Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರೈತರ ಪಾಲಿಗೆ ಕಹಿಯಾದ ಮಾವು: ಸೂಕ್ತ ಬೆಲೆ...

ರೈತರ ಪಾಲಿಗೆ ಕಹಿಯಾದ ಮಾವು: ಸೂಕ್ತ ಬೆಲೆ ಸಿಗದೆ ಕಂಗಾಲು

ಗಂಗನಹಳ್ಳಿ ಎಂ.ಮುನಿನಾರಾಯಣಗಂಗನಹಳ್ಳಿ ಎಂ.ಮುನಿನಾರಾಯಣ18 Jun 2026 2:24 PM IST
share
ರೈತರ ಪಾಲಿಗೆ ಕಹಿಯಾದ ಮಾವು: ಸೂಕ್ತ ಬೆಲೆ ಸಿಗದೆ ಕಂಗಾಲು

ಶಿಡ್ಲಘಟ್ಟ : ರೈತರ ಪಾಲಿಗೆ ಸಿಹಿಯಾಗಬೇಕಾಗಿದ್ದ ಮಾವಿನ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಹಿಯಾಗಿ ಮಾರ್ಪಟ್ಟಿದೆ. ಮಾವಿನ ಬೆಳೆ ಬೆಳೆದ ರೈತರು, ತೋಟದಿಂದ ಬೆಳೆ ಖಾಲಿ ಮಾಡಲು ವ್ಯಾಪಾರಿಗಳ ಬಳಿ ದುಂಬಾಲು ಬೀಳುವಂತಾಗಿದೆ.

ರೈತರು ತಮ್ಮ ತೋಟಗಳಲ್ಲಿ ಬೆಳೆದಿರುವ ಮಾವನ್ನು ವ್ಯಾಪಾರಿಗಳು ಕಿತ್ತುಕೊಂಡು ಹೋಗದ ಕಾರಣ, ಹಣ್ಣಾಗಿ ನೆಲಕ್ಕುರುಳಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಮಾವಿನ ಮರಗಳಿಗೆ ಗೊಬ್ಬರ ಹಾಕಿ, ರೋಗಗಳಿಂದ ಸಂರಕ್ಷಣೆ ಮಾಡಲು ಔಷಧಗಳನ್ನು ಸಿಂಪಡಣೆ ಮಾಡಿ, ಬೆಳೆ ಕಾಪಾಡಿಕೊಂಡಿದ್ದ ರೈತರು, ಉತ್ತಮ ಇಳುವರಿ ಬರುತ್ತದೆ. ಬೇಸಿಗೆಯಲ್ಲಿ ಒಳ್ಳೆಯ ಬೆಲೆಯೂ ಸಿಗಲಿದ್ದು, ಒಂದಷ್ಟು ಸಾಲಗಳನ್ನಾದರೂ ತೀರಿಸಿಕೊಳ್ಳಬಹುದೆಂಬ ನಿರೀಕ್ಷೆಯಲ್ಲಿದ್ದರು.

ಗಿಡಗಳಲ್ಲಿ ಹೂ ಬಿಟ್ಟಾಗಲೇ, ತೋಟಗಳಿಗೆ ಧಾವಿಸಿ ಬಂದಿದ್ದ ವ್ಯಾಪಾರಿಗಳು, ಈ ಬಾರಿ ಮಾವಿನ ಗಿಡಗಳಲ್ಲಿನ ಬೆಳೆಯನ್ನು ನಮಗೆ ಕೊಡಬೇಕು, ಲಾಭವಾದರೂ ಸರಿ, ನಷ್ಟವಾದರೂ ಸರಿ ನಾವೇ ಭರಿಸುತ್ತೇವೆ ಎಂದು ವ್ಯಾಪಾರ ಮಾಡಿಕೊಂಡಿದ್ದ ವ್ಯಾಪಾರಿಗಳು, ಈಗ ಬೆಳೆ ಕಟಾವಿನ ಹಂತಕ್ಕೆ ಬಂದಾಗ, ಬೆಲೆಯಿಲ್ಲ, ನಮಗೆ ನಷ್ಟವಾಗುತ್ತಿದೆ ಎಂದು ಕಾರಣ ಹೇಳಿ, ಮರಗಳಲ್ಲಿ ಕಾಯಿಗಳನ್ನು ಕೀಳುತ್ತಿಲ್ಲದ ಕಾರಣ, ಹಣ್ಣುಗಳು ಉದುರಿಹೋಗುತ್ತಿವೆ. ಇದರಿಂದ ನೊಣಗಳು ಉತ್ಪತ್ತಿಯಾಗಿ ಉಳಿದ ಹಣ್ಣುಗಳಿಗೆ ಹಾನಿಯುಂಟು ಮಾಡುತ್ತಿವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಗಂಗನಹಳ್ಳಿಯ ರೈತ ಬೈರೇಗೌಡ ಮಾತನಾಡಿ, ತೋಟದಲ್ಲಿ ಹೂವಿರುವಾಗ 1 ಲಕ್ಷಕ್ಕೆ ವ್ಯಾಪಾರ ಮಾಡಿದ್ದೆವು. ನಮಗೆ 20 ಸಾವಿರ ರೂ. ಕೊಟ್ಟಿದ್ದರು. ಈಗ ಕಾಯಿಗಳನ್ನು ಕಿತ್ತುಕೊಂಡು,ಉಳಿದ ಹಣವನ್ನು ಕೊಡಿ ಎಂದು ಕೇಳಿದರೆ, ಅಡ್ವಾನ್ಸ್ ಹಣವನ್ನು ನೀವೇ ಇಟ್ಟುಕೊಳ್ಳಿ, ಹಣ್ಣುಗಳನ್ನು ಬೇರೆ ಯಾರಿಗಾದರೂ ಮಾರಿ ಬಿಡಿ ಎಂದು ಹೇಳುತ್ತಿದ್ದಾರೆ. ಹಣ್ಣು ಕಿತ್ತುಕೊಂಡು ಹೋಗಿ, ಎಲ್ಲಿ ಮಾರಾಟ ಮಾಡಲು ಸಾಧ್ಯ? ಸರಕಾರ, ರೈತರ ನೆರವಿಗೆ ಬರಬೇಕು, ಮಾವಿನ ಗಿಡಗಳನ್ನು ನಂಬಿಕೊಂಡು ಸಾಕಷ್ಟು ಸಾಲ ಮಾಡಿಕೊಂಡಿದ್ದೇವೆ. ಈಗ ಸಾಲ ತೀರಿಸುವುದಕ್ಕೂ ಸಾಧ್ಯವಾಗದೇ, ಪರದಾಡುವಂತಾಗಿದೆ. ನಮಗೆ ಬೆಳೆ ನಷ್ಟ ಪರಿಹಾರವನ್ನಾದರೂ ಬಿಡುಗಡೆ ಮಾಡಿದರೆ ಸ್ವಲ್ಪಮಟ್ಟಿಗೆ ಸುಧಾರಿಸಿಕೊಳ್ಳುತ್ತೇವೆ ಎನ್ನುತ್ತಾರೆ ಬೆಳೆಗಾರರು.

ಜಂಬೂ ನೇರಳೆಗೂ ಬೆಲೆ ಇಲ್ಲ: ಪ್ರತಿ ವರ್ಷ ಕೆ.ಜಿ.ಗೆ 100 ರೂ.ಗೆ ಮಾರಾಟವಾಗುತ್ತಿದ್ದ ಮಧುಮೇಹಿಗಳ ಪಾಲಿಗೆ ಅಚ್ಚುಮೆಚ್ಚಾಗಿರುವ ಜಂಬೂ ನೇರಳೆ ಬೆಳೆಗೂ ಬೆಲೆಯಿಲ್ಲದ ಕಾರಣ, ಮರಗಳಲ್ಲಿ ಹುಲುಸಾಗಿ ಬಿಟ್ಟಿರುವ ಜಂಬೂ ನೇರಳೆ ಹಣ್ಣುಗಳು ನೆಲಕ್ಕುರುಳಿವೆ. ಇದರಿಂದ ರೈತರು ನಿರಾಶರಾಗಿದ್ದಾರೆ.

ಶಿಡ್ಲಘಟ್ಟ ತಾಲೂಕಿನಲ್ಲಿ 2,880 ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ಬೆಳೆ ಇದೆ. ಈ ಬಾರಿ ಉತ್ತಮ ಇಳುವರಿಯೂ ಇಲ್ಲ. ಸೂಕ್ತ ಬೆಲೆಯೂ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

-ಮಂಜುಳಾ, ಸಹಾಯಕ ನಿರ್ದೇಶಕಿ

ತೋಟಗಾರಿಕೆ ಇಲಾಖೆ ಶಿಡ್ಲಘಟ್ಟ

ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಯುದ್ಧದ ಸನ್ನಿವೇಶವಿದ್ದು, ಇಂಧನಗಳ ಬೆಲೆ ಏರಿಕೆಯಾಗಿರುವ ಕಾರಣ, ಮಾವಿನ ಹಣ್ಣಿನ ಸಾಗಾಟಕ್ಕೆ ಹೆಚ್ಚು ಖರ್ಚು ಬರುತ್ತಿದೆ. ರೈತರಿಂದ ಖರೀದಿಸಿರುವ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಗದ ಕಾರಣ, ವ್ಯಾಪಾರ ಮಾಡಿಕೊಂಡಿರುವ ತೋಟಗಳನ್ನು ಬಿಟ್ಟು ಬಿಟ್ಟಿದ್ದೇವೆ.

-ನರಸಿಂಹಗೌಡ, ಮಾವಿನ ಹಣ್ಣು ವ್ಯಾಪಾರಿ

share
ಗಂಗನಹಳ್ಳಿ ಎಂ.ಮುನಿನಾರಾಯಣ
ಗಂಗನಹಳ್ಳಿ ಎಂ.ಮುನಿನಾರಾಯಣ
Next Story
X