Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ವಾರ್ತಾಭಾರತಿ’ ಸಂಪಾದಕೀಯದ ಬಗ್ಗೆ ರಾಜ್ಯ...

‘ವಾರ್ತಾಭಾರತಿ’ ಸಂಪಾದಕೀಯದ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ16 Nov 2024 9:31 AM IST
share
‘ವಾರ್ತಾಭಾರತಿ’ ಸಂಪಾದಕೀಯದ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯ ಸ್ಪಷ್ಟೀಕರಣ

ದಿನಾಂಕ: 22.06.2024ರಂದು ‘ವಾರ್ತಾ ಭಾರತಿ’ ಪತ್ರಿಕೆಯಲ್ಲಿ ‘ಕನ್ನಡ ಮಾಧ್ಯಮ: ಬಡವರ ಮಕ್ಕಳು ಬಲಿಪಶು ವಾಗದಿರಲಿ’ ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿರುತ್ತದೆ.

ಸದರಿ ಪತ್ರಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸುವ ಸರಕಾರದ ಆದೇಶಕ್ಕೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ. ಈ ಆದೇಶದ ವಿರುದ್ಧ ಪ್ರಾಧಿಕಾರದ ಅಧ್ಯಕ್ಷರು ಸಚಿವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿರುತ್ತಾರೆ. ರಾಜ್ಯದ ಒಂದು ಸಾವಿರಕ್ಕೂ ಅಧಿಕ ಸರಕಾರಿ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಆಂಗ್ಲ ಮಾಧ್ಯಮ ಪ್ರಾರಂಭಿಸಿರುವುದು ಕನ್ನಡ ಭಾಷಾ 2015ಕ್ಕೆ ತದ್ದಿರುದ್ಧವಾಗಿದೆ. ಪ್ರಯುಕ್ತ ಕೂಡಲೇ ಆದೇಶ ಹಿಂಪಡೆದು ಕನ್ನಡ ಶಾಲೆಗಳನ್ನು ಮುಂದುವರಿಸಲು ಕ್ರಮವಹಿಸುವಂತೆ ತಿಳಿಸಲಾಗಿರುತ್ತದೆ.

ಸನ್ಮಾನ್ಯ ಮುಖ್ಯ ಮಂತ್ರಿಗಳು 2024-25ನೇ ಸಾಲಿನ ಆಯವ್ಯಯದಲ್ಲಿನ ಕಂಡಿಕೆ 96ರಲ್ಲಿ ರಾಜ್ಯದ ಸರಕಾರಿ ಶಾಲೆಗಳಲ್ಲಿ ಹೊಸದಾಗಿ 2,000 ಆಂಗ್ಲ ಮಾಧ್ಯಮ (ದ್ವಿ ಭಾಷಾ/Billingual) ಪ್ರಾರಂಭಿಸಲು ಘೋಷಿಸಿ ಅನುಮೋದಿಸಿದಂತೆ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಕನ್ನಡ/ಇತರ ಮಾಧ್ಯಮದ ಜೊತೆಯಲ್ಲಿ ಹೆಚ್ಚುವರಿಯಾಗಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲಾಗಿರುತ್ತದೆ. ಇದರಲ್ಲಿ ಕನ್ನಡ ಮಾಧ್ಯಮವನ್ನು ಮುಚ್ಚುವ ಬಗ್ಗೆ ಎಲ್ಲಿಯೂ ಇಲಾಖೆ/ಸರಕಾರ ಪ್ರಸ್ತಾವಿಸಿರುವುದಿಲ್ಲ. ಕನ್ನಡ ಮಾಧ್ಯಮದ ಜೊತೆಗೆ ಒಂದು ಹೆಚ್ಚುವರಿ ಮಾಧ್ಯಮವನ್ನು ತೆರೆದು ಬೋಧಿಸಲಾಗುತ್ತಿರುತ್ತದೆ. ಅಲ್ಲದೆ ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯವರು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳಿಂದ ಹಾಗೂ ಇಲಾಖಾಧಿಕಾರಿಗಳಿಂದ ಬೇಡಿಕೆಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 1,419 ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಕನ್ನಡ/ಇತರ ಮಾಧ್ಯಮದ ಜೊತೆಗೆ ಮೊದಲನೇ ಹಂತದಲ್ಲಿ ದ್ವಿಭಾಷಾ ಮಾಧ್ಯಮವನ್ನು ಪ್ರಾರಂಭಿಸಲಾಗಿರುತ್ತದೆ.


ಇದನ್ನೂ ಓದಿ: ಕನ್ನಡ ಮಾಧ್ಯಮ: ಬಡವರ ಮಕ್ಕಳು ಬಲಿಪಶುವಾಗದಿರಲಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X