Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕುಂದಾಪುರ, ಸಿದ್ದಾಪುರಗಳಲ್ಲಿ ಸತತ ಅಗ್ನಿ...

ಕುಂದಾಪುರ, ಸಿದ್ದಾಪುರಗಳಲ್ಲಿ ಸತತ ಅಗ್ನಿ ದುರಂತಗಳು | ನಗರದಲ್ಲಿ ಅಗ್ನಿಶಾಮಕ ವಾಹನಗಳ ಅಗತ್ಯ: ಚರ್ಚೆ ಮುನ್ನೆಲೆಗೆ

ಯೋಗೀಶ್ ಕುಂಭಾಸಿಯೋಗೀಶ್ ಕುಂಭಾಸಿ4 Jan 2026 10:40 AM IST
share
ಕುಂದಾಪುರ, ಸಿದ್ದಾಪುರಗಳಲ್ಲಿ ಸತತ ಅಗ್ನಿ ದುರಂತಗಳು | ನಗರದಲ್ಲಿ ಅಗ್ನಿಶಾಮಕ ವಾಹನಗಳ ಅಗತ್ಯ: ಚರ್ಚೆ ಮುನ್ನೆಲೆಗೆ

ಕುಂದಾಪುರ : ಒಂದು ವಾರದಲ್ಲಿ ಕುಂದಾಪುರ ಮತ್ತು ಸಿದ್ದಾಪುರಗಳಲ್ಲಿ ಸಂಭವಿಸಿದ ಎರಡು ಭೀಕರ ಅಗ್ನಿ ದುರಂತಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಬೂದಿಯಾದ ಬಳಿಕ ಇಂಥ ಆಕಸ್ಮಿಕ ಅಗ್ನಿ ಅವಘಡಗಳ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ಹಾಗೂ ಸುಲಭದಲ್ಲಿ ಲಭ್ಯವಾಗಬೇಕಿರುವ ಅಗ್ನಿ ಶಾಮಕ ವಾಹನಗಳ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ.

ಪ್ರಸಕ್ತ ಕುಂದಾಪುರದ ಅಗ್ನಿಶಾಮಕ ದಳ ಕಚೇರಿ ನಗರದ ಹೊರವಲಯ ವಾದ ಕೋಣೆಯಲ್ಲಿದ್ದು ಆಕಸ್ಮಿಕ ಅಗ್ನಿ ಅವಘಡಗಳ ಸಂದರ್ಭಗಳಲ್ಲಿ ತುರ್ತು ಸೇವೆಗೆ ಅನುಕೂಲವಾಗಲು ಕುಂದಾಪುರ ನಗರ ಕೇಂದ್ರದಲ್ಲಿ ಅಗ್ನಿ ಶಾಮಕ ವಾಹನ ನಿಲ್ಲಲು ವ್ಯವಸ್ಥೆ ಮಾಡಿಕೊಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಮುಂಚೂಣಿಗೆ ಬಂದಿದೆ.

ಡಿ.29ರ ಬೆಳಗಿನ ಜಾವ ಕುಂದಾಪುರದ ಕೇಂದ್ರವಾದ ರಥಬೀದಿಯಲ್ಲಿ ನಡೆದ ಬಾರೀ ಅಗ್ನಿ ಅನಾಹುತ ನಾಲ್ಕಾರು ಅಂಗಡಿಗಳನ್ನು ಸುಟ್ಟು ಭಸ್ಮ ಮಾಡಿದ್ದಲ್ಲದೆ, ಕೋಟ್ಯಂತರ ರೂ.ಗಳ ಹಾನಿ ಸಂಭವಿಸಿದೆ. 20 ವರ್ಷಗಳಲ್ಲಿ ಇಂತಹ ಘೋರ ದುರಂತ ಕಂಡಿಲ್ಲ ಎಂಬುದು ನಗರದ ಹಳೆ ತಲೆಮಾರಿನ ಹಲವರ ಅಭಿಪ್ರಾಯವಾಗಿದೆ.

ಇದಾದ ಎರಡು ದಿನಗಳ ಬಳಿಕ ಸಿದ್ದಾಪುರದ ಜನ್ಸಾಲೆಯ ತೆಂಗಿನ ಎಣ್ಣೆಮಿಲ್ ನಲ್ಲಿ ಕಾಣಿಸಿಕೊಂಡ ಬೆಂಕಿಗೆ ಇಡೀ ಮಿಲ್ ಸುಟ್ಟು ಹೋಗಿದ್ದು, ಐದು ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳಿಗೆ ಹಾನಿಯಾಗಿರುವ ಮಾಹಿತಿ ಇದೆ. ಇದಲ್ಲದೆ ಕೆಲ ದಿನಗಳ ಹಿಂದೆ ಕೋಟೇಶ್ವರ ಗ್ರಾಪಂ ಬಳಿ ಎಸ್ ಎಲ್‌ಆರ್‌ಎಂ ಘಟಕದಲ್ಲೂ ಇದೇ ರೀತಿ ಬೆಂಕಿ ಅವಘಡ ಸಂಭವಿಸಿತ್ತು.

ಕಳೆದ ವರ್ಷ ಗಂಗೊಳ್ಳಿಯಲ್ಲಿ ಬೋಟ್ ಅಗ್ನಿ ದುರಂತ, ಒಂದಷ್ಟು ವರ್ಷಗಳ ಹಿಂದೆ ಕುಂದಾಪುರ ನಗರದೊಳಗೆ ಮುಖ್ಯರಸ್ತೆಯಲ್ಲಿದ್ದ ಬೃಹತ್ ವಾಣಿಜ್ಯ ಮಳಿಗೆಗೆ ಬಿದ್ದ ಬೆಂಕಿ ಅನಾಹುತಗಳು ದೊಡ್ಡ ಮಟ್ಟದಲ್ಲಿ ದುರಂತವನ್ನು ಸೃಷ್ಟಿಸಿ ಅಪಾರ ನಷ್ಟಕ್ಕೆ ಕಾರಣವಾಗಿದ್ದವು. ಆಗ್ಗಾಗೆ ನದಿ-ಸಮುದ್ರಗಳಲ್ಲಿ ನಡೆಯುವ ದೋಣಿ ದುರಂತ, ಮಾನವ ಜೀವ ಹಾನಿ ಮೊದಲಾದ ಅವಘಡಗಳ ವೇಳೆ ಆ ಸಮಯಕ್ಕೆ ಅಗತ್ಯವಾಗಿ ಬೇಕಾದ ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಅಲಭ್ಯತೆ ಹಲವಷ್ಟು ಸಮಸ್ಯೆಗಳಿಗೆ ಎಡೆಮಾಡಿಕೊಡುತ್ತಿವೆ.

ನಗರದಿಂದ ಬಹುದೂರ!

ಪ್ರಸಕ್ತ ಕುಂದಾಪುರದ ಅಗ್ನಿ ಶಾಮಕ ಠಾಣೆಯಿರುವುದು ಕುಂದಾಪುರ ಪೇಟೆಯಿಂದ ನಾಲ್ಕಾರು ಕಿ.ಮೀ. ದೂರದ ಕೋಣಿ ಎಂಬಲ್ಲಿ ಇಲ್ಲಿಂದ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಪರ್ಕಕ್ಕೆ ಇಕ್ಕಟ್ಟಾದ ಹಾಗೂ ಜನನಿಬಿಡ, ವಾಹನ ನಿಬಿಡ ರಸ್ತೆ ಅಡ್ಡಿ ಯಾಗುತ್ತಿದೆ. ಕೋಣಿಯಿಂದ ಕಟ್ಕೆರೆ ಮೂಲಕ ಸಾಗಿ ಕೋಟೇಶ್ವರಕ್ಕೆ ಬರುವ ರಸ್ತೆ ಹೊಂಡಗುಂಡಿಗಳಿಂದ ಕೂಡಿದೆ.

ಠಾಣೆಯಿಂದ ಅನತಿ ದೂರದಲ್ಲಿರುವ ಕುಂದಾ ಪುರ- ಸಿದ್ದಾಪುರ ರಾಜ್ಯ ಹೆದ್ದಾರಿ ಕೂಡ ಹೆಸರಿಗೆ ಹೆದ್ದಾರಿಯಾಗಿದ್ದು, ಬಹಳಷ್ಟು ಒತ್ತಡದ ಹಾಗೂ ಇಕ್ಕಾಟದ ರಸ್ತೆಯಾಗಿದೆ. ಅಗ್ನಿಶಾಮಕ ವಾಹನ ಬರಲು ವಿಳಂಬವಾಗುವುದನ್ನು ತಪ್ಪಿಸಲು ನಗರ ವ್ಯಾಪ್ತಿಯಲ್ಲಿ ಒಂದಾದರೂ ವಾಹನ ತುರ್ತು ಅವಶ್ಯಕ್ಕೆ ದೊರೆತಲ್ಲಿ ಕೋಟೇಶ್ವರ ಕುಂದಾಪುರ ನಗರಗಳ ನಡುವೆ ಸಂಭವಿಸುವ ಅಗ್ನಿದುರಂತದ ತುರ್ತು ಶಮನಕ್ಕೆ ಅನುಕೂಲವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಈ ಬಗ್ಗೆ ಕಂದಾಯ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳಿಗೂ ಜನಪ್ರತಿನಿಧಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

share
ಯೋಗೀಶ್ ಕುಂಭಾಸಿ
ಯೋಗೀಶ್ ಕುಂಭಾಸಿ
Next Story
X