Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜಲಾಶಯದಲ್ಲಿ ನೀರು ಇದ್ದರೂ ನದಿಗೆ...

ಜಲಾಶಯದಲ್ಲಿ ನೀರು ಇದ್ದರೂ ನದಿಗೆ ಬಿಡುಗಡೆ ಇಲ್ಲ

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು23 July 2026 3:08 PM IST
share
ಜಲಾಶಯದಲ್ಲಿ ನೀರು ಇದ್ದರೂ ನದಿಗೆ ಬಿಡುಗಡೆ ಇಲ್ಲ

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿತ್ತು. ಆದರೆ, ತೀವ್ರ ಬರದ ಹಿನ್ನೆಲೆ ಸದ್ಯ ನದಿಗೆ ನೀರುಹರಿಸಲಾಗುತ್ತಿಲ್ಲ. ಇದರಿಂದ ಜಲಚರಗಳು ಮತ್ತು ನದಿ ಪಾತ್ರದ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಜಲಾಶಯ ನಿರ್ಮಾಣವಾದಾಗಲೇ ನದಿಯನ್ನು ಸಂಪೂರ್ಣವಾಗಿ ಒಣಗಳು ಬಿಡದೆ ನದಿಯಲ್ಲಿನ ಜಲಚರಗಳಿಗಾಗಿ ಮತ್ತು ನದಿಯ ಅಕ್ಕ-ಪಕ್ಕ ಇರುವ ಜನ ಸಮೂಹಕ್ಕೆ ನೀರು ಸಿಗುವಂತಾಗಲು ನೀರು ಹರಿಸಲೇ ಬೇಕು ಎನ್ನುವ ತಿಳುವಳಿಕೆ ಮಾಡಿಕೊಳ್ಳಲಾಗಿದೆ.

ಎಲ್ ನಿನೊ ಪ್ರಭಾವದಿಂದ ಇದರಿಂದ ಕರ್ನಾಟಕ ರಾಜ್ಯದಲ್ಲೂ ಬರಗಾಲ ಉಂಟಾಗಿದ್ದು,ಕುಡಿಯುವ ನೀರಿಗೆ ತೊಂದರೆಯಾಗಬಹುದು ಎನ್ನುವ ಕಾರಣಕ್ಕೆ ಸರಕಾರ ಜಲಾಶಯದಲ್ಲಿನ ನೀರು ಕಡಿಯಲು ಮಾತ್ರ ಬಳಸಲು ಸೂಚಿಸಿದ್ದು ಇದರಿಂದ ನದಿಗೆ ನೀರನ್ನು ಹರಿಸಲಾಗುತ್ತಿಲ್ಲ ಇದರಿಂದ ಜಲಾಚರಗಳು ಸೇರಿದಂತೆ ನದಿ ಪಾತ್ರ ಜನಗಳು ತೀವ್ರ ತೊಂದರೆಯನ್ನು ಅನುಭವಿಸುತ್ತಿವೆ.

ನದಿಯಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ನದಿಯಲ್ಲಿನ ಮೀನುಗಳು, ನೀರುನಾಯಿ, ಆಮೆ ಮತ್ತು ಮೊಸಳೆಗಳು ನದಿಯಿಂದ ಹೊರ ಬರತೊಡಗಿವೆ. ಕೆಲವು ಕಡೆ ಮೊಸಳೆಗಳು ಜನ ಪ್ರದೇಶದ ಕಡೆ ಬಂದಿರುವ ಕುರಿತು ವರದಿಯಾಗಿವೆ.

ಈ ನಡುವೆ ವಿವಿಧ ರೈತ ಸಂಘಟನೆಗಳು 1.5 ಟಿಎಂಸಿ ನೀರನ್ನು ನದಿಗೆ ಮತ್ತು ವಿಜಯನಗರ ಕಾಲುವೆಗಳಿಗೆ ಹರಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಗಳನ್ನು ನಡೆಸುತ್ತಿವೆ. ಸದ್ಯ ಜಲಾಶಯದಿಂದ ನೀರನ್ನು ಯಾವುದೇ ಕಾರ್ಖಾನೆಗಳಿಗೆ ಹರಿಸಲಾಗುತ್ತಿಲ್ಲ, ಎಲ್ಲಾ ಕಾರ್ಖಾನೆಗಳಿಗೆ ಎಪ್ರಿಲ್ ತಿಂಗಳಿನಲ್ಲೇ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ.

ಕೃಷಿಗೆ ಆಗಲಿ ಅಥವಾ ಬೇರೆ ಯಾವುದೇ ಚಟುವಟಿಕೆಗಳಿಗೆ ಬಳಸಲಾಗುತ್ತಿಲ್ಲ, ಕೇವಲ ಕುಡಿಯುವ ಸಲುವಾಗಿ ನೀರನ್ನು ಕಾಳುವೆಗಳಿಗೆ ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೇ ನದಿಯಲ್ಲಿನ ಮೀನುಗಳನ್ನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುವ ಕುಟುಂಬಗಳು ಕೂಡ ಇದರಿಂದಾಗಿ ತೊಂದರೆಗೆ ಸಿಲುಕಿವೆ.

ನದಿಯಲ್ಲಿನ ನೀರು ಒಣಗಿದರೆ ಮೀನುಗಳು, ಕಪ್ಪೆಗಳು, ಏಡಿಗಳು ಆಮ್ಲಜನಕದ ಕೊರತೆಯಾಗಿ ಸಾವನ್ನಪ್ಪುವ ಸಾದ್ಯತೆಗಳು ಕೂಡ ಇವೆ. ಆದ್ದರಿಂದ, ಕೂಡಲೆ ಜಲಾಚರಗಳಿಗಾಗಿ ನದಿಗೆ ನೀರು ಹರಿಸಬೇಕೆಂಬ ಒತ್ತಾಯವೂ ಕೇಳಿ ಬರುತ್ತಿದೆ.

share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X