Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಜಯಪುರ ಒಣದ್ರಾಕ್ಷಿಗೆ ಜಿಐ ಟ್ಯಾಗ್...

ವಿಜಯಪುರ ಒಣದ್ರಾಕ್ಷಿಗೆ ಜಿಐ ಟ್ಯಾಗ್ ಸನ್ನಿಹಿತ?

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್16 May 2026 8:40 AM IST
share
ವಿಜಯಪುರ ಒಣದ್ರಾಕ್ಷಿಗೆ ಜಿಐ ಟ್ಯಾಗ್ ಸನ್ನಿಹಿತ?

ವಿಜಯಪುರ: ಇಂಡಿ ಭಾಗದಲ್ಲಿ ಬೆಳೆಯುವ ಲಿಂಬೆಗೆ ಜಿಐ ಟ್ಯಾಗ್ ಈಗಾಗಲೇ ದೊರಕಿದೆ. ಇದೀಗ, ಅನೇಕ ದೇಶಗಳಿಗೆ ರಫ್ತಾಗುತ್ತಿರುವ ಒಣದ್ರಾಕ್ಷಿಗೂ ಜಿಐ ಟ್ಯಾಗ್ ದೊರಕುವ ದಿನಗಳು ದೂರವಿಲ್ಲ. ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾದ ಇಲ್ಲಿನ ಒಣದ್ರಾಕ್ಷಿಗೆ ಜಿಐ ಟ್ಯಾಗ್ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಶರವೇಗದಿಂದ ನಡೆಯುತ್ತಿದ್ದು, ಇದು ರೈತರಿಗೆ ಹೊಸ ಆರ್ಥಿಕ ಬಲ ನೀಡುವ ನಿರೀಕ್ಷೆ ಮೂಡಿಸಿದೆ.

ಅನೇಕ ಉಪ ಉತ್ಪನ್ನಗಳಿಗೆ ‘ಒಣದ್ರಾಕ್ಷಿ’ ಅದರಲ್ಲೂ ವಿಜಯಪುರ ಒಣ ದ್ರಾಕ್ಷಿಯೇ ಆಧಾರವಾಗಿದ್ದು, ಈ ಟ್ಯಾಗ್ ದೊರಕಿದರೆ ಅಂತಾರಾಷ್ಟ್ರೀಯ ಮಾರುಕಟ್ಟೆ ಇನ್ನಷ್ಟೂ ವಿಸ್ತರಣೆಯಾಗಲಿದ್ದು, ಬೆಳೆಗಾರರಲ್ಲಿ ಆನೆ ಬಲ ತರಲಿದೆ.

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಬಿ.ಫಕ್ರುದ್ದೀನ್ ನೇತೃತ್ವದ 9 ಸದಸ್ಯರ ಸಮಿತಿಯು ವಿಜಯಪುರದ ಒಣದ್ರಾಕ್ಷಿಗೆ ಜಿಐ ಟ್ಯಾಗ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ದ್ರಾಕ್ಷಿಯನ್ನು ವಿಜಯಪುರ ಜಿಲ್ಲೆಯಲ್ಲಿ ಬೆಳೆಯಾಗುತ್ತಿದೆ. ಜಿಲ್ಲಾದ್ಯಂತ 17 ಸಾವಿರ ಹೆಕ್ಟೇರ್‌ನಲ್ಲಿ ದ್ರಾಕ್ಷಿ ಬೆಳೆ ಇದೆ. ವಾರ್ಷಿಕವಾಗಿ 5 ಲಕ್ಷ ಟನ್‌ಗಿಂತ ಹೆಚ್ಚು ಒಣದ್ರಾಕ್ಷಿ ಉತ್ಪಾದನೆಯಾಗುತ್ತಿದೆ. ಜಿಐ ಟ್ಯಾಗ್ ಸಿಕ್ಕರೆ ವಿಜಯಪುರ ದ್ರಾಕ್ಷಿಗೆ ಜಾಗತಿಕ ಮಾರುಕಟ್ಟೆ ಸಂಪರ್ಕ ಇನ್ನಷ್ಟು ವಿಸ್ತಾರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸವಣೂರಿನ ವೀಳದ್ಯೆಲೆ, ಕುಮುಟಾದ ಈರುಳ್ಳಿ, ತೆಂಗು, ತಿಪಟೂರಿನ ತೆಂಗು, ಕೊಬ್ಬರಿ, ಗೌರಿಬಿದನೂರಿನ ಮೆಣಸಿನಕಾಯಿ ಸೇರಿದಂತೆ 23 ಬೆಳೆಗಳಿಗೆ ಜಿಐ ಟ್ಯಾಗ್ ಕೊಡಿಸುವ ಪ್ರಯತ್ನ ನಡೆದಿದೆ. ಇದರ ಜೊತೆಗೆ ಈ ಒಣದ್ರಾಕ್ಷಿಗೂ ಸಹ ಟ್ಯಾಗ್ ದೊರಕುವ ದಟ್ಟ ಸಾಧ್ಯತೆ ಇದೆ.

ಹಣ್ಣು ವಿಜ್ಞಾನ, ಅರ್ಥಶಾಸ್ತ್ರ, ಮಾರುಕಟ್ಟೆ, ಜೀವ ರಸಾಯನ ಶಾಸ್ತ್ರ, ತಳಿಶಾಸ್ತ್ರ, ತೋಟಗಾರಿಕೆ ತಜ್ಞರನ್ನೊಳಗೊಂಡ ಸಮಿತಿಯು ಜಿಐ ಟ್ಯಾಗ್ ಪ್ರಸ್ತಾವಸಿದ್ಧಪಡಿಸಲು ಕಳೆದ 6 ತಿಂಗಳಿಂದ ವಿಜಯಪುರದ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಮೇಲೆ ಅಧ್ಯಯನ ಕೈಗೊಂಡಿದೆ. ಈ ಭಾಗದ ದ್ರಾಕ್ಷಿಯು ವೈಜ್ಞಾನಿಕವಾಗಿ ಹಾಗೂ ಐತಿಹಾಸಿಕವಾಗಿ ಇತರೆ ಭಾಗದ ದ್ರಾಕ್ಷಿಗಿಂತ ವಿಭಿನ್ನ, ವಿಶೇಷತೆ ಹೊಂದಿದೆ ಎಂಬುದರ ಬಗ್ಗೆ ದಾಖಲೆ ಸಮೇತ ಮಾಹಿತಿ ಕಲೆಹಾಕುತ್ತಿದೆ.

ವಿಜಯಪುರ ದ್ರಾಕ್ಷಿಯು ಇತರೆ ಭಾಗದ ದ್ರಾಕ್ಷಿಗಿಂತ ವಿಶೇಷತೆ ಹೊಂದಿದ್ದರ ಬಗ್ಗೆ ತಾಂತ್ರಿಕವಾಗಿ ಹಾಗೂ ಐತಿಹಾಸಿಕ ದಾಖಲೆ ಒದಗಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ತಂಡವು ರೈತರಿಂದ ಮಾಹಿತಿ ಸಂಗ್ರಹ ಹಾಗೂ ಈ ಭಾಗದಲ್ಲಿ ದ್ರಾಕ್ಷಿ ಬೆಳೆ ಹೇಗೆ ಅಭಿವೃದ್ಧಿ ಹೊಂದಿದೆ ಎಂಬುದರ ಬಗ್ಗೆ ಐತಿಹಾಸಿಕ ದಾಖಲೆಗಳನ್ನು ಹುಡುಕುತ್ತಿದೆ ಎಂದು ಸಮಿತಿಯ ಮುಖ್ಯಸ್ಥ ಡಾ.ಫಕ್ರುದ್ದೀನ್ ತಿಳಿಸಿದರು.

ಒಣದ್ರಾಕ್ಷಿಯಲ್ಲಿನ ಪೌಷ್ಟಿಕಾಂಶ ಹಾಗೂ ಅದರಲ್ಲಿ ಉಳಿದುಕೊಳ್ಳುವ ರಾಸಾಯನಿಕ ಅಂಶದ ಬಗ್ಗೆ ಪರೀಕ್ಷೆ ಆಗಬೇಕಿದೆ. ಇದು ಮಧ್ಯಪ್ರಾಚ್ಯ, ಯುರೋಪ್ ಹಾಗೂ ಉತ್ತರ ಅಮೆರಿಕ ರಾಷ್ಟ್ರಗಳಿಗೆ ರಫ್ತು ಮಾಡಲು ಸಹಕಾರಿಯಾಗಲಿದೆ. ಗುಣಮಟ್ಟದ ದ್ರಾಕ್ಷಿ ಉತ್ಪಾದನೆಗೆ ಆಗಾಗ ಮಣ್ಣು ಪರೀಕ್ಷೆ ನಡೆಸಲಾಗುತ್ತಿದೆ. ತೋಟಗಾರಿಕೆ ವಿವಿ, ಸರಕಾರಿ ಸಂಸ್ಥೆಗಳು ಹಾಗೂ ರೈತ ಉತ್ಪಾದಕ ಕಂಪನಿಗಳ ಸಹಯೋಗದಲ್ಲಿ ಸಾವಯವ ದ್ರಾಕ್ಷಿ ಬೆಳೆಯಲು ರೈತರಿಗೆ ಜಾಗೃತಿ ಮೂಡಿಸುವ ಕಾರ್ಯ ಪ್ರಗತಿಯಲ್ಲಿದೆ.

ವಿಜಯಪುರದ ದ್ರಾಕ್ಷಿ ಹಾಗೂ ಒಣದ್ರಾಕ್ಷಿಗೆ ಜಿಐ ಟ್ಯಾಗ್ ಪಡೆದುಕೊಳ್ಳಲು ತಜ್ಞರ ಸಮಿತಿಯಿಂದ ಅಧ್ಯಯನ, ತಾಂತ್ರಿಕ ಹಾಗೂ ಐತಿಹಾಸಿಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರಸ್ತಾವನೆಗೆ ಸಿದ್ಧತೆ ಕೈಗೊಳ್ಳಲಾಗಿದೆ.

-ಡಾ.ಬಿ.ಫಕ್ರುದ್ದೀನ್, ಸಂಶೋಧನಾ ನಿರ್ದೇಶಕತೋಟಗಾರಿಕೆ ವಿವಿ


Tags

Vijayapura
share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X