Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಾಲ್ನೊರೆಯಂತೆ ಭೋರ್ಗರೆಯುವ ಕಾರವಾರದ...

ಹಾಲ್ನೊರೆಯಂತೆ ಭೋರ್ಗರೆಯುವ ಕಾರವಾರದ ಗೋಲಾರಿ ಫಾಲ್ಸ್

ಶ್ರೀನಿವಾಸ ಬಾಡ್ಕರ್ಶ್ರೀನಿವಾಸ ಬಾಡ್ಕರ್9 Jun 2025 11:46 AM IST
share
ಹಾಲ್ನೊರೆಯಂತೆ ಭೋರ್ಗರೆಯುವ ಕಾರವಾರದ ಗೋಲಾರಿ ಫಾಲ್ಸ್

ಕಾರವಾರ: ಕಾರವಾರ ತಾಲೂಕೊಂದರಲ್ಲೇ ಸುಮಾರು 20ಕ್ಕೂ ಹೆಚ್ಚು ಫಾಲ್ಸ್‌ಗಳಿದ್ದು ತೋಡೂರಿನ ಗೋಲಾರಿ ಫಾಲ್ಸ್ ಜನರನ್ನು ಆಕರ್ಷಿಸುವ ಜಲಧಾರೆಗಳಲ್ಲಿ ಒಂದಾಗಿದೆ.

ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ತವರೂರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಳೆಗಾಲದಲ್ಲಿ ಹುಟ್ಟುವ ಅದೆಷ್ಟೋ ಜಲಪಾತಗಳು ಇನ್ನೂ ಬೆಳಕಿಗೆ ಬಂದಿಲ್ಲ. ದಟ್ಟ ಅರಣ್ಯ ಪ್ರದೇಶದಲ್ಲಿ ಇರುವ ಜಲಪಾತಗಳ ಬಳಿ ಜನ ತಲುಪಲಾಗದ ಸ್ಥಿತಿಯಲ್ಲೂ ಇವೆ. ದೂರದ ಬೆಟ್ಟದಲ್ಲಿ ಹಾಲಿನ ನೊರೆಯಂತೆ ಧುಮುಕುವ ಗೋಲಾರಿ ಜಲಪಾತವನ್ನು ಕಂಡು ಚಾರಣಿಗರು ಸ್ಥಳಕ್ಕೆ ತೆರಳಿ ಖುಷಿಪಡುತ್ತಿದ್ದಾರೆ.

ಕಾರವಾರದಿಂದ ಕೇವಲ 17 ಕಿ.ಮೀ. ದೂರದಲ್ಲಿರುವ ತೋಡೂರ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಗೋಲಾರಿ ಫಾಲ್ಸ್‌ಗೆ ತೆರಳಬೇಕಾದರೆ ಗ್ರಾಮದಿಂದ ಸುಮಾರು ನಾಲ್ಕು ಕಿ.ಮೀ. ವಾಹನಗಳ ಮೂಲಕ ಸಾಗಬೇಕು. ಸರಿಸುಮಾರು ಎರಡು ಕಿ.ಮೀ. ಅರಣ್ಯ ಪ್ರದೇಶದಲ್ಲಿ ನಡೆದು ಸಾಗಬೇಕು.

ಕಾನನದ ಮಧ್ಯದಿಂದ ಕಲ್ಲು ಬಂಡೆಗಳನ್ನು ಹತ್ತಿ, ಹಳ್ಳಗಳನ್ನು ದಾಟುತ್ತಾ, ಗಿಡ ಗಂಟಿಗಳ ಮೂಲಕ ನುಸುಳುತ್ತಾ ಸಾಗಿ ಜಲಪಾತದ ಬಳಿ ತಲುಪಿದಾಗ ಯಾವುದೋ ಒಂದು ರೀತಿಯ ರೋಮಾಂಚನದ ಅನುಭವ ನೀಡುತ್ತದೆ. ಗೋಲಾರಿ ಜಲಪಾತ ಕಂಡ ಜನ ಮೈ ಮರೆತು ಜಲ ಕ್ರೀಡೆಯಲ್ಲಿ ಮಗ್ನರಾಗುವುದು ಸಾಮಾನ್ಯ. ಮುಂಜಾನೆ ಇಲ್ಲಿಗೆ ಬರುವ ಫಾಲ್ಸ್ ಹಾಗೂ ಚಾರಣ ಪ್ರಿಯರು ಊಟ ತಿಂಡಿ ತಂದು ಫಾಲ್ಸ್‌ನ ಸೌಂದರ್ಯವನ್ನು ಸವಿಯುತ್ತಾರೆ. ಉಕ್ಕಿ ಹರಿಯುವ ಗೋಲಾರಿ ಫಾಲ್ಸ್ ನೋಡಲು ದೂರದ ಪ್ರದೇಶಗಳಿಂದಲೂ ಜನರು ಆಗಮಿಸುತ್ತಾರೆ.

ಅರಣ್ಯದಿಂದ ಧುಮುಕುವ ಗೋಲಾರಿ ಫಾಲ್ಸ್‌ನಲ್ಲಿ ಮಳೆಗಾಲ, ಚಳಿಗಾಲ ಸೇರಿದಂತೆ ಬೇಸಿಗೆಯ ಕೊನೆವರೆಗೂ ನೀರು ಇರುತ್ತದೆ. ಮಳೆಗಾಲದ ಸಂದರ್ಭದಲ್ಲಿ ಬೆಟ್ಟದ ತುದಿಯಿಂದ ಹಾಲ್ನೊರೆಯಂತೆ ಧುಮ್ಮಿಕ್ಕುವ ಗೋಲಾರಿ ಜಲಪಾತದ ಬಳಿ ಜನ ಜಾತ್ರೆಯೇ ಸೇರುತ್ತದೆ. ಇದು ದಟ್ಟ ಅರಣ್ಯ ಪ್ರದೇಶದಲ್ಲಿದ್ದರೂ ಪ್ರವಾಸಿಗರು, ಚಾರಣ ಪ್ರಿಯರ ಪಾಲಿಗೆ ಉತ್ತಮ ಸ್ಥಳವಾಗಿದೆ.

ಗೋಲಾರಿಯ ಮೇಲ್ಭಾಗದಲ್ಲೂ ಅತ್ಯಾಕರ್ಷಕ ಜಲಪಾತಗಳಿವೆ. ಆದರೆ ಮೇಲಿನ ಜಲಪಾತಗಳನ್ನು ವೀಕ್ಷಣೆ ಮಾಡಬೇಕು ಎಂದು ಜಾರುವ ಕಲ್ಲುಬಂಡೆಗಳನ್ನು ಹಿಡಿದು ಹತ್ತಿದರೆ ಅನೇಕ ಜಲಪಾತಗಳನ್ನು ನೋಡಬಹುದಾಗಿದೆ. ಗೋಲಾರಿ ಫಾಲ್ಸ್ ವೀಕ್ಷಣೆಗೆ ಎಷ್ಟು ಸೌಂದರ್ಯವೋ ಅಷ್ಟೇ ಅಪಾಯಕಾರಿ. ಬಂಡೆಕಲ್ಲುಗಳ ಮೇಲೆ ಹತ್ತಿಳಿಯುವಾಗ ಹೆಚ್ಚಿ ನ ಜಾಗೃತೆವಹಿಸದಿದ್ದರೆ ಅಪಾಯ ಖಚಿತ.

ಫಾಲ್ಸ್‌ಗೆ ತೆರಳಲು ನಿರ್ಬಂಧ :

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ ತಿಂಗಳ ಆರಂಭದಿಂದಲೇ ಅತಿ ಹೆಚ್ಚು ಮಳೆಯಾಗಿದೆ. ಇದರಿಂದ ಇಲ್ಲಿನ ಫಾಲ್ಸ್‌ಗಳು ಅಪಾಯದ ಅಂಚಿಗೆ ತಲುಪುತ್ತಿವೆ. ಈ ಕಾರಣದಿಂದ ಜಿಲ್ಲಾಡಳಿತ ಜಿಲ್ಲೆಯ ಯಾವುದೇ ಜಲಪಾತ, ಕಡಲತೀರಕ್ಕೆ ಪ್ರವಾಸಿಗರು ತೆರಳುವುದನ್ನು ನಿರ್ಬಂಧ ವಿಧಿಸಿದೆ.

share
ಶ್ರೀನಿವಾಸ ಬಾಡ್ಕರ್
ಶ್ರೀನಿವಾಸ ಬಾಡ್ಕರ್
Next Story
X