Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜಾನುವಾರುಗಳಿಗೆ ಮೇವಿಲ್ಲದೆ ಕಂಗಾಲಾದ...

ಜಾನುವಾರುಗಳಿಗೆ ಮೇವಿಲ್ಲದೆ ಕಂಗಾಲಾದ ರೈತರು

ಕುಮಾರ ನಾಗಲಾಪುರಕುಮಾರ ನಾಗಲಾಪುರ22 March 2024 3:56 PM IST
share
ಜಾನುವಾರುಗಳಿಗೆ ಮೇವಿಲ್ಲದೆ ಕಂಗಾಲಾದ ರೈತರು

ಪಾವಗಡ, ಮಾ.21: ಮಳೆ ಕೈಕೊಟ್ಟು ಬರ ಕರಾಳತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಾಲೂಕಿನ ನಾಗಲಾಪುರ ಗ್ರಾಮ ಸೇರಿದಂತೆ ತಾಲೂಕಿನ ಇನ್ನಿತರ ಗ್ರಾಮಗಳಲ್ಲಿ ಜಾನುವಾರುಗಳಿಗೆ ನೀರು, ಮೇವು ಇಲ್ಲದಂತಾಗಿ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ವೈಎನ್ ಹೊಸಕೋಟೆ ಹೋಬಳಿಯ ನಾಗಲಾಪುರ ಗ್ರಾಮದಲ್ಲಿ ಸುಮಾರು 2,000ಕ್ಕೂ ಹೆಚ್ಚು ಜಾನುವಾರುಗಳು ಇದ್ದು. ಜಾನುವಾರುಗಳಿಗೆ ಮೇವು ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು. ಸಂಬಂಧಪಟ್ಟ ಅಧಿಕಾರಿಗಳು ಗೋಶಾಲೆ ತೆರೆದು ಮೇವುನ್ನು ವಿತರಿಸಿ ಗೋವುಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮದ ಗೋ ಪಾಲಕರ ಮನವಿಯಾಗಿದೆ.

ಸಾಕಿದ ಮಾಲಕರು ಜಾನುವಾರುಗಳನ್ನು ಮೇವಿಲ್ಲದೆ ಮನೆಯಿಂದ ಹೊರ ಬಿಡುವುದರಿಂದ ಕಿಲೋ ಮೀಟರ್‌ಗಳವರೆಗೆ ದೂರ ಹೋದರೂ ಮೇವು ಸಿಗದ ಕಾರಣ ಕಂಗಾಲಾಗಿವೆ. ಎಲ್ಲಿಯಾದರೂ ನೀರು-ನೆರಳು ಕಂಡರೆ ಸಾಕು ಪಕ್ಕನೆ ನಿಂತುಕೊಳ್ಳುತ್ತಿವೆ. ಬರದ ಭೀಕರತೆ ಹೆಚ್ಚುತ್ತಿರುವುದರಿಂದ ಜನರಿಗೆ ಕುಡಿಯಲು ನೀರು ಇಲ್ಲದಂತಾದ ಕಾರಣ, ತಮ್ಮ ಜಾನುವಾರುಗಳಿಗೆ ಎಲ್ಲಿಂದ ನೀರು ತರಬೇಕು ಎಂದು ಮನೆಯಲ್ಲಿರುವ ತಮ್ಮ ರಾಸುಗಳನ್ನು ಹೊರ ಹಾಕುತ್ತಿರುವ ಘಟನೆ ಈ ಗ್ರಾಮಗಳ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿದೆ.

ನಮ್ಮ ಸ್ಥಿತಿಯನ್ನು ಅರಿಯಬೇಕಾದರೆ ಗ್ರಾಮಗಳಿಗೆ ಬಂದು ನೋಡಲಿ ನೈಜ ಪರಿಸ್ಥಿತಿ ಅರ್ಥವಾಗುತ್ತದೆ ಎಂದು ನಾಗಲಾಪುರ ಹಾಗೂ ಇನ್ನಿತರ ಗ್ರಾಮಗಳ ರೈತರು ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಲೆ ಕಟ್ಟಲಾಗದ ತಮ್ಮ ಜಾನುವಾರಗಳ ಬಗ್ಗೆ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ ಎಂದು ಇಲ್ಲಿನ ಸ್ಥಳೀಯರ ಮಾತಾಗಿದೆ.

ಬೆಟ್ಟದಲ್ಲಿಯೂ ಮೇವಿಲ್ಲ

ತಾಲೂಕು ಸೇರಿದಂತೆ ನಾಗಲಾಪುರ ಗ್ರಾಮ ಗುಡ್ಡಗಾಡುಗಳಿಂದ ತುಂಬಿದೆ. ಇತರೆಡೆ ಮೇವು ಇಲ್ಲದಿದ್ದರೂ ಬೆಟ್ಟ ಗುಡ್ಡಗಳಲ್ಲಿ ಕುರಿ ಮೇಕೆ ದನ ಕರುಗಳಿಗೆ ಮೇವು ಸಿಗುತ್ತಿತ್ತು. ಆದರೆ ಮಳೆ ಇಲ್ಲದ ಕಾರಣ ಅಲ್ಲಿಯೂ ಮೇವು ಸಿಗುತ್ತಿಲ್ಲ ಬೆಟ್ಟಕ್ಕೆ ಬೆಂಕಿ ಇಡುವವರ ಹಾವಳಿ ಹೆಚ್ಚಾಗಿರುವುದರಿಂದ ಇರುವ ಅಲ್ಪ ಸ್ವಲ್ಪ ಮೇವು ಸಂಪೂರ್ಣ ಸುಟ್ಟು ಹೋಗಿದೆ.

ನಾಗಲಾಪುರ ಹೆಚ್ಚು ಜಾನುವಾರುಗಳು ಮತ್ತು ಕುರಿ ಮೇಕೆಗಳು ಇರುವ ಗ್ರಾಮವಾಗಿದ್ದು ಇಲ್ಲಿ ಗೋಶಾಲೆ ಅತ್ಯವಶ್ಯಕವಾಗಿದೆ. ಮಳೆ ಅಭಾವದಿಂದ ಎಲ್ಲಿಯೂ ಮೇವು ಸಿಗುತ್ತಿಲ್ಲ. ಮೇವು ಕೊಂಡುಕೊಳ್ಳಲು ನಮ್ಮ ಹತ್ತಿರ ಹಣ ಇಲ್ಲ. ದಿಕ್ಕು ತೋಚದ ಪರಿಸ್ಥಿತಿಯಲ್ಲಿ ನಾವಿದ್ದೇವೆ.

-ವೆಂಕಟೇಶಪ್ಪ, ಗ್ರಾಮಸ್ಥ

share
ಕುಮಾರ ನಾಗಲಾಪುರ
ಕುಮಾರ ನಾಗಲಾಪುರ
Next Story
X