Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿದೇಶಿ ತಳಿಯ ರೆಡ್ ಗ್ಲೋಬ್ ದ್ರಾಕ್ಷಿ...

ವಿದೇಶಿ ತಳಿಯ ರೆಡ್ ಗ್ಲೋಬ್ ದ್ರಾಕ್ಷಿ ಬೆಳೆದು ಯಶಸ್ಸು ಕಂಡ ಚಿಕ್ಕಬಳ್ಳಾಪುರದ ರೈತ

ಸಲಾಹುದ್ದೀನ್ ಚಿಕ್ಕಬಳ್ಳಾಪುರಸಲಾಹುದ್ದೀನ್ ಚಿಕ್ಕಬಳ್ಳಾಪುರ29 Jun 2026 8:54 AM IST
share
ವಿದೇಶಿ ತಳಿಯ ರೆಡ್ ಗ್ಲೋಬ್ ದ್ರಾಕ್ಷಿ ಬೆಳೆದು ಯಶಸ್ಸು ಕಂಡ ಚಿಕ್ಕಬಳ್ಳಾಪುರದ ರೈತ

ಚಿಕ್ಕಬಳ್ಳಾಪುರ: ಸಾಂಪ್ರದಾಯಿಕ ದ್ರಾಕ್ಷಿ ತಳಿಗಳ ಬೆಳೆಗಾರರು ಈಗ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಹೊಸ ತಳಿಗಳತ್ತ ಮುಖ ಮಾಡುತ್ತಿದ್ದಾರೆ. ಇದೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ಪ್ರಗತಿಪರ ರೈತ ಕೆ.ಆರ್.ರೆಡ್ಡಿ ಅವರು ಕಳೆದ 11 ವರ್ಷಗಳಿಂದ ಅಮೆರಿಕನ್ ಮೂಲದ ರೆಡ್ ಗ್ಲೋಬ್ ದ್ರಾಕ್ಷಿ ಬೆಳೆದು ಉತ್ತಮ ಆದಾಯ ಗಳಿಸಿ ಇತರ ರೈತರಿಗೆ ಮಾದರಿಯಾಗಿದ್ದಾರೆ.

ತೋಟದಲ್ಲಿ ಬೆಳೆದ ದ್ರಾಕ್ಷಿ ಗೊಂಚಲುಗಳು ಉತ್ತಮ ಗಾತ್ರ ಮತ್ತು ಗುಣಮಟ್ಟದಿಂದ ಗಮನ ಸೆಳೆಯುತ್ತಿದ್ದು, ಒಂದೊಂದು ಗೊಂಚಲು ಸುಮಾರು 2 ಕೆ.ಜಿ.ವರೆಗೆ ತೂಕ ಹೊಂದಿದೆ. ಆಕರ್ಷಕ ಕೆಂಪು ಬಣ್ಣ, ದೊಡ್ಡ ಗಾತ್ರ ಹಾಗೂ ಸಿಹಿ ರುಚಿಯಿಂದ ರೆಡ್ ಗ್ಲೋಬ್ ದ್ರಾಕ್ಷಿಗೆ ದೇಶೀಯ ಮತ್ತು ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ ಎನ್ನಲಾಗಿದೆ. ಹೆಚ್ಚಿನ ಆದಾಯ ತಂದುಕೊಡುವ ಸಾಮರ್ಥ್ಯ ಹೊಂದಿರುವ ಈ ತಳಿಯನ್ನು ಅಜ್ಜವಾರ ಗ್ರಾಮದ ತೋಟದಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿ ಬೆಳೆಸಿದ್ದು ಗಮನ ಸೆಳೆದಿದೆ.

11 ವರ್ಷಗಳಿಂದ ಕೆ.ಆರ್.ರೆಡ್ಡಿ ಅವರು ತಮ್ಮ ತೋಟದಲ್ಲಿ ರೆಡ್ ಗ್ಲೋಬ್ ದ್ರಾಕ್ಷಿ ಬೆಳೆ ಬೆಳೆದು ಉತ್ತಮ ಗುಣಮಟ್ಟದ ಫಸಲು ಪಡೆದುಕೊಳ್ಳುತ್ತಿದ್ದಾರೆ. ಮಾರುಕಟ್ಟೆ ಬೇಡಿಕೆ ಹಾಗೂ ಗುಣಮಟ್ಟ ಎರಡನ್ನೂ ಸಮತೋಲನದಲ್ಲಿ ಕಾಯ್ದುಕೊಂಡು ಯಶಸ್ಸು ಸಾಧಿಸಿದ್ದಾರೆ. ಇನ್ನು ಈ ದ್ರಾಕ್ಷಿಯ ಶೇಖರಣಾ ಸಾಮರ್ಥ್ಯ ಉತ್ತಮವಾಗಿದ್ದು,ಕಟಾವು ನಂತರವೂ ಸುಮಾರು 20 ದಿನಗಳವರೆಗೆ ಗುಣಮಟ್ಟ ಉಳಿಯುತ್ತದೆ.ಇದರಿಂದ ಸಣ್ಣ ಹಾಗೂ ದೊಡ್ಡ ವ್ಯಾಪಾರಿಗಳಿಗೆ ನಷ್ಟದ ಸಾಧ್ಯತೆ ಕಡಿಮೆ ಆಗುತ್ತದೆ ಎನ್ನುತ್ತಾರೆ ದ್ರಾಕ್ಷಿ ಬೆಳೆಗಾರ ಕೆ.ಆರ್.ರೆಡ್ಡಿ..

ಕೃಷಿ ಸಾಮರ್ಥ್ಯಕ್ಕೆ ಹೊಸ ದಿಕ್ಕು :

ವಿವಿಧ ತಳಿಯ ದ್ರಾಕ್ಷಿ, ಡ್ರಾಗನ್ ಫ್ರೂಟ್ ಸಹಿತ ವಿಭಿನ್ನ ಬೆಳೆಗಳಲ್ಲಿ ಯಶಸ್ಸು ಕಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೊಸ ಪ್ರಯೋಗಗಳ ಮೂಲಕ ಕೃಷಿಯಲ್ಲಿ ಹೊಸ ಸಾಧ್ಯತೆಗಳನ್ನು ತೆರೆದಿಡುತ್ತಿದ್ದಾರೆ. ಉಷ್ಣ ಪ್ರದೇಶಗಳಲ್ಲಿಯೂ ಆ್ಯಪಲ್ ಬೆಳೆ ಸಾಧ್ಯ ಎಂಬುದನ್ನು ತೋರಿಸಿರುವ ಚಿಕ್ಕಬಳ್ಳಾಪುರದ ಅಡ್ಡಗಲ್ ಗ್ರಾಮದ ರೈತ ಅನಿಲ್ ಎಂಬವರು ಆ್ಯಪಲ್ ಬೆಳೆದು ಗಮನ ಸೆಳೆದಿದ್ದಾರೆ. ಸಾಂಪ್ರದಾಯಿಕ ಬೆಳೆಗಳ ಜೊತೆಗೆ ಹೊಸ ತಳಿಗಳನ್ನು ಬೆಳೆಯುವುದನ್ನು ಅಳವಡಿಸಿಕೊಳ್ಳುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಕೃಷಿ ಕ್ಷೇತ್ರದಲ್ಲಿ ಹೊಸ ಮಾದರಿ ನಿರ್ಮಿಸುತ್ತಿದ್ದು, ಜಿಲ್ಲೆಯ ಕೃಷಿ ಸಾಮರ್ಥ್ಯಕ್ಕೆ ಹೊಸ ದಿಕ್ಕು ನೀಡುತ್ತಿದ್ದಾರೆ.

11 ವರ್ಷಗಳಿಂದ ನಷ್ಟ ಅನುಭವಿಸಿಲ್ಲ :

ಅಮೆರಿಕ, ಇಸ್ರೇಲ್ ಮತ್ತು ಚೀನಾ ದೇಶಗಳಲ್ಲಿ ಹೆಚ್ಚು ಬೆಳೆಯುವ ಈ ತಳಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಬೆಳೆಸಿರುವುದು ಸಂತೋಷ ತಂದಿದೆ. 2015ರಲ್ಲಿ ಮೊದಲಿಗೆ 3 ಎಕರೆ ಪ್ರದೇಶದಲ್ಲಿ ಬೆಳೆ ಆರಂಭಿಸಿದ್ದೆವು. 11 ವರ್ಷಗಳಿಂದ ರೆಡ್ ಗ್ಲೋಬ್ ಬೆಳೆ ಬೆಳೆಯುತ್ತಿದ್ದು ನಷ್ಟದ ಪರಿಸ್ಥಿತಿ ಎದುರಾಗಿಲ್ಲ. ಕುಟುಂಬದ ಕೃಷಿ ಹಿನ್ನೆಲೆ ಹಾಗೂ ಕೃಷಿ ವಿಜ್ಞಾನಿಗಳ ಮಾರ್ಗದರ್ಶನದಿಂದ ವರ್ಷದಿಂದ ವರ್ಷಕ್ಕೆ ಉತ್ತಮ ಇಳುವರಿ ಮತ್ತು ಲಾಭ ಸಿಗುತ್ತಿದೆ. 3 ಎಕರೆ ಪ್ರದೇಶದಲ್ಲಿ ಬೆಳೆದ ರೆಡ್ ಗ್ಲೋಬ್ ದ್ರಾಕ್ಷಿಗೆ ಎಕರೆಗೆ ಸರಾಸರಿ 50 ಟನ್ ಇಳುವರಿ ಬಂದಿದೆ. ಒಂದು ಎಕರೆಗೆ ಸುಮಾರು 1.50 ಲಕ್ಷ ರೂ. ವೆಚ್ಚ ಬರುತ್ತದೆ. ಕೋಲ್ಕತಾ, ಕಾಶ್ಮೀರ ಮತ್ತು ಒಡಿಶಾದಿಂದ ವ್ಯಾಪಾರಿಗಳು ನೇರವಾಗಿ ತೋಟಕ್ಕೆ ಬಂದು ಖರೀದಿ ಮಾಡುತ್ತಿದ್ದಾರೆ. ಈ ವರ್ಷ ಹೆಚ್ಚಿನ ಉಷ್ಣಾಂಶ ಇದ್ದರೂ ಬೆಳೆ ಉತ್ತಮವಾಗಿ ಬಂದಿದ್ದು ಬೆಲೆಯೂ ಅನುಕೂಲಕರವಾಗಿದೆ. ಕಳೆದ ವರ್ಷ ಪ್ರತೀ ಕೆ.ಜಿಗೆ 140 ರೂ. ಇದ್ದ ದರ, ಈ ವರ್ಷ ತೋಟದಲ್ಲಿಯೇ 152 ರೂ.ಗೆ ಮಾರಾಟವಾಗಿದೆ.

-ಕೆ.ಆರ್.ರೆಡ್ಡಿ, ರೆಡ್ ಗ್ಲೋಬ್ ದ್ರಾಕ್ಷಿ ಬೆಳೆಗಾರ

Tags

Red Globe grapesFarmerChikkaballapur
share
ಸಲಾಹುದ್ದೀನ್ ಚಿಕ್ಕಬಳ್ಳಾಪುರ
ಸಲಾಹುದ್ದೀನ್ ಚಿಕ್ಕಬಳ್ಳಾಪುರ
Next Story
X