Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗೂಳೂರಿನಲ್ಲಿ ಕ್ರಿ.ಶ.1557ರ ಪಾರ್ಸಿ,...

ಗೂಳೂರಿನಲ್ಲಿ ಕ್ರಿ.ಶ.1557ರ ಪಾರ್ಸಿ, ಕನ್ನಡ ಶಿಲಾ ಶಾಸನ ಪತ್ತೆ

ವೆಂಕಟೇಶ್ ಗೂಳೂರುವೆಂಕಟೇಶ್ ಗೂಳೂರು24 Aug 2025 8:19 AM IST
share
ಗೂಳೂರಿನಲ್ಲಿ ಕ್ರಿ.ಶ.1557ರ ಪಾರ್ಸಿ, ಕನ್ನಡ ಶಿಲಾ ಶಾಸನ ಪತ್ತೆ

ಬಾಗೇಪಲ್ಲಿ, ಆ.23: ತಾಲೂಕಿನ ಗೂಳೂರು ಶ್ರೀ ವೀರಭದ್ರೇಶ್ವರ ದೇಗುಲದ ಸಮೀಪದ ಹೊಲದಲ್ಲಿ ಕ್ರಿ.ಶ. 1557ರ ಕನ್ನಡ ಮತ್ತು ಪರ್ಷಿಯನ್ ಲಿಪಿಯ ಅಪರೂಪದ ಶಿಲಾಶಾಸನ ಪತ್ತೆಯಾಗಿದ್ದು, ಆಳವಾದ ಅಧ್ಯಯನಕ್ಕೆ ಯೋಗ್ಯವಾಗಿದ್ದು, ಗತ ಇತಿಹಾಸದ ಮೇಲೆ ಬೆಳಕು ಚೆಲ್ಲುವಲ್ಲಿ ಸಹಕಾರಿಯಾಗುತ್ತದೆ ಎಂದು ಸಂಶೋಧಕ ಬಿ.ಆರ್.ಕೃಷ್ಣ ಪ್ರತಿಪಾದಿಸಿದ್ದಾರೆ.

ತಾಲೂಕಿನ ಗೂಳೂರು ಶ್ರೀ ವೀರಭದೇಶ್ವ ಸ್ವಾಮಿ ದೇಗುಲದ ಹೊಲಗಳ ಬಳಿಯಿರುವ ಕಾಲುವೆಯ ಬಳಿ ದೊರೆತ ಶಿಲಾಶಾಸನವನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಶಿಲಾಶಾಸನ ಐದು ಅಡಿ ಉದ್ದ, ಎರಡು ಅಡಿ ಅಗಲ ಹಾಗೂ ಆರು ಅಡಿ ದಪ್ಪದಾದ ಬಂಡೆಯ ಮೇಲೆ ಕೆತ್ತಲಾಗಿದ್ದು, (ಕ್ರಿ.ಶ. 1557) ಶಾಲಿವಾಹನ ಶಕೆಯ 1479 ಪಿಂಗಳನಾಮ ಸಂವತ್ಸರ ಮಾಘ ಬಹುಳ 3ನೇ ಶನಿವಾರ ಹಾಕಲಾಗಿರುವುದು. ಇದೊಂದು ಭೂದಾನ ಶಾಸನವಾಗಿದ್ದು, ಕಾಲುವೆ ತೋಡಿಸುವ ಕಾರ್ಯಕ್ಕೆ ಒಡೆಯರು ಎಂಬವರು ಭೂದಾನ ಮಾಡಿರುವ ಧರ್ಮ ಶಾಸನವಾಗಿದ್ದು, ಇದಕ್ಕೆ ಯಾರು ತಪ್ಪಿದರೂ ಧರ್ಮಕ್ಕೆ ತಪ್ಪಿದವರಾಗಿಯೂ, ವಾರಣಾಸಿಯಲ್ಲಿ ತಮ್ಮ ತಂದೆ ತಾಯಿಗಳನ್ನು ಕೊಂದ ಪಾಪಕ್ಕೆ ಈಡಾಗುವರು ಎಂದು ಶಾಸನದಲ್ಲಿ ಎಚ್ಚರಿಸಲಾಗಿದೆ. ಶಾಸನವನ್ನು ಹಳೆಗನ್ನಡದಲ್ಲಿ ಹತ್ತು ಸಾಲುಗಳಲ್ಲಿ ಬರೆಯಲಾಗಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ, ಚಂದ್ರರಿದ್ದಾರೆ. ಅದರ ಕೆಳಗೆ ಪರ್ಷಿಯನ್ ಭಾಷೆಯಲ್ಲಿ ಆರು ಸಾಲುಗಳನ್ನು ಬರೆಯಲಾಗಿದ್ದು, ಇದರ ಸಾರಾಂಶ ತಿಳಿಯುತ್ತಿಲ್ಲ ಎಂದರು.

ಕರ್ನಾಟಕ ಇತಿಹಾಸ ಅಕಾಡಮಿ ಸಮ್ಮೇಳನದಲ್ಲಿ ಈ ಬಗ್ಗೆ ಸಂಶೋಧನಾತ್ಮಕ ಲೇಖನ ಮಂಡಿಸಲಾಗುವುದು ಎಂದು ತಿಳಿಸಿದರು. ಆನಂತರ ಶಿಲಾಶಾಸನವನ್ನು ನೀರಿನಿಂದ ತೊಳೆದು, ದೇವಾಲಯದ ಮುಂದೆ ತಂದು ನಿಲ್ಲಿಸಿ, ಸಂರಕ್ಷಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಸನದ ಪಾಠವನ್ನು ಸಂಶೋಧಿಸಿ, ಸಂಪೂರ್ಣವಾಗಿ ಫಲಕದ ಮೇಲೆ ಬರೆಸಿ, ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶನಕ್ಕೆ ಇಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ದೇವಾಲಯ ಉಸ್ತುವಾರಿಗಳಾದ ಬಸವರಾಜು, ಚಲಪತಿ ಮತ್ತು ದೇವಾಲಯದ ಅರ್ಚಕ ಮಂಜುನಾಥ ಮತ್ತಿತರರು ಹಾಜರಿದ್ದರು.

share
ವೆಂಕಟೇಶ್ ಗೂಳೂರು
ವೆಂಕಟೇಶ್ ಗೂಳೂರು
Next Story
X