Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಮೃತ ಸರೋವರದಲ್ಲಿ ಬೋಟಿಂಗ್: ಪ್ರಕೃತಿ...

ಅಮೃತ ಸರೋವರದಲ್ಲಿ ಬೋಟಿಂಗ್: ಪ್ರಕೃತಿ ಮಡಿಲಿನಲ್ಲಿ ಕಂಗೊಳಿಸುತ್ತಿರುವ ‘ಭೀಮಕೋಲ’

ವಾರ್ತಾಭಾರತಿವಾರ್ತಾಭಾರತಿ6 Oct 2025 1:59 PM IST
share
ಅಮೃತ ಸರೋವರದಲ್ಲಿ ಬೋಟಿಂಗ್:  ಪ್ರಕೃತಿ ಮಡಿಲಿನಲ್ಲಿ ಕಂಗೊಳಿಸುತ್ತಿರುವ ‘ಭೀಮಕೋಲ’

ಕಾರವಾರ: ಒಂದೊಮ್ಮೆ ಮೌನವಾಗಿ ನಿಂತಿದ್ದ ಕೆರೆ ಪ್ರಸಕ್ತ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಮೃತ ಸರೋವರವಾಗಿ ಅಭಿವೃದ್ಧಿಯಾದ ನಂತರ ಇಂದು ಜನಜಂಗುಳಿಯಿಂದ ಕಂಗೊಳಿಸುತ್ತಿದೆ. ಪ್ರವಾಸೋದ್ಯಮಕ್ಕೆ ಹೊಸರೂಪ ನೀಡಲು ಇಲ್ಲಿ ಬೋಟಿಂಗ್ ಆರಂಭಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮ ಪಂಚಾಯತ್‌ನ ಹೋಟೆಗಾಳಿ ಗ್ರಾಮದ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅಮೃತ ಸರೋವರ ಅಭಿವೃದ್ಧಿ ಮಾಡಿ ಅದಕ್ಕೆ ‘ಭೀಮಕೋಲ’ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯ ಗ್ರಾಮ ಪಂಚಾಯತ್ ಹಾಗೂ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ಅವರ ಸಹಕಾರದಿಂದ ಸರೋವರದಲ್ಲಿ ಬೋಟಿಂಗ್ ವ್ಯವಸ್ಥೆ ಆರಂಭಿಸಲಾಗಿದೆ. ಪ್ರವಾಸಿಗರು ಈ ಗ್ರಾಮಕ್ಕೆ ಬರುವಂತೆ ಮಾಡಲು ಸರೋವರದ ಸುತ್ತಮುತ್ತ ಸ್ವಚ್ಛತೆ, ಕುಳಿತುಕೊಳ್ಳಲು ಆಸನ, ಸೌಂದರ್ಯ ವರ್ಧನೆ ಮಾಡಲಾಗಿದೆ.

ಪ್ರಕೃತಿಯ ಮಡಿಲಿನಲ್ಲಿ ಅಭಿವೃದ್ಧಿಯಾಗಿರುವ ಈ ಸರೋವರವು ಪ್ರವಾಸಿಗರನ್ನು ಸೆಳೆಯುತ್ತಿದೆ ಹಾಗೂ ಅದು ವೀಕೆಂಡ್ ಟೂರಿಸಂ ಸ್ಪಾಟ್ ಆಗಿ ಪರಿವರ್ತನೆ ಹೊಂದಿದೆ. ಕಾರವಾರ ನಗರದಿಂದ ಕೆಲವೇ ದೂರ ಇರುವುದರಿಂದ ಈ ಸರೋವರಕ್ಕೆ ಸಾಕಷ್ಟು ಜನ ಪ್ರವಾಸಿಗರು ಶನಿವಾರ, ರವಿವಾರ ಮತ್ತು ರಜಾ ದಿನಗಳಲ್ಲಿ ಬಂದು, ಬೋಟಿಂಗ್‌ನಂತಹ ಜಲ ಕ್ರೀಡೆ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಬೋಟಿಂಗ್ ಪ್ರಾರಂಭವಾದ ಬಳಿಕ ಹಳ್ಳಿ ಮಾತ್ರವಲ್ಲ, ಹತ್ತಿರದ ಬೇರೆ ಬೇರೆ ಪಟ್ಟಣಗಳಿಂದಲೂ ಜನರು ಭೇಟಿ ನೀಡುತ್ತಿದ್ದಾರೆ.

ಬೋಟಿಂಗ್ ಟಿಕೆಟ್ ದರದಿಂದ ಗ್ರಾಮ ಪಂಚಾಯತ್‌ಗೆ ಆದಾಯ ಹೆಚ್ಚಾಗಿದೆ ಮತ್ತು ಬೋಟಿಂಗ್ ನಿರ್ವಹಣೆಯಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ಸಿಕ್ಕಿದೆ. ಪ್ರವಾಸಿಗರು ಬರುವುದರಿಂದ ಹಳ್ಳಿಯ ಹೊಟೇಲ್, ಚಹಾ ಅಂಗಡಿ, ಸಣ್ಣ ವ್ಯಾಪಾರಿಗಳಿಗೆ ಹೆಚ್ಚುವರಿ ಆದಾಯ ದೊರೆಯುತ್ತಿದೆ. ಅಮೃತ ಸರೋವರದಲ್ಲಿ ಬೋಟಿಂಗ್ ಪ್ರಾರಂಭವಾದ ನಂತರ ಹಳ್ಳಿ ಜನರಿಗೆ ಸ್ವಾಭಿಮಾನ, ಒಗ್ಗಟ್ಟು ಮತ್ತು ಸ್ವಾವಲಂಬನೆ ಬೆಳೆಯತೊಡಗಿದೆ ಹಾಗೂ ಯುವಕರು ತಮ್ಮ ಊರಲ್ಲೇ ಅವಕಾಶ ಹುಡುಕುವ ದಾರಿಯನ್ನು ಕಂಡುಕೊಂಡಿದ್ದಾರೆ. ಬೋಟಿಂಗ್ ಯಶಸ್ಸಿನಿಂದ ಗ್ರಾಮಸ್ಥರು ಸರೋವರವನ್ನು ಪರ್ಯಟನಾ ಕೇಂದ್ರವಾಗಿ ರೂಪಿಸಲು ಉತ್ಸಾಹದಿಂದ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಇನ್ನಷ್ಟು ಬೋಟ್‌ಗಳು, ಮಕ್ಕಳಿಗಾಗಿ ಆಟದ ಸ್ಥಳ ಹಾಗೂ ರಾತ್ರಿ ಬೆಳಕು ಅಳವಡಿಸುವ ಯೋಜನೆಗಳೂ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಮೃತ ಸರೋವರದಲ್ಲಿ ಬೋಟಿಂಗ್ ಪ್ರಾರಂಭವಾಗಿರುವುದು ಹಳ್ಳಿಯ ಪ್ರವಾಸೋದ್ಯಮಕ್ಕೆ ಮಹತ್ತರ ಹೆಜ್ಜೆ. ಇದರಿಂದ ಸ್ಥಳೀಯ ಯುವಕರಿಗೆ ಉದ್ಯೋಗ ಸಿಕ್ಕಂತೆಯೇ, ಹಳ್ಳಿಯ ಆರ್ಥಿಕತೆಗೂ ಹೊಸ ಚೈತನ್ಯ ಬಂದಿದೆ. ಈ ಯೋಜನೆ ಇನ್ನಷ್ಟು ಯಶಸ್ವಿಯಾಗಲು ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆಯೂ ಮುಂದಿದೆ.

-ಕರೀಂ ಅಸದಿ, ಯೋಜನಾ ನಿರ್ದೇಶಕ (ಡಿಆರ್‌ಡಿಎ), ಉತ್ತರ ಕನ್ನಡ ಜಿಪಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X