Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮುಕ್ತಿಗಾಗಿ ಕಾಯುತ್ತಿದೆ ಚೆಲ್ಯಡ್ಡ...

ಮುಕ್ತಿಗಾಗಿ ಕಾಯುತ್ತಿದೆ ಚೆಲ್ಯಡ್ಡ ಮುಳುಗು ಸೇತುವೆ

ಅನುದಾನ ಬಂದರೂ ಆರಂಭಗೊಂಡಿಲ್ಲ ಕಾಮಗಾರಿ

ಶಂಸುದ್ದೀನ್ ಸಂಪ್ಯಶಂಸುದ್ದೀನ್ ಸಂಪ್ಯ13 May 2024 11:16 AM IST
share
ಮುಕ್ತಿಗಾಗಿ ಕಾಯುತ್ತಿದೆ ಚೆಲ್ಯಡ್ಡ ಮುಳುಗು ಸೇತುವೆ

ಪುತ್ತೂರು: ತಾಲೂಕಿನಲ್ಲಿ ಕಳೆ ದೆರೆಡು ದಿನಗಳಿಂದ ಗುಡುಗು ಸಹಿತ ಗಾಳಿ-ಮಳೆಯಾಗುತ್ತಿದ್ದು, ಜೂನ್ ತಿಂಗಳಿನಿಂದ ಬಹುತೇಕ ಎಲ್ಲೆಡೆ ಮಳೆಯಾಗುವ ಸಾಧ್ಯತೆಗಳಿದೆ. ಆದರೆ ಮಳೆಗಾಲವನ್ನು ಎದುರಿಸಲು ಸ್ಥಳೀಯಾಡಳಿತದಿಂದ ಯಾವುದೇ ಸಿದ್ದತೆಗಳನ್ನು ನಡೆದಿರುವುದು ಕಂಡು ಬರುತ್ತಿಲ್ಲ. ಪ್ರತಿ ವರ್ಷವೂ ಐದಾರು ಬಾರಿ ಮುಳುಗುತ್ತಿರುವ ಪುತ್ತೂರಿನ ಚೆಲ್ಯಡ್ಕ ಮುಳುಗು ಸೇತುವೆಯು ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಸೇತುವೆ ದುರಸ್ತಿಗಾಗಿ ಕೋಟ್ಯಂತರ ರೂಪಾಯಿ ಅನುದಾನ ಬಂದಿದ್ದರೂ ಕಾಮಗಾರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ.

ನಡೆದಿಲ್ಲ ಹೊಸ ಸೇತುವೆ ಕಾಮಗಾರಿ: ಮುಳುಗು ಸೇತುವೆಯೆಂದೇ ಪ್ರಚಲಿತದಲ್ಲಿರುವ ಚೆಲ್ಯಡ್ಕ ಮುಗುಳು ಸೇತುವೆಯು ಪ್ರತಿ ವರ್ಷವೂ ಮಳೆಗಾಲದಲ್ಲಿ ಕನಿಷ್ಠ ಆರೇಳು ಬಾರಿ ಮುಳುಗಡೆಯಾಗಿ ಈ ಭಾಗದಲ್ಲಿ ರಸ್ತೆ ಸಂಚಾರವು ಸ್ಥಗಿತಗೊಳ್ಳುವುದು ಸಾಮಾನ್ಯವಾಗಿದೆ. ಪುತ್ತೂರು ತಾಲೂಕಿನ ಚೆಲ್ಯಡ್ಕ ದಲ್ಲಿರುವ ಈ ಸೇತುವೆಯು ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಸೇತುವೆಯಾಗಿದೆ. ಶತಮಾನದ ಇತಿಹಾಸ ಹೊಂದಿರುವ ಚೆಲ್ಯಡ್ಕ ಸೇತುವೆಯು ಪುತ್ತೂರು-ಕುಂಜೂರುಪಂಜ-ರೆಂಜ-ಪಾಣಾಜೆ ಮೂಲಕ ಕೇರಳವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಬೆಟ್ಟಂಪಾಡಿ ಗ್ರಾಪಂ ವ್ಯಾಪ್ತಿಯಲ್ಲಿನ ಸೀರೆ ಹೊಳೆಗೆ ನಿರ್ಮಿಸಲಾಗಿರುವ ಈ ಸೇತುವೆಯ ಪಿಲ್ಲರ್ ಮತ್ತು ಅಡಿಭಾಗ ಈಗಾಗಲೇ ಕುಸಿದು ಹೋಗಿದೆ.

ಹಿಂದೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿದ್ದ ಈ ರಸ್ತೆಯ ಬಳಿಕ ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೇರಿದೆ. ರಸ್ತೆ ಮೇಲ್ದರ್ಜೆಗೇರಿದ್ದರೂ ಮುಳುಗು ಸೇತುವೆ ಸಮಸ್ಯೆ ಮಾತ್ರ ಪರಿಹಾರ ಕಂಡಿಲ್ಲ. ಕೇವಲ 4 ಅಡಿಗಳಷ್ಟು ಎತ್ತರವಿರುವ ಈ ಸೇತುವೆಯು ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದೆ ಎನ್ನಲಾಗುತ್ತಿದೆ. ಇಲ್ಲಿ ಸಮರ್ಪಕವಾದ ಸೇತುವೆ ನಿರ್ಮಿಸಬೇಕು ಎನ್ನುವುದು ಈ ಭಾಗದ ಜನರ ಹಲವು ದಶಕಗಳ ಬೇಡಿಕೆಯಾಗಿದೆ. ಹೊಸ ಸೇತುವೆಗಾಗಿ ಹಲವಾರು ಹೋರಾಟ, ಪ್ರತಿಭಟನೆ, ಮನವಿಗಳ ಸರಮಾಲೆಯಾಗಿದೆ. ಆದರೆ ಪ್ರತಿಫಲ ಮಾತ್ರ ಸಿಕ್ಕಿಲ್ಲ. ಜನರ ಬೇಡಿಕೆಯಂತೆ ಕೆಲವು ವರ್ಷಗಳ ಹಿಂದೆ ನಬಾರ್ಡ್‌ನಡಿಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ರೂ. 1.5 ಕೋಟಿಯ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಸೇತುವೆಗೆ ಅನುದಾನ ದೊರಕಿರಲಿಲ್ಲ. ಹೀಗಾಗಿ ಇತರ ಯೋಜನೆಗಳ ಮೂಲಕ ಅನುದಾನ ಒದಗಿಸಿಕೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸುತ್ತಲೇ ಇದ್ದರು. ಬಳಿಕ ಹೊಸ ಸೇತುವೆ ನಿರ್ಮಾಣಕ್ಕಾಗಿ ಕೆಆರ್‌ಡಿಸಿಎಲ್ ಮೂಲಕ ರೂ. 3.5 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದೀಗ ಈ ಅನುದಾನ ಮಂಜೂರಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಚುನಾವಣೆಯ ನೀತಿ ಸಂಹಿತೆಯ ಕಾರಣದಿಂದಾಗಿ ಕಾಮಗಾರಿ ಆರಂಭಗೊಂಡಿಲ್ಲ ಎನ್ನಲಾಗುತ್ತಿದೆ. ಮಳೆಗಾಲಕ್ಕೆ ಮೊದಲು ಕಾಮಗಾರಿಯನ್ನು ಮಾಡದಿದ್ದಲ್ಲಿ ಮತ್ತೊಮ್ಮೆ ಹಲವು ಭಾರಿ ಈ ಅಂತರ್‌ರಾಜ್ಯ ಸಂಪರ್ಕ ರಸ್ತೆಯು ಮುಳುಗಡೆಯಾಗಿ ಈ ರಸ್ತೆಯಲ್ಲಿ ಪ್ರಯಾಣಿಸುವವರು ಸುತ್ತುಬಳಸಿ ಸಾಗುವ ದುರ್ಗತಿಯನ್ನು ತಪ್ಪಿಸಲು ಸಾಧ್ಯವಿಲ್ಲ. ಕಳೆದ ವರ್ಷ 6 ಬಾರಿ ರಸ್ತೆ ಮುಳುಗಡೆಯಾಗಿತ್ತು. ಕೆಲವೊಮ್ಮೆ ಮದ್ಯರಾತ್ರಿಯಲ್ಲಿಯೂ ರಸ್ತೆ ಮುಳುಗಡೆಯಾಗಿ ರಸ್ತಯಲ್ಲಿ ಸಾಗುವವರು ಅರ್ಧದಲ್ಲಿಯೇ ಬಾಕಿಯಾದ ಘಟನೆಯೂ ನಡೆದಿತ್ತು.

ನಡೆಯದ ಚರಂಡಿ ದುರಸ್ತಿ ಕಾಮಗಾರಿ: ಮಳೆಗಾಲ ಆರಂಭದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಬದಿಗಳಲ್ಲಿನ ಚರಂಡಿಗಳ ದುರಸ್ತಿ ಮಾಡುವುದು ಸಾಮಾನ್ಯ. ಆದರೆ ಪುತ್ತೂರು ನಗರಸಭೆ, ಗ್ರಾಮ ಪಂಚಾಯತ್‌ಗಳಲ್ಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಸೂಚನೆಗಳು ಈ ತನಕ ಕಾಣುತ್ತಿಲ್ಲ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಸಂದರ್ಭದಲ್ಲಿ ರಸ್ತೆ ಬದಿಗಳಲ್ಲಿನ ಚರಂಡಿ ಕಾಮಗಾರಿಗಳನ್ನು ಅರೆ ಬರೆ ಮಾಡಲಾಗಿತ್ತು. ಆ ಬಳಿಕ ಮುಂದುವರಿದ ಚರಂಡಿ ಕಾಮಗಾರಿಗಳು ನಡೆಸಿರುವ ಬಗ್ಗೆ ಕಂಡು ಬರುತ್ತಿಲ್ಲ. ಈಗಲೂ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಬಹುತೇಕ ಕಡೆಗಳಲ್ಲಿ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ.

ಒಟ್ಟಿನಲ್ಲಿ ಚೆಲ್ಯಡ್ಕ ಹೊಸ ಸೇತುವೆ ನಿರ್ಮಾಣಗೊಂಡು ಮಳೆಗಾಲದಲ್ಲಿ ಜನರು ಅನುಭವಿಸುವ ಭವಣೆ ತಪ್ಪಬೇಕು ಅಲ್ಲದೆ ಮಳೆಗಾಲ ಆರಂಭಗೊಂಡ ಬಳಿಕ ಚರಂಡಿ ಕಾಮಗಾರಿಗೆ ಮುಂದಾದರೆ ರಸ್ತೆಗಳು ಹಾಳಾಗುವ ಸಂಭವ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮಳೆಗಾಲಕ್ಕೆ ಮುನ್ನವೇ ಚರಂಡಿ ಕಾಮಗಾರಿ ನಡೆಯಬೇಕು ಎಂಬುದು ಜನರ ಅಪೇಕ್ಷೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂಬುದು ಪುತ್ತೂರಿನ ಸಾರ್ವಜನಿಕರ ಬಯಕೆಯಾಗಿದೆ.

ಮಳೆಗಾಲವನ್ನು ಎದುರಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡ ಲಾಗುವುದು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಂಬಂಧಿಸಿದ ಅಧಿಕಾರಿಗಳ ಸಭೆಯನ್ನು ನಡೆಸಲು ಸಾಧ್ಯ ವಾಗಿಲ್ಲ. ನೀತಿ ಸಂಹಿತೆ ಸಡಿಲಗೊಂಡ ತಕ್ಷಣವೇ ಸಭೆ ನಡೆಸಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿ ಕ್ರಿಯಾಶೀಲಗೊಳಿ ಸಲಾಗುವುದು. ರಸ್ತೆ ಬದಿಗಳಲ್ಲಿನ ಚರಂ ಡಿಯ ಹೂಳೆತ್ತಿ ಸುಗಮ ಮಳೆನೀರು ಹರಿಯಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು.

-ಅಶೋಕ್ ಕುಮಾರ್ ರೈ (ಶಾಸಕರು, ಪುತ್ತೂರು)

ಕಳೆದ ಸುಮಾರು 50 ವರ್ಷ ಗಳಿಂದ ಈ ಭಾಗದ ಜನರು ಇಲ್ಲಿನ ಸೇತುವೆಗೆ ಬೇಡಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ 3.5 ಕೋಟಿ ಅನುದಾನ ಬಿಡುಗಡೆಯಾಗಿದೆ. ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭ ಗೊಂಡಿಲ್ಲ. ನೀತಿ ಸಂಹಿತೆ ಮುಗಿದ ತಕ್ಷಣ ದಲ್ಲಿ ಕಾಮಗಾರಿ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

- ಕೃಷ್ಣ ಪ್ರಸಾದ್ ಆಳ್ವ, ಸ್ಥಳೀಯ ನಿವಾಸಿ

share
ಶಂಸುದ್ದೀನ್ ಸಂಪ್ಯ
ಶಂಸುದ್ದೀನ್ ಸಂಪ್ಯ
Next Story
X