Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚಾಮರಾಜನಗರದಲ್ಲಿ ಹಾರ್ನ್ ಬಿಲ್ ಹಾರಾಟ

ಚಾಮರಾಜನಗರದಲ್ಲಿ ಹಾರ್ನ್ ಬಿಲ್ ಹಾರಾಟ

ಪಶ್ಚಿಮ ಘಟ್ಟದಲ್ಲಿ ಕಂಡು ಬರುವ ಅಪರೂಪದ ಪಕ್ಷಿ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್27 May 2024 12:12 PM IST
share
ಚಾಮರಾಜನಗರದಲ್ಲಿ ಹಾರ್ನ್ ಬಿಲ್ ಹಾರಾಟ

ಚಾಮರಾಜನಗರ: ಜಿಲ್ಲೆಯ ಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಪರೂಪದ ಪಕ್ಷಿಯೊಂದು ಕಾಣಿಸಿದೆ. ಅಳಿವಿನಂಚಿನಲ್ಲಿರುವ ಪ್ರಬೇಧವೆಂದು ಗುರುತಿಸಿರುವ ಮಂಗಟ್ಟೆ(ಹಾರ್ನ್ ಬಿಲ್) ಕೆ.ಗುಡಿ ವಲಯದಲ್ಲಿ ಪತ್ತೆಯಾಗಿದೆ.

ಕೆಲವು ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ಪ್ರವಾಸಿಗರೊಬ್ಬರು ಮರದ ಮೇಲೆ ಕುಳಿತಿದ್ದ ಹಾರ್ನ್‌ಬಿಲ್ ಪೋಟೋವನ್ನು ಸೆರೆ ಹಿಡಿದ್ದಾರೆ. ಅರಣ್ಯಾಧಿಕಾರಿಗಳು ಇದನ್ನು ಗ್ರೇಟ್ ಇಂಡಿಯನ್ ಹಾರ್ನ್‌ಬಿಲ್ ಎಂದು ಗುರುತಿಸಿದ್ದಾರೆ. ಈ ಅರಣ್ಯದಲ್ಲಿ ಎರಡೋ-ಮೂರೋ ಹಾರ್ನ್ ಬಿಲ್ ಪಕ್ಷಿಗಳು ಇವೆ ಎನ್ನಲಾಗುತ್ತಿದ್ದು, ಅಪರೂಪಕ್ಕೊಮ್ಮೆ ಕಾಣಿಸುತ್ತವೆ ಎಂದಿದ್ದಾರೆ.

ವಿಶ್ವದಾದ್ಯಂತ ಸುಮಾರು 53 ವಿವಿಧ ರೀತಿಯ ಹಾರ್ನ್‌ಬಿಲ್‌ಗಳಿವೆ. ಭಾರತವು ಅಂದಾಜು 9 ಜಾತಿಯ ಹಾರ್ನ್‌ಬಿಲ್‌ಗಳ ನೆಲೆಯಾಗಿದೆ. ಕಾಳಿ ನದಿಯ ದಡದಲ್ಲಿರುವ ದಾಂಡೇಲಿಯಲ್ಲಿ ಮಲಬಾರ ಗ್ರೇ ಹಾರ್ನ್ ಬಿಲ್, ಇಂಡಿಯನ್ ಗ್ರೇ ಹಾರ್ನ್ ಬಿಲ್, ಮಲಬಾರ್ ಪೈಡ್ ಹಾರ್ನ್‌ಬಿಲ್ ಮತ್ತು ಗ್ರೇಟ್ ಇಂಡಿಯನ್ ಹಾರ್ನ್‌ಬಿಲ್ ಎಂಬ 4 ಬಗೆಯ ಹಾರ್ನ್‌ಬಿಲ್‌ಗಳು ಕಂಡುಬರುತ್ತವೆ. ಕೆಲ ತಿಂಗಳ ಹಿಂದೆ ದಾಂಡೇಲಿಯಲ್ಲಿ ಹಾರ್ನ್‌ಬಿಲ್ ಫೆಸ್ಟ್ ಆಯೋಜನೆ ಮಾಡಲಾಗಿತ್ತು.

ಪಕ್ಷಿಗಳ ಸ್ವರ್ಗ ಬಿಆರ್‌ಟಿ: ಜೀವವೈವಿಧ್ಯತೆಗೆ ಸಾಕ್ಷಿಯಾಗಿರುವ ಬಿಆರ್‌ಟಿ ಕೇವಲ ಹುಲಿಯ ಆವಾಸ ಸ್ಥಾನ ಮಾತ್ರವಲ್ಲ ಪಕ್ಷಿಗಳ ಪಾಲಿನ ಸ್ವರ್ಗವೂ ಹೌದು.

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಪೂರ್ವ ಮತ್ತು ಪಶ್ಚಿಮ ಘಟ್ಟಗಳನ್ನು ಸಂದಿಸುತ್ತದೆ. ವಿವಿಧ ಬಗೆಯ ಸಸ್ಯ ಪ್ರಬೇಧಗಳು, ಔಷಧ ಸಸ್ಯಗಳು, ಸಸ್ತನಿಗಳು, ಸರೀಸೃಪಗಳು, ಬಗೆಬಗೆಯ ಚಿಟ್ಟೆಗಳು, 270ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳಿವೆ. ಅಳಿವಿನಂಚಿನಲ್ಲಿರುವ ಪಕ್ಷಿಗಳು ಇಲ್ಲಿ ಆಗಾಗ ಪತ್ತೆಯಾಗುತ್ತಲೇ ಇರುತ್ತವೆ. ಕೆಲವು ವರ್ಷಗಳ ಹಿಂದೆ ಅಳಿವಿನಂಚಿನಲ್ಲಿರುವ ಕೆಂಪು ತಲೆ ರಣಹದ್ದು ಗುಂಡಾಲ್ ಜಲಾಶಯದ ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಇಂತಹ ಹಲವು ಬಗೆಯ ಪಕ್ಷಿಗಳು ಆಗಾಗ ತಮ್ಮ ಆವಾಸ ಸ್ಥಾನವನ್ನು ಬಿಆರ್‌ಟಿಯಲ್ಲಿ ಖಚಿತಪಡಿಸುತ್ತಿವೆ. ಅರಣ್ಯ ಇಲಾಖೆಯಿಂದ ಪ್ರತೀ ವರ್ಷ ರಾಜ್ಯಮಟ್ಟದ ಪಕ್ಷಿ ಹಬ್ಬ ಹಮ್ಮಿಕೊಳ್ಳಲಾಗುತ್ತಿದೆ. ಇವುಗಳ ಕುರಿತ ಅರಿವು, ಸಂತತಿ ಉಳಿವಿನ ಉದ್ದೇಶಕ್ಕಾಗಿ ಹಕ್ಕಿ ಹಬ್ಬ ನಡೆಯುತ್ತಿದೆ.

ಬಂಡೀಪುರದಲ್ಲೂ ಪತ್ತೆಯಾಗಿದ್ದ ಹಾರ್ನ್‌ಬಿಲ್

ಭಾಗಶಃ ಅರಣ್ಯ ಪ್ರದೇಶಗಳಿಂದ ಕೂಡಿರುವ ಚಾಮರಾಜನಗರ ಜಿಲ್ಲೆಯ ಹುಲಿ ಸಂರಕ್ಷಿತಾರಣ್ಯ ಪ್ರದೇಶ ಬಂಡೀಪುರದಲ್ಲೂ ಹಿಂದೊಮ್ಮೆ ಹಾರ್ನ್‌ಬಿಲ್ ಪತ್ತೆಯಾಗಿತ್ತು. 2021ರಲ್ಲಿ ಪಕ್ಷಿ ಗಣತಿಯಲ್ಲಿ ಎರಡು ಬಗೆಯ ಅಪರೂಪದ ಪಕ್ಷಿಗಳು ಪತ್ತೆಯಾಗಿದ್ದವು. ಮೊದಲ ಬಾರಿಗೆ ಗ್ರೇಟ್ ಹಾರ್ನ್‌ಬಿಲ್ ಪಕ್ಷಿ ಕಾಣಿಸಿಕೊಂಡಿತ್ತು. ಇದೊಂದು ಸುಂದರ ಪಕ್ಷಿಯಾಗಿದೆ. ಹಳದಿ ಬಣ್ಣದ ವಿಶಿಷ್ಟ ಆಕಾರದ ಕೊಕ್ಕನ್ನು ಹೊಂದಿ ಬೇರೆ ಪಕ್ಷಿಗಳಿಗಿಂತ ಭಿನ್ನವಾಗಿದೆ.

ದಾಂಡೇಲಿ ಅರಣ್ಯದಲ್ಲಿ ಹಾರ್ನ್‌ಬಿಲ್‌ಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಬಿಆರ್‌ಟಿ ವ್ಯಾಪ್ತಿಯ ಅರಣ್ಯದಲ್ಲಿ ಹಾರ್ನ್‌ಬಿಲ್‌ಗಳು ಇರುವುದು ಬಹಳ ಕಡಿಮೆ. ಕೆ.ಗುಡಿಯಲ್ಲಿ ಬೆರಳೆಣಿಕೆಷ್ಟು ಗ್ರೇಟ್ ಇಂಡಿಯನ್ ಹಾರ್ನ್‌ಬಿಲ್‌ಗಳಿವೆ.

-ವಿನೋದ್, ಆರ್‌ಎಫ್‌ಒ, ಕೆ.ಗುಡಿ ವಲಯ

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X