Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪಾತ್ರ ಮುಗಿಸಿದ ರಂಗಭೂಮಿ ಕಲಾವಿದ...

ಪಾತ್ರ ಮುಗಿಸಿದ ರಂಗಭೂಮಿ ಕಲಾವಿದ ಬೂದಗುಂಪಿ ಹುಸೇನ್ ಸಾಬ್

ವಾರ್ತಾಭಾರತಿವಾರ್ತಾಭಾರತಿ26 Dec 2025 3:06 PM IST
share
ಪಾತ್ರ ಮುಗಿಸಿದ ರಂಗಭೂಮಿ ಕಲಾವಿದ ಬೂದಗುಂಪಿ ಹುಸೇನ್ ಸಾಬ್

ರಂಗಭೂಮಿ ಕಲಾವಿದ, ಹಾಸ್ಯ ನಟ, ಖ್ಯಾತ ಅಣಕುಗಾರ(ಮಿಮಿಕ್ರಿ), ಖಳನಾಯಕ, ಕಟು ವಿಮರ್ಶಕ, ಕಾಂಗ್ರೆಸ್ ಪಕ್ಷದ ವಕ್ತಾರ, ಕನ್ನಡ ಹಿತರಕ್ಷಕ ಸಂಘದ ಉಪಾಧ್ಯಕ್ಷ, ಪ್ರಶ್ನಾತೀತ ನಾಯಕ ಕಂಪ್ಲಿಯ ಬೂದಗುಂಪಿ ಹುಸೇನ್ ಸಾಹೇಬ್ ತಮ್ಮ ಪಾತ್ರ ಮುಗಿಸಿ, ಬಣ್ಣ ಕಳಚಿ ತೆರೆ ಮರೆ ಸೇರಿದ್ದಾರೆ.

ಮುಸ್ಲಿಮ್‌ಸಮುದಾಯದ ಪ್ರಮುಖರಾಗಿದ್ದರೂ ಹುಸೇನ್ ಸಾಹೇಬ್ ಸರ್ವ ಧರ್ಮ, ಸಮುದಾಯದವರೊಂದಿಗೆ ಸ್ನೇಹ ಹೊಂದಿದ್ದರು. ‘ರೈತ ನಗಲಿಲ್ಲ ಸರಕಾರ ಉಳಿಯಲಿಲ್ಲ’, ‘ಶ್ರೀವೀರಬ್ರಹ್ಮೇಂದ್ರಸ್ವಾಮಿ ಚರಿತ್ರೆ’, ‘ರಕ್ತ ರಾತ್ರಿ’ ಸೇರಿದಂತೆ ನಾನಾ ನಾಟಕಗಳಲ್ಲಿ ನಾಯಕ ನಟನಾಗಿ, ಖಳನಾಯಕನಾಗಿ, ಹಾಸ್ಯ ಪಾತ್ರಧಾರಿಯಾಗಿ, ಪೋಷಕ ಪಾತ್ರಧಾರಿಯಾಗಿ ಕಲಾಸೇವೆ ನಿರ್ವಹಿಸಿದ್ದರು.

ಬಳ್ಳಾರಿ ಬಸಪ್ಪ ಅವರ ನಾಯಕ ನಟನೆಯ ‘ರೈತ ನಗಲಿಲ್ಲ ಸರಕಾರ ಉಳಿಯಲಿಲ್ಲ’ ಎಂಬ ಸಾಮಾಜಿಕ ನಾಟಕದಲ್ಲಿ ಖಳ ನಾಯಕನಾಗಿ ನಟಿಸಿ ಮಿಂಚಿದ್ದರು. ಖಳನಟ ವಜ್ರಮುನಿಯವರಿಂದ ರಂಗಭೂಮಿಯ ರಾಜ್ಯಮಟ್ಟದ ಉತ್ತಮ ಕಲಾವಿದ ಪ್ರಶಸ್ತಿ ಪಡೆದದ್ದು ಇವರ ಹೆಗ್ಗಳಿಕೆಯಾಗಿದೆ. ಹೊಸಪೇಟೆಯ ಸಂಗೀತ ಭಾರತಿ ಸಂಸ್ಥೆಯ ರಂಗ ಭಾರ್ಗವ ಪ್ರಶಸ್ತಿ, ಸಮಾಜ ಸೇವಾ ಭಾರ್ಗವ ಪ್ರಶಸ್ತಿಗಳನ್ನು ಎಚ್.ಪಿ.ಕಲ್ಲಂಭಟ್ಟರಿಂದ ಪಡೆದಿದ್ದರು.

ಹುಸೇನ್ ಸಾಹೇಬ್ ಅವರ ಪ್ರಮುಖ ಆಕರ್ಷಣೆ ಮಾತು ಮತ್ತುಮಿಮಿಕ್ರಿ. ಸಿನೆಮಾ ನಟರಾದ ಡಾ.ರಾಜ ಕುಮಾರ್, ಬಾಲಕೃಷ್ಣ, ವಜ್ರಮುನಿ ಸೇರಿದಂತೆ ಕನ್ನಡ, ಹಿಂದಿ, ತೆಲುಗು ಚಲನಚಿತ್ರ ನಟರು, ರಾಜಕಾರಣಿಗಳಾದ ಮಲ್ಲಿಕಾರ್ಜುನ ಖರ್ಗೆ, ದಿವಂಗತಬಂಗಾರಪ್ಪ, ಎಂ.ಪಿ.ಪ್ರಕಾಶ್ ಹಾಗೂ ಸ್ಥಳೀಯರಾದ ಅರವಿ ಬಸವನಗೌಡ, ಕೆ.ಎಂ.ಹೇಮಯ್ಯ ಸ್ವಾಮಿ ಸೇರಿದಂತೆ ಸ್ನೇಹಿತರ, ಒಡನಾಡಿಗಳ ಮಾತು ಗಳನ್ನು ಯಥಾವತ್ತಾಗಿ ಅನುಕರಣೆ ಮಾಡಿ ತೋರಿಸುವ ಮೂಲಕ ಎಲ್ಲರನ್ನು ನಕ್ಕು ನಗಿಸಿ ಹೊಸ ಕಳೆ ಸೃಷ್ಟಿಸುತ್ತಿದ್ದರು. ಸಭೆ ಸಮಾರಂಭಗಳಲ್ಲಿ ಸ್ವಾಗತ, ವಂದನೆ, ಪರಿಚಯ ಹಾಗೂ ನಿರೂಪಣೆಯನ್ನು ವಿಶೇಷ ಶೈಲಿಯಲ್ಲಿ ಪ್ರಸ್ತುತಪಡಿಸುತ್ತಿದ್ದರು.

ಹುಸೇನ್ ಸಾಹೇಬರು ಕನ್ನಡ ಹಿತರಕ್ಷಕ ಸಂಘದಲ್ಲಿ ಉಪಾಧ್ಯಕ್ಷರಾಗಿ, ನಿರ್ದೇಶಕರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾನಾ ಸಂಘಟನೆಗಳಲ್ಲೂ ಸೇವೆ ಸಲ್ಲಿಸಿದ್ದುಂಟು. ಸದಾ ಒಂದಿಲ್ಲೊಂದು ಚಟುವಟಿಕೆಗಳ ಮೂಲಕ ಜನರ ಮುಂದೆ ನಿಲ್ಲ ಬಯಸುತ್ತಿದ್ದ ಹುಸೇನ್ ಸಾಹೇಬ್ ಕಟು ವಿಮರ್ಶಕರಾಗಿದ್ದರು. ಅದು ಜನಸಾಮಾನ್ಯರೇ ಆಗಿರಲಿ ಅಥವಾ ರಾಜಕಾರಣಿಗಳೇ ಆಗಿರಲಿ ಯಾರನ್ನೂ ಬಿಡದೆ ಖಂಡತುಂಡವಾಗಿ ವಿಮರ್ಶಿಸುತ್ತಿದ್ದರು. ಹುಸೇನ್ ಸಾಹೇಬರ ಕಣ್ಣಿಗೆ ಬಿದ್ದವರ ಪಾಲಿಗೆ ಹೊಗಳಿಕೆ ಹಾಗೂ ತೆಗಳಿಕೆಯಂತು ಖಂಡಿತ ತಪ್ಪಿದ್ದಲ್ಲ.

ಈಗ ಹುಸೇನ್ ಸಾಹೇನ್ ನೆನಪಷ್ಟೇ. ಬದುಕೆಂಬ ರಂಗನೆಲೆಯಲ್ಲಿನ ಪಾತ್ರ ಮುಗಿಸಿದ್ದರೂ ಅವರ ನಟನೆ ಕಣ್ಮುಂದೆ ನಿಲ್ಲುತ್ತದೆ. ಅವರ ಅಗಲಿಕೆಯಿಂದ ಒಂದು ತಲೆಮಾರಿನ ರಂಗಭೂಮಿಯ ಕೊಂಡಿ ಕಳಚಿದಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X