Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪಾಳುಬಿದ್ದ ಭತ್ತದ ಗದ್ದೆಗೆ ಮರುಜೀವ...

ಪಾಳುಬಿದ್ದ ಭತ್ತದ ಗದ್ದೆಗೆ ಮರುಜೀವ ತುಂಬಿದ ಬೇಗೂರಿನ ಕೃಷಿಕ ಪ್ರವೀಣ್

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ11 Aug 2025 8:15 AM IST
share
ಪಾಳುಬಿದ್ದ ಭತ್ತದ ಗದ್ದೆಗೆ ಮರುಜೀವ ತುಂಬಿದ ಬೇಗೂರಿನ ಕೃಷಿಕ ಪ್ರವೀಣ್

ಮಡಿಕೇರಿ, ಆ.10: ಪಾಳುಬಿಟ್ಟಿದ್ದ ಭತ್ತದ ಗದ್ದೆಯನ್ನು ಗುತ್ತಿಗೆ ಪಡೆದುಕೊಂಡು ಯಂತ್ರದ ಮೂಲಕ ನಾಟಿ ಮಾಡಿ ದಕ್ಷಿಣ ಕೊಡಗಿನಲ್ಲಿ ಕೃಷಿಕರೋರ್ವರು ಗಮನ ಸೆಳೆದಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಚೀನಿವಾಡ ಎಂಬಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಯಂತ್ರದ ಮೂಲಕ ಭತ್ತದ ಕೃಷಿಯಲ್ಲಿ ಕೃಷಿಕ ಮತ್ರಂಡ ಪ್ರವೀಣ್ ಕುಶಾಲಪ್ಪ ಎಂಬವರು ತೊಡಗಿದ್ದಾರೆ. ಮಲಚ್ಚೀರ ರವಿ ಹಾಗೂ ಮುತ್ತಪ್ಪ ಎಂಬವರಿಗೆ ಸೇರಿದ ಪಾಳು ಬಿಟ್ಟಿದ್ದ ಸುಮಾರು 15 ಎಕರೆ ಭತ್ತದ ಗದ್ದೆಯನ್ನು ಮತ್ರಂಡ ಪ್ರವೀಣ್ ಕುಶಾಲಪ್ಪ ಅವರು ಗುತ್ತಿಗೆಗೆ ಪಡೆದು, ಮಂಡ್ಯದ ಕೃಷಿ ವಿಜ್ಞಾನ ಕೇಂದ್ರವನ್ನು ಸಂಪರ್ಕಿಸಿ ಅಲ್ಲಿಯೇ ತಯಾರಿಸಿದ ಆರ್.ಎನ್.ಆರ್. ಎಂಬ ಭತ್ತದ ಸಸಿ ಮಡಿಗಳನ್ನು ಹಾಗೂ ಭತ್ತದ ನಾಟಿ ಮಾಡುವ ಯಂತ್ರವನ್ನು ತರಿಸಿ ಭತ್ತದ ನಾಟಿ ಮಾಡುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕೃಷಿ ತಜ್ಞರು, ಯಂತ್ರದ ಮೂಲಕ ಭತ್ತದ ನಾಟಿ ಕಾರ್ಯ ಮಾಡಿ ಪಾಳುಬಿಟ್ಟಿದ್ದ ಭತ್ತದ ಗದ್ದೆಗೆ ಮರುಜೀವ ನೀಡುತ್ತಿರುವ ಕೃಷಿಕನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರವೀಣ್ ಅವರ ಪ್ರಯತ್ನಕ್ಕೆ ಕೃಷಿ ಇಲಾಖೆ, ಅರಣ್ಯ ಮಹಾ ವಿದ್ಯಾಲಯ ಮತ್ತು ಅಗ್ರಿಕಲ್ಚರ್ ಸೈನ್ಸ್ ಆಫ್ ಫೋರಂ ಕೊಡಗು ಸಂಸ್ಥೆ ಕೈಜೋಡಿಸಿದೆ. ರೈತರು ಸದಾ ಕಾರ್ಮಿಕರ ಸಮಸ್ಯೆಗಳು ಇದೆ ಎಂದು ಹೇಳುತ್ತಾರೆ. ಆದರೆ ಪ್ರವೀಣ್ ಈ ಕಾರ್ಯ ಶ್ಲಾಘನೀಯ. ಜಿಲ್ಲೆಯ ರೈತರು ಕೃಷಿ ಇಲಾಖೆ, ಸಂಘ ಸಂಸ್ಥೆಗಳು ಹಾಗೂ ಯಂತ್ರೋಪಕರಣಗಳ ಸಹಾಯದಿಂದ ಪಾಳು ಬಿಟ್ಟ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಬೇಕು ಎಂದು ಕೊಡಗು ಕೃಷಿ ವಿಜ್ಞಾನ ವೇದಿಕೆ ಮಾಜಿ ಅಧ್ಯಕ್ಷ ಡಾ.ಚೆಪ್ಪುಡಿರ ಕುಶಾಲಪ್ಪ ಹೇಳಿದ್ದಾರೆ.

ಇತ್ತಿಚೀನ ವರ್ಷಗಳಲ್ಲಿ ಭತ್ತದ ಕೃಷಿಯಲ್ಲಿ ತೊಡಗಿಕೊಳ್ಳುವವರ ಸಂಖ್ಯೆ ವಿರಳವಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಭತ್ತದ ಕೃಷಿಯನ್ನು ಮಾಡಿದಾಗ ಲಾಭದಾಯಕವಾಗಿರುತ್ತದೆ. ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ಯಂತ್ರಿಕೃತ ಕೃಷಿಯ ಮೊರೆ ಹೋಗುವುದರಿಂದ ಭತ್ತದ ಬೇಸಾಯದ ಖರ್ಚು ವೆಚ್ಚ ಕಡಿಮೆಯಾಗುತ್ತದೆ ಹಾಗೂ ಉತ್ತಮ ಫಸಲು ದೊರೆಯುತ್ತದೆ. ಭತ್ತದ ಕೃಷಿ ಕೇವಲ ಆಹಾರಕ್ಕಾಗಿ ಅಲ್ಲದೆ ಜಲಮೂಲಗಳ ಸಂರಕ್ಷಣೆಗಾಗಿಯೂ ಮಾಡಬೇಕಾಗಿದೆ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಆರ್.ಎನ್ ಕೆಂಚರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಭತ್ತದ ಬೆಳೆ ಬೆಳೆಯುವುದು ಕಡಿಮೆಯಾಗಿದೆ ಎಂದು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾಕ್ಟರ್ ವೀರೇಂದ್ರ ಕುಮಾರ್ ವಿಷಾದಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ 50 ಹೆಕ್ಟೇರ್ ಭತ್ತದ ಕೃಷಿ ಕಾಣಸಿಗುತ್ತಿತ್ತು. ಆದರೆ ಕಳೆದ 5 ವರ್ಷಗಳಿಂದ ಕೇವಲ 20 ರಿಂದ 30 ಹೆಕ್ಟೇರ್ ಭತ್ತದ ಕೃಷಿ ಭೂಮಿ ಕಾಣಸಿಗುತ್ತದೆ. ಕಾರಣ ಕಾರ್ಮಿಕರ ಸಮಸ್ಯೆ, ಹೆಚ್ಚಾಗಿ ಮಳೆ ಬೀಳುವುದು ಹೀಗೆ ಹತ್ತು ಹಲವು ಸಮಸ್ಯೆಗಳಿಂದ ಭತ್ತದ ಕೃಷಿ ಕಡಿಮೆಯಾಗುತ್ತಿದೆ. ಭತ್ತ ಬೆಳೆಯುವ ಕೃಷಿ ಭೂಮಿ ಹೆಚ್ಚಾಗಬೇಕೆಂಬ ರೈತರ ಕೂಗಿಗೆ ಓಗೊಟ್ಟು ಕೃಷಿ ವಿಜ್ಞಾನ ಕೇಂದ್ರ, ಅರಣ್ಯ ಮಹಾವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರ ಒಟ್ಟಾಗಿ ಸುಮಾರು 200 ಹೆಕ್ಟೇರ್ ಭತ್ತ ಬೆಳೆಯುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.

ಹಲವಾರು ವರ್ಷಗಳಿಂದ ಭತ್ತದ ಕೃಷಿ ಮಾಡುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಕಾರ್ಮಿಕರ ಅಭಾವವಿದೆ. ಇದೇ ಪ್ರಥಮ ಬಾರಿಗೆ ಕೊಡಗಿನಲ್ಲಿ ಮಂಡ್ಯ ಜಿಲ್ಲೆಯ ಕೃಷಿ ವಿಜ್ಞಾನಿಗಳೊಂದಿದೆ ಮೇಕನೈಸಲ್ ಕೃಷಿ ಮಾಡಲಾಗುತ್ತಿದೆ. ವನ್ಯ ಪ್ರಾಣಿಗಳಿಂದ ಕೃಷಿ ಫಸಲು ನಷ್ಟವಾಗದಂತೆ ತಡೆಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಂಡಲ್ಲಿ ಹಲವಾರು ರೈತರು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.

-ಮತ್ರಂಡ ಪ್ರವೀಣ್ ಕುಶಾಲಪ್ಪ, ಕೃಷಿಕ


share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X