Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದ.ಕ.-ಉಡುಪಿಗೆ ಸರಕಾರಿ ಮೆಡಿಕಲ್ ಕಾಲೇಜು...

ದ.ಕ.-ಉಡುಪಿಗೆ ಸರಕಾರಿ ಮೆಡಿಕಲ್ ಕಾಲೇಜು ತಡೆಯುತ್ತಿರುವ ಶಕ್ತಿ ಯಾವುದು?

ರಿಯಾಝ್ ಪುತ್ತೂರುರಿಯಾಝ್ ಪುತ್ತೂರು8 Oct 2024 12:40 PM IST
share
ದ.ಕ.-ಉಡುಪಿಗೆ ಸರಕಾರಿ ಮೆಡಿಕಲ್ ಕಾಲೇಜು ತಡೆಯುತ್ತಿರುವ ಶಕ್ತಿ ಯಾವುದು?

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು ಬೇಕು ಎಂಬುದು ಬಹು ವರ್ಷಗಳಿಂದ ಕೇಳಿಬರುತ್ತಿರುವ ಬೇಡಿಕೆ. ಜಿಲ್ಲೆಯಲ್ಲೊಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾದರೆ ವೈದ್ಯಕೀಯ ಶಿಕ್ಷಣ ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಲಭವಾಗಿ ಕೈಗೆಟುಕಲಿದೆ ಎನ್ನುವುದು ಹಲವರ ಆಶಯ.

ವಿದ್ಯಾರ್ಥಿಗಳ ಹಾಗೂ ಬಡ ರೋಗಿಗಳ ಅನುಕೂಲಕ್ಕಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಕೆಂಬ ಬಲವಾದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ.

ಈ ಆಗ್ರಹದೊಂದಿಗೆ ಹಲವಾರು ಸಂಘ ಸಂಸ್ಥೆಗಳು ಭಿತ್ತಿಪತ್ರ ಪ್ರದರ್ಶನ, ಸಾಮಾಜಿಕ ಜಾಲತಾಣಗಳ ಮೂಲಕ ಜಾಗ್ರತಿ, ಗ್ರಾಮ ಮಟ್ಟದ ಸಭೆಯಲ್ಲಿ ನಿರ್ಣಯದಂತಹ ನಡೆಗಳ ಮೂಲಕ ಸರ್ಕಾರವನ್ನು ಎಚ್ಚರಿಸುವ, ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.

ಕರ್ನಾಟಕ ರಾಜ್ಯದ 22 ಜಿಲ್ಲೆಯಲ್ಲಿ ಈಗಾಗಲೇ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ,ಕೋಲಾರ, ಬಾಗಲಕೋಟೆ,ವಿಜಯಪುರ,ರಾಮನಗರ,ತುಮಕೂರು, ಬೆಂಗಳೂರು ಗ್ರಾಮಾಂತರ, ವಿಜಯನಗರ ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಇನ್ನೂ ಸ್ಥಾಪನೆಯಾಗಿಲ್ಲ.

ಪ್ರತಿಬಾರಿಯೂ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡುವ, ರಾಜ್ಯಕ್ಕೆ ಪ್ರಥಮ ಅಥವಾ ದ್ವಿತೀಯ ಸ್ಥಾನಿಯಾಗಿ ಗುರುತಿಸಿಕೊಳ್ಳುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ಜಿಲ್ಲೆಯ ಜನರಿಗೆ ಆಡಳಿತ ನಡೆಸುವ ಸರ್ಕಾರಗಳು ಮಾಡಿರುವ ಮಹಾ ದ್ರೋಹವಾಗಿದೆ. ಖಾಸಗಿ ಮೆಡಿಕಲ್ ಮಾಫಿಯಾ ಹಾಗೂ ರಾಜಕಾರಣಿಗಳ ಹಸ್ತಕ್ಷೇಪ ದಕ್ಷಿಣ ಕನ್ನಡದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗದಂತೆ ತಡೆಯುತ್ತಿದೆ ಎನ್ನುವುದು ಇಲ್ಲಿನ ಜನಸಾಮಾನ್ಯರ ಆರೋಪವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದೆಷ್ಟೋ ಖಾಸಗಿ ಮೆಡಿಕಲ್ ಕಾಲೇಜುಗಳಿವೆ, ಆದರೆ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ? ನಮ್ಮ ಜಿಲ್ಲೆಯ ರಾಜಕಾರಣಿಗಳು ಇದರ ಬಗ್ಗೆ ಪ್ರಾಮಾಣಿಕ ಪ್ರಯತ್ನ ಯಾಕೆ ಮಾಡುತ್ತಿಲ್ಲ? ಇವರ ಲಗಾಮು ಖಾಸಗಿ ಮೆಡಿಕಲ್ ಕಾಲೇಜುಗಳ ಕಯ್ಯಲ್ಲಿ ಇದೆಯೇ ? ಇವರಿಂದಲೇ ಡೊನೇಶನ್ ಪಡೆದು ಇವರ ರಾಜಕೀಯ ನಡೆಸುತ್ತಿದ್ದಾರೆಯೇ ? ಎಂಬುದು ಜನರ ಪ್ರಶ್ನೆಯಾಗಿದೆ.

2024-25ನೇ ಸಾಲಿಗೆ 113 ಹೊಸ ಪದವಿಪೂರ್ವ ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅನುಮೋದನೆ ನೀಡಿದೆ.ಎನ್‌ಎಂಸಿ ಅನುಮೋದನೆ ನೀಡಿರುವ ಪಟ್ಟಿಯಲ್ಲಿ ಕರ್ನಾಟಕಕ್ಕೆ ೩ ಹೆಚ್ಚುವರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಬೆಂಗಳೂರು ಉತ್ತರ ವ್ಯಾಪ್ತಿಯ ಬಿಜಿಎಸ್​​ ವೈದ್ಯಕೀಯ ಕಾಲೇಜು, ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ & ರಿಸರ್ಚ್ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ನೀಡಿದೆ.

ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಚಾರವಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕರಿಸಿದೆ. ಆದರೆ ಕನಕಪುರಕ್ಕೆ ಸರಕಾರಿ ಮೆಡಿಕಲ್ ಕಾಲೇಜು ಬೇಕೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಕುರಿತು ಸಭೆ ನಡೆಸಿದ್ದಾರೆ.

"ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ಎನ್ಎಂಸಿಯಿಂದ ಅರ್ಜಿ ತಿರಸ್ಕರಿಸಲಾಗಿತ್ತು. ಹೀಗಾಗಿ ಮೂಲಸೌಕರ್ಯ ಹೆಚ್ಚಿಸಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಮನಗರದಲ್ಲಿನ ಕಟ್ಟಡ ಕಾಮಗಾರಿಗೆ ₹600 ಕೋಟಿ ಬಿಡುಗಡೆಯಾಗಿದ್ದು, ಕೆಲಸ ಭರದಿಂದ ಸಾಗುತ್ತಿದೆ." ಎಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರ 2023ರ ಬಜೆಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷೇತ್ರ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿರ್ಧಾರವನ್ನು ಮಾಡಿತ್ತು ಎಂಬುದನ್ನೂ ಇಲ್ಲಿ ಗಮನಿಸಬೇಕಿದೆ.

ಆದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಸಕರು, ಸಂಸದರು ಹಾಗು ರಾಜಕಾರಣಿಗಳು ಏನು ಮಾಡುತ್ತಿದ್ದಾರೆ? ಜಿಲ್ಲೆಯನ್ನು ಖಾಸಗಿ ಮೆಡಿಕಲ್ ಕಾಲೇಜುಗಳ ಸುಪರ್ದಿಗೆ ಬಿಟ್ಟುಕೊಟ್ಟಿದ್ದಾರೆಯೇ ? ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅವಕಾಶ ನಿರಾಕರಿಸಿ, ಮೆಡಿಕಲ್ ಮಾಫಿಯಾದ ಲಾಭ ಪಡೆಯುತ್ತಿರುವ ಕಾಣದ ಕೈಗಳು ಯಾವುದು ? ಇವೆಲ್ಲವೂ ಜಿಲ್ಲೆಯ ಜನರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

ಇನ್ನು ಜಿಲ್ಲೆಯ ಖಾಸಗಿ ಮೆಡಿಕಲ್ ಕಾಲೇಜುಗಳು ಫೀಸ್ ಹೆಸರಲ್ಲಿ ಹಗಲು ದರೋಡೆ ನಡೆಸುತ್ತಿರುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ವೈದ್ಯಕೀಯ ಸೀಟು ಪಡೆಯಲು ಲಕ್ಷಗಟ್ಟಲೆ ಹಣವನ್ನು ಖಾಸಗಿ ಕುಲಗಳ ಜೇಬಿಗೆ ಸುರಿಯಬೇಕಿದೆ. ಮಧ್ಯವರ್ತಿಗಳ ಮೂಲಕ ಹಣದ ಬೇಡಿಕೆ ಇಟ್ಟು ಜನರನ್ನು ದೋಚುವ ದಂದೆಯೂ ಎಗ್ಗಿಲ್ಲದೆ ನಡೆಯುತ್ತಿದೆ. ಉಳ್ಳವರಿಗೆ ಮಾತ್ರ ಮೆಡಿಕಲ್ ಸೀಟು , ಬಡವರಿಗಿಲ್ಲ ಎನ್ನುವುದು ಇವರ ಪಾಲಿಸಿಯಾಗಿ ಬಿಟ್ಟಿದೆ.

ಮೆಡಿಕಲ್ ಮಾಫಿಯಾದ ಇನ್ನೊಂದು ಕರಾಳ ಮುಖ ಜನರನ್ನು ಲೂಟಿ ಮಾಡುವ ಖಾಸಗಿ ಆಸ್ಪತ್ರೆಗಳು. ಪ್ರತಿನಿತ್ಯ ಈ ರೀತಿಯ ಘಟನೆಗಳು ನಡೆಯುತ್ತಾದರೂ, ಕೆಲವೊಂದು ಸುದ್ದಿಗಳಾಗಿ ಜನರ ಮಧ್ಯೆ ಚರ್ಚೆ ನಡೆಯುತ್ತದೆ. ಇಂತಹ ಹಲವು ಘಟನೆಗಳನ್ನು ಮಾಧ್ಯಮಗಳು ವರದಿ ಮಾಡಿವೆ.

ಮಂಗಳೂರು ನಗರದ ಆಸ್ಪತ್ರೆಯೊಂದಕ್ಕೆ ಜ್ವರದ ತಪಾಸಣೆಗೆಂದು 4 ತಿಂಗಳ ಮಗುವನ್ನು ಕರೆದುಕೊಂಡು ಹೋಗಿದ್ದು, ವೈದ್ಯರು ಥೈರಾಯ್ಡ್ ತಪಾಸಣೆಗೆ ಶಿಫಾರಸು ಮಾಡಿದ್ದರು. ಲ್ಯಾಬ್ ಸಿಬ್ಬಂದಿ ತಪಾಸಣೆ ನಡೆಸಿ ಥೈರಾಯ್ಡ್ ಪಾಸಿಟಿವ್ ವರದಿ ನೀಡುತ್ತಾರೆ. ಬಳಿಕ ವೈದ್ಯರು ಮಗುವಿಗೆ ಮೂರು ವರ್ಷ ಟ್ಯಾಬ್ಲೆಟ್ ತೆಗೆದುಕೊಳ್ಳಬೇಕು ಎಂದು ಚೀಟಿ(ಪ್ರಿಸ್ಕ್ರಿಪ್ಪನ್) ಬರೆದು ಕೊಡುತ್ತಾರೆ. ಇದರಿಂದ ಗಾಬರಿಗೊಂಡ ಪೋಷಕರು ಮತ್ತೊಂದು ಆಸ್ಪತ್ರೆಗೆ ಹೋಗಿ ಮಗುವನ್ನು ಪರೀಕ್ಷಿಸಿದಾಗ ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ನಾರ್ಮಲ್ ಆಗಿದೆ ಎಂದು ವರದಿ ನೀಡಿದ್ದ ಘಟನೆ ಸುದ್ದಿಯಾಗಿತ್ತು.

ಇದೇ ರೀತಿ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. 65 ವರ್ಷದ ವ್ಯಕ್ತಿಯೊಬ್ಬರನ್ನು ಪರೀಕ್ಷಿಸಿದ ಡ್ಯೂಟಿ ಡಾಕ್ಟರ್, ನರ್ಸ್ ಹಿರಿಯ ವ್ಯಕ್ತಿಗೆ ಹೃದಯಾಘಾತವಾಗಿದೆ ಅಂಜಿಯೋಗ್ರಾಂ ಮಾಡಬೇಕೆಂದು ಸಲಹೆ ನೀಡಿದ್ದರು. ಮರುದಿನ ರೋಗಿ ಸ್ವಲ್ಪ ಚೇತರಿಕೆ ಕಂಡಾಗ ರೋಗಿಯ ಬಂಧುಗಳು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿಸಿ, ವೈದ್ಯರೊಬ್ಬರ ಕ್ಲಿನಿಕ್‌ಗೆ ಕರೆದೊಯ್ಯುತ್ತಾರೆ. ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತವಾದ ಲಕ್ಷಣ ಕಾಣುತ್ತಿಲ್ಲ ಎಂದು ಹೇಳಿ ಮಾತ್ರೆ ಬರೆದುಕೊಡುತ್ತಾರೆ. ಒಂದೆರಡು ದಿನದಲ್ಲಿ ರೋಗಿಯ ಆರೋಗ್ಯ ಮತ್ತೆ ಹಿಂದಿನ ಸ್ಥಿತಿಗೆ ತಲುಪುತ್ತದೆ.

ಇಂತಹ ಘಟನೆಗಳನ್ನು ಜನರಲ್ಲಿ ಭಯವನ್ನು ಹುಟ್ಟಿಸಿದೆ. ಹೀಗೆ ಎಗ್ಗಿಲ್ಲದಂತೆ ಪ್ರತಿದಿನ, ಪ್ರತಿಕ್ಷಣ ಬಡ ಜನರನ್ನು ಲೂಟಿ ಮಾಡುವ ಖಾಸಗಿ ಮೆಡಿಕಲ್ ಆಸ್ಪತ್ರೆಗಳ ಮಾಫಿಯಾದ ಜಾಲ ವ್ಯಾಪಕವಾಗಿ ಹರಡಿದೆ. ಹೀಗಾಗಿ ಜಿಲ್ಲೆಯಲ್ಲೊಂದು ಸರ್ಕಾರಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ನಿರ್ಮಾಣ ಅಗತ್ಯ ಎನ್ನುವುದು ಜನರ ಆಗ್ರಹವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಕಾರಿ ಕಾಲೇಜು ಅಭಿಯಾನ ರಾಜಕೀಯವಾಗಿಯೂ ಸದ್ದು ಮಾಡಿದೆ. ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಉತ್ತರಿಸಿದ್ದು,

"ಸದ್ಯ 22 ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಿದೆ. ಹಣಕಾಸು ಇಲಾಖೆ ಅನುಮತಿ ಸಿಕ್ಕಿದರೆ ಹಂತ ಹಂತವಾಗಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ‌" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಉತ್ತರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡಕ್ಕೆ ಪುತ್ತೂರಿನಲ್ಲಿ ಹಾಗೂ ಉಡುಪಿಗೆ ಕುಂದಾಪುರ ಅಥವಾ ಬೈಂದೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಮಾತನ್ನು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಂಗಳೂರು, ಉಡುಪಿಯ ಜನರಿಗೆ ನನ್ನದೊಂದು ಕಳಕಳಿಯ ವಿನಂತಿ. ಪ್ರತಿಯೊಬ್ಬರೂ ನಿಮ್ಮ ನಿಮ್ಮ ರಾಜಕೀಯ ನಾಯಕರನ್ನು ಅಭಿವೃದ್ಧಿಯ ವಿಚಾರದಲ್ಲಿ ಪ್ರಶ್ನೆ ಮಾಡಿ. ಜಾತಿ, ಧರ್ಮ, ಪಕ್ಷ ಬದಿಗಿಟ್ಟು ಸರ್ಕಾರೀ ಮೆಡಿಕಲ್ ಕಾಲೇಜಿಗಾಗಿ ಪ್ರತಿಯೊಬ್ಬರೂ ಧ್ವನಿ ಎತ್ತಬೇಕಾದ ಅಗತ್ಯವಿದೆ. ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಇಂಜಿನಿಯರಿಂಗ್ ಕಾಲೇಜು ನಮ್ಮ ಮೊದಲ ಅಧ್ಯತೆಯಾಗಲಿ.

share
ರಿಯಾಝ್ ಪುತ್ತೂರು
ರಿಯಾಝ್ ಪುತ್ತೂರು
Next Story
X