Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕುಡಿಯುವ ನೀರಿನ ಕೆರೆಗೆ ಕನ್ನ:...

ಕುಡಿಯುವ ನೀರಿನ ಕೆರೆಗೆ ಕನ್ನ: ಅಧಿಕಾರಿಗಳ ಮೌನಕ್ಕೆ ಜನಾಕ್ರೋಶ

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್18 May 2026 2:05 PM IST
share
ಕುಡಿಯುವ ನೀರಿನ ಕೆರೆಗೆ ಕನ್ನ: ಅಧಿಕಾರಿಗಳ ಮೌನಕ್ಕೆ ಜನಾಕ್ರೋಶ

ಕನಕಗಿರಿ : ಪಟ್ಟಣದ ಜೀವನಾಡಿ ಲಕ್ಷ್ಮೀದೇವಿ ಕೆರೆಯ ಹಿಂಭಾಗದಲ್ಲಿ ಕಳೆದ ಒಂದು ತಿಂಗಳಿಂದ ಅಕ್ರಮ ಮರಂ ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದರೂ, ಸಣ್ಣ ನೀರಾವರಿ, ಕಂದಾಯ, ಪೊಲೀಸ್ ಇಲಾಖೆಗಳು ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ತುಂಗಭದ್ರಾ ನದಿಯಿಂದ ಪೈಪೆಲೈನ್ ಮೂಲಕ ನೀರು ತುಂಬಿಸಿ ಪಟ್ಟಣದ ಕುಡಿಯುವ ನೀರಿಗೆ ಬಳಕೆಯಾಗುವ ಈ ಕೆರೆಯ ಹಿಂದಿನ ಸಣ್ಣ ಕೆರೆಯಲ್ಲಿ ರಾತ್ರಿಯಾದರೆ ಸಾಕು ಜೆಸಿಬಿ, ಟಿಪ್ಪರ್‌ಗಳ ಅಬ್ಬರ. ಈಗಾಗಲೇ 3-4 ಎಕರೆ ಪ್ರದೇಶದಲ್ಲಿ 8-10 ಅಡಿ ಆಳ ಗುಂಡಿ ತೋಡಿ ಮರಂ ಸಾಗಿಸಲಾಗಿದೆ. ಹತ್ತಾರು ವರ್ಷ ಹಿಂದೆ ಅರಣ್ಯ ಇಲಾಖೆ ಬೆಳೆಸಿದ್ದ ನೀಲಗಿರಿ ಗಿಡಗಳನ್ನೂ ಕಿತ್ತೆಸೆದು ಅಗೆಯಲಾಗಿದೆ.

ಅಪಾಯದ ಭೀತಿ: ಕೆರೆ ದಡ, ರಸ್ತೆ ಪಕ್ಕದಲ್ಲೇ ಮನಸೋ ಇಚ್ಛೆ ಗುಂಡಿ ತೋಡಿರುವುದರಿಂದ ಮಳೆಗಾಲದಲ್ಲಿ ಕೆರೆ ತುಂಬಿದಾಗ ಜಾನುವಾರು, ಮಕ್ಕಳು ಬಿದ್ದು ಪ್ರಾಣಾಪಾಯ ಸಂಭವಿಸುವ ಭೀತಿ ಇದೆ. ಅಪಘಾತವಾದರೆ ಹೊಣೆ ಯಾರು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ವನ್ಯಜೀವಿಗಳಿಗೆ ಸಂಕಷ್ಟ: ಕುರುಚಲು ಕಾಡಿನ ಈ ಪ್ರದೇಶ ನವಿಲು, ನರಿ, ಮೊಲಗಳ ಆವಾಸ. ರಾತ್ರಿಯ ಜೆಸಿಬಿ ಸದ್ದಿಗೆ ಪ್ರಾಣಿ-ಪಕ್ಷಿಗಳ ನಿದ್ದೆಗೆ ಭಂಗವಾಗಿದೆ.

ತಹಶೀಲ್ದಾರ್ ಆದೇಶಕ್ಕೆ ಕಿಮ್ಮತ್ತಿಲ್ಲ: ಅಕ್ರಮ ಮರಳು ದಂಧೆ ತಡೆಗೆ ಕೆರೆ, ಹಳ್ಳ, ನದಿ ದಂಡೆ ಪ್ರವೇಶ ನಿಷೇಧಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಆದರೆ ಧಿಕ್ಕರಿಸಿ ವಾಹನ ಸಮೇತ ನುಗ್ಗಿ ಮರಂ ಲೂಟಿ ಮಾಡುತ್ತಿರುವುದು ಆಡಳಿತದ ವೈಫಲ್ಯಕ್ಕೆ ಸಾಕ್ಷಿ ಎಂದು ಗ್ರಾಪಂ ಮಾಜಿ ಸದಸ್ಯ ನಿಂಗಪ್ಪ ಪೂಜಾರ ಹೇಳುತ್ತಾರೆ.

ಸರಕಾರಿ ಆಸ್ತಿ ಲೂಟಿ ಆಗುತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದೆ. ದಂಧೆಕೋರರಿಗೆ ಯಾರ ಅಭಯ? ಕುಡಿಯುವ ನೀರಿನ ಕೆರೆ ಲೂಟಿ ಆಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುತ್ತೇವೆ.

-ಪಾಮಣ್ಣ ಅರಳಿಗನೂರು,

ಪ್ರಗತಿಪರ ಚಿಂತಕರು ಕನಕಗಿರಿ

ಲಕ್ಷ್ಮೀದೇವಿ ಕೆರೆ ದಡದಲ್ಲಿ ಅಕ್ರಮ ಮರಂ ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಇಲ್ಲಿಯವರೆಗೆ ನಮಗೆ ತಲುಪಿರಲಿಲ್ಲ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಗಂಭೀರ ಅಪರಾಧ. ಕೂಡಲೇ ಸ್ಥಳ ಪರಿಶೀಲಿಸಿ, ಅಕ್ರಮದಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲಾಗುವುದು.

-ವಿ.ನಾರಾಯಣ, ಪಿಐ ಕನಕಗಿರಿ

share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X