Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಿಂದೂ-ಮುಸ್ಲಿಂ ಸೌಹಾರ್ದದ ಸಂಕೇತ...

ಹಿಂದೂ-ಮುಸ್ಲಿಂ ಸೌಹಾರ್ದದ ಸಂಕೇತ ನಂದಿಹಳ್ಳಿ ಮುಹರಂ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ25 Jun 2026 3:04 PM IST
share
ಹಿಂದೂ-ಮುಸ್ಲಿಂ ಸೌಹಾರ್ದದ ಸಂಕೇತ ನಂದಿಹಳ್ಳಿ ಮುಹರಂ

ಯಾದಗಿರಿ: ಮುಹರಂ ಹಬ್ಬ ಎಂದರೆ ಸಾಮಾನ್ಯವಾಗಿ ಧಾರ್ಮಿಕ ಆಚರಣೆ ಎಂಬ ಭಾವನೆ ಮೂಡುತ್ತದೆ. ಆದರೆ, ಶಹಾಪುರ ತಾಲೂಕಿನ ನಂದಿಹಳ್ಳಿ (ಜೆ) ಗ್ರಾಮದಲ್ಲಿ ಆಚರಿಸಲಾಗುವ ಮುಹರಂ ಹಬ್ಬ ಧಾರ್ಮಿಕ ಆಚರಣೆಯನ್ನು ಮೀರಿ ಹಿಂದೂ-ಮುಸ್ಲಿಮ್ ಸೌಹಾರ್ದ, ಸಹಬಾಳ್ವೆ ಮತ್ತು ಭಾವೈಕ್ಯದ ಸಂಕೇತವಾಗಿ ಆಚರಿಸಲಾಗುತ್ತಿದೆೆ.

ಈ ಗ್ರಾಮದಲ್ಲಿ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಗ್ರಾಮಸ್ಥರೆಲ್ಲರೂ ಒಂದೇ ಕುಟುಂಬದವರಂತೆ ಸೇರಿ ಹಬ್ಬ ಆಚರಿಸುವುದು ವಿಶೇಷವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮುಹರಂ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ನಂದಿಹಳ್ಳಿ (ಜೆ) ಗ್ರಾಮದಲ್ಲಿನ ಆಚರಣೆ ತನ್ನದೇ ಆದ ಸಂಪ್ರದಾಯ ಮತ್ತು ವೈಶಿಷ್ಟ್ಯ ಹೊಂದಿದೆ.

ಮುಹರಂ ಹಬ್ಬ ಬಂದರೆ ಸಾಕು, ಇಡೀ ಗ್ರಾಮ ಸಂಭ್ರಮದಲ್ಲಿ ಮುಳುಗುತ್ತದೆ. ಎಲ್ಲ ಸಮುದಾಯದ ಜನರು ಒಂದೇ ಕುಟುಂಬದ ಸದಸ್ಯರಂತೆ ಹಬ್ಬದ ಸಿದ್ಧತೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಬ್ಬದ ಪ್ರತಿಯೊಂದು ಆಚರಣೆಯಲ್ಲೂ ಎರಡೂ ಸಮುದಾಯದವರು ಸಮಾನವಾಗಿ ಪಾಲ್ಗೊಳ್ಳುವುದು ಈ ಗ್ರಾಮದ ವಿಶೇಷತೆ.

ಮುಹರಂ ಸಂದರ್ಭದಲ್ಲಿ ಬೇಡಿಕೊಂಡ ಹರಕೆಗಳು ಈಡೇರಿದ ಬಳಿಕ ಭಕ್ತರು ಮುಹರಂ ತಿಂಗಳ ಏಳನೇ ದಿನದಂದು ದೇವರಿಗೆ ಹರಕೆ ಸಲ್ಲಿಸುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದ್ದಾರೆ. ಯುವಕರು ಬಣ್ಣಬಣ್ಣದ ವೇಷಭೂಷಣ ಧರಿಸಿ, ಕಾಲಿಗೆ ಗೆಜ್ಜೆ ಕಟ್ಟಿ ಮುಹರಂ ಪದಗಳನ್ನು ಹಾಡುತ್ತಾ ಅಲಾಯಿ ಕುಣಿಯುವ ದೃಶ್ಯ ನೋಡುಗರ ಗಮನ ಸೆಳೆಯುತ್ತದೆ. ಈ ಅಪರೂಪದ ಆಚರಣೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಗ್ರಾಮಸ್ಥರು ಆಗಮಿಸುತ್ತಾರೆ.

ಏಳನೇ ದಿನದ ಆಚರಣೆ ಮುಗಿದ ಬಳಿಕ ಒಂಬತ್ತನೇ ದಿನವನ್ನು ‘ಕತಲ್ ರಾತ್ರಿ’ ಎಂದು ಆಚರಿಸಲಾಗುತ್ತದೆ. ಆ ದಿನ ರಾತ್ರಿ ಇಡೀ ಯುವಕರು ಹೆಣ್ಣು ವೇಷ ಧರಿಸಿ ಅಲಾಯಿ ಕುಣಿಯುತ್ತಾರೆ. ಕರಡಿ ವೇಷ ತೊಟ್ಟು ಕುಣಿಯುವುದು ವಿಶೇಷ ಆಕರ್ಷಣೆಯಾಗಿರುತ್ತದೆ. ಬಳಿಕ ಮುಂಜಾನೆ ಸುಮಾರು 3 ಗಂಟೆಗೆ ದೇವರ ಸವಾರಿ ನಡೆಯುತ್ತದೆ. ಈ ಸಂದರ್ಭದಲ್ಲಿ ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ತಮ್ಮ ಕಷ್ಟ-ಕಾರ್ಪಣ್ಯಗಳು ದೂರವಾಗಲೆಂದು ದೇವರಲ್ಲಿ ಹೇಳಿಕೆ ಕೇಳುತ್ತಾರೆ. ಇಲ್ಲಿಯವರೆಗೆ ದೇವರ ಹೇಳಿಕೆ ಸುಳ್ಳಾಗಿಲ್ಲ ಎಂಬುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ.

ಈ ಮುಹರಂ ಹಬ್ಬದಲ್ಲಿ ಅಗ್ನಿಕುಂಡಕ್ಕೆ ವಿಶೇಷ ಮಹತ್ವವಿದೆ. ಅಗ್ನಿ ಹಚ್ಚುವ ದಿನ ಸುಮಾರು ನಾಲ್ಕೈದು ಟ್ರಾಕ್ಟರ್‌ಗಳಷ್ಟು ಕರಿಜಾಲಿ ಹಾಗೂ ಇತರ ಹಸಿ ಕಟ್ಟಿಗೆಗಳನ್ನು ಸಂಗ್ರಹಿಸಲಾಗುತ್ತದೆ. ‘ದೇವರ ಮಕ್ಕಳು’ ಎಂದು ಕರೆಯಲ್ಪಡುವ ಅಳ್ಳೆಬುಕ್ಕರು ರಸ್ತಾಪುರ ಬೆಟ್ಟಕ್ಕೆ ಪಾದಯಾತ್ರೆ ಮಾಡಿ ಹಸಿ ಬಿಟ್ಟಲ್ ಮರದ ಕಟ್ಟಿಗೆ ತರುವುದು ಇಲ್ಲಿನ ಸಂಪ್ರದಾಯ. ಇಚ್ಛಲ ಪರ್ಕಿಯನ್ನೂ ಈ ಅಗ್ನಿಕುಂಡಕ್ಕೆ ತರುತ್ತಾರೆ.

ಹಸಿ ಕಟ್ಟಿಗೆಗಳನ್ನೇ ಬಳಸಿ ಅಗ್ನಿ ಹಚ್ಚುವುದು ಇಲ್ಲಿನ ಅಪರೂಪದ ಆಚರಣೆಯಾಗಿದೆ. ಅದೇ ದಿನ ಬೆಳಗಿನ ಜಾವ ಸೂರ್ಯೋದಯಕ್ಕೂ ಮುನ್ನ ದೇವರು ಹಾಗೂ ಅಳ್ಳೆಬುಕ್ಕರು ಅಗ್ನಿ ಪ್ರವೇಶ ಮಾಡುವ ಸಂಪ್ರದಾಯವೂ ನಡೆಯುತ್ತದೆ.

ನಮ್ಮ ಊರಿನ ಮುಹರಂ ಹಬ್ಬ ಯುವಕರ ಹಬ್ಬವಾಗಿದೆ. ಹಿಂದೂ-ಮುಸ್ಲಿಂ ಬಾಂಧವರು ಎಲ್ಲರೂ ಸೇರಿ ಶಾಂತಿಯುತವಾಗಿ ಹಬ್ಬ ಆಚರಿಸುತ್ತಾರೆ. ಇದೇ ನಮ್ಮ ಗ್ರಾಮದ ವಿಶೇಷತೆ.

-ವೀರಣ್ಣಗೌಡ, ದಳಪತಿ

ಮುಹರಂ ಹಬ್ಬ ಬಂತು ಅಂದರೆ ನಮ್ಮ ಗ್ರಾಮಕ್ಕೆ ನಾಡಹಬ್ಬ ಬಂದಂತಾಗುತ್ತದೆ. ಎಲ್ಲ ಸಮುದಾಯದ ಜನರು ಒಂದಾಗಿ ಹಬ್ಬ ಆಚರಿಸುವುದು ನಮಗೆ ಹೆಮ್ಮೆಯ ಸಂಗತಿ.

-ಗುನ್ನಪ್ಪಗೌಡ, ಮಾಲೀಪಾಟೀಲ್

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X