Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದುಬಾರಿಯಾದರೂ ಕೊಟ್ಟಿಗೆ ಗೊಬ್ಬರದತ್ತ...

ದುಬಾರಿಯಾದರೂ ಕೊಟ್ಟಿಗೆ ಗೊಬ್ಬರದತ್ತ ರೈತರ ಚಿತ್ತ

ರಸಗೊಬ್ಬರ ಬದಲಿಗೆ ಕಾಂಪೋಸ್ಟ್ ಗೊಬ್ಬರಕ್ಕೆ ಹೆಚ್ಚು ಬೇಡಿಕೆ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.1 July 2024 2:59 PM IST
share
ದುಬಾರಿಯಾದರೂ ಕೊಟ್ಟಿಗೆ ಗೊಬ್ಬರದತ್ತ ರೈತರ ಚಿತ್ತ

ಹೊಸಕೋಟೆ: ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಕೊಟ್ಟಿಗೆ ಗೊಬ್ಬರ ಬಳಕೆಯತ್ತ ರೈತರು ಹೆಚ್ಚಿನ ಒಲವು ತೋರುತ್ತಿದ್ದಾರೆ.

ರೈತರು ಹೆಚ್ಚಾಗಿ ಡಿಎಪಿ ಮತ್ತಿತರ ರಸಗೊಬ್ಬರವನ್ನು ಉತ್ತಮ ಇಳುವರಿಗಾಗಿ ಬಳಸುತ್ತಿದ್ದರು. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಬಳಕೆಯಿಂದ ಬೆಳೆಗಳು ವಿವಿಧ ರೋಗಗಳಿಗೆ ತುತ್ತಾಗುತ್ತವೆ. ಜತೆಗೆ ಹೆಚ್ಚು ರಸಗೊಬ್ಬರ ಬಳಕೆಯಿಂದ ಕ್ರಮೇಣ ಭೂಮಿ ತನ್ನ ಸಾರವನ್ನು ಕಳೆದುಕೊಂಡು ಈ ಪ್ರದೇಶದಲ್ಲಿ ಯಾವುದೇ ಬೆಳೆ ಉತ್ತಮವಾಗಿ ಬೆಳೆಯುವುದಿಲ್ಲ. ಆಹಾರ ಪದಾರ್ಥಗಳ ಬಳಕೆಯಿಂದ ನಾನಾ ರೋಗಗಳು ಕಾಣಿಸಿಕೊಳ್ಳ ಲಾರಂಭಿಸಿದ್ದು, ಸರಕಾರ ಮತ್ತೆ ಸಾವಯವ ಕೃಷಿಗೆ ಹೆಚ್ಚು ಪ್ರೋತ್ಸಾಹ ನೀಡಿದ್ದು, ರೈತರು ಸಾವಯವ ಕೃಷಿಗೆ ಮುಂದಾಗಿದ್ದಾರೆ. ಪ್ರಸಕ್ತ ಮಾರು ಕಟ್ಟೆಯಲ್ಲಿ ಸಾವಯವ ಕೃಷಿಯಿಂದ ಬೆಳೆದ ಆಹಾರ ಪದಾರ್ಥಗಳಿಗೆ ಹೆಚ್ಚು ಬೇಡಿಕೆ ಇರುವುದರಿಂದ (ರಾಸಾಯನಿಕ ಗೊಬ್ಬರ ರಹಿತ) ಕೊಟ್ಟಿಗೆ ಗೊಬ್ಬರವನ್ನು ಹೆಚ್ಚಿ ಪ್ರಮಾಣದಲ್ಲಿ ಬಳಸುತ್ತಿದ್ದಾರೆ.

ಬೇಡಿಕೆ ಹೆಚ್ಚಿಸಿಕೊಂಡ ಕೊಟ್ಟಿಗೆ ಗೊಬ್ಬರ: ಕೊಟ್ಟಿಗೆ ಗೊಬ್ಬರಕ್ಕೆ ಟ್ರ್ಯಾಕ್ಟರ್, ಲಾರಿ ಮತ್ತು ಎತ್ತಿನಗಾಡಿಗೆ ಇಂತಿಷ್ಟು ಬೆಲೆ ನಿಗದಿಯಾಗಿದೆ. ರೈತರು ಬೆಲೆ ಹೆಚ್ಚಿದ್ದರೂ ಲೋಡ್ ಗಟ್ಟಲೆ ಗೊಬ್ಬರ ಖರೀದಿಸುತ್ತಿದ್ದು, ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಸಿಲಿಕಾನ್ ಸಿಟಿಗೆ ಹತ್ತಿರವಿದ್ದರೂ ಇಲ್ಲಿನ ರೈತರು ಕೃಷಿಗೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದು, ಭೂಮಿಯ ಫಲವತ್ತತೆ ಹೆಚ್ಚಿಸಬೇಕಾದರೆ ಕೊಟ್ಟಿಗೆ ಗೊಬ್ಬರ ಬಳಸಿ ಸಾವಯುವ ಕೃಷಿ ಮಾಡಬೇಕು ಎಂದು ಸರಕಾರ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ.

ರೈತರ ಮಧ್ಯೆ ಹೆಚ್ಚಿದ ಬಾಂಧವ್ಯ: ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ ನಡೆಸುವ ರೈತರಿಗೆ ರಾಗಿ ಹುಲ್ಲು, ಮೇವು ಬೇಕೆ ಬೇಕು. ಕೃಷಿ ಭೂಮಿ ಹೊಂದಿರುವ ರೈತರಿಗೆ ಗೊಬ್ಬರದ ಅವಶ್ಯಕತೆ ಇರುತ್ತದೆ. ಹೈನುಗಾರಿಕೆ ಮತ್ತು ಕೃಷಿ ಮಾಡುವ ರೈತರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ರಾಸುಗಳನ್ನು ಸಾಕುವುದರಿಂದ ಕೊಟ್ಟಿಗೆ ಗೊಬ್ಬರ ಹೆಚ್ಚು ಉತ್ಪತ್ತಿಯಾಗುತ್ತದೆ. ಈ ಗೊಬ್ಬರವನ್ನು ಭೂಮಿಗೆ ಹಾಕುವುದರಿಂದ ಭೂಮಿ ಹೆಚ್ಚು ಫಲವತ್ತಾಗಿ ರೋಗರಹಿತ ಉತ್ತಮ ಇಳುವರಿ ಸಿಗುತ್ತದೆ.

ದುಬಾರಿ ರಸಗೊಬ್ಬರದ ಲೆಕ್ಕಾಚಾರ: ಸರಕಾರ ರಸಗೊಬ್ಬರಗಳ ಬೆಲೆ ಏರಿಕೆ ಮಾಡಿರುವುದರಿಂದ ದುಬಾರಿ ಹಣ ನೀಡಿ ಗೊಬ್ಬರ ಖರೀದಿಸಲು ಸಾಧ್ಯವಾಗದ ಸಣ್ಣ ರೈತರು ಕೊಟ್ಟಿಗೆ ಗೊಬ್ಬರವನ್ನೇ ಬಳಸಲು ಮುಂದಾಗಿದ್ದು, ಈ ಕೊಟ್ಟಿಗೆ ಗೊಬ್ಬರ ಬಳಕೆಯಿಂದ ಇಳುವರಿ ಹೆಚ್ಚು ಬರುತ್ತದೆ ಜತೆಗೆ ನೀರಿನ ನಿರ್ವಹಣೆಯೂ ಸುಲಭವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಕೋಳಿ ಗೊಬ್ಬರಕ್ಕೂ ಬೇಡಿಕೆ: ಭೂಮಿಗೆ ರಸಗೊಬ್ಬರವನ್ನು ಹೇರಳವಾಗಿ ಹಾಕಿ ಬೆಳೆಯುತ್ತಿದ್ದ ರೈತರು ಸಾವಯವ ಕೃಷಿಗೆ ಕಡೆ ಮುಖ ಮಾಡಿದ್ದಾರೆ. ಕೊಟ್ಟಿಗೆ ಗೊಬ್ಬರ ಹಾಕಲು ಲಭ್ಯವಿಲ್ಲದ ಕಾರಣ ಕೋಳಿಗೊಬ್ಬರಕ್ಕೆ ಮೊರೆಹೋಗಿದ್ದಾರೆ. ಇದರಿಂದ ಕೋಳಿಫಾರಂ ಮಾಲಕರಿಗೂ ಲಾಭವಾಗುತ್ತಿದೆ.

ಒಂದು ಟ್ರ್ಯಾಕ್ಟರ್ ಕೊಟ್ಟಿಗೆ ಗೊಬ್ಬರಕ್ಕೆ 5 ಸಾವಿರ ರೂ. ಇದೆ. ಇತ್ತೀಚೆಗೆ ಡಿಎಪಿ ಪೂರೈಕೆ ಕಡಿಮೆ ಇದೆ. ನಮ್ಮ ಹಿರಿಯರು ಅನುಸರಿಸುತ್ತಿದ್ದ ಕೊಟ್ಟಿಗೆ ಗೊಬ್ಬರ ಬಳಕೆಯ ವಿಧಾನದಿಂದ ಹೆಚ್ಚಿನ ಇಳುವರಿ ಪಡೆಯಬಹುದು.

-ನಂದೀಶ್ , ರೈತ, ಚಿಕ್ಕಕೋಲಿಗ

ಇತ್ತೀಚೆಗೆ ಕೊಟ್ಟಿಗೆ ಗೊಬ್ಬರಕ್ಕೆ ಬೇಡಿಗೆ ಹೆಚ್ಚಾಗಿದೆ. ಕೊಟ್ಟಿಗೆ ಗೊಬ್ಬರವನ್ನು ಖರೀದಿಸಿ ವ್ಯಾಪಾರ ವಹಿವಾಟು ಮಾಡುತ್ತಿದ್ದು, ಮಳೆ ಬಂದಿರುವುದರಿಂದ ಕೊಟ್ಟಿಗೆ ಗೊಬ್ಬರವನ್ನು ಕೃಷಿ ಭೂಮಿಯಲ್ಲಿ ಹೆಚ್ಚಾಗಿ ರೈತರು ಬಳಸಲು ಮುಂದಾಗಿದ್ದಾರೆ.

-ಅಂಜಿನಪ್ಪ, ಕೊಟ್ಟಿಗೆ ಗೊಬ್ಬರ ವ್ಯಾಪಾರಿ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X