Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಧಿಕಾರಿಗಳ ನಿರ್ಲಕ್ಷ್ಯದಿಂದ...

ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.17 Nov 2025 10:46 AM IST
share
ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಹೊಸಕೋಟೆ, ನ.16: ಗ್ರಾಮೀಣ ಜನರಿಗೆ ಶುದ್ಧವಾದ ನೀರು ಕೊಡುವ ಉದ್ದೇಶದಿಂದ ಸರಕಾರ ನಿರ್ಮಿಸಿರುವ ಗ್ರಾಮೀಣ ಶುದ್ಧ ನೀರಿನ ಘಟಕಗಳು ತಾಲೂಕಿನಾದ್ಯಂತ ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ತಿಗೊಳ್ಳದೆ ನಿಷ್ಪ್ರಯೋಜಕವಾಗಿ ಧೂಳು ತಿನ್ನುತ್ತಿವೆ. ಮತ್ತೊಂದೆಡೆ ಶುದ್ಧ ಕುಡಿಯುವ ನೀರಿಗಾಗಿ ಜನರು ಹಪಹಪಿಸುತ್ತಿದ್ದಾರೆ. ಶುದ್ಧ ನೀರು ಸಿಗದೆ ಫ್ಲೋರೈಡ್‌ಯುಕ್ತ ಬೋರ್‌ವೆಲ್ ನೀರನ್ನೇ ಆಶ್ರಯಿಸಿದ್ದಾರೆ.

ಹೊಸಕೋಟೆ ತಾಲೂಕಿನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಶುದ್ದಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಒಂದು ವರ್ಷವೂ ಚಾಲ್ತಿಯಲ್ಲಿ ಇಲ್ಲದೇ ಕೆಟ್ಟುನಿಂತಿವೆ. ಇದು ಕೇವಲ ಒಂದೆರಡು ಹಳ್ಳಿಗಳ ಪರಿಸ್ಥಿತಿ ಅಲ್ಲ. ಬಹುತೇಕ ಗ್ರಾಮಗಳಲ್ಲಿ ಈ ಸಮಸ್ಯೆ ತಲೆದೋರಿದೆ

ನಂದಗುಡಿ ಹೋಬಳಿಯ ನಂದಗುಡಿ ಗ್ರಾಮ ಪಂಚಾಯತ್ ಕೇಂದ್ರವಾಗಿದ್ದು ಗ್ರಾಮದಲ್ಲಿ ಸುಮಾರು 1,500 ಮನೆಗಳಿವೆ. ಹೋಬಳಿ ಕೇಂದ್ರವಾಗಿರುವುದರಿಂದ ಸರಕಾರಿ ನೌಕರರೇ ಹೆಚ್ಚಾಗಿ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಲ್ಪಸಂಖ್ಯಾತರು ವಾಸ ಮಾಡುತ್ತಿರುವ ಗ್ರಾಮವಾಗಿದೆ. ನಂದಗುಡಿ ಗ್ರಾಮಕ್ಕೆ ಎರಡು ಶುದ್ಧ ನೀರಿನ ಘಟಕಗಳಲ್ಲಿ ಕುಡಿಯುವುದಕ್ಕೆ ನೀರು ಬಳಸುತ್ತಿದ್ದರು. ಆದರೆ ಗ್ರಾಮದ ಬಸ್ ಸ್ಟ್ಯಾಂಡ್‌ನಲ್ಲಿ ಇದ್ದ ಶುದ್ಧ ನೀರಿನ ಘಟಕ ಕೆಟ್ಟು ಮೂರು ತಿಂಗಳುಗಳಾಗಿವೆ. ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸುವಂತಹ ವಾತಾವರಣ ನಿರ್ಮಾಣವಾಗಿದೆ.

ಪಟ್ಟಣ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಕೂಡಾ ಆರೋಗ್ಯದ ದೃಷ್ಟಿಯಿಂದ ಶುದ್ದ ಕುಡಿಯುವ ನೀರು ಕುಡಿಯಲೆಂದು ಸರಕಾರ ನೂರಾರು ಕೋಟಿ ವೆಚ್ಚ ಮಾಡಿ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳು ದುರಸ್ತಿಗೊಂಡಿದ್ದು, ಅವುಗಳನ್ನು ಸರಿಪಡಿಸುವಂತಹ ಕೆಲಸ ಅವುಗಳ ನಿರ್ವಾಹಣೆ ಜವಾಬ್ದಾರಿ ಹೊತ್ತ ಇಲಾಖೆಯಾಗಲಿ ಅಥವಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಾಗಲಿ, ಸ್ಥಳೀಯ ಮಟ್ಟದ ಗ್ರಾಮ ಪಂಚಾಯತ್ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇದರ ಬಗ್ಗೆ ಗಮನ ಕೊಡದೇ ಇರುವುದು ಹಳ್ಳಿ ಜನರ ದೌರ್ಭಾಗ್ಯವೇ ಸರಿ.

ದುರಸ್ತಿ ಮಾಡುವವರು ಯಾರು? :

ನಿರ್ವಹಣೆ ಕೊರೆತೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿವೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮೀಣ ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ ಎಂದು ದೂರುತ್ತಾರೆ ಸ್ಥಳೀಯರು.

ಗ್ರಾಮದಲ್ಲಿ ಎರಡು ಕುಡಿಯುವ ನೀರು ಘಟಕಗಳಿದ್ದರೂ ಅವುಗಳು ಕೆಟ್ಟು ತಿಂಗಳುಗಳು ಕಳೆದರೂ ರಿಪೇರಿ ಮಾಡಿಸುವವರೇ ಇಲ್ಲ. ಪಕ್ಕದ ಎರಡು ಮೂರು ಕಿಲೋಮೀಟರ್ ದೂರ ಹೋಗಿ ನೀರು ತರುವ ಸ್ಥಿತಿ ಎದುರಾಗಿದೆ. ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಯಾರೂ ಗಮನ ಹರಿಸುತ್ತಿಲ್ಲ .

-ನಾರಾಯಣಮ್ಮ , ನಂದಗುಡಿ ಗ್ರಾಮಸ್ಥೆ

ನಂದಗುಡಿ ಬಸ್ ಸ್ಟಾಪ್‌ನಲ್ಲಿ ಇರುವ ಶುದ್ಧ ನೀರಿನ ಘಟಕ ನಮ್ಮ ಇಲಾಖೆಯಿಂದ ಖಾಸಗಿ ಅವರಿಗೆ ಒಂದು ವರ್ಷಕ್ಕೆ ಉಸ್ತ್ತುವಾರಿ ನೀಡಲಾಗಿತ್ತು. ಅವರ ಅವಧಿ ಮುಗಿದಿದೆ. ದುರಸ್ತಿ ಆಗದಿರುವುದನ್ನು ಮೇಲಿನ ಅಧಿಕಾರಿಗಳಿಗೆ ಗಮನಕ್ಕೆ ತಂದು ತುರ್ತಾಗಿ ದುರಸ್ತಿ ಮಾಡಿಸಲಾಗುವುದು. ಮತ್ತೊಂದು ಘಟಕ ಪಂಚಾಯತ್ ಅಧೀನದಲ್ಲಿದ್ದು , ಅವರೇ ದುರಸ್ತಿ ಮಾಡಿಸಬೇಕು.

-ಬಾಲು ಚಂದ್ರ, ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹೊಸಕೋಟೆ

ನಂದುಗುಡಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕಗಳು ರಿಪೇರಿ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ ದುರಸ್ತಿ ಮಾಡಿಸಲು ಕಂಪೆನಿಗಳಿಗೆ ಯಂತ್ರಗಳನ್ನು ತರಲು ತಿಳಿಸಿದ್ದೇವೆ. ಇನ್ನೆರಡು ಮೂರು ದಿನಗಳೊಳಗೆ ಸರಿಪಡಿಸಲಾಗುವುದು.

-ಎಂ ಕೆಂಪಣ್ಣ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ನಂದಗುಡಿ

Tags

Clean water
share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X