Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮನೆ ಬಿದ್ದು ವರ್ಷ ಕಳೆದರೂ...

ಮನೆ ಬಿದ್ದು ವರ್ಷ ಕಳೆದರೂ ಪರಿಹಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಕುಟುಂಬ

ಚಿತ್ರಸೇನ ವ್ಹಿ ಫುಲೆಚಿತ್ರಸೇನ ವ್ಹಿ ಫುಲೆ26 Aug 2025 12:10 PM IST
share
ಮನೆ ಬಿದ್ದು ವರ್ಷ ಕಳೆದರೂ ಪರಿಹಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಕುಟುಂಬ

ಬೀದರ್: ಮನೆ ಬಿದ್ದು ವರ್ಷ ಕಳೆದರೂ ಪರಿಹಾರವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಕುಟುಂಬ ಬೇರೆಯವರ ಮನೆಯಲ್ಲಿ ಆತಂಕದಲ್ಲಿ ಜೀವನ ನಡೆಸುವ ಪರಿಸ್ಥಿತಿ ಬೀದರ್ ತಾಲೂಕಿನ ಔರಾದ್ (ಎಸ್) ಗ್ರಾಮದ ಲಕ್ಷ್ಮೀ ಎಂಬವರ ಕುಟುಂಬಕ್ಕೆ ಎದುರಾಗಿದೆ.

ಎರಡು ಕೋಣೆಗಳಿದ್ದ ಹಳೆಯ ಮನೆ ಹೋದ ವರ್ಷದ ಮಳೆಗಾಲದಲ್ಲಿ ಕುಸಿದುಬಿದ್ದು ಕುಟುಂಬಕ್ಕೆ ಬೇರೆ ಯಾವುದೇ ಆಧಾರವಿಲ್ಲದೆ ಬೇರೆಯವರ ಮನೆಯಲ್ಲಿ ವಾಸವಿತ್ತು. ಮನೆ ಬಿದ್ದಾಗ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಲೆಕ್ಕಾಧಿಕಾರಿ, ಸಿಬ್ಬಂದಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆಯ ಫೊಟೊ ತೆಗೆದುಕೊಂಡು ಹೋಗಿದ್ದರು. ಇದರಿಂದಾಗಿ ನಾವು ಇಂದೊ, ನಾಳೆಯೋ ಪರಿಹಾರ ಸಿಗಬಹುದು ಎಂದು ಕಾಯುತ್ತಿದ್ದೇವೆ ಆದರೆ ನಮಗೆ ಸರಕಾರದಿಂದ ಇಲ್ಲಿವರೆಗೆ ಯಾವುದೇ ರೀತಿಯ ಪರಿಹಾರ ದೊರಕಲಿಲ್ಲ. ನಮ್ಮ ಕುಟುಂಬ ಬೀದಿ ಪಾಲಾಗಿದೆ ಎಂದು ಸಂತ್ರಸ್ತೆ ಲಕ್ಷ್ಮೀ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಬಗ್ಗೆ ಕೆಲ ದಿನಗಳ ಹಿಂದೆ ತಹಶೀಲ್ದಾರ್ ಕಚೇರಿಗೆ ಹೋಗಿ ಪತ್ರ ನೀಡಿದ್ದೇನೆ. ಆದರೆ ಅಲ್ಲಿ ಅನುದಾನ ಬಂದಿಲ್ಲ, ಗ್ರಾಮ ಲೆಕ್ಕಾಧಿಕಾರಿಗೆ ತಿಳಿಸಿ ಎಂದು ಹೇಳುತ್ತಿದ್ದಾರೆ. ಅಧಿಕಾರಿಗಳು ನಮ್ಮನ್ನು ತುಂಬಾ ಸತಾಯಿಸುತ್ತಿದ್ದಾರೆ. ನಾವು ಸದ್ಯಕ್ಕೆ ಬೇರೆಯವರ ಮನೆಯಲ್ಲಿದ್ದೇವೆ. ಆ ಮನೆಯವರು ಕೂಡ ನಮ್ಮನ್ನು ಹೊರಹಾಕುವುದಕ್ಕೆ ತಯಾರಾಗಿದ್ದಾರೆ ಎಂದು ಲಕ್ಷ್ಮೀ ಅವರ ಮಗ ಬೇಸರ ವ್ಯಕ್ತಪಡಿಸಿದ್ದಾರೆ.

ಮನೆಗೆ ಆಧಾರ ಸ್ಥಂಬವಾಗುರುವ ಲಕ್ಷ್ಮೀ ಅವರ ಪತಿ ನಿಧನರಾಗಿದದು, ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುಟುಂಬಕ್ಕೆ ಸರಕಾರದಿಂದ ಪರಿಹಾರವು ಇಲ್ಲ, ಮನೆಯೂ ಇಲ್ಲದಾಗಿದೆ. ಪರಿಹಾರ ಮತ್ತು ಮನೆ ಮಂಜೂರಾತಿಗಾಗಿ ಕಾಯುತ್ತಾ ಕುಳಿತಿರುವ ಈ ಕುಟುಂಬ ಸದ್ಯಕ್ಕೆ ಬೇರೆಯವರ ಮನೆಯಲ್ಲಿ ವಾಸವಿದೆ.

ಲಕ್ಷ್ಮೀ ಅವರ ಓರ್ವ ಮಗ ಓದುತ್ತಿದ್ದು, ಇನ್ನೊಬ್ಬ ಮಗ ಕೂಲಿ ಕೆಲಸ ಮಾಡಿಕೊಂಡು ಇದ್ದಾರೆ. ಲಕ್ಷ್ಮೀ ಅವರಿಗೆ ವಯಸ್ಸಾಗಿದ್ದು, ಅವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಇಂಥ ಒಂದು ಪರಿಸ್ಥಿತಿಯಲ್ಲಿರುವ ಅವರು ಮನೆ ಕಟ್ಟಿಕೊಳ್ಳುವಷ್ಟು ಶಕ್ತರಲ್ಲ. ಹಾಗಾಗಿ ಮನೆ ಕಳೆದುಕೊಂಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗಮನ ಹರಿಸಿ ಆ ಕುಟುಂಬಕ್ಕೆ ಆಸರೆ ನೀಡಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ಕಳೆದ ವರ್ಷದ ಮಳೆಯಲ್ಲಿ ನಮ್ಮ ಮನೆ ಕುಸಿದು ಬಿದ್ದಿದೆ. ಇಲ್ಲಿವರೆಗೆ ಯಾವುದೇ ಪರಿಹಾರ ನಮಗೆ ದೊರಕಲಿಲ್ಲ. ಊರಲ್ಲಿರುವ ಬೇರೆಯವರ ಮನೆಯಲ್ಲಿ ನಾವು ದಿನ ದೂಡುತ್ತಿದ್ದೇವೆ. ನಾವು ಕಡು ಬಡವರಾಗಿದ್ದು, ನಮ್ಮಿಂದ ಮನೆ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಸರಕಾರದವರು ನಮಗೆ ಮನೆ ಕಟ್ಟಿಕೊಟ್ಟರೆ ಉಪಕಾರವಾಗುತ್ತದೆ.

-ಲಕ್ಷ್ಮೀ, ಸಂತ್ರಸ್ತೆ

ನಾವು ಎಲ್ಲ ಅಧಿಕಾರಿ ಮತ್ತು ಶಾಸಕರನ್ನು ಭೇಟಿಯಾಗಿದ್ದೇವೆ. ಮೀನುಗಾರಿಕೆ ಇಲಾಖೆಯಲ್ಲಿ ಮನೆ ಸಿಗುತ್ತದೆ ಎಂದು ಯಾರೋ ಹೇಳಿದ್ದರಿಂದ ಅಲ್ಲಿಯೂ ಹೋಗಿದ್ದೆವು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸರಕಾರ ನಮಗೆ ಪರಿಹಾರಧನ ಮತ್ತು ಒಂದು ಮನೆ ಕಟ್ಟಿಕೊಡಬೇಕು.

-ಅನಿರುದ್ಧ್, ಲಕ್ಷ್ಮೀ ಅವರ ಪುತ್ರ

share
ಚಿತ್ರಸೇನ ವ್ಹಿ ಫುಲೆ
ಚಿತ್ರಸೇನ ವ್ಹಿ ಫುಲೆ
Next Story
X