Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಾಗರಿಕರ ಅಸಡ್ಡೆ: ಪ್ಲಾಸ್ಟಿಕ್...

ನಾಗರಿಕರ ಅಸಡ್ಡೆ: ಪ್ಲಾಸ್ಟಿಕ್ ತಿನ್ನುತ್ತಿರುವ ಜಾನುವಾರುಗಳು

ಪ್ರಶಾಂತ್ ಚವ್ಹಾಣಪ್ರಶಾಂತ್ ಚವ್ಹಾಣ21 April 2026 11:57 AM IST
share
ನಾಗರಿಕರ ಅಸಡ್ಡೆ: ಪ್ಲಾಸ್ಟಿಕ್ ತಿನ್ನುತ್ತಿರುವ ಜಾನುವಾರುಗಳು

ಯಡ್ರಾಮಿ: ಪುಟ್ಟ ಮಗು ಚಾಕ್ಲೆಟ್ಟೋ, ಐಸ್‌ಕ್ರೀಮೋ ತಿನ್ನುತ್ತ ಬಾಯಿಗೆ ಸ್ವಲ್ಪ ಕಾಗದ ಅಥವಾ ಪ್ಲಾಸ್ಟಿಕ್ ಹೋದರೆ ಪ್ರಳಯವಾದಂತೆ ವರ್ತಿಸುವ ಮನುಷ್ಯನ ಈ ಸೂಕ್ಷ್ಮತೆ ರಸ್ತೆ ಪಕ್ಕ ಪ್ಲಾಸ್ಟಿಕ್‌ನಲ್ಲಿ ಆಹಾರ ಸುತ್ತಿ ಬಿಸಾಡುವಾಗ ಅದೆಲ್ಲಿ ಅಡಗಿರುತ್ತದೋ ಗೊತ್ತಿಲ್ಲ. ಸಗರ ನಾಡು ಎಂದೇ ಖ್ಯಾತಿ ಪಡೆದಿರುವ ಯಡ್ರಾಮಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಚೀಲ, ಬಾಟಲ್‌ಗಳು ಕಣ್ಣಿಗೆ ರಾಚುತ್ತಿವೆ.

ಸ್ವಚ್ಛಂದವಾಗಿ ಹುಲ್ಲುಗಾವಲಿನಲ್ಲಿ ತಿರುಗಾಡಿಕೊಂಡಿದ್ದ ನಾಯಿ, ಹಂದಿ, ಹಸುಗಳ ಹೊಟ್ಟೆಯಲ್ಲೂ ಈಗೀಗ ಮೂಟೆಗಟ್ಟಲೇ ಪ್ಲಾಸ್ಟಿಕ್ ಪತ್ತೆಯಾಗುತ್ತಿದೆ. ಆದರೆ, ಇದಕ್ಕೆ ದೂಷಿಸಬೇಕಾದುದು ಪ್ಲಾಸ್ಟಿಕ್ ನ್ನು ಅಲ್ಲ. ಬದಲಾಗಿ, ಅದನ್ನು ವೈಜ್ಞಾನಿಕವಾಗಿ ನಿರ್ವಹಿಸದೇ ಎಲ್ಲೆಂದರಲ್ಲಿ ಬಿಸಾಡುವ ನಾಗರಿಕರ ಅಸಡೆಯನ್ನು. ಮನೆಯಲ್ಲಿ ಉಳಿದ ಆಹಾರ, ಕೊಳೆತ ತರಕಾರಿ, ಹಾಳಾದ ಹಣ್ಣುಗಳನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ರಸ್ತೆ ಪಕ್ಕ ಎಸೆಯುವ ಜನರಿಂದಾಗಿ ಈ ಸಮಸ್ಯೆ ಸೃಷ್ಟಿಯಾಗಿದೆ.

ಜಾನುವಾರುಗಳು ಆಹಾರವನ್ನು ತಿನ್ನುವ ಧಾವಂತದಲ್ಲಿ ಪ್ಲಾಸ್ಟಿಕ್ ಕೂಡಾ ಅವುಗಳ ಹೊಟ್ಟೆ ಸೇರುತ್ತಿವೆ. ಜೀರ್ಣವಾಗಿ ಹೊರ ಹೋಗದೆ, ಆ ಪ್ಲಾಸ್ಟಿಕ್ ಗಳು ಹೊಟ್ಟೆಯಲ್ಲಿಯೇ ಉಳಿದುಕೊಳ್ಳುತ್ತದೆ. ಪ್ರಾಣಿಗಳ ಹೊಟ್ಟೆಯಲ್ಲಿ ಶೇ.75ರಷ್ಟು ಪ್ಯಾಸ್ಟಿಕ್ ತುಂಬುವವರೆಗೆ ಗೊತ್ತಾಗುವುದಿಲ್ಲ. ಯಾವುದೇ ಲಕ್ಷಣಗಳು ಸಹ ಗೋಚರಿಸುವುದಿಲ್ಲ ಜಾನುವಾರುಗಳಲ್ಲಿ ನಾಲ್ಕು ಉದರಗಳಿದ್ದು ಅದರಲ್ಲಿ ತುಂಬ ದೊಡ್ಡದಾದ ರುಮೇನ್‌ನಲ್ಲಿ ಪ್ಲಾಸ್ಟಿಕ್ ಸಂಗ್ರಹವಾಗುತ್ತದೆ. ದೊಡ್ಡ ಜಾನುವಾರುಗಳ ದೊಡ್ಡ ಹೊಟ್ಟೆಯು 150 ಕೆ.ಜಿ.ವರೆಗೆ ಇದ್ದು ಇದರ ಬಹುಭಾಗ ಪ್ಲಾಸ್ಟಿಕ್ ಆಕ್ರಮಿಸಿಕೊಳ್ಳುತ್ತದೆ. ಶಸ್ತ್ರ ಚಿಕಿತ್ಸೆಯ ಮೂಲಕ 40 ರಿಂದ 80 ಕೆ.ಜಿವರೆಗೆ ದನಗಳ ಹೊಟ್ಟೆಯಿಂದ ಪ್ಲಾಸ್ಟಿಕ್ ಹೊರತೆಗೆದ ಉದಾಹರಣೆಗಳೂ ಇವೆ.

ನಿರಂತರವಾಗಿ ಆಹಾರದ ಮುಖಾಂತರ ಪ್ಲಾಸ್ಟಿಕ್ ಹೊಟ್ಟೆ ಸೇರುವುದರಿಂದ ನಿಧಾನವಾಗಿ ಲಿವರ್ ಕಿಡ್ನಿಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಲಕ್ಷಣಗಳು ಗೋಚರವಾಗುತ್ತವೆ. ಅಲ್ಲಿಯವರೆಗೆ ಆರೋಗ್ಯದಲ್ಲೇನೂ ಸಮಸ್ಯೆ ಉಂಟಾಗುವುದಿಲ್ಲ. ದನ-ಕರುಗಳಿಗೆ ಚಿಕಿತ್ಸೆ ನೀಡಿ ಹೊಟ್ಟೆಯಿಂದ ಪ್ಲಾಸ್ಟಿಕ್ ತೆಗೆಯಬಹುದು. ಆದರೆ ವನ್ಯಜೀವಿಗಳಿಗೆ ಈ ಅದೃಷ್ಟ ಕಡಿಮೆ. ಅವುಗಳಲ್ಲಿ ಯಾವುದೇ ರೋಗ ಕಾಣಿಸಿಕೊಂಡರೂ ಗೊತ್ತಾಗುವುದಿಲ್ಲ. ಹೀಗಾಗಿ ಸಾವೊಂದೇ ಅವುಗಳ ಮುಂದಿರುವ ಆಯ್ಕೆ. ಅಪ್ಪಿತಪ್ಪಿ ಸತ್ತಿದ್ದು ಗಮನಕ್ಕೆ ಬಂದಾಗ ಪರೀಕ್ಷೆ ವೇಳೆ ಅವುಗಳ ಹೊಟ್ಟೆಯಲ್ಲೂ ಪ್ಲಾಸ್ಟಿಕ್ ಇರುವುದು ಪತ್ತೆಯಾಗಿದೆ ಎನ್ನುತ್ತಾರೆ ಹಿರಿಯ ಪಶುವೈದ್ಯರು.

ಪ್ಲಾಸ್ಟಿಕ್ ಸಮಸ್ಯೆಯಲ್ಲ. ಅದನ್ನು ಎಲ್ಲೆಂದರಲ್ಲಿ ವಿಲೇವಾರಿ ಮಾಡುವುದರಿಂದ ಸಮಸ್ಯೆಗಳಾಗುತ್ತಿವೆ. ಅದರಲ್ಲೂ ಪ್ಲಾಸ್ಟಿಕ್‌ನಲ್ಲಿ ಆಹಾರ ಪದಾರ್ಥಗಳನ್ನು ಸುತ್ತಿ ಬಿಸಾಡುವುದರಿಂದ ಅವುಗಳನ್ನು ಸೇವಿಸುವ ಪ್ರಾಣಿಗಳ ಹೊಟ್ಟೆಗೆ ಪ್ಲಾಸ್ಟಿಕ್ ಸೇರಿ ಆರೋಗ್ಯದ ಸಮಸ್ಯೆ ಆಗುತ್ತಿದೆ. ಪೌಷ್ಟಿಕಾಂಶ ಕೊರತೆಯಿಂದ ಜಾನುವಾರುಗಳು ಪ್ಲಾಸ್ಟಿಕ್, ಬಟ್ಟೆ, ಹಗ್ಗ ಇತ್ಯಾದಿಗಳನ್ನು ತಿನ್ನುತ್ತವೆ. ರೈತರು ಪಟ್ಟಣ ಪ್ರದೇಶಗಳಲ್ಲಿ ಜಾನುವಾರುಗಳನ್ನು ಬಿಡಾಡಿಯಾಗಿ ಬಿಡದೇ ಮನೆಯಲ್ಲಿ ಪೋಷಿಸಬೇಕು. ಜಾನುವಾರು ಪ್ಲಾಸ್ಟಿಕ್ ವಸ್ತುಗಳನ್ನು ತಿನ್ನದಂತೆ ನೋಡಿಕೊಳ್ಳಬೇಕು.

<ಡಾ. ಪ್ರಭು ಕಲ್ಲೂರ, ಮುಖ್ಯ ಪಶು ವೈದ್ಯಾಧಿಕಾರಿ, ಆಡಳಿತ ಪಶು ಆಸ್ಪತ್ರೆ, ಯಡ್ರಾಮಿ

share
ಪ್ರಶಾಂತ್ ಚವ್ಹಾಣ
ಪ್ರಶಾಂತ್ ಚವ್ಹಾಣ
Next Story
X