Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅನೈತಿಕ ಚಟುವಟಿಕೆಗಳ ತಾಣವಾದ...

ಅನೈತಿಕ ಚಟುವಟಿಕೆಗಳ ತಾಣವಾದ ಡಾ.ಜಗಜೀವನರಾಮ್ ಭವನ: ಗ್ರಾಮಸ್ಥರ ಆರೋಪ

ಮುನಿನಾರಾಯಣ, ಜಿ.ಎಂ.ಗಂಗನಹಳ್ಳಿಮುನಿನಾರಾಯಣ, ಜಿ.ಎಂ.ಗಂಗನಹಳ್ಳಿ9 Jun 2025 11:59 AM IST
share
ಅನೈತಿಕ ಚಟುವಟಿಕೆಗಳ ತಾಣವಾದ ಡಾ.ಜಗಜೀವನರಾಮ್ ಭವನ: ಗ್ರಾಮಸ್ಥರ ಆರೋಪ

ಶಿಡ್ಲಘಟ್ಟ : ತಾಲೂಕಿನ ಜಂಗಮಕೋಟೆ ಹೋಬಳಿಯ ಕುಂಬಿಗಾನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಭೀರನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿ 10 ವರ್ಷಗಳಾದರೂ ಡಾ.ಬಾಬು ಜಗಜೀವನರಾನ್ ಭವನವನ್ನು ಉದ್ಘಾಟನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

2015-16ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಿರುವ ಸಮುದಾಯ ಭವನವನ್ನು ಉದ್ಘಾಟನೆ ಮಾಡಿಲ್ಲ. ಸಮರ್ಪಕವಾಗಿ ನಿರ್ವಹಣೆಯನ್ನೂಮಾಡಿಲ್ಲ. ಪ್ರಸ್ತುತ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಗ್ರಾಮಸ್ಥರು ಆರೋ ಪಿಸಿದ್ದಾರೆ.

ಈ ಭವನಕ್ಕೆ ಅಳವಡಿಸಿದ್ದ ಬಾಗಿಲು, ಮುರಿದು ಬಿದ್ದು, ಗೆದ್ದಲು ತಿನ್ನುತ್ತಿದೆ. ಕಟ್ಟಡದ ಹೊರಗೆ ಮತ್ತು ಒಳಗೆ ಮದ್ಯದ ಬಾಟಲಿಗಳು ಬಿದ್ದಿವೆ. ರಾತ್ರಿಯ ವೇಳೆ ಭವನದ ಒಳಗೆ ದುಷ್ಕರ್ಮಿಗಳು, ಮದ್ಯಪಾನ ಮಾಡಿ ಹೋಗುತ್ತಾರೆ. ಬಾಟಲಿಗಳನ್ನು ಒಡೆದು ಹಾಕುತ್ತಿದ್ದಾರೆ. ಸರಕಾರ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ, ಭವನಗಳನ್ನು ನಿರ್ಮಾಣ ಮಾಡಿದರೂ ಇದು ಜನರಿಗೆ ಉಪಯೋಗವಾಗುತ್ತಿಲ್ಲ. ಭವನದ ಕಟ್ಟಡಕ್ಕೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಕಲ್ಪಿಸಿ, ಬಣ್ಣ ಹೊಡೆಸಿ ಶೀಘ್ರವೇ ಉದ್ಘಾಟನೆ ಮಾಡಿದರೆ ಕಾರ್ಯಕ್ರಮಗಳನ್ನು ಮಾಡಿಕೊಳ್ಳುವುದಕ್ಕೆ ಅನುಕೂಲವಾಗಲಿದೆ ಎಂದು ಸಾರ್ವಜನಿಕರಒತ್ತಾಯವಾಗಿದೆ.

ಮಾದಿಗ ದಂಡೋರ ತಾಲೂಕು ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ನಿರ್ಮಾಣವಾಗಿ 10 ವರ್ಷಗಳು ಕಳೆದರೂ ಇದುವರೆಗೂ ಉಪಯೋಗಕ್ಕೆ ಬಂದಿಲ್ಲ. ಈ ಕಟ್ಟಡದ ಜೊತೆಯಲ್ಲಿ ನಿರ್ಮಾಣವಾಗಿರುವ ಎಲ್ಲ ಭವನಗಳು ಉಪಯೋಗವಾಗುತ್ತಿವೆ. ಇಲ್ಲಿನ ಭವನಕ್ಕೆ ಒಂದು ಬಾಗಿಲು ಇಡಬೇಕು, ಶೌಚಾಲಯ ಕಟ್ಟಿಸಬೇಕು. ಕೊಳಾಯಿ ಅಳವಡಿಸಬೇಕು. ಭವನಕ್ಕೆ ಮೇಜು, ಕುರ್ಚಿಗಳು, ಕೊಡಬೇಕು, ಸುಣ್ಣ, ಬಣ್ಣ ಮಾಡಿಸಬೇಕು, ಕಾಂಪೌಂಡ್ ನಿರ್ಮಾಣ ಮಾಡಿ ಶೀಘ್ರವೇ ಲೋಕಾರ್ಪಣೆ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.

ಡಾ.ಬಾಬು ಜಗಜೀವನರಾಮ್ ಭವನ ನಮಗೆ ಹಸ್ತಾಂತರವಾಗಿಲ್ಲ. ಆದರೂ, ನಾವು ವಿದ್ಯುತ್ ಸಂಪರ್ಕ ಕಲ್ಪಿಸಿಕೊಟ್ಟಿದ್ದೇವೆ. ಸ್ವಚ್ಛತೆಯನ್ನೂ ಮಾಡಿಸುತ್ತಿದ್ದೇವೆ. ಭವನದ ಸುತ್ತಲೂ ಗಿಡಗಳನ್ನು ನೆಡಲು ಯೋಜನೆ ರೂಪಿಸಿದ್ದೆವು. ಆದರೆ, ಸ್ಥಳೀಯರು, ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಭವನ ಕಟ್ಟಡವನ್ನು ಪರಿಶೀಲನೆ ನಡೆಸಿ, ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ.

-ಪ್ರಶಾಂತ್, ಪಿಡಿಒ, ಕುಂಬಿಗಾನಹಳ್ಳಿ ಗ್ರಾಪಂ

ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ಕುಂಬಿಗಾನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಭೀರನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾದ ಡಾ.ಬಾಬು ಜಗಜೀವನರಾಮ್ ಭವನವನ್ನು ಸುಸ್ಥಿತಿಯಲ್ಲಿ ಅಲ್ಲಿನ ಗ್ರಾಮ ಪಂಚಾಯತ್‌ಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ನಮ್ಮಲ್ಲಿ ದಾಖಲೆಯಿದೆ. ಹಸ್ತಾಂತರ ಮಾಡಿಕೊಂಡ ನಂತರ ನಿರ್ವಹಣೆಯನ್ನು ಮಾಡಬೇಕಾಗಿರುವ ಅಲ್ಲಿನ ಗ್ರಾಮ ಪಂಚಾಯತ್‌ನ ಜವಾಬ್ದಾರಿಯಾಗಿರುತ್ತದೆ. ಅವರು ನಿರ್ವಹಣೆ ಮಾಡಲಿಲ್ಲವಾದರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಈ ಬಗ್ಗೆ ದೂರು ಕೊಡುತ್ತೇವೆ.

-ತೇಜಾನಂದರೆಡ್ಡಿ, ಉಪನಿರ್ದೇಶಕ, ಚಿಕ್ಕಬಳ್ಳಾಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ

share
ಮುನಿನಾರಾಯಣ, ಜಿ.ಎಂ.ಗಂಗನಹಳ್ಳಿ
ಮುನಿನಾರಾಯಣ, ಜಿ.ಎಂ.ಗಂಗನಹಳ್ಳಿ
Next Story
X