Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೆಲ್ಲಿಹುದಿಕೇರಿ, ನಲ್ವತ್ತೇಕರೆಯಲ್ಲಿ...

ನೆಲ್ಲಿಹುದಿಕೇರಿ, ನಲ್ವತ್ತೇಕರೆಯಲ್ಲಿ ಸೌಹಾರ್ದದ ಗಣೇಶೋತ್ಸವ ಆಚರಣೆ

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ1 Sept 2025 7:19 AM IST
share
ನೆಲ್ಲಿಹುದಿಕೇರಿ, ನಲ್ವತ್ತೇಕರೆಯಲ್ಲಿ ಸೌಹಾರ್ದದ ಗಣೇಶೋತ್ಸವ ಆಚರಣೆ

ಮಡಿಕೇರಿ, ಆ.31: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಲ್ವತ್ತೇಕರೆ ಮತ್ತು ನೆಲ್ಲಿಹುದಿಕೇರಿಯ ಸ್ಕೂಲ್ ಪೈಸಾರಿಯಲ್ಲಿ ಸರ್ವ ಧರ್ಮೀಯ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸ್ನೇಹ ಸೌಹಾರ್ದ, ಏಕತೆ ಸಾರುತ್ತಿರುವ ಯುವಕರ ತಂಡ ಎಲ್ಲರಿಗೂ ಮಾದರಿಯಾಗಿದೆ.

ಇಲ್ಲಿನ ಶ್ರೀವಿನಾಯಕ ಮಿತ್ರ ಮಂಡಳಿ ವತಿಯಿಂದ 32ನೇ ವರ್ಷದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾನೆ ಮಾಡಲಾಗಿದೆ. ವಿಶೇಷವೆಂದರೆ ಹಲವು ವರ್ಷಗಳಿಂದ ಸರ್ವಧರ್ಮೀಯರೂ ಒಳಗೊಂಡಂತೆ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಮುಸ್ಲಿಮ್ ಸಮುದಾಯದವರೂ ಸೇರಿ ನಡೆಸುವ ಹಬ್ಬದ ಆಚರಣೆ ಗಮನ ಸೆಳೆದಿದೆ. ಅನ್ನ ಸಂತರ್ಪಣೆ, ವಿಸರ್ಜನಾ ಪೂರ್ವ ಮೆರವಣಿಗೆ ಇಲ್ಲಿಯ ಮಸೀದಿ ಆವರಣ ತಲುಪುತ್ತಿದ್ದಂತೆ ಭಕ್ತರಿಗೆ ಪಾನಕ, ಹಣ್ಣು, ಸಿಹಿ ತಿನಿಸು ನೀಡಿ ಸ್ವಾಗತಿಸುವುದು ವಾಡಿಕೆ.

ಪ್ರತಿ ವರ್ಷ ಗಣೇಶೋತ್ಸವ, ಮೀಲಾದುನ್ನಬಿ ಜೊತೆಗೇ ಬರುವುದರಿಂದ ಇಲ್ಲಿ ಎರಡೂ ಧರ್ಮದವರು ಜೊತೆಗೂಡಿ ಆಚರಿಸುತ್ತಾರೆ. ಮೀಲಾದುನ್ನಬಿ ಸಂದರ್ಭದಲ್ಲಿ ಮುಹಮ್ಮದ್(ಸ.ಅ.) ಅವರ ಶಾಂತಿ ಸಂದೇಶ ಸಾರುವ ಸೌಹಾರ್ದ ಜಾಥಾ ಬರುವಾಗ ಶ್ರೀ ಸಿದ್ಧಿವಿನಾಯಕ ಮಿತ್ರ ಮಂಡಳಿಯವರು 13 ವರ್ಷಗಳಿಂದ ಮುಸ್ಲಿಮರಿಗೆ ಪಾನಕ ನೀಡಿ ಸ್ವಾಗತಿಸುತ್ತಾರೆ.

ಹಬ್ಬದ ಸಂದರ್ಭಕ್ಕೆ ಮಾತ್ರ ಸೀಮಿತವಾಗದ ಈ ಆಚರಣೆ ಉತ್ಸವದಲ್ಲಿ ಸಂಗ್ರಹವಾಗುವ ದೇಣಿಗೆಯನ್ನು ಶೈಕ್ಷಣಿಕ ಸಹಾಯ, ನಿರ್ಗತಿಕರಿಗೆ ಆರೋಗ್ಯ ವೆಚ್ಚ ಭರಿಸುವುದು, ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಸೇರಿದಂತೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತದೆ.

ನೆಲ್ಲಿಹುದಿಕೇರಿಯ ಸ್ಕೂಲ್ ಪೈಸಾರಿಯಲ್ಲಿ ಶ್ರೀಸಿದ್ಧಿವಿನಾಯಕ ಮಿತ್ರ ಮಂಡಳಿ ತನ್ನ 13ನೇ ವರ್ಷದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, ಸರ್ವ ಧರ್ಮೀಯರನ್ನೂ ಒಳಗೊಂಡ ಸಮಿತಿಯ ಅಧ್ಯಕ್ಷ ಕ್ರೈಸ್ತ ಧರ್ಮದ ಕ್ಸೇವಿಯರ್ ಎಂಬುದು ಮತ್ತೊಂದು ವಿಶೇಷ. ಅಲ್ಲದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಮುಸ್ಲಿಮ್ ವ್ಯಕ್ತಿಯ ಜಾಗದಲ್ಲಿ. ಸದಸ್ಯರಾದ ನೌಫಲ್, ಆಂಟೋನಿ ಸೇರಿದಂತೆ ಎಲ್ಲ ಧರ್ಮದವವರೂ ಸಂಘದಲ್ಲಿ ಇದ್ದು, ಸೌಹಾರ್ದ, ಏಕತೆಯನ್ನು ಸಾರುತ್ತಾ ಬರುತ್ತಿದ್ದಾರೆ.

ಶ್ರೀ ವಿನಾಯಕ ಮಿತ್ರ ಮಂಡಳಿಯು 32 ವರ್ಷಗಳಿಂದ ಗಣಪತಿ ಉತ್ಸವ ಆಚರಣೆ ಮಾಡಿಕೊಂಡು ಬರುತ್ತಿದ್ದು, ಎಲ್ಲ ಧರ್ಮದವರೂ ಕೂಡಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದೇವೆ. ಇಲ್ಲಿನ ಮಸೀದಿ ವತಿಯಿಂದ ಒಂದು ದಿನದ ಅನ್ನಸಂತರ್ಪಣೆ ನಡೆಸಲಾಗುತ್ತದೆ. ನಾವು ಕೂಡ ಮೀಲಾದುನ್ನಬಿ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಸಹೋದರರ ರೀತಿಯಲ್ಲಿ ಬಾಳುತ್ತಿದ್ದೇವೆ.

-ಸತೀಶ್, ಶ್ರೀ ವಿನಾಯಕ ಮಿತ್ರ ಮಂಡಳಿ ಅಧ್ಯಕ್ಷ, ನಲ್ವತ್ತೇಕರೆ

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X