Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜ.26ರಿಂದ ಮಡಿಕೇರಿಯಲ್ಲಿ ಫಲಪುಷ್ಪ...

ಜ.26ರಿಂದ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ

ಪಾಡಿ ಇಗ್ಗುತ್ತಪ್ಪ ದೇವಾಲಯದ ಕಲಾಕೃತಿ ಪ್ರಮುಖ ಆಕರ್ಷಣೆ

ಕೆ.ಎಂ ಇಸ್ಮಾಯಿಲ್ ಕಂಡಕರೆಕೆ.ಎಂ ಇಸ್ಮಾಯಿಲ್ ಕಂಡಕರೆ22 Jan 2024 1:48 PM IST
share
ಜ.26ರಿಂದ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ

ಮಡಿಕೇರಿ, ಜ.21: ಭಾರತದ ಸ್ಕಾಟ್‌ಲ್ಯಾಂಡ್, ದಕ್ಷಿಣದ ಕಾಶ್ಮೀರ ಕೊಡಗು ಜಿಲ್ಲೆ ಪ್ರವಾಸಿಗರದ ಸ್ವರ್ಗ ಎಂದೇ ಖ್ಯಾತಿ ಪಡೆದಿದ್ದು, ಮಡಿಕೇರಿಯ ರಾಜಾಸೀಟ್ ಪ್ರವಾಸಿಗರ ಹಾಟ್ ಸ್ಪಾಟ್ ಆಗಿದೆ.

ರಾಜಾಸೀಟ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಎಲ್ಲರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಪ್ರತೀ ವರ್ಷವೂ ಅನೇಕ ವಿಶೇಷತೆಗಳ ನಡುವೆ ಜ.26ರಿಂದ 28ರವರೆಗೆ ಮಡಿಕೇರಿಯಲ್ಲಿ ‘ಫ್ಲವರ್ ಶೋ’ ನಡೆಯಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಅನೇಕ ರೀತಿಯ ಕಲಾಕೃತಿಗಳು ಹೂವಿನಿಂದ ಸೃಷ್ಟಿಯಾಗಲಿವೆ. ಜೊತೆಗೆ ಹಣ್ಣು, ತರಕಾರಿಗಳ ಕೆತ್ತನೆಗಳು ಇರಲಿವೆ.

ತೋಟಗಾರಿಕೆ ಇಲಾಖೆ ಈ ಸಂಬಂಧ ಪೂರ್ವ ಸಿದ್ಧತೆ ಕೈಗೊಳ್ಳುತ್ತಿದ್ದು, ಸುಣ್ಣಬಣ್ಣ ಬಳಿದು ಸಿಂಗರಿಸುವುದರ ಜೊತೆಗೆ 15 ಸಾವಿರ ಹೂ ಗಿಡಗಳನ್ನು ಬೆಳೆಸಿದೆ. ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನವಷ್ಟೇ ಮಡಿಕೇರಿ ಫ್ಲವರ್ ಶೋ ಪ್ರಖ್ಯಾತಿ ಗಳಿಸಿದ್ದು, ಕಳೆದ ವರ್ಷ 30 ಸಾವಿರದಷ್ಟು ಮಂದಿ ವೈಭವವನ್ನು ಕಣ್ತುಂಬಿಕೊಂಡಿದ್ದರು. ಈ ವರ್ಷ ಸಾಲು ಸಾಲು ರಜೆ ಇರುವ ಕಾರಣ 40 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯನ್ನು ಹೊಂದಲಾಗಿದೆ.

25 ಸಾವಿರ ವೈವಿಧ್ಯಮಯ ಹೂ ಬಳಸಿಕೊಂಡು ಜಿಲ್ಲೆಯ ಕಕ್ಕಬ್ಬೆಯಲ್ಲಿರುವ ಪಾಡಿ ಇಗ್ಗುತ್ತಪ್ಪ ದೇವಾಲಯದ ಕಲಾಕೃತಿಯನ್ನು ಈ ಬಾರಿ ರಚಿಸಲಾಗುತ್ತಿದ್ದು, ‘ಫ್ಲವರ್ ಶೋ’ನ ಪ್ರಮುಖ ಆಕರ್ಷಣೆ ಇದಾಗಲಿದೆ. ಸೇವಂತಿಗೆ, ಗುಲಾಬಿ, ಅಸ್ಟರ್ ಜೊತೆಗೆ ಬೇರೆ ಬೇರೆ ಜಾತಿಗಳ ಹೂಗಳನ್ನು ಬಳಸಿ 30 ಅಡಿ ಅಗಲ, 35 ಅಡಿ ಉದ್ದ ಹಾಗೂ 14 ಅಡಿ ಎತ್ತರದ ಬೃಹತ್ ದೇವಾಲಯವನ್ನು ಹೂವಿನಲ್ಲಿ ಸೃಷ್ಟಿಸಲಾಗುತ್ತಿದೆ.

ಗಣರಾಜ್ಯೋತ್ಸವ ಅಂಗವಾಗಿ ಫಿರಂಗಿ, ರಾಷ್ಟ್ರ ಧ್ವಜ ಹಾಗೂ ಸೈನಿಕನ ಕಲಾಕೃತಿ ವಿಶೇಷವಾಗಿ ಮೂಡಿಬರಲಿದ್ದು, ಇದರೊಂದಿಗೆ ಹೃದಯದ ಆಕಾರದಲ್ಲಿ ತ್ರಿವರ್ಣ ಧ್ವಜದ ಫೋಟೊ ಪಾಯಿಂಟ್, ಚಿಟ್ಟೆ, ಬಲೂನ್ ಹಾರುವ, ನೀರು ಹರಿಯುವ ರೀತಿ, ಚೋಟ ಭೀಮ್, ಬಾರ್ಬಿ ಡಾಲ್, ಸ್ಪೆಡರ್ ಮ್ಯಾನ್, ಬ್ಯಾಟ್ ಮ್ಯಾನ್, ಹುಲಿ, ಅಣಬೆಯ ಕಲಾಕೃತಿಗಳನ್ನು ಹೂವಿನಲ್ಲಿ ರಚಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಹಣ್ಣು, ತರಕಾರಿಗಳ ಕೆತ್ತನೆಯನ್ನು ಪ್ರದರ್ಶನಕ್ಕಿಡುತ್ತಾರೆ.

ವಿವಿಧ ಕಾರ್ಯಕ್ರಮ

ಫಲಪುಷ್ಪ ಪ್ರದರ್ಶನದೊಂದಿಗೆ ಹೂವಿನ ಕುಂಡಗಳ ಪ್ರದರ್ಶನ, ವಿವಿಧ ಇಲಾಖೆ ವಸ್ತು ಪ್ರದರ್ಶನ, ಕೃಷಿ ವಸ್ತು ಪ್ರದರ್ಶನ, ಹಣ್ಣು ತರಕಾರಿ ಪ್ರದರ್ಶನ, ಒಣಹೂಗಳ ಜೋಡಣೆ, ಇಕೆಬಾನಾ, ರಂಗೋಲಿ ಸ್ಪರ್ಧೆ ನಡೆಯಲಿದೆ. ಜ.26 ರಂದು ಬೆಳಗ್ಗೆ 8 ಗಂಟೆಗೆ ರಂಗೋಲಿ ಸ್ಪರ್ಧೆ ನಡೆಯಲಿದ್ದು, ಆಸಕ್ತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅಥವಾ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ದೇಶಿಸಿರುವ ಪ್ರದರ್ಶನಗಳು ರಾಜಾಸೀಟ್ ಸಮೀಪದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ಒಟ್ಟು 30 ಲಕ್ಷ ರೂ. ವೆಚ್ಚ ತಗುಲಲಿದ್ದು, ಕಲಾಕೃತಿ ರಚನೆಗೆ ಟೆಂಡರ್ ನೀಡಲಾಗುತ್ತದೆ. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಈ ಬಾರಿ 40 ಸಾವಿರ ಜನ ಆಗಮಿಸುವ ಸಾಧ್ಯತೆ ಇದೆ. ಶಾಲೆಯ ಮೂಲಕ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ ಇರಲಿದ್ದು, ಮಾಮೂಲಿಯಂತೆ ಪ್ರವೇಶ ಶುಲ್ಕ ಹೆಚ್ಚು ಮಾಡುವುದಿಲ್ಲ. 3 ದಿನಗಳು ಕಾರ್ಯಕ್ರಮ ನಡೆಯಲಿದ್ದು, ಹೂ ಬಾಡುವ ತನಕ ಕಲಾಕೃತಿ ಹಾಗೆಯೇ ಇರಲಿದೆ.

- ಎಚ್.ಆರ್.ಯೋಗೇಶ್,

ತೋಟಗಾರಿಕೆ ಇಲಾಖೆ ಉಪನಿರ್ದೇಶಕ

share
ಕೆ.ಎಂ ಇಸ್ಮಾಯಿಲ್ ಕಂಡಕರೆ
ಕೆ.ಎಂ ಇಸ್ಮಾಯಿಲ್ ಕಂಡಕರೆ
Next Story
X