Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಂತರ್ಜಾತಿ ವಿವಾಹ ಪ್ರೋತ್ಸಾಹ...

ಅಂತರ್ಜಾತಿ ವಿವಾಹ ಪ್ರೋತ್ಸಾಹ ಯೋಜನೆಯಲ್ಲಿ ಅಕ್ರಮ ಆರೋಪ

ಸಾಜಿದ್‌ ಅಲಿಸಾಜಿದ್‌ ಅಲಿ20 July 2026 2:20 PM IST
share
ಅಂತರ್ಜಾತಿ ವಿವಾಹ ಪ್ರೋತ್ಸಾಹ ಯೋಜನೆಯಲ್ಲಿ ಅಕ್ರಮ ಆರೋಪ
ನಕಲಿ ದಾಖಲೆ, ಡುಪ್ಲಿಕೇಟ್ ನೋಂದಣಿ, ಅವಧಿಗೂ ಮುನ್ನ ಎಫ್‌ಡಿ ಮುರಿತದ ಬಗ್ಗೆ ಅನುಮಾನ

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಅಂತರ್ಜಾತಿ ವಿವಾಹ ಪ್ರೋತ್ಸಾಹ ಯೋಜನೆ ಸೇರಿದಂತೆ ಪರಿಶಿಷ್ಟ ಜಾತಿ ಮರು ವಿವಾಹ ಹಾಗೂ ಪರಿಶಿಷ್ಟ ಜಾತಿಯೊಳಗಿನ ಸರಳ ವಿವಾಹ ಸಹಾಯಧನ ಯೋಜನೆಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

2017ರಿಂದ 2026ರವರೆಗೆ ಚಿಂಚೋಳಿ ತಾಲೂಕಿನ ಹಲವು ಫಲಾನುಭವಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂಪಾಯಿ ಸಹಾಯಧನ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒಂದೇ ಫಲಾನುಭವಿಯ ಹೆಸರಿನಲ್ಲಿ ಡೂಪ್ಲಿಕೇಟ್ ನೋಂದಣಿ ಮಾಡಿ ಮತ್ತೆ ಸಹಾಯಧನ ಬಿಡುಗಡೆ ಮಾಡಿರುವುದು, ಗಂಡನ ಹೆಸರಿಗೆ ಈಗಾಗಲೇ ಸಹಾಯಧನ ಪಡೆದಿದ್ದರೂ ಹೆಂಡತಿಯ ಹೆಸರಿನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿ ಮತ್ತೊಮ್ಮೆ ಅನುದಾನ ಪಡೆದಿರುವುದು ಸೇರಿದಂತೆ ಹಲವು ರೀತಿಯ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡ ಸಚಿನ್ ಚವಾಣ್ ದೂರು ನೀಡಿದ್ದಾರೆ.

ಇದಲ್ಲದೆ, ಸುಳ್ಳು ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಇತರ ದಾಖಲೆಗಳನ್ನು ಸೃಷ್ಟಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಯೋಜನೆಯ ನಿಯಮದಂತೆ ನೀಡಲಾಗುವ 3 ಲಕ್ಷ ರೂ. ಸಹಾಯಧನವನ್ನು ನಿಗದಿತ ಅವಧಿಯವರೆಗೆ ಸ್ಥಿರ ಠೇವಣಿಯಾಗಿ (ಎಫ್‌ಡಿ) ಇಡಬೇಕಿದ್ದು, ಮೂರು ವರ್ಷಗಳೊಳಗೆ ಯಾವುದೇ ಕಾರಣಕ್ಕೂ ಮುರಿಯಲು ಅವಕಾಶವಿಲ್ಲ. ಆದರೆ ಮಧ್ಯವರ್ತಿಗಳು ಹಾಗೂ ಕೆಲ ಬ್ಯಾಂಕ್ ಸಿಬ್ಬಂದಿಯ ಸಹಕಾರದಿಂದ ಮೂರು ವರ್ಷ ಪೂರ್ಣಗೊಳ್ಳುವ ಮೊದಲೇ ಎಫ್‌ಡಿಗಳನ್ನು ಮುರಿದು ಹಣವನ್ನು ಪಡೆದುಕೊಂಡಿರುವುದು ಶಂಶಯಕ್ಕೆ ಎಡೆ ಮಾಡಿದೆ.

ಸಲ್ಲಿಕೆಯಾದ ಎಲ್ಲ ಅರ್ಜಿಗಳು, ಅನುಮೋದನೆಗೊಂಡ ಫಲಾನುಭವಿಗಳ ದಾಖಲೆಗಳು, ಸಹಾಯಧನ ಬಿಡುಗಡೆ ವಿವರಗಳು ಹಾಗೂ ಸ್ಥಳ ಪರಿಶೀಲನೆ (ಪಂಚನಾಮೆ) ವರದಿಗಳನ್ನು ಮರುಪರಿಶೀಲನೆ ಮಾಡಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಚಿನ್ ಚವಾಣ್ ಒತ್ತಾಯಿಸಿದ್ದಾರೆ.

ವರದಿ ನೀಡಲು ಅಧಿಕಾರಿಗಳ ಹಿಂದೇಟು?

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಆರೋಪಗಳ ಕುರಿತು ಸ್ಪಷ್ಟ ವರದಿ ಹಾಗೂ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಚಿಂಚೋಳಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಕಡತಗಳನ್ನು ಮಾತ್ರ ಸಲ್ಲಿಸಲಾಗಿದೆ. ಆರೋಪಗಳ ಸತ್ಯಾಸತ್ಯತೆ ಬಗ್ಗೆ ಸ್ಪಷ್ಟ ವರದಿ ಮತ್ತು ದಾಖಲೆಗಳು ಇದುವರೆಗೆ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಆರೋಪಿಗಳಿಗೆ ಸಂಬಂಧಪಟ್ಟಂತೆ ಹಲವು ಬಾರಿ ಪತ್ರ ಮತ್ತು ಮೌಖಿಕವಾಗಿ ಸೂಚನೆ ನೀಡಿದ್ದೇವೆ. ಇದುವರೆಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಲ್ಲ. ಮಾಹಿತಿ ನೀಡುವಲ್ಲಿ ವಿಳಂಬವಾಗಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ (ಕೆಸಿಎಸ್‌ಆರ್) 1966 ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮತ್ತೊಮ್ಮೆ ನೋಟಿಸ್ ನೀಡಿದ್ದೇವೆ. ಈ ಆಧಾರದಲ್ಲಿ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ.

-ಪ್ರೀತಿ ಚಂದ್ರಶೇಖರ್ ದೊಡ್ಡಮನಿ

ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಲಬುರಗಿ

2018-2026ರವರೆಗೆ ಈ ಯೋಜನೆ ಅಡಿಯಲ್ಲಿ ಸುಳ್ಳು ದಾಖಲಾತಿ ಸೃಷ್ಟಿಸಿ ಕೋಟಿಗಟ್ಟಲೆ ಭ್ರಷ್ಟಾಚಾರದಲ್ಲಿ ಭಾಗಿ ಆಗಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸುವೋಮೋಟೊ ಕೇಸ್ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು. ಹಣ ಹಿಂಪಡೆದು ರಿಕವರಿ ಮಾಡಿ ಸೂಕ್ತ ಫಲಾನುಭವಿಗಳಿಗೆ ನೀಡಬೇಕು.

-ಸಚಿನ್ ಚವಾಣ್, ಜಿಲ್ಲಾಧ್ಯಕ್ಷ

ಕೆಆರ್‌ಎಸ್ ಪಕ್ಷ ಕಲಬುರಗಿ

share
ಸಾಜಿದ್‌ ಅಲಿ
ಸಾಜಿದ್‌ ಅಲಿ
Next Story
X