Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚಾಮರಾಜನಗರದಲ್ಲಿ ಶ್ರೀಲಂಕಾ...

ಚಾಮರಾಜನಗರದಲ್ಲಿ ಶ್ರೀಲಂಕಾ ಕ್ರಿಕೆಟಿಗನಿಂದ ಆರಂಭವಾಗಲಿದೆ ತಂಪು ಪಾನೀಯ ಕಾರ್ಖಾನೆ

►ಕೈಗಾರಿಕಾ ಉದ್ಯಮ ರಂಗಕ್ಕೆ ಕಾಲಿಟ್ಟ ಮುತ್ತಯ್ಯ ಮುರುಳೀಧರನ್ ►ಸ್ಥಳೀಯ 298 ಮಂದಿಗೆ ಉದ್ಯೋಗದ ಭರವಸೆ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್1 July 2024 3:47 PM IST
share
ಚಾಮರಾಜನಗರದಲ್ಲಿ ಶ್ರೀಲಂಕಾ ಕ್ರಿಕೆಟಿಗನಿಂದ ಆರಂಭವಾಗಲಿದೆ ತಂಪು ಪಾನೀಯ ಕಾರ್ಖಾನೆ

ಚಾಮರಾಜನಗರ: ಶ್ರೀಲಂಕಾ ಕ್ರಿಕೆಟರ್ ಮುತ್ತಯ್ಯ ಮುರುಳೀಧರನ್ ಚಾಮರಾಜ ನಗರದ ಹೊರವಲಯದಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸುತ್ತಿರುವ ತಂಪು ಪಾನೀಯ ಕಾರ್ಖಾನೆಯಲ್ಲಿ ನೂರಾರು ಮಂದಿ ಸ್ಥಳೀಯರಿಗೆ ಉದ್ಯೋಗಾವಕಾಶದ ಆಶಾಭಾವನೆ ಮೂಡಿದೆ.

ವಿಶ್ವದ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿದ್ದ ಮುತ್ತಯ್ಯ ಮುರುಳೀಧರನ್ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಲೇ ಕೈಗಾರಿಕಾ ಉದ್ಯಮ ರಂಗಕ್ಕೆ ಕಾಲಿಟ್ಟಿದ್ದಾರೆ. ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ‘ಮುತ್ತಯ್ಯ’ ಬ್ರಾಂಡ್‌ನಲ್ಲಿ ತಂಪು ಪಾನೀಯ ಸ್ಥಾಪಿಸುತ್ತಿದ್ದಾರೆ. ಕಾರ್ಖಾನೆ ನಿರ್ಮಾಣ ಕಾಮಗಾರಿ ಇದೀಗ ಅಂತಿಮ ಹಂತದಲ್ಲಿದ್ದು, ಸದ್ಯದಲ್ಲೇ ಕಾರ್ಯಾರಂಭ ಮಾಡುವ ಸಾಧ್ಯತೆಗಳಿವೆ.

ಚಾಮರಾಜನಗರದ ಕೈಗಾರಿಕಾ ಪ್ರದೇಶದಲ್ಲಿ ಸದ್ಯ ಹೆಚ್ಚು ಬಂಡವಾಳ ಹೂಡುತ್ತಿರುವ ಕಾರ್ಖಾನೆ, ಉದ್ಯಮಗಳ ಪೈಕಿ ಮುರುಳೀಧರನ್‌ರವರ ಒಡೆತನದ ಈ ಕಾರ್ಖಾನೆ ಅಗ್ರಪಂಕ್ತಿಯಲ್ಲಿದೆ. ಹೀಗಾಗಿ ಸ್ಥಳೀಯರಿಗೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಮನೆ ಮಾಡಿದೆ.

ಮುತ್ತಯ್ಯ ಮುರಳೀಧರನ್ ಅವರು ಆರಂಭದಲ್ಲಿ ಭೂಮಿ ಪಡೆಯುವಾಗ 475 ಕೋಟಿ ರೂ. ಹೂಡಿಕೆ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. ಇದೀಗ ಆ ಮೊತ್ತ ಏರಿಕೆಯಾಗಿದೆ.

ಅಲ್ಲದೇ ಅವರ ಕಾರ್ಖಾನೆ ಪ್ರದೇಶವೂ ವಿಸ್ತರಣೆಗೊಂಡಿದೆ. ಹೀಗಾಗಿ ಆರಂಭದಲ್ಲಿ 298 ಮಂದಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ನೀಡಲಾಗಿತ್ತು. ಇದೀಗ ಆ ಸಂಖ್ಯೆಯು ಏರಿಕೆಯಾಗಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಮುರುಳೀಧರನ್ ರಾಜ್ಯ ಸರಕಾರದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ರವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಚಾಮರಾಜನಗರದ ತಮ್ಮ ಕೈಗಾರಿಕೆ ಬಗ್ಗೆ ಸಮಾಲೋಚಿಸಿದ್ದಾರೆ. ಸದ್ಯದಲ್ಲೇ ತಮ್ಮ ಕೈಗಾರಿಕೆ ಆರಂಭಗೊಳ್ಳುವುದಾಗಿ ಹೇಳಿಕೊಂಡಿದ್ದಾರೆ. ಚಾಮನಗರದ ಕೈಗಾರಿಕೆ ಪ್ರದೇಶದಲ್ಲಿ ಬೃಹತ್ ಕೈಗಾರಿಕೆಯೊಂದು ಸದ್ಯದಲ್ಲೇ ಕಾರ್ಯಾರಂಭ ಮಾಡುವ ಮುನ್ಸೂಚನೆ ದೊರೆತಂತಾಗಿದೆ.

ವಿಶ್ವದ ಶ್ರೇಷ್ಟ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ರವರ ಒಡೆತನದ ಕಾರ್ಖಾನೆಯು ಚಾಮರಾಜನಗರದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿದೆ. ಆರಂಭದಲ್ಲಿ 40 ಎಕರೆ ಪ್ರದೇಶವನ್ನು ಖರೀದಿಸಿ, 475 ಕೋಟಿ ರೂ. ಹೂಡಿಕೆ ಮಾಡುವುದಾಗಿ ಹಾಗೂ ಸ್ಥಳೀಯ 298 ಮಂದಿಗೆ ಉದ್ಯೋಗ ನೀಡುವುದಾಗಿಯು ಘೋಷಿಸಿದ್ದರು. ಇದೀಗ ತಮ್ಮ ಪ್ರದೇಶ ವಿಸ್ತರಣೆಗೆ ಕೋರಿದ್ದಾರೆ.

-ಶಶಿಧರ್, ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಇಲಾಖೆ, ಚಾಮರಾಜನಗರ

Tags

soft drinkSri LankacricketerChamarajanagar
share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X