Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಕ್ರಮ ಹೋಮ್‌ಸ್ಟೇಗೆ ಅಧಿಕಾರಿಗಳೇ...

ಅಕ್ರಮ ಹೋಮ್‌ಸ್ಟೇಗೆ ಅಧಿಕಾರಿಗಳೇ ಬೆನ್ನೆಲುಬು?

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ8 Aug 2026 3:10 PM IST
share
ಅಕ್ರಮ ಹೋಮ್‌ಸ್ಟೇಗೆ ಅಧಿಕಾರಿಗಳೇ ಬೆನ್ನೆಲುಬು?

ಹೊಸಪೇಟೆ: ಯುನೆಸ್ಕೋ ಮಾನ್ಯತೆ ಪಡೆದ ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಸಂರಕ್ಷಣಾ ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ಹೋಮ್‌ಸ್ಟೇ, ವಾಣಿಜ್ಯ ಚಟುವಟಿಕೆ ಹಾಗೂ ಅನಧಿಕೃತ ನಿರ್ಮಾಣಗಳಿಗೆ ಅವಕಾಶ ಕಲ್ಪಿಸಿರುವ ಗಂಭೀರ ಆರೋಪಗಳು ಇದೀಗ ಉಪಲೋಕಾಯುಕ್ತರ ಅಂಗಳ ತಲುಪಿವೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತವಾಗಿ (ಸುವೋ ಮೋಟೋ) ದೂರು ದಾಖಲಿಸಿಕೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ನಿಯಮಗಳು ಹಾಗೂ ಯುನೆಸ್ಕೋ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕೋರ್ ರೆನ್,ಬಫರ್ ರೆನ್ ಹಾಗೂ ಪರಿಧಿ ವಲಯಗಳಲ್ಲಿ ನಿಷೇಧಿತ ಹೋಮ್‌ಸ್ಟೇ, ವಾಣಿಜ್ಯ ಚಟುವಟಿಕೆ ಮತ್ತು ನಿರ್ಮಾಣಗಳು ನಿರಾತಂಕವಾಗಿ ನಡೆಯುತ್ತಿರುವುದು ಅಧಿಕಾರಿಗಳ ಕರ್ತವ್ಯಲೋಪವೇ ಅಥವಾ ನಿಯಮಬಾಹಿರ ಸಮ್ಮತಿಯ ಫಲವೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಈ ಹಿನ್ನೆಲೆಯಲ್ಲಿ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಹೊಸಪೇಟೆ ಮತ್ತು ಕೊಪ್ಪಳ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿವರಣೆ ಸಲ್ಲಿಸುವಂತೆ ಉಪಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.

ಯುನೆಸ್ಕೋ ನಿಯಮಾವಳಿಗಳ ಪ್ರಕಾರ ಹಂಪಿಯ ಕೋರ್ ಹಾಗೂ ಬಫರ್ ರೆನ್‌ಗಳಲ್ಲಿ ಯಾವುದೇ ರೀತಿಯ ಅನಧಿಕೃತ ವಾಣಿಜ್ಯ ಕಟ್ಟಡ, ರೆಸಾರ್ಟ್, ಹೋಮ್‌ಸ್ಟೇ ಅಥವಾ ವಾಣಿಜ್ಯ ಚಟುವಟಿಕೆಗೆ ಅವಕಾಶವಿಲ್ಲ. ಆದರೂ ಇಂತಹ ಚಟುವಟಿಕೆಗಳು ವರ್ಷಗಳಿಂದ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.

ಅಧಿಕಾರಿಗಳು ತಮ್ಮ ಕಾನೂನುಬದ್ಧ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆಯೇ, ನಿಯಮ ಉಲ್ಲಂಘನೆಗೆ ಮೌನ ಸಮ್ಮತಿ ಸೂಚಿಸಿದ್ದಾರೆಯೇ ಅಥವಾ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬ ಅಂಶಗಳ ಕುರಿತು ಉಪಲೋಕಾಯುಕ್ತರು ಸಮಗ್ರ ತನಿಖೆ ಆರಂಭಿಸಿದ್ದಾರೆ.

ವಿಶ್ವ ಪಾರಂಪರಿಕ ತಾಣದ ಸಂರಕ್ಷಣೆಯ ಹೊಣೆ ಹೊತ್ತ ಅಧಿಕಾರಿಗಳ ಮೇಲೆಯೇ ಈಗ ತನಿಖೆಯ ಕತ್ತಿ ತೂಗುತ್ತಿದ್ದು, ತನಿಖೆಯ ಅಂತ್ಯದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ. ಈ ಬೆಳವಣಿಗೆ ರಾಜ್ಯ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಹಂಪಿ ಪ್ರಾಧಿಕಾರ ಸೇರಿ ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ವೀರಪ್ಪ ಸ್ವಯಂಪ್ರೇರಿತ ದೂರು ಹಂಪಿಯಂತಹ ವಿಶ್ವ ಪಾರಂಪರಿಕ ತಾಣದ ಸಂರಕ್ಷಣೆಯ ವಿಚಾರದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ. ತನಿಖೆಯನ್ನು ಸಂಪೂರ್ಣ ನಿಷ್ಪಕ್ಷಪಾತವಾಗಿ ನಡೆಸಿ, ವಿಜಯನಗರ ಸಾಮ್ರಾಜ್ಯದ ವೈಭವದ ಪ್ರತೀಕವಾಗಿರುವ ಹಂಪಿಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪಾರಂಪರಿಕ ಮಹತ್ವಕ್ಕೆ ಧಕ್ಕೆ ತಂದವರ ವಿರುದ್ಧ ಯಾವುದೇ ಒತ್ತಡಕ್ಕೂ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ದೇಶ?ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಮೂಲಸೌಕರ್ಯ, ಶಿಸ್ತುಬದ್ಧ ವ್ಯವಸ್ಥೆ ಹಾಗೂ ಪಾರಂಪರಿಕ ತಾಣದ ಘನತೆಗೆ ತಕ್ಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು.

- ಗುಜ್ಜಲ್ ಗಣೇಶ್

ಉಪಾಧ್ಯಕ್ಷರು, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ, ಹೊಸಪೇಟೆ

share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X