಳಿಕ ಸಮಸ್ಯೆ ಪರಿಹಾರಕ್ಕೆ ಭರವಸೆ ನೀಡಿದ್ದಾರೆ.

- ಡಾ.ಎ.ಐ.ಹಂಜಗಿ, ಕಾಲೇಜು ಪ್ರಾಂಶುಪಾಲರು

ಸೊಳ್ಳೆಗಳ ಕಾಟ ಮತ್ತು ಗಬ್ಬು ವಾಸನೆಯಲ್ಲಿ ಓದುವುದು ಅಸಾಧ್ಯವಾಗಿದೆ. ಚಳಿಯಲ್ಲೂ ಫ್ಯಾನ್ ನಿರಂತರವಾಗಿ ಚಾಲೂ ಇಡಬೇಕಾಗಿದೆ.

-ವಿಕಾಶ ತೊಳೆ, ವಸತಿ ನಿಲಯದ ವಿದ್ಯಾರ್ಥಿ

ಈ ಹಿಂದೆ ಕಸದ ವಾಹನ ಸರಿಯಾಗಿ ಬರುತ್ತಿತ್ತು. ಈಗ ಯಾವ ಸಮಯಕ್ಕೆ ಬರುತ್ತದೆ ಎನ್ನುವುದೇ ಗೊತ್ತಿಲ್ಲ. ಅನಿವಾರ್ಯವಾಗಿ ಜನ ಕಾಲೇಜು ಆವರಣದಲ್ಲಿ ಕಸ ಹಾಕುತ್ತಿದ್ದಾರೆ.

-ಹಾಜಿ ಮನಿಹಾರ, ನವಬಾಗ ನಿವಾಸಿ

share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X