Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜೆಸ್ಕಾಂ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ...

ಜೆಸ್ಕಾಂ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಗ್ರಹಣ

ಜಿಲಾನಸಾಬ್ ಬಡಿಗೇರ್ಜಿಲಾನಸಾಬ್ ಬಡಿಗೇರ್22 May 2026 3:29 PM IST
share
ಜೆಸ್ಕಾಂ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಗ್ರಹಣ
ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಕಾಮಗಾರಿ ಸ್ಥಗಿತ

ಕಂಪ್ಲಿ : ತಾಲೂಕು ಕೇಂದ್ರವಾದ ಬಹುದಿನಗಳ ನಂತರ ಸ್ಥಳೀಯ ಶಾಸಕರ ಮುತುವರ್ಜಿಯಿಂದಾಗಿ ಪಟ್ಟಣದಲ್ಲಿ ಜೆಸ್ಕಾಂ ಎಇಇ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಆದರೆ, ಅಡಿಗಲ್ಲು ಪೂಜೆ ಸಲ್ಲಿಸಿ, ಒಂದು ತಿಂಗಳು ಗತಿಸುತ್ತಾ ಬಂದರೂ ಕಾಮಗಾರಿ ಮಾತ್ರ ಇನ್ನೂ ಆರಂಭಗೊಳ್ಳದೆ ಗ್ರಹಣ ಹಿಡಿದಿದೆ.

ಜೆಸ್ಕಾಂ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಶಾಸಕ ಜೆ.ಎನ್.ಗಣೇಶ್ ಭೂಮಿಪೂಜೆ ನೆರವೇರಿಸಿದ್ದಾರೆ. ಆದರೂ ಕಂಪ್ಲಿ ಜೆಸ್ಕಾಂ ಉಪ ವಿಭಾಗ(ಎಇಇ)ದ ಕಚೇರಿ ಕಟ್ಟಡ ಕಾಮಗಾರಿ ಆರಂಭಗೊಳ್ಳಲು ಸ್ಥಳದಲ್ಲಿರುವ 10 ಮರಗಿಡಗಳು ತಡೆಗೋಡೆಯಾಗಿ ನಿಂತಿದ್ದು, ಅರಣ್ಯ ಇಲಾಖೆಯ ಅನುಮತಿಗಾಗಿ ಕಾಮಗಾರಿ ನೆನಗುದಿಗೆ ಬಿದ್ದಿದೆ. ಜೆಸ್ಕಾಂ ಕಚೇರಿ ಉನ್ನತೀಕರಣಗೊಂಡು ಎರಡು ವರ್ಷ ಕಳೆದರೂ ಜೆಸ್ಕಾಂ ಉಪವಿಭಾಗದ ಕಚೇರಿಗೆ ಸ್ವಂತ ಕಟ್ಟಡ ಭಾಗ್ಯ ಮಾತ್ರ ಕೂಡಿ ಬಂದಿಲ್ಲ.

2024ರ ಆ.9ರಂದು ಸ್ಥಳೀಯ ಜೆಸ್ಕಾಂ ಸಹಾಯಕ ಇಂಜಿನಿಯರ್(ವಿ) ಕಾರ್ಯಪಾಲನಾ ಶಾಖೆಯನ್ನು ಉಪವಿಭಾಗ (ಎಇಇ) ಕಚೇರಿಯಾಗಿ ಉನ್ನತೀಕರಿಸಲಾಗಿತ್ತು. ಆದರೆ, ಉನ್ನತೀಕರಣಗೊಂಡು ಎರಡು ವರ್ಷಗಳಾದರೂ ಎಇಇ ಕಚೇರಿಗೆ ಪ್ರತ್ಯೇಕ ಕಟ್ಟಡ ಇಲ್ಲದ ಕಾರಣ ಸಹಾಯಕ ಇಂಜಿನಿಯರ್ ಕಾರ್ಯಪಾಲನಾ ಕಚೇರಿ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಕಂಪ್ಲಿ ಜೆಸ್ಕಾಂ ಇಲಾಖೆಗೆ ಪ್ರತ್ಯೇಕ ಎಇಇ ಕಚೇರಿ ನಿರ್ಮಾಣದ ಅಗತ್ಯತೆಯನ್ನು ಅರಿತ ಶಾಸಕರಾದ ಜೆ.ಎನ್.ಗಣೇಶ್ 2025-26ನೇ ಸಾಲಿನ ಜೆಸ್ಕಾಂ ಅನುದಾನ ಯೋಜನೆಯಡಿಯಲ್ಲಿ 1.50.ಕೋಟಿ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ 2026ರ ಎ.18ರಂದು ಭೂಮಿಪೂಜೆ ನೆರವೇರಿಸಿದ್ದರು. ಉತ್ತಮ ಗುಣಮಟ್ಟದ ಕಟ್ಟಡವನ್ನು ನಿಗದಿತ ಸಮಯದಲ್ಲಿ ನಿರ್ಮಿಸುವಂತೆ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದ್ದರು. ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದರೂ, ಭೂಮಿಪೂಜೆ ನಡೆದು ತಿಂಗಳಾದರೂ ಸಹ ಅರಣ್ಯ ಇಲಾಖೆಯ ನಿಧಾನಗತಿಯಿಂದಾಗಿ ಕಟ್ಟಡ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಎಇಇ ಕಚೇರಿ ಕಟ್ಟಡ ನಿರ್ಮಿಸಲು ಉದ್ದೇಶಿಸಿರುವ ಜೆಸ್ಕಾಂ ಕಚೇರಿ ಆವರಣದಲ್ಲಿ ಹತ್ತು ಮರಗಿಡಗಳು ಬೆಳೆದು ನಿಂತಿದ್ದು, ಅವುಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿದೆ. ಈಗಾಗಲೇ ಜೆಸ್ಕಾಂ ಕಚೇರಿಯಿಂದ ಮರಗಿಡಗಳ ತೆರವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆಯಾದರೂ ಇನ್ನೂ ಪರವಾನಿಗೆ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಜೆಸ್ಕಾಂ ಕಚೇರಿ ಆವರಣದಲ್ಲಿ ಎಇಇ ಕಚೇರಿ ಕಟ್ಟಡ ನಿರ್ಮಾಣ ಮಾಡುವಲ್ಲಿ ಹತ್ತು ಮರಗಿಡಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಒಪ್ಪಿಗೆ ಅಗತ್ಯವಿದೆ. ಮರಗಿಡಗಳ ತೆರವಿಗೆ ಜೆಸ್ಕಾಂ ಕಚೇರಿಯಿಂದ ಪ್ರಸ್ತಾವ ಸಲ್ಲಿಸಲಾಗಿದ್ದು, ಮರಗಿಡಗಳನ್ನು ತೆರವುಗೊಳಿಸಿದಲ್ಲಿ ಎಇಇ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ.

-ಕೆ.ಶ್ರೀನಿವಾಸ ಪ್ರಸಾದ್

ಎಇಇ ಜೆಸ್ಕಾಂ ಕಂಪ್ಲಿ

ಕಂಪ್ಲಿ ಜೆಸ್ಕಾಂ ಕಚೇರಿ ಆವರಣದಲ್ಲಿನ ಮರಗಿಡಗಳನ್ನು ತೆರವುಗೊಳಿಸಲು ಜೆಸ್ಕಾಂ ಇಲಾಖೆಯಿಂದ ಪ್ರಸ್ತಾವ ಬಂದಿದ್ದು, ಶೀಘ್ರದಲ್ಲಿ ಮರಗಿಡಗಳ ತೆರವಿಗೆ ಟೆಂಡರ್ ಕರೆದು ಮರಗಿಡಗಳನ್ನು ತೆರವುಗೊಳಿಸಲಾಗುವುದು.

-ಕೌಶಿಕ್ ದಳವಾಯಿ

ವಲಯ ಅರಣ್ಯಾಧಿಕಾರಿ ಹೊಸಪೇಟೆ

ಜೆಸ್ಕಾಂನಲ್ಲಿ ಎಇಇ ಕಛೇರಿ ಕಟ್ಟಡ ನಿರ್ಮಾಣ ಶೀಘ್ರವೇ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.

-ಬಳೆ ಮಲ್ಲಿಕಾರ್ಜುನ

ಅಧ್ಯಕ್ಷ, ಕರವೇ ತಾಲೂಕು ಘಟಕ, ಕಂಪ್ಲಿ

share
ಜಿಲಾನಸಾಬ್ ಬಡಿಗೇರ್
ಜಿಲಾನಸಾಬ್ ಬಡಿಗೇರ್
Next Story
X