Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಾಫಿನಾಡಿನಲ್ಲಿ ಮಂಗಗಳ ಹಾವಳಿಯಿಂದ ಅಪಾರ...

ಕಾಫಿನಾಡಿನಲ್ಲಿ ಮಂಗಗಳ ಹಾವಳಿಯಿಂದ ಅಪಾರ ಬೆಳೆ ನಷ್ಟ : ಸಂಕಷ್ಟದಲ್ಲಿ ರೈತರು

ಕೆ.ಎಲ್.ಶಿವುಕೆ.ಎಲ್.ಶಿವು19 April 2025 10:29 AM IST
share
ಕಾಫಿನಾಡಿನಲ್ಲಿ ಮಂಗಗಳ ಹಾವಳಿಯಿಂದ ಅಪಾರ ಬೆಳೆ ನಷ್ಟ : ಸಂಕಷ್ಟದಲ್ಲಿ ರೈತರು

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಂಗಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಹಸನಾಗಿ ಬೆಳೆದು ನಿಂತಿರುವ ಬೆಳೆಯನ್ನು ತಿಂದು ಹಾಕುತ್ತಿರುವುದರಿಂದ ರೈತರು, ಬೆಳೆಗಾರರು ಬೆಳೆನಷ್ಟಕ್ಕೊಳಗಾಗುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ದಟ್ಟ ಅರಣ್ಯ, ಅಭಯಾರಣ್ಯ, ಮೀಸಲು ಅರಣ್ಯದಂತಹ ಕಾನನಗಳು ಹೆಚ್ಚಾಗಿವೆ. ಇಂತಹ ಕಾಡುಗಳಲ್ಲಿ ಅಪರೂಪದ ವನ್ಯಜೀವಿಗಳೊಂದಿಗೆ ಮಂಗಗಳೂ ಹೇರಳ ಸಂಖ್ಯೆಯಲ್ಲಿವೆ. ಇಲ್ಲಿನ ವನ್ಯಜೀವಿಗಳ ಪೈಕಿ ಮಂಗಗಳು ಕಾಡಂಚಿನ ಗ್ರಾಮ, ಊರುಗಳಲ್ಲಿರುವ ಕಾಫಿ, ಅಡಿಕೆ ತೋಟಗಳಿಗೆ ಭಾರೀ ಸಂಖ್ಯೆಯಲ್ಲಿ ದಾಳಿ ಇಟ್ಟು ಹಸನಾಗಿ ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿರುವುದರಿಂದ ರೈತರು, ಬೆಳೆಗಾರರು ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಅನುಭವಿಸುವಂತಾಗಿದೆ.

ಮಲೆನಾಡು ಭಾಗದಲ್ಲಿ ಅಡಿಕೆ ತೋಟಗಳು ಎಲ್ಲೆಂದರಲ್ಲಿ ಕಂಡು ಬರುತ್ತವೆ. ಅಡಿಕೆ ತೋಟಗಳು ಎಲೆಚುಕ್ಕಿ ರೋಗ, ಹಳದಿ ಎಲೆ ರೋಗದಂತಹ ರೋಗಗಳಿಗೆ ತುತ್ತಾಗಿ ಭಾರೀ ಪ್ರಮಾಣದಲ್ಲಿ ಬೆಳೆ ನಷ್ಟ ಆಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅತೀವೃಷ್ಟಿ, ಅಕಾಲಿಕ ಮಳೆಯಿಂದಾಗಿ ಬೆಳೆಗಾರರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಕಾಫಿ ಬೆಳೆಗಾರರದ್ದೂ ಇದೇ ಸಮಸ್ಯೆಯಾಗಿದೆ. ಆದರೆ ಈ ಸಮಸ್ಯೆಗಳ ಮಧ್ಯೆ ಕಾಡಾನೆಗಳ ಹಾವಳಿಯಿಂದಾಗಿಯೂ ರೈತರು ಬೆಳೆ ನಷ್ಟ ಅನುಭವಿಸುವಂತಾಗಿದೆ.

ಸದ್ಯ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಕಾಫಿ, ಅಡಿಕೆ ತೋಟಗಳು ಹಸಿರಿನಿಂದ ಕಂಗೊಳಿಸುತ್ತಿರುವುದಲ್ಲದೆ ಉತ್ತಮ ಫಸಲು ಹಸನಾಗಿ ಬೆಳೆದು ನಿಂತಿದೆ. ಆದರೆ ಹೀಗೆ ಬೆಳೆದಿರುವ ಫಸಲು ಮಂಗಗಳ ಹೊಟ್ಟೆ ಸೇರುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ರೈತರು ಬೆವರು ಸುರಿಸಿ ಪೋಷಣೆ ಮಾಡಿದ ಕಾಫಿ, ಅಡಿಕೆ ತೋಟಗಳನ್ನು ಸದ್ಯ ಮಂಗಗಳು ಆಶ್ರಯತಾಣವನ್ನಾಗಿಸಿಕೊಂಡಿವೆ. ನೂರಾರು ಸಂಖ್ಯೆಯಲ್ಲಿ ಅಡಿಕೆ ತೋಟಗಳಿಗೆ ದಾಳಿ ಇಡುತ್ತಿರುವ ಮಂಗಗಳು ಅಡಿಕೆ ಹೀಚುಗಳನ್ನು ಕಿತ್ತು ಹಾಕುತ್ತಿರುವುದರಿಂದ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಭಾರೀ ನಷ್ಟದ ಆತಂಕ ಎದುರಾಗಿದೆ. ಅಡಿಕೆಯೊಂದಿಗೆ ತೋಟಗಳಲ್ಲಿ ಬೆಳೆದ ಬಾಳೆ ಸೇರಿದಂತೆ ಇತರ ಹಣ್ಣು ಹಂಪಲುಗಳನ್ನು ತಿಂದು ಹಾಕುತ್ತಿರುವುದರಿಂದ ರೈತರ ಪಾಲಿಗೆ ಈ ಬೆಳೆಗಳು ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಗಿದೆ. ಕಾಫಿ ಬೆಳೆಗಾರರನ್ನೂ ಮಂಗಗಳು ನಿದ್ದೆಗೆಡಿಸುತ್ತಿದ್ದು, ಕಾಫಿ ತೋಟಗಳಲ್ಲಿ ಇದೀಗ ಕಾಫಿ ಹೀಚು ಕಟ್ಟುತ್ತಿದ್ದು, ಮಂಗಗಳು ಈ ಹೀಚುಗಳನ್ನು ಕಿತ್ತು ತಿನ್ನುತ್ತಿರುವುದಲ್ಲದೇ ಕಾಫಿ ಗಿಡಗಳ ಚಿಗುರನ್ನು ಮುರಿದು ಹಾಕುತ್ತಾ ಕಾಫಿ ಗಿಡಗಳ ಬೆಳವಣಿಗೆಗೂ ಅಡ್ಡಿಯಾಗುತ್ತಿವೆ.

ಮಂಗಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಗತ್ಯ ಕ್ರಮವಹಿಸಬೇಕು, ಇಲ್ಲವೆ ಮಂಗಗಳ ಸ್ಥಳಾಂತರಕ್ಕೆ ಕ್ರಮವಹಿಸುವ ಮೂಲಕ ರೈತರು ಬೆವರು ಸುರಿಸಿ ಬೆಳೆದ ಬೆಳೆ ರಕ್ಷಣೆಗೆ ಮುಂದಾಗಬೇಕು ಎಂದು ರೈತರು, ಬೆಳೆಗಾರರು ಮನವಿ ಮಾಡಿದ್ದಾರೆ.

ಮಲೆನಾಡು ಭಾಗದಲ್ಲಿ ಹಿಂದೆ ಮಂಗಗಳ ಹಾವಳಿ ಅಷ್ಟಾಗಿ ಇರಲಿಲ್ಲ. ಸದ್ಯ ಮಂಗಗಳ ಸಂತತಿ ದುಪ್ಪಟ್ಟಾಗಿದೆ. ಅರಣ್ಯದಂಚಿನ ಗ್ರಾಮಗಳಲ್ಲಿರುವ ಕಾಫಿ, ಅಡಿಕೆ ತೋಟಗಳಿಗೆ ಭಾರೀ ಸಂಖ್ಯೆಯಲ್ಲಿ ಮಂಗಗಳು ದಾಳಿ ಇಡುತ್ತಿದ್ದು, ಬೆಳೆ ನಾಶ ಮಾಡುತ್ತಿವೆ. ಮಂಗಗಳ ಹಾವಳಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಅಲ್ಪಸ್ವಲ್ಪ ಪ್ರಮಾಣದಲ್ಲಿ ಬೆಳೆ ಬೆಳೆದ ನಮ್ಮಂತಹ ಸಣ್ಣ ಬೆಳೆಗಾರರಿಗೆ ಭಾರೀ ನಷ್ಟವಾಗುತ್ತಿದೆ. ಬೆಳೆದ ಬೆಳೆಗಳೆಲ್ಲವೂ ಮಂಗಗಳ ಪಾಲಾಗುತ್ತಿದ್ದು, ಮಂಗಗಳ ಹಾವಳಿ ಹೆಚ್ಚಾಗಿರುವ ಕಡೆಗಳಲ್ಲಿ ಅರಣ್ಯ ಇಲಾಖೆ ಅವುಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲು ಕ್ರಮವಹಿಸಬೇಕು.

-ಎಸ್.ಲಿಂಗಯ್ಯ, ರೈತ, ಕಳಸ

ಮಂಗಗಳ ನಿಯಂತ್ರಣಕ್ಕೆ ರೈತರ ಹರಸಾಹಸ :

ಮಂಗಗಳ ವಿಪರೀತ ಹಾವಳಿ ನಿಯಂತ್ರಣಕ್ಕೆ ರೈತರು, ಬೆಳೆಗಾರರು ಕಾರ್ಮಿಕರನ್ನು ನೇಮಿಸಿ ಪಟಾಕಿ ಸಿಡಿಸುವುದು, ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸುವಂತಹ ಕಸರತ್ತು ಮಾಡುತ್ತಿದ್ದರೂ ಮಂಗಗಳ ಹಾವಳಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಕಾಫಿ, ಅಡಿಕೆ ಬೆಳೆ ನಾಶ ಮಾಡುತ್ತಿರುವ ಮಂಗಗಳನ್ನು ಕೊಲ್ಲುವಂತಿಲ್ಲ, ಸೆರೆ ಹಿಡಿದು ಬೇರೆಡೆ ಸಾಗಣೆಯನ್ನೂ ಮಾಡಲು ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಪ್ರೇಮಿಗಳಿಂದ ವಿರೋಧ ಇರುವುದರಿಂದ ಅವುಗಳ ನಿಯಂತ್ರಣಕ್ಕೆ ರೈತರು ಹರಸಾಹಸ ಪಡುವಂತಾಗಿದೆ.

share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X