Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳು!

ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳು!

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.27 May 2024 12:33 PM IST
share
ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳು!

ಹೊಸಕೋಟೆ: ದೇಸಿ ಆಟಗಳು ಮಕ್ಕಳಷ್ಟೇ ಅಲ್ಲ, ದೊಡ್ಡವರಲ್ಲೂ ಸೃಜನಶೀಲತೆ ಮೂಡಿಸುತ್ತಿದ್ದ ಪರಿ ಅನನ್ಯವಾದದ್ದು. ಕಳೆದು ಹೋಗುತ್ತಿರುವ ಕೌಟುಂಬಿಕ ಮೌಲ್ಯವನ್ನು ಪುನರ್ ಪ್ರತಿಷ್ಠಾಪಿಸುವ ಗುಣ ಗ್ರಾಮೀಣ ಕ್ರೀಡೆಗಳಿಗಿದೆ. ಅಪ್ಪಟ ಗ್ರಾಮೀಣ ಕ್ರೀಡೆಗಳು ಕಾಲಾನುಕ್ರಮವಾಗಿ ನಶಿಸಿ ಹೋಗುತ್ತಿರುವುದು ವಿಷಾದನೀಯ.

ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿದ್ದ ಗ್ರಾಮೀಣ ಕ್ರೀಡೆಗಳು ಮುಂದಿನ ದಿನಗಳಲ್ಲಿ ಇತಿಹಾಸದ ಪುಟ ಸೇರುವ ಎಲ್ಲ ಲಕ್ಷಣಗಳು ಕಂಡು ಬರುತ್ತಿರುವುದು ಒಂದೆಡೆಯಾದರೆ, ಮಕ್ಕಳಲ್ಲಿ ಬಾಲ್ಯಾವಸ್ಥೆಯ ಆಟೋಟಗಳ ಅರಿವಿಲ್ಲದೇ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಳೆದುಕೊಳ್ಳುವಂತಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಬಿಡುವಿನಲ್ಲಿ ನೆರೆಹೊರೆಯ ಮಕ್ಕಳು ಸೇರಿ ಆಡುತ್ತಿದ್ದ ಕಣ್ಣಾ ಮುಚ್ಚಾಲೆ, ಕಲ್ಲಿನಾಟ, ಚೌಕಾಬಾರ, ಬಳೆಚುಕ್ಕಿ ಆಟ, ಚನ್ನೇಮಣೆ, ಗೋಲಿಯಾಟ, ಚಿನ್ನಿದಾಂಡು, ಲಗೋರಿ, ಸಾಲುಚೆಂಡು, ಹಗ್ಗ-ಜಗ್ಗಾಟ, ಬುಗುರಿ, ಗೋಲಿ, ಕುಂಟೆಬಿಲ್ಲೆ, ಕಪ್ಪೆ ಓಟ, ಮನೆಯಾಟ ಮತ್ತಿತರ ಅಳಿವಿನಂಚಿನಲ್ಲಿವೆ.

ಮೊಬೈಲ್‌ನಲ್ಲಿ ಮಗ್ನ: ಮಕ್ಕಳ ಆಟವನ್ನು ಮನೆ ಮಂದಿಯೆಲ್ಲ ಒಂದೆಡೆ ಕುಳಿತು ವೀಕ್ಷಿಸಿ, ಪ್ರೋತ್ಸಾಹ ನೀಡುತ್ತಿದ್ದರು. ಆದರೆ ಇತ್ತೀಚೆಗೆ ಕುಟುಂಬದ ಒಬ್ಬೊಬ್ಬ ಸದಸ್ಯನೂ ಮೊಬೈಲ್ ಲೋಕದಲ್ಲಿ ಮುಳುಗಿ ಪರಸ್ಪರ ಸಂವಹನ ಮಾಡದಿರುವಷ್ಟು ಮಗ್ನರಾಗಿದ್ದಾರೆ.

ಟಿವಿಯ ಕಾರ್ಟೂನ್, ಮೊಬೈಲ್, ವೀಡಿಯೊ ಗೇಮ್‌ಗಳಲ್ಲಿ ಮುಳುಗಿರುವ ಪುಟ್ಟ ಮಕ್ಕಳಿಗೆ ಅಪ್ಪ-ಅಮ್ಮ, ಅಜ್ಜ-ಅಜ್ಜಿಯ ಪ್ರೀತಿಯ ಸಾಂಗತ್ಯವಿಲ್ಲದೇ ಭಾವನಾತ್ಮಕ ಸಂಬಂಧಗಳು ದೂರವಾಗಿವೆ. ಕೈಯಲ್ಲೊಂದು ಮೊಬೈಲ್ ಇದ್ದರೆ ಮಕ್ಕಳ ಪಾಲಿಗೆ ಅದುವೇ ಸ್ವರ್ಗ ಎಂಬಂತಾಗಿದೆ. ಮೊಬೈಲ್ ಲಗ್ಗೆ ಇಟ್ಟ ಬಳಿಕ ಕೌಟುಂಬಿಕ ಮೌಲ್ಯಗಳನ್ನು ಬೆಸೆಯುವ ದೇಸೀ ಆಟಗಳು ಮಾಯವಾಗತೊಡಗಿದ್ದು, ಪರಸ್ಪರ ಪ್ರೀತಿ, ವಿಶ್ವಾಸಗಳ ಕೊರತೆ ಕಾಡುತ್ತಿದೆ.

ಇಂದಿನ ಪೋಷಕರಲ್ಲಿ ಕೂಡಾ ಗ್ರಾಮೀಣ ಕ್ರೀಡೆಗಳ ಬಗ್ಗೆ ನಿರುತ್ಸಾಹ ತುಂಬಿದೆ. ಮಕ್ಕಳಿಗೆ ಅಧಿಕ ಅಂಕ ಗಳಿಸುವಂತೆ ಒತ್ತಡ ಹಾಕುವ ಪರಿಪಾಠ ಹೆಚ್ಚಾಗಿರುವುದರಿಂದ ಅವರು ಖಿನ್ನತೆಗೆ ಒಳಗಾಗುತ್ತಿದ್ದು, ಮಕ್ಕಳಿಗೆ ದೈಹಿಕ ಆಟೋಟಗಳಲ್ಲಿ ಆಸಕ್ತಿ ಇಲ್ಲದಂತಾಗಿದೆ.

ಗ್ರಾಮೀಣ ಕ್ರೀಡೆಗಳು ಅಳಿವಿನಂಚಿಗೆ ತಲುಪುತ್ತಿದ್ದು, ಹಿರಿಯರ ನೆನಪಿನ ತಿಜೋರಿಯಲ್ಲಿ ಭದ್ರವಾಗಿ ಕುಳಿತಿರುವ ಅಪರೂಪದ ದೇಸಿ ಆಟಗಳನ್ನು ಇಂದಿನ ಪೀಳಿಗೆಯ ಮಕ್ಕಳಿಗೆ ಪರಿಚಯಿಸುವ ಕೆಲಸಕ್ಕೆ ಪೋಷಕರು, ಶಿಕ್ಷಕರು ಮುಂದಾದಲ್ಲಿ ಗ್ರಾಮೀಣ ಕ್ರೀಡೆಗಳನ್ನು ಉಳಿಸಲು ಸಾಧ್ಯವಾಗುತ್ತದೆ.

ಶಾಲಾ ಮಕ್ಕಳು ಬೇಸಿಗೆ ರಜೆಯಲ್ಲಿ ಮೊಬೈಲ್, ಕಂಪ್ಯೂಟರ್ ಕ್ರೀಡೆಗಳತ್ತ ಗಮನ ಹರಿಸುವುದನ್ನು ತಡೆಯಲೆಂದೇ ತಾಲೂಕಿನ ಹಲವೆಡೆ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಅನುಭವೀ ತರಬೇತುದಾರರಿಂದ ಕಲೆ, ಸಾಂಸ್ಕೃತಿಕ ಹಾಗೂ ಗ್ರಾಮೀಣ ಕ್ರೀಡೆ ಚಟುವಟಿಕೆಗಳನ್ನು ನಡೆಸುತ್ತಿದ್ದು, ಬಿಸಿಯೂಟದ ಜತೆಗೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ತರುವಲ್ಲಿ ಶಿಬಿರಗಳು ಸಹಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ.

-ಪದ್ಮನಾಭ, ಕ್ಷೇತ್ರ ಶಿಕ್ಷಣಾಧಿಕಾರಿ- ಹೊಸಕೋಟೆ

ಹೆಚ್ಚು ಅಂಕ ಗಳಿಸುವಂತೆ ತಮ್ಮ ಮಕ್ಕಳಿಗೆ ಪೋಷಕರು ಒತ್ತಡ ಹಾಕುತ್ತಿದ್ದಾರೆ. ಕಲಿಕೆಯತ್ತ ಹೆಚ್ಚು ಗಮನ ನೀಡಲೆಂದು ಮಕ್ಕಳನ್ನು ಗ್ರಾಮೀಣ, ಮತ್ತಿತರ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಈ ಮೂಲಕ ಮಕ್ಕಳು ಯಾಂತ್ರಿಕ ಜೀವನಕ್ಕೆ ಜೋತು ಬೀಳುತ್ತಾರೆ. ಇದರಿಂದ ತಮ್ಮ ಬಾಲ್ಯದ ಅತ್ಯಮೂಲ್ಯ ಅನುಭವಗಳನ್ನು ಕಳೆದುಕೊಳ್ಳುತ್ತಾರೆ.

- ಮಂಜುನಾಥ್, ನಿವೃತ್ತ ಮುಖ್ಯ ಶಿಕ್ಷಕರು

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X