Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದ.ಕ. ಜಿಲ್ಲೆಗೆ ‘ತುಳು ನಾಡು’ ಹೆಸರು...

ದ.ಕ. ಜಿಲ್ಲೆಗೆ ‘ತುಳು ನಾಡು’ ಹೆಸರು ಸೂಕ್ತ

ಚಂದ್ರಕಲಾ ನಂದಾವರಚಂದ್ರಕಲಾ ನಂದಾವರ26 July 2025 10:50 AM IST
share
ದ.ಕ. ಜಿಲ್ಲೆಗೆ ‘ತುಳು ನಾಡು’ ಹೆಸರು ಸೂಕ್ತ

ದಕ್ಷಿಣ ಕನ್ನಡ ಹೆಸರನ್ನು ಬದಲಾಯಿಸುವುದಿದ್ದರೆ ತುಳು ನಾಡು ಎನ್ನುವುದು ಸೂಕ್ತವಾದೀತು. ಸೌತ್ ಕೆನರಾ ಎಂಬ ಹೆಸರು ಈ ಜಿಲ್ಲೆಗೆ ಹಿಂದೆ ಇತ್ತು. ಅದರ ವ್ಯಾಪ್ತಿ ವಿಸ್ತಾರವಾಗಿತ್ತು. ಅದೇ ಪ್ರದೇಶ ತುಳುನಾಡು ಎಂದು ಕರೆಸಿಕೊಳ್ಳಲು ಯೋಗ್ಯವಾಗಿದೆ. ಈ ಪ್ರದೇಶ ಬಹತೇಕ ಜನರ ಭಾಷೆಯಾದ ತುಳು ಭಾಷೆ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಯಾಗಬೇಕು ಎನ್ನುವ ಬೇಡಿಕೆ ಇದುವರೆಗೆ ಈಡೇರಿಲ್ಲ. ಅದು ಈಡೇರುವ ಲಕ್ಷಣವೂ ಕಂಡು ಬರುತ್ತಿಲ್ಲ. ಈ ಸಂದರ್ಭದಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಸ್ವೀಕರಿಸಬೇಕೆಂಬ ಆಗ್ರಹ ಇದೆ. ಅದು ಸರಿಯಾದ ಬೇಡಿಕೆಯೂ ಹೌದು. ‘ತುಳು ನಾಡಿಗೆ’ ತಮಿಳು ನಾಡಿನ ರೀತಿ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಿದರೆ ಇನ್ನೂ ಉತ್ತಮ. ನಮ್ಮ ದೇಶದ ಉತ್ತರ ಭಾಗದಲ್ಲಿ ಅತ್ಯಂತ ಸಣ್ಣ ಭೂ ಭಾಗಗಳನ್ನು ಹೊಂದಿರುವ ಈಶಾನ್ಯ ರಾಜ್ಯಗಳಿಗೆ ಹೋಲಿಸಿದರೆ ಕೊಡಗು, ತುಳು ನಾಡು ಎಂದು ಪ್ರತ್ಯೇಕ ರಾಜ್ಯಗಳನ್ನು ರಚನೆ ಮಾಡಿದರೆ ಇನ್ನೂ ಉತ್ತಮ. ಇದರಿಂದ ಜಿಲ್ಲೆಯಲ್ಲಿ ತುಳುವರ ಅಸ್ಮಿತೆಯನ್ನು ಉಳಿಸಿಕೊಂಡು ರಾಷ್ಟ್ರಮಟ್ಟದಲ್ಲೂ ಈ ಪ್ರದೇಶದ ಜನರು ತಮ್ಮದೇ ಆದ ರೀತಿಯ ಸ್ಥಾನಮಾನಗಳನ್ನು ಪಡೆದುಕೊಳ್ಳಲು ಸಾಧ್ಯವಾಗಬಹುದು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ವಿಭಾಗಿಸಿ ಒಂದನ್ನು ‘ಉಡುಪಿ’ ಎಂದು ಹೆಸರಿಡಲಾಯಿತು. ಈ ಸಂದರ್ಭದಲ್ಲಿ ತುಳುನಾಡು ಎಂಬ ಹೆಸರು ದಕ್ಷಿಣ ಕನ್ನಡ ಜಿಲ್ಲೆಗೆ ನಾಮಕರಣ ಮಾಡಲು ಒಂದು ಉತ್ತಮ ಅವಕಾಶವಿತ್ತು. ಅದು ಕೈ ತಪ್ಪಿಹೋಯಿತು. ಜಿಲ್ಲೆಯ ಮಟ್ಟಿಗೆ ಹಲವು ಶತಮಾನಗಳ ಇತಿಹಾಸವನ್ನು ಹೊಂದಿರುವ ತುಳು ಭಾಷೆಯನ್ನಾಡುವ ತುಳುವರು ನೆಲೆಸಿರುವ ಪ್ರದೇಶವನ್ನು ತುಳು ನಾಡು ಎಂದು ಘೋಷಿಸಬೇಕು ಎನ್ನುವ ಬೇಡಿಕೆ ಬಹಳ ಹಿಂದಿನಿಂದಲೂ ಇತ್ತು. ಆ ಕಾರಣದಿಂದ ಸದ್ಯ ಹೆಸರು ಬದಲಾವಣೆ ಅನಿವಾರ್ಯ ಆಗಿದ್ದರೆ ತುಳು ನಾಡು ಎನ್ನುವ ಹೆಸರು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ.

Tags

Dakshina KannadaTulu Nadudistrict
share
ಚಂದ್ರಕಲಾ ನಂದಾವರ
ಚಂದ್ರಕಲಾ ನಂದಾವರ
Next Story
X