Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಳಿವಯಸ್ಸಿನಲ್ಲೂ ಸಾವಯವ ಕೃಷಿ...

ಇಳಿವಯಸ್ಸಿನಲ್ಲೂ ಸಾವಯವ ಕೃಷಿ ನೆಚ್ಚಿಕೊಂಡ ದೇವಣ್ಣ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್1 Dec 2025 3:10 PM IST
share
ಇಳಿವಯಸ್ಸಿನಲ್ಲೂ ಸಾವಯವ ಕೃಷಿ ನೆಚ್ಚಿಕೊಂಡ ದೇವಣ್ಣ

ಚಾಮರಾಜನಗರ: ವಯಸ್ಸಾಗುತ್ತಿದ್ದಂತೆ ಜೀವನದಲ್ಲಿ ವಿಶ್ರಾಂತಿ ಪಡೆಯುವವರೇ ಅಧಿಕ. ಇಳಿ ವಯಸ್ಸಿನಲ್ಲಿ ಕೃಷಿಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯೂ ವಿರಳವಾಗಿದೆ. ಆದರೆ ಚಾಮರಾಜನಗರ ತಾಲೂಕಿನಲ್ಲಿ ಇಳಿ ವಯಸ್ಸಿನಲ್ಲೂ ರೈತರೊಬ್ಬರು ನೈಸರ್ಗಿಕ ಕೃಷಿ ಮಾಡುತ್ತಾ ಇತರರಿಗೆ ಮಾದರಿಯಾಗಿದ್ದಾರೆ.

ಚಾಮರಾಜನಗರದ ಪಟ್ಟಣದ ಉಪ್ಪಾರ ಬಡಾವಣೆಯ ನಿವಾಸಿ ಎ.ನಂಜುಂಡಶೆಟ್ಟಿ(ದೇವಣ್ಣ)ರವರು ತಾಲೂಕಿನ ಕಾಡಹಳ್ಳಿ ಗ್ರಾಮದಲ್ಲಿ 6 ಎಕರೆ ಪ್ರದೇಶದಲ್ಲಿ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಭೂಮಿಯನ್ನು ಗುತ್ತಿಗೆ ನೀಡಿ ರಾಸಾಯನಿಕ ಬಳಕೆ ಮಾಡಿದ್ದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿತ್ತು. 3 ವರ್ಷಗಳಿಂದ ದೇವಣ್ಣ ಅವರೇ ಕೃಷಿಗಿಳಿದು ಭವಿಷ್ಯಕ್ಕಾಗಿ ಭೂಮಿ ಉಳಿಸಲು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿದರು. ದೇವಣ್ಣ 63 ವರ್ಷ ವಯಸ್ಸಿನಲ್ಲೂ ಯುವಕರಿಗೆ ಸರಿಸಮಾನವಾಗಿ ಕೃಷಿ ಮಾಡುತ್ತಿದ್ದಾರೆ.

ಚಾಮರಾಜನಗರ ನಿವಾಸಿ ರೈತ ನಂಜುಂಡಶೆಟ್ಟಿ(ದೇವಣ್ಣ) ಅವರ ತೋಟದಲ್ಲಿ ಬಿಳಿ ಬದನೆ, 1,400 ಬಾಳೆ(200 ಪಚ್ಚಬಾಳೆ), 1,500 ಅಡಿಕೆ, 100 ತೆಂಗು, 4 ಸಪೋಟ(ವಿವಿಧ ಬಗೆ), 4 ಸೀಬೆ, 10 ಪರಂಗಿ(ವಿವಿಧ ತಳಿ), 50 ತೇಗ, 5 ಬೇವು, 5 ಹೆಬ್ಬೇವು ಬೆಳೆದಿದ್ದಾರೆ. ಈ ಹಿಂದೆ ಟೊಮೆಟೊ, ಮೆಣಸಿನಕಾಯಿ, ಬೂದುಗುಂಬಳ ಹಾಕಿದ್ದಾರೆ. ಇದರ ಜೊತೆಗೆ 10 ಕುರಿಗಳನ್ನೂ ಸಾಕಿದ್ದಾರೆ. ನಾಟಿ ತಳಿಯ ಎರಡು ಹಸುಗಳನ್ನು ಸಾಕಿದ್ದು, ಇದರ ಹಾಲು, ಬೆಣ್ಣೆ, ತುಪ್ಪ, ಮಜ್ಜಿಗೆಯನ್ನೂ ಮಾರಾಟ ಮಾಡುತ್ತಿದ್ದಾರೆ.

ನಂಜುಂಡಶೆಟ್ಟಿ ಅವರ ತೋಟದಲ್ಲಿ ಚೆಂಡುಹೂಗಳನ್ನು ಬೆಳೆಯಲಾಗಿದೆ. ಹೂ ಗಿಡಗಳ ಬದುವಿನಲ್ಲಿ ಟೊಮೆಟೊ ಹಾಕಿದ್ದಾರೆ. ದೀಪಾವಳಿ ಹಬ್ಬ ಹತ್ತಿರವಿದ್ದು, ಹೂವಿಗೆ ಉತ್ತಮ ಬೆಲೆ ಬರುವುದರಿಂದ ರೈತ ದೇವಣ್ಣ ಅವರಿಗೆ ಚೆಂಡು ಹೂ ಲಾಭ ತಂದುಕೊಡಬಹುದೆಂಬ ನಿರೀಕ್ಷೆ ಇದೆ. ಇದು ಕೇವಲ ಒಂದೇ ಬೆಳೆಗೆ ಸೀಮಿತವಾಗದೆ ಬೇರೆ ಬೇರೆ ಬೆಳೆಗಳನ್ನೂ ಬೆಳೆದರೆ ಸಕಾಲದ ಅಗತ್ಯ ವಸ್ತುವಿನ ಬೆಲೆ ಏರಿಕೆಯ ನೀತಿಗೆ ತಕ್ಕಂತೆ ಲಾಭ ಗಳಿಸಲು ಸಾಧ್ಯ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ.

ಸಾವಯವ ದ್ರಾವಣ ತಯಾರಿಕೆ: ರೈತ ನಂಜುಂಡಶೆಟ್ಟಿ (ದೇವಣ್ಣ) ಅವರು ಸಾವಯವ ದ್ರವ್ಯ ತಯಾರಿಸಿ ಬೆಳೆಗಳಿಗೆ ನೀಡುತ್ತಿದ್ದಾರೆ. ಈ ಸಾಂಪ್ರದಾಯಿಕ ವಿಧಾನವು ಹಿಂದಿನ ನಾಟಿ ಮತ್ತು ನೈಸರ್ಗಿಕ ವಿಧಾನಗಳನ್ನು ನೆನಪು ಮಾಡುತ್ತಿವೆ. ಬದನೆ, ಬಾಳೆ, ಅಡಿಕೆ ಮತ್ತು ಇತರ ಬೆಳೆಗಳಿಗೆ ರೋಗ ಬಾರದಿರಲು 15 ಲೀಟರ್ ನೀರಿಗೆ 1.5 ಗ್ರಾಂ ಇಂಗು ಬೆರೆಸಿ ಸಿಂಪಡಣೆ ಮಾಡುತ್ತಾರೆ. ಅಲ್ಲದೇ, 200 ಲೀಟರ್ ನೀರಿಗೆ 200 ಗ್ರಾಂ ನೆಲ್ಲಿಕಾಯಿ ಪುಡಿ, ನಾಟಿ ಹಸುವಿನ ಮಜ್ಜಿಗೆ ಬೆರೆಸಿ ಮೂರು ದಿನಗಳ ಬಳಿಕ ಕಲಸಿ ಬೆಳೆಗಳಿಗೆ ನೀಡುತ್ತಿದ್ದಾರೆ. ಈ ವಿಧಾನದಿಂದ ಬೆಳೆಗಳಿಗೆ ಅಂಟಿರುವ ರೋಗಬಾಧೆಯನ್ನು ತಡೆಯಲು ಸಾಧ್ಯ. ರಾಸಾಯನಿಕ ಔಷಧಿಗಳನ್ನು ಬಳಕೆ ಮಾಡುವ ಅಗತ್ಯವೂ ಬರುವುದಿಲ್ಲ ಎಂದು ರೈತ ದೇವಣ್ಣ ಆತ್ಮವಿಶ್ವಾಸದಿಂದ ಹೇಳುತ್ತಾರೆ. ಇದರೊಂದಿಗೆ ಬೆಳೆಗಳ ಬೆಳವಣಿಗೆಗಾಗಿಯೂ ಈ ರೀತಿಯ ವಿಧಾನವನ್ನೇ ಅನುಸರಿಸುತ್ತಿದ್ದಾರೆ. ಸೆಗಣಿ, ಗಂಜಲ ಕಡಲೆಕಾಯಿ ಹಿಂಡಿ ಹಾಕಿ 6 ದಿನಗಳ ಬಳಿಕ ಬೆಳೆಗಳಿಗೆ ನೀಡುತ್ತಿದ್ದಾರೆ.

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X