Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ತರಗತಿ ಆರಂಭಗೊಂಡಿದ್ದರೂ ತಲೆಯೆತ್ತದ...

ತರಗತಿ ಆರಂಭಗೊಂಡಿದ್ದರೂ ತಲೆಯೆತ್ತದ ಕಟ್ಟಡ : ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಮತ್ತೆ ಅಲೆದಾಡುತ್ತಿರುವ ಹಾಜಬ್ಬ

-ಹಂಝ ಮಲಾರ್-ಹಂಝ ಮಲಾರ್11 Nov 2025 8:48 AM IST
share
ತರಗತಿ ಆರಂಭಗೊಂಡಿದ್ದರೂ ತಲೆಯೆತ್ತದ ಕಟ್ಟಡ : ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಮತ್ತೆ ಅಲೆದಾಡುತ್ತಿರುವ ಹಾಜಬ್ಬ
► ಪ್ರೌಢಶಾಲೆಯಲ್ಲೇ ಪಿಯು ತರಗತಿ ► ವಿದ್ಯಾರ್ಥಿಗಳ ಸೇರ್ಪಡೆಗೆ ಹರಸಾಹಸ

ಮಂಗಳೂರು, ನ.10: ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ತನ್ನೂರಿನಲ್ಲಿ ವರ್ಷದ ಹಿಂದೆ ಪಿಯು ಕಾಲೇಜು ತರಗತಿ ಆರಂಭಿಸಿದ್ದರೂ ಕಟ್ಟಡವಿಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಹೊಸ ಕಟ್ಟಡ ತಲೆಯೆತ್ತದಿದ್ದಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾದೀತು ಎಂದು ಆತಂಕಗೊಂಡಿರುವ ಹಾಜಬ್ಬ, ಈ ನಿಟ್ಟಿನಲ್ಲಿ ಸರಕಾರಿ ಹಂತದ ಪ್ರಯತ್ನವಲ್ಲದೆ ಖಾಸಗಿ ಸಂಸ್ಥೆ, ಕಂಪೆನಿ, ವ್ಯಕ್ತಿಗಳನ್ನು ಸಂಪರ್ಕಿಸಿ ಸಹಕಾರ ಕೇಳುತ್ತಿದ್ದಾರೆ. ಅದೆಷ್ಟೋ ವರ್ಷದ ಬಳಿಕ ಮಂಜೂರಾದ ಪಿಯು ಕಾಲೇಜನ್ನು ಉಳಿಸಲೇಬೇಕು ಎಂಬ ಪಣ ತೊಟ್ಟಿರುವ ಹಾಜಬ್ಬ ಪತ್ನಿಯ ಅಗಲಿಕೆ ಮತ್ತು ವೈಯಕ್ತಿಕ ಸಮಸ್ಯೆಯ ಮಧ್ಯೆಯೂ ಶಾಸಕರು, ಅಧಿಕಾರಿಗಳು, ಸರಕಾರಿ ಕಚೇರಿ, ಉದ್ಯಮ ಕಂಪೆನಿಗಳ ಕದ ಬಡಿಯತೊಡಗಿದ್ದಾರೆ. ಇದಕ್ಕಾಗಿ ದಿನನಿತ್ಯ ಅತ್ತಿಂದಿತ್ತ ಅಲೆದಾಡುತ್ತಿದ್ದಾರೆ.

ಹರೇಕಳ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಕಾಲೇಜು ಇಲ್ಲ. ಹಾಗಾಗಿ ಸರಕಾರಿ ಪಿಯು ಕಾಲೇಜು ಮಂಜೂರುಗೊಳಿಸಬೇಕು ಎಂದು 2009ರ ಎಪ್ರಿಲ್ 21ರಿಂದ ಮುಖ್ಯಮಂತ್ರಿ, ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹರೇಕಳ ಹಾಜಬ್ಬ ಮನವಿ ಮಾಡುತ್ತಲೇ ಬಂದಿದ್ದರೂ ಅದಕ್ಕೆ ನಿರೀಕ್ಷಿತ ಸ್ಪಂದನ ಸಿಕ್ಕಿರಲಿಲ್ಲ. ಆದರೆ ಹಾಜಬ್ಬರಿಗೆ ಪದ್ಮಶ್ರೀ ಪುರಸ್ಕೃತ ಲಭಿಸಿದ ಬಳಿಕ ಅವರ ಬೇಡಿಕೆಗೆ ಹೆಚ್ಚು ತೂಕ ಬಂದಿತ್ತು. ಸತತ 15 ವರ್ಷಗಳ ಪ್ರಯತ್ನದ ಬಳಿಕ ಅಂದರೆ 2022ರ ನವೆಂಬರ್ 21ರಂದು ಹರೇಕಳ ಗ್ರಾಮದ ನ್ಯೂಪಡ್ಪು-ಗ್ರಾಮ ಚಾವಡಿಯ ಮಧ್ಯೆ ಮುಖ್ಯರಸ್ತೆಗೆ ತಾಗಿ 1.30 ಎಕರೆ ಜಮೀನನ್ನು ಸರಕಾರ ಮಂಜೂರುಗೊಳಿಸಿತ್ತು.

ಅಲ್ಲದೆ 2024ರ ಜನವರಿ 9ರಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ)ಯ ಅಧೀನ ಕಾರ್ಯದರ್ಶಿಯಾಗಿದ್ದ ಪದ್ಮಿನಿ ಎಸ್.ಎನ್. ಸರಕಾರಿ ಪ್ರೌಢಶಾಲೆಯನ್ನು ಉನ್ನತೀಕರಿಸಿ ಹೊಸದಾಗಿ ಸರಕಾರಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಅನುಮತಿ ನೀಡಿದ್ದರು. ಅದರಂತೆ 2024-25ನೇ ಶೈಕ್ಷಣಿಕ ವರ್ಷದಿಂದ ಹಾಜಬ್ಬರು ಸರಕಾರಿ ಪ್ರೌಢಶಾಲೆಯ ಕಟ್ಟಡದಲ್ಲೇ ಪಿಯು ತರಗತಿ ಆರಂಭಿಸಿದ್ದರು.

2025ರ ಜೂನ್ 17ರಂದು ಲೋಕೋಪಯೋಗಿ ಇಲಾಖೆಯು ಹೊಸ ಕಟ್ಟಡದ ನೀಲನಕ್ಷೆಯೊಂದಿಗೆ 5.30 ಕೋ.ರೂ. ಅಂದಾಜು ಪಟ್ಟಿ ತಯಾರಿಸಿದೆ. 2025ರ ಜುಲೈ 8ರಂದು ಸ್ಪೀಕರ್ ಯು.ಟಿ.ಖಾದರ್ ಕೂಡ ಶಿಕ್ಷಣ ಸಚಿವರಿಗೆ ಈ ಅನುದಾನ ಬಿಡುಗಡೆಗೊಳಿಸಲು ಪತ್ರ ಬರೆದಿದ್ದಾರೆ. ಹರೇಕಳ ಹಾಜಬ್ಬ ಕೂಡಾ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನ ಮುಂದುವರಿಸಿದ್ದಾರೆ. ಅಲ್ಲದೆ ಖಾಸಗಿ ವ್ಯಕ್ತಿಗಳು, ದಾನಿಗಳು, ಉದ್ಯಮ ಕಂಪೆನಿಗಳ ಮುಖ್ಯಸ್ಥರು, ಅಧಿಕಾರಿಗಳ ಬಳಿ ತೆರಳಿ ಸಹಾಯಧನ ನೀಡಲು ಮನವಿ ಮಾಡತೊಡಗಿದ್ದಾರೆ.

ಹರೇಕಳ ಗ್ರಾಮದ ನ್ಯೂಪಡ್ಪುವಿನ ಮದ್ರಸವೊಂದರಲ್ಲಿ 1999-2000ರಲ್ಲಿ ಹಾಜಬ್ಬ ಶಾಲೆಯೊಂದನ್ನು ತೆರೆದು ಅದನ್ನು ಉಳಿಸಿ- ಬೆಳೆಸಲು ಪಟ್ಟ ಶ್ರಮ ಅವಿಸ್ಮರಣೀಯ. ಆರಂಭದಲ್ಲಿ ಪ್ರಾಥಮಿಕ ಮತ್ತು ಬಳಿಕ ಪ್ರೌಢಶಾಲೆಯ ಒಂದೊಂದೇ ತರಗತಿಯನ್ನು ಏರಿಸಿಕೊಂಡು ಹೋದ ಹಾಜಬ್ಬರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾದ ಬಳಿಕ ದೇಶ-ವಿದೇಶಗಳಲ್ಲಿ ಮನೆ ಮಾತಾಗಿದ್ದಾರೆ.

ಪಿಯು ಕಾಲೇಜಿಗಾಗಿ ಜಮೀನು ಲಭಿಸಿದ ಬಳಿಕ ತರಗತಿ ಆರಂಭಿಸಲು ಸರಕಾರ ಅನುಮತಿ ನೀಡಿತ್ತು. ಆ ಜಮೀನನ್ನು ಸಮತಟ್ಟು ಮಾಡಲಾಗಿದೆ. ಬೋರ್‌ವೆಲ್ ಕೊರೆಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕರು ಐದು ಲಕ್ಷ ರೂ. ನೀಡಿದ್ದಾರೆ. ಪಿ.ಎ. ಶಿಕ್ಷಣ ಸಂಸ್ಥೆಯವರು ಸುಮಾರು 6:50 ಲಕ್ಷ ರೂ. ವೆಚ್ಚದ ಪೀಠೋಪಕರಣ ಒದಗಿಸಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅನುದಾನ ಬಿಡುಗಡೆಗೊಳಿಸಲು ಕೋರಿದ್ದಾರೆ. ನಾವೀಗ ಪಿಯು ಕಾಲೇಜು ಕಟ್ಟಡ ನಿರ್ಮಿಸಲೇಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸಲು ಕಷ್ಟವಾಗಬಹುದು. ಅದಕ್ಕಾಗಿ ಸರಕಾರದ ಅನುದಾನದೊಂದಿಗೆ ಖಾಸಗಿ ಉದ್ಯಮ ಕಂಪೆನಿಗಳು, ಸಂಸ್ಥೆಗಳು, ಖಾಸಗಿ ವ್ಯಕ್ತಿಗಳ ನೆರವಿನ ನಿರೀಕ್ಷೆಯಲ್ಲಿದ್ದೇನೆ.

-ಹರೇಕಳ ಹಾಜಬ್ಬ, ಪದ್ಮಶ್ರೀ ಪುರಸ್ಕೃತರು

2024-25ನೆ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಕಾಲೇಜು (ಪಿಯುಸಿ) ಆರಂಭಿಸಲು ಸರಕಾರದಿಂದ ಅನುಮತಿ ಪಡೆದು 20 ವಿದ್ಯಾರ್ಥಿಗಳೊಂದಿಗೆ ಪ್ರಥಮ ಪಿಯು ತರಗತಿಯನ್ನು (ಕಲೆ-ವಾಣಿಜ್ಯ) ಪ್ರೌಢಶಾಲೆಯಲ್ಲೇ ಆರಂಭಿಸಲಾಗಿತ್ತು. ಇದೀಗ ದ್ವಿತೀಯ ಪಿಯು ತರಗತಿ ಕೂಡ ಈ ಶಾಲೆಯ ಕೊಠಡಿಯಲ್ಲಿ ನಡೆಸಲಾಗುತ್ತಿದೆ. ಈ ವರ್ಷ ಪ್ರಥಮ ಪಿಯುಸಿಯಲ್ಲಿ ಇಬ್ಬರು ಬಾಲಕರು ಮತ್ತು ಒಂಭತ್ತು ಬಾಲಕಿಯರ ಸಹಿತ 11 ವಿದ್ಯಾರ್ಥಿಗಳಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಎಂಟು ಬಾಲಕರು ಮತ್ತು ಐವರು ಬಾಲಕಿಯರ ಸಹಿತ 13 ವಿದ್ಯಾರ್ಥಿಗಳಿದ್ದಾರೆ. ಒಟ್ಟಾರೆ ಹಾಜಬ್ಬರ ಪಿಯು ಕಾಲೇಜಿನಲ್ಲಿ ಇದೀಗ 24 ವಿದ್ಯಾರ್ಥಿಗಳಿದ್ದಾರೆ. ಅತಿಥಿ ಉಪನ್ಯಾಸಕರ ಸಹಿತ ಪ್ರಭಾರ ಪ್ರಾಂಶುಪಾಲರು ಕಾರ್ಯನಿರ್ವಹಿಸುತ್ತಿದ್ದಾರೆ.

share
-ಹಂಝ ಮಲಾರ್
-ಹಂಝ ಮಲಾರ್
Next Story
X