Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯಂತ್ರಚಾಲಿತ ರೋಬೋಟಿಕ್ ಸ್ಕ್ಯಾವೆಂಜರ್...

ಯಂತ್ರಚಾಲಿತ ರೋಬೋಟಿಕ್ ಸ್ಕ್ಯಾವೆಂಜರ್ ಬ್ಯಾಂಡಿಕೂಟ್‌ಗೆ ಚಾಲನೆ ನೀಡಿದ ಆಯುಕ್ತ ಜುಬೀನ್

ರಾಯಚೂರು ಮಹಾನಗರ ಪಾಲಿಕೆ: ಶೌಚಗುಂಡಿ ಸ್ವಚ್ಛಕ್ಕೆ ನೂತನ ತಂತ್ರಜ್ಞಾನ

ಬಾವಸಲಿ,ರಾಯಚೂರುಬಾವಸಲಿ,ರಾಯಚೂರು25 July 2025 11:06 AM IST
share
ಯಂತ್ರಚಾಲಿತ ರೋಬೋಟಿಕ್ ಸ್ಕ್ಯಾವೆಂಜರ್ ಬ್ಯಾಂಡಿಕೂಟ್‌ಗೆ ಚಾಲನೆ ನೀಡಿದ ಆಯುಕ್ತ ಜುಬೀನ್

ರಾಯಚೂರು, ಜು.24: ಮಲಹೊರುವ ಪದ್ಧತಿಯನ್ನು ಕಾನೂನಿನ ಮೂಲಕ ನಿಷೇಧಿಸಿದ್ದರೂ ದೇಶದ ಅಲ್ಲಲ್ಲಿ ಕಾರ್ಮಿಕರನ್ನು ಮ್ಯಾನ್ ಹೋಲ್‌ಗಳನ್ನು ಸ್ವಚ್ಛಗೊಳಿಸಲಾಗುತ್ತಿತ್ತು ಹಾಗೂ ಮ್ಯಾನ್ ಹೋಲ್‌ಗಳಲ್ಲಿ ಅನೇಕರು ಸಾವನ್ನಪ್ಪಿರುವುದು ವರದಿಯಾಗುತ್ತಿದೆ. ಈ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ನಿಟ್ಟಿನಲ್ಲಿ ರಾಯಚೂರು ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಪೂರ್ಣ ಯಂತ್ರಚಾಲಿತ ರೋಬೋಟಿಕ್ ಸ್ಕ್ಯಾವೆಂಜರ್ ಬ್ಯಾಂಡಿಕೂಟ್ ಯಂತ್ರವನ್ನು ಬಳಸಲು ಮುಂದಾಗಿದೆ.

ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ರಾಯಚೂರನ್ನು ಕೊಳಕು ನಗರ ಎಂದು ಹೊರ ಜಿಲ್ಲೆಗಳಿಂದ ಬರುವ ಅನೇಕ ಅಧಿಕಾರಿಗಳು ಹೀಯಾಳಿಸಿದ್ದೂ ಇದೆ. ಈ ಅಪವಾದದಿಂದ ಮುಕ್ತಗೊಂಡು, ಸ್ಮಾರ್ಟ್ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಒಂದು ಹೊಸ ಪ್ರಯೋಗಕ್ಕೆ ಮುಂದಾಗಿ ಪಾಲಿಕೆಯ ಆಯುಕ್ತ ಜುಬೀನ್ ಮೊಹಪಾತ್ರ ಮತ್ತು ಪಾಲಿಕೆಯ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ರೋಬೋಟಿಕ್ ಸ್ಕ್ಯಾವೆಂಜರ್ ಬಳಕೆಗೆ ಚಾಲನೆ ನೀಡಿದರು.

ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಪಾಲಿಕೆಯ ಕಚೇರಿ ಮುಂದಿನ ರಸ್ತೆಯಲ್ಲಿನ ಮ್ಯಾನ್‌ಹೋಲ್‌ನ್ನು ನೂತನ ರೋಬೋಟಿಕ್ ಸ್ಕ್ಯಾವೆಂಜರ್ ಯಂತ್ರದ ಮೂಲಕ ಶುಚಿಗೊಳಿಸುವುದನ್ನು ಖುದ್ದು ವೀಕ್ಷಿಸುವ ಮೂಲಕ ಲೋಕಾರ್ಪಣೆಗೊಳಿಸಿರು.

ಬ್ಯಾಂಡಿಕೂಟ್ ಎಂಬ ರೋಬೊಟೆಕ್ ಸ್ಕ್ಯಾವೆಂಜರ್ ಕಾರ್ಮಿ ಕರ ಕೆಲಸವನ್ನು ಮಾಡುವುದಲ್ಲದೇ, ಮಾನವ ಪ್ರವೇಶವಿಲ್ಲದೆ ಮ್ಯಾನ್‌ಹೋಲ್‌ಗಳನ್ನು ನಿಖರವಾಗಿ ಮತ್ತು ಪರಿಣಾ ಮಕಾರಿಯಾಗಿ ಸ್ವಚ್ಛಗೊಳಿಸಲು ಅನುವು ಮಾಡಿಕೊಡುತ್ತದೆ. ಮ್ಯಾನ್ ಹೋಲ್ ಗಳನ್ನು ಸ್ವಚ್ಛಗೊಳಿಸುವಾಗ ಅನೇಕರು ಉಸಿರುಗಟ್ಟಿ, ಕಾರ್ಬನ್ ಮೋನಾಕ್ಸೈಡ್, ಮಿಥಿಲಿಯಂ ನಂತಹ ಅಪಾಯಕಾರಿ ಅನಿಲಗಳಿಂದ ಸಾವನ್ನಪ್ಪುತ್ತಾರೆ. ಇಂತಹ ದುರ್ಘಟನೆ ತಡೆಯಲು ಹಾಗೂ ವೈಜ್ಞಾನಿಕವಾಗಿ ಮಲ ಗುಂಡಿಗಳನ್ನು ಸ್ವಚ್ಛಗೊಳಿಸಿ ವಿಷಕಾರಿ ಅನಿಲ ಪತ್ತೆಹಚ್ಚಲು ವಿಷಕಾರಿ ಅನಿಲ ಸಂವೇಧಕಗಳು ಮತ್ತು ಕಡಿಮೆ-ಬೆಳಕಿನ ಪರಿಸ್ಥಿತಿಗಳಲ್ಲಿ ಕಾರ್ಯಾಚರಣೆಗಳಿಗಾಗಿ ಮಹತ್ವದ ಕ್ಯಾಮರಾಗಳನ್ನು ಈ ರೋಬೋಟ್ ಹೊಂದಿದೆ. ಜವಾಬ್ದಾರಿಯುತ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ನೈರ್ಮಲ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗಿದೆ.

ಭಾರತೀಯ ಡೀಪ್‌ಟೆಕ್ ಕಂಪೆನಿ ಜೆನ್‌ರೋಬೋಟಿಕ್ಸ್ ಅಭಿವೃದ್ಧಿಪಡಿಸಿದ ಬ್ಯಾಂಡಿಕೂಟ್ ಯಂತ್ರವು ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯಂತ ಮುಂದುವರಿದ ಮತ್ತು ಪರಿಣಾಮಕಾರಿಯಾದ ಯಂತ್ರವಾಗಿದೆ. ಮಾನವ ಚಲನೆಯನ್ನು ಅನುಕರಿಸುವ ಈ ರೋಬೋಟಿಕ್ ಯಂತ್ರವು ತೋಳು ಬಳಸಿ ಮಾನವರಂತೆ ಕಾರ್ಯ ನಿರ್ವಹಿಸುತ್ತದೆ. ಮೊಟ್ಟಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಂತಹ ಯಂತ್ರ ಬಳಸಿದರೂ ಅದು ಸಂಪೂರ್ಣ ರೋಬೋಟೆಕ್ ಆಗಿರದೇ ಅನೇಕ ನ್ಯೂನತೆಗಳಿದ್ದವು. ಈ ಯಂತ್ರ ಸಂಪೂರ್ಣ ರೋಬೊಟಿಕ್ ಆಗಿದೆ ಎಂದು ಪಾಲಿಕೆಯ ಆಯುಕ್ತರು ತಿಳಿಸಿದರು.

ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್‌ಗಳು ಬರುತ್ತವೆ. 45 ಲಕ್ಷ ವೆಚ್ಚದಲ್ಲಿ ಬ್ಯಾಂಡಿಕೂಟ್ ಯಂತ್ರಕ್ಕೆ ವೆಚ್ಚವಾಗಿದ್ದು, ಇದಕ್ಕೆ 6 ಕ್ಯಾಮರಾಗಳಿವೆ, ಡೀಸೆಲ್ ಮೂಲಕ ಇದು ಕಾರ್ಯನಿರ್ವಹಿಸುತ್ತದೆ. ಮಲದ ಗುಂಡಿಗಳ ಒಳಹೊಕ್ಕು ಆಳಕ್ಕೆ ಇಳಿದು 10ರಿಂದ 15 ನಿಮಿಷಗಳ ಒಳಗೆ ಒಂದು ಗುಂಡಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುತ್ತದೆ. ಪ್ರತಿ ದಿನ ಗರಿಷ್ಠ 15 ನಿಮಿಷ ಬಳಸಿದರೂ ದಿನಕ್ಕೆ 12ರಿಂದ 17ಗುಂಡಿಗಳು ಸ್ವಚ್ಛಗೊಳಿಸಲಿದೆ. ಪಾಲಕೆಯಲ್ಲಿ ಸಾಕಷ್ಟು ಅನುದಾನವಿರದ ಕಾರಣ ಒಂದೇ ಯಂತ್ರ ತಂದಿದ್ದು ಇದರ ಕಾರ್ಯವೈಖರಿ ನೋಡಿ ಇನ್ನೂ ಎರಡು ಯಂತ್ರಗಳನ್ನು ಖರೀದಿಸಲಾಗುವುದು ಆ ಮೂಲಕ ಸ್ವಚ್ಛ ನಗರವನ್ನಾಗಿ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತೆ ಜುಬೀನ್ ಮೋಹಪಾತ್ರ ತಿಳಿಸಿದರು.

share
ಬಾವಸಲಿ,ರಾಯಚೂರು
ಬಾವಸಲಿ,ರಾಯಚೂರು
Next Story
X