Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದುಬಾರೆ, ಬರಪೊಳೆಯಲ್ಲಿ ರೋಚಕ ರಿವರ್...

ದುಬಾರೆ, ಬರಪೊಳೆಯಲ್ಲಿ ರೋಚಕ ರಿವರ್ ರ‍್ಯಾಫ್ಟಿಂಗ್

ಕೆ.ಎಂ.ಇಸ್ಮಾಯೀಲ್ ಕಂಡಕರೆಕೆ.ಎಂ.ಇಸ್ಮಾಯೀಲ್ ಕಂಡಕರೆ21 July 2025 3:08 PM IST
share
ದುಬಾರೆ, ಬರಪೊಳೆಯಲ್ಲಿ ರೋಚಕ ರಿವರ್ ರ‍್ಯಾಫ್ಟಿಂಗ್

ಮಡಿಕೇರಿ: ಈ ಬಾರಿ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಜೀವಕಳೆ ಪಡೆದುಕೊಂಡಿದೆ.

ಜಿಲ್ಲೆಯ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ರ‍್ಯಾಫ್ಟಿಂಗ್ ಮಾಡುವ ಪ್ರವಾಸಿಗರಿಗೆ ಇದು ಮತ್ತಷ್ಟು ಹೊಸ ಅನುಭವ ನೀಡುತ್ತಿದೆ. ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಜಲಸಾಹಸಗಳಲ್ಲಿ ಭಾಗವಹಿಸಲು ಪ್ರವಾಸಿಗರು ಮುಗಿ ಬೀಳುತ್ತಾರೆ.

ಮುಂಗಾರು ಸಂದರ್ಭದಲ್ಲಿ ಜಲಪಾತ ವೀಕ್ಷಣೆ ಹಾಗೂ ಜಲಸಾಹಸ ಕ್ರೀಡೆ ಆಕರ್ಷಣೀಯ ಹಾಗೂ ಪ್ರವಾಸಿಗರನ್ನು ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಿವರ್ ರ‍್ಯಾಫ್ಟಿಂಗ್ ಒಂದು ಭಾಗವಾಗಿದ್ದು, ಪ್ರವಾಸಿಗರು ಜಲಕ್ರೀಡೆಯಲ್ಲಿ ಪಾಲ್ಗೊಳ್ಳಲು ಕಾತುರದಿಂದ ಕಾಯುತ್ತಿರುತ್ತಾರೆ. ಅದರಲ್ಲೂ ಕೊಡಗಿನ ಪ್ರಕೃತಿಯ ನಡುವಿನ ಈ ಜಲಕ್ರೀಡೆ ಪ್ರವಾಸಿಗರಿಗೆ ವಿಶೇಷ ಅನುಭವ ನೀಡುತ್ತದೆ.

ರಿವರ್ ರ್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ರ‍್ಯಾಫ್ಟಿಂಗ್ ನಡೆಸುವವರಿಗೆ ಜಿಲ್ಲಾಡಳಿತ ಸೂಕ್ತ ಎಚ್ಚರಿಕೆಯನ್ನು ನೀಡಿದ್ದು, ರ‍್ಯಾಫ್ಟ್ ಮಾಲಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ಸೂಚಿಸಲಾಗಿದೆ. ರಿವರ್ ರ‍್ಯಾಫ್ಟಿಂಗ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸುರಕ್ಷತೆ ಮತ್ತು ಜೀವರಕ್ಷಣೆ ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ರಿವರ್ ರ‍್ಯಾಫ್ಟರ್‌ಗಳು ಫಿಟ್ನೆಸ್ ಪ್ರಮಾಣಪತ್ರ ಕಡ್ಡಾಯವಾಗಿ ಪಡೆಯಬೇಕು. ಜೊತೆಗೆ ಪ್ರತೀ ವರ್ಷ ನವೀಕರಣ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಸೈನ್‌ಬೋರ್ಡ್ ಅಳವಡಿಕೆ: ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಹುಣಸೂರು ತಾಲೂಕಿನ ಬಿಳಿಕೆರೆ, ಮೈಸೂರು ರಸ್ತೆಯ ಹುಣಸೂರು-ಗೋಣಿಕೊಪ್ಪ ಜಂಕ್ಷನ್, ಪಿರಿಯಾಪಟ್ಟಣ ಸಿದ್ದಾಪುರ ಬಳಿಯ ಜಂಕ್ಷನ್‌ಗಳಲ್ಲಿ ಸೈನ್ ಬೋರ್ಡ್ ಅಳವಡಿಸುವಂತೆಯೂ ಜಿಲ್ಲಾಡಳಿತ ಹೇಳಿದ್ದು, ಹೆಚ್ಚಿನ ಪ್ರವಾಸಿಗರನ್ನು ಜಿಲ್ಲೆಯತ್ತ ಆಕರ್ಷಿಸಲು ಮುಂದಾಗಿದೆ.

ಬೀದಳ್ಳಿಯಲ್ಲಿ ವೈಟ್ ವಾಟರ್ ರ‍್ಯಾಫ್ಟಿಂಗ್‌ಗೆ ಅನುಮತಿ

ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಮಲ್ಲಳ್ಳಿ ಜಲಪಾತದ ಕುಮಾರಧಾರ ನದಿಯಲ್ಲಿ ವೈಟ್ ವಾಟರ್ ರ್ಯಾಫ್ಟಿಂಗ್‌ಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ವಿದ್ಯುತ್ ಉತ್ಪಾದನಾ ಕೇಂದ್ರದ ಬಳಿಯ ಪ್ರಸಿದ್ಧ ಮಲ್ಲಳ್ಳಿ ಜಲಪಾತದ ಹಿಂದೆ, ರಮಣೀಯ ಪುಷ್ಪಗಿರಿ ಪರ್ವತಗಳ ತಪ್ಪಲಿನಲ್ಲಿ ರ್ಯಾಫ್ಟಿಂಗ್‌ಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ರಾಫ್ಟಿಂಗ್ ಕುಮಾರಳ್ಳಿಯಿಂದ ಪ್ರಾರಂಭವಾಗಿ ಮಲ್ಲಳ್ಳಿ ಜಲಪಾತದ ಬಳಿಯ ಬೀದಳ್ಳಿ ಮಿನಿ ಹೈಡಲ್ ಯೋಜನೆಯ ಹಿಂಭಾಗ ಕೊನೆಗೊಳ್ಳುತ್ತದೆ.

ಕಯಾಕಿಂಗ್ ಜಲಕ್ರೀ ಡೆಗೆ ಸಿದ್ಧತೆ

ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಡಿ ಜಲ ಸಾಹಸ ಕ್ರೀಡೆಯಲ್ಲಿ ಒಂದಾದ ಕಯಾಕಿಂಗ್ ನಡೆಸಲು ಅವಕಾಶವಿದೆ. ಈ ಸಂಬಂಧ ಜಿಲ್ಲೆಯಲ್ಲಿ 11 ಅರ್ಜಿಗಳು ಸಲ್ಲಿಕೆಯಾಗಿವೆ. ಹೇಮಾವತಿ ನದಿ ಪಾತ್ರ ಕೊಡ್ಲಿಪೇಟೆ ದೊಡ್ಡಕುಂದ, ಹಟ್ಟಿಹೊಳೆ ಬಳಿಯ ದೇವಸ್ತೂರು ನದಿ, ಕಾವೇರಿ ನದಿ ಪಾತ್ರದ ಐವತ್ತೊಕ್ಲು, ಹೊದ್ದೂರು, ಹಾರಂಗಿ ಹಿನ್ನೀರು ಪ್ರದೇಶದ ಹೆರೂರು, ನಾಕೂರು ಶಿರಂಗಾಲ, ಬೈರಂಪಾಡ, ಚಿಕ್ಕಬೆಟ್ಟಗೇರಿ ಪ್ರದೇಶಗಳಲ್ಲಿ ಕಯಾಕಿಂಗ್ ಮಾಡಲು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳ ಸಂಬಂಧ ಕಾರ್ಯ ಸಾಧ್ಯತಾ ವರದಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ತಿಳಿಸಿದ್ದಾರೆ.

ರ‍್ಯಾಫ್ಟಿಂಗ್ ಫಿಟ್ನೆಸ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ (ಜೇತ್ನ) ಯಿಂದ ಪಡೆಯಬೇಕು. ಜೊತೆಗೆ ಪೊಲೀಸ್ ಇಲಾಖೆಯಿಂದಲೂ ಪರಿಶೀಲನೆ ನಡೆಸಬೇಕು. ಜಲಕ್ರೀಡೆ ಸಂದರ್ಭದಲ್ಲಿ ಜೀವರಕ್ಷಕ ಜಾಕೆಟ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಜೊತೆಗೆ ಗೈಡ್‌ಗಳು ಕೌಶಲ್ಯ ಪರೀಕ್ಷೆ ಮಾಡಿಸಿರಬೇಕು. ಸಮವಸ್ತ್ರವನ್ನು ಧರಿಸಿ ಕರ್ತವ್ಯ ನಿರ್ವಹಿಸಬೇಕು.

-ಮಂತರ್ ಗೌಡ, ಶಾಸಕ

share
ಕೆ.ಎಂ.ಇಸ್ಮಾಯೀಲ್ ಕಂಡಕರೆ
ಕೆ.ಎಂ.ಇಸ್ಮಾಯೀಲ್ ಕಂಡಕರೆ
Next Story
X