Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕನ್ನಡ ಮಾಧ್ಯಮದಲ್ಲಿ ಕಲಿತು ವೈದ್ಯೆಯಾದ...

ಕನ್ನಡ ಮಾಧ್ಯಮದಲ್ಲಿ ಕಲಿತು ವೈದ್ಯೆಯಾದ ಗ್ರಾಮೀಣ ಪ್ರತಿಭೆ

ತಂದೆಯ ಕನಸು ನನಸಾಗಿಸಿದ ಪುತ್ರಿ ಡಾ.ಝಾಹಿದಾ ಯೂಸುಫ್

ಹಂಝ ಮಲಾರ್ಹಂಝ ಮಲಾರ್28 Oct 2024 11:33 AM IST
share
ಕನ್ನಡ ಮಾಧ್ಯಮದಲ್ಲಿ ಕಲಿತು ವೈದ್ಯೆಯಾದ ಗ್ರಾಮೀಣ ಪ್ರತಿಭೆ

ಮಂಗಳೂರು: ಉದ್ಯಮಿಯೊಬ್ಬರ ಬಳಿ ಟಿಂಬರ್ ರೈಟರ್ ಆಗಿದ್ದ ಅವರಿಗೆ ತನ್ನ ನಾಲ್ವರು ಮಕ್ಕಳ ಪೈಕಿ ಒಬ್ಬರನ್ನಾದರೂ ವೈದ್ಯರನ್ನಾಗಿಸಬೇಕು ಎಂಬ ಕನಸು. ತನ್ನ ಉದ್ಯೋಗದಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಸಾಧ್ಯವಿಲ್ಲ ಎಂಬ ವಾಸ್ತವದ ಅರಿವು ಅವರಿಗಿದ್ದರೂ ಕನಸನ್ನು ಜೀವಂತವಾಗಿರಿಸಿದ್ದರು. ತಂದೆಯ ಕನಸನ್ನು ಇಬ್ಬರು ಅಣ್ಣಂದಿರು ಮತ್ತು ಒಬ್ಬಳು ಅಕ್ಕ ಕೈ ಚೆಲ್ಲಿದರೂ ಕೊನೆಯ ಪುತ್ರಿ ಸಾಕಾರಗೊಳಿಸಿದ್ದಾಳೆ. ಆರ್ಥಿಕವಾಗಿ ಸಾಕಷ್ಟು ಸಮಸ್ಯೆ ಎದುರಾದರೂ ಅಣ್ಣಂದಿರ ಸಹಕಾರದಿಂದ ಛಲ ಬಿಡದೆ ಕಲಿತು ಇದೀಗ ವೈದ್ಯೆಯಾಗಿ ಹೊರ ಹೊಮ್ಮಿದ್ದಾರೆ.

ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ಕೊಳ್ತಂಕರೆ ಮನೆಯ ದಿವಂಗತ ಯೂಸುಫ್ ಎಂ.ಕೆ. ಮತ್ತು ನಫೀಸಾ ದಂಪತಿಯ ಪುತ್ರಿಯಾಗಿರುವ ಡಾ.ಝಾಹಿದಾ ಯೂಸುಫ್ ಗ್ರಾಮೀಣ ಪ್ರದೇಶದ ಅಪ್ಪಟ ಪ್ರತಿಭೆ. ಸಾಮಾನ್ಯವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಹುಟ್ಟಿ ಬೆಳೆದವರಿಗೆ ಡಾಕ್ಟರ್, ಇಂಜಿನಿಯರ್ ಇತ್ಯಾದಿ ಕೈಗೆಟಕುವಂಥದ್ದಲ್ಲ. ಅದೆಲ್ಲಾ ನಗರ ಪ್ರದೇಶದಲ್ಲಿ ಬೆಳೆದವರಿಗೆ ಮಾತ್ರ ಸೀಮಿತ ಎಂಬ ಭಾವನೆ ಇರುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ಉನ್ನತ ಶಿಕ್ಷಣದ ಬಗ್ಗೆ ಮಾಹಿತಿಯ ಕೊರತೆಯೂ ಇರುತ್ತದೆ. ಅದನ್ನೆಲ್ಲಾ ಡಾ.ಝಾಹಿದಾ ಸುಳ್ಳಾಗಿಸಿದ್ದಾರೆ. ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ತೃತೀಯ ಸ್ಥಾನದೊಂದಿಗೆ ಬಿಎಎಂಎಸ್ ತೇರ್ಗಡೆಯಾಗಿದ್ದಾರೆ.

ತನ್ನ ತಂದೆಯ ಕನಸನ್ನು ನನಸಾಗಿಸಲೇಬೇಕು ಎಂಬ ಹಠಕ್ಕೆ ಬಿದ್ದ ಝಾಹಿದಾ, ಆರ್ಥಿಕ ಅಡಚಣೆಗಳನ್ನೆಲ್ಲ ಮೀರಿ ಅಣ್ಣಂದಿರ ಸಹಕಾರದಿಂದ ರಾತ್ರಿ ಹಗಲೆನ್ನದೆ ಕಲಿತು ಇದೀಗ ಸುಳ್ಯದಂತಹ ಗ್ರಾಮಾಂತರ ಪ್ರದೇಶದ ವೈದ್ಯೆ ಎಂದು ಗುರುತಿಸಿಕೊಂಡಿದ್ದಾರೆ. ತೀರಾ ಹಳ್ಳಿ ಪ್ರದೇಶದಲ್ಲಿ ಹುಟ್ಟಿ ಬೆಳೆದು ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಕಲಿತ ಝಾಹಿದಾ ತನ್ನ ಗುರಿ ಈಡೇರಿಸಲು ಸತತವಾಗಿ ಪರಿಶ್ರಮ ಪಟ್ಟು ಅದರಲ್ಲಿ ಯಶಸ್ಸು ಸಾಧಿಸಿದ್ದಾರೆ.

ಐವತ್ತೊಕ್ಲು, ಪಂಬೆತ್ತಾಡಿ, ಕಲ್ಮಡ್ಕ, ಎಣ್ಮೂರು ಎಂಬ ಆಸುಪಾಸಿನ ನಾಲ್ಕು ಗ್ರಾಮಗಳಲ್ಲೇ ಪ್ರಪ್ರಥಮ ಮುಸ್ಲಿಮ್ ವೈದ್ಯೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. 1ರಿಂದ 7ನೇ ತರಗತಿಯವರೆಗೆ ಪಡ್ಪಿನಂಗಡಿಯ ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ಡಾ.ಝಾಹಿದಾ 8ರಿಂದ 10ನೇ ತರಗತಿಯ ವರೆಗೆ ಕಡಬದ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತರು. ಎಸೆಸೆಲ್ಸಿಯಲ್ಲಿ ಶಾಲೆಗೆ ಪ್ರಥಮ ಮತ್ತು ಕಡಬ ತಾಲೂಕಿಗೆ ದ್ವಿತೀಯ (602/625) ಸ್ಥಾನಿಯಾದರು. ಕಾಸರಗೋಡು ಜಿಲ್ಲೆಯ ದೇಳಿ ಎಂಬಲ್ಲಿನ ಸಅದಿಯ ಇಂಗ್ಲಿಷ್ ಮೀಡಿಯಂ ರೆಸಿಡೆನ್ಸಿಯಲ್ ಸೀನಿಯರ್ ಸೆಕೆಂಡರಿ ಸ್ಕೂಲ್‌ನಲ್ಲಿ 12ನೇ(ಸಿಬಿಎಸ್‌ಇ) ತರಗತಿ ಕಲಿತರು. ಅಲ್ಲದೆ ಕಾಲೇಜಿಗೆ ಪ್ರಥಮ (420/500) ಸ್ಥಾನಿಯಾದರು.

ಮೆರಿಟ್ ಸೀಟಿನೊಂದಿಗೆ ಶುಲ್ಕ ವಿನಾಯಿತಿ ಪಡೆದ ಅವರು ಮಂಜನಾಡಿ ಸಮೀಪದ ನರಿಂಗಾನ ಗ್ರಾಮದಲ್ಲಿರುವ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಿಂದ ಬಿಎಎಂಎಸ್ ತೇರ್ಗಡೆ ಹೊಂದಿ ಕಾಲೇಜಿಗೆ ತೃತೀಯ ಸ್ಥಾನಿಯಾದರು. ಸದ್ಯ ಎಂ.ಡಿ. (ಆಯು) ಅರ್ಹತಾ ಪರೀಕ್ಷೆಯನ್ನು ಬರೆದಿರುವ ಡಾ.ಝಾಹಿದಾ ಇದರಲ್ಲಿ ರಾಜ್ಯದಲ್ಲೇ ಟಾಪ್ 10ರೊಳಗೆ ಸ್ಥಾನ ಪಡೆದಿದ್ದಾರೆ.

ಪಠ್ಯೇತರ ಚಟುವಟಿಕೆಯಲ್ಲೂ ಕ್ರಿಯಾಶೀಲರಾಗಿರುವ ಡಾ.ಝಾಹಿದಾ ಈ ಹಿಂದೆ ಇಂಟರ್ ಕಾಲೇಜ್ ಕ್ವಿಝ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕಡಬ ತಾಲೂಕಿನ ಕಂದಾಯ ಇಲಾಖೆ, ಮಂಗಳೂರು ಸಿಟಿ ಎಚ್‌ಎಂಎಸ್ ಮತ್ತು ದ.ಕ. ಪ್ರಾಂಶುಪಾಲರ ಅಸೋಸಿಯೇಶನ್ ಸಹಿತ ಹಲವು ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.

share
ಹಂಝ ಮಲಾರ್
ಹಂಝ ಮಲಾರ್
Next Story
X