Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಡಗಿನಲ್ಲಿ ಬಟರ್‌ಫ್ರೂಟ್ ಬೀಜಕ್ಕೆ ಭಾರೀ...

ಕೊಡಗಿನಲ್ಲಿ ಬಟರ್‌ಫ್ರೂಟ್ ಬೀಜಕ್ಕೆ ಭಾರೀ ಬೇಡಿಕೆ

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ28 July 2025 2:11 PM IST
share
ಕೊಡಗಿನಲ್ಲಿ ಬಟರ್‌ಫ್ರೂಟ್ ಬೀಜಕ್ಕೆ ಭಾರೀ ಬೇಡಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬಟರ್‌ಫ್ರೂಟ್(ಬೆಣ್ಣೆಹಣ್ಣು) ಬೆಳೆಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದೀಗ ಜಿಲ್ಲೆಯಲ್ಲಿ ಬಟರ್‌ಫ್ರೂಟ್ ಗಿಂತ ಅದರ ಬೀಜಕ್ಕೆ ಹೆಚ್ಚು ಬೇಡಿಕೆ ಬಂದಿದೆ.

ವ್ಯಾಪಾರಿಗಳು ಇದೀಗ ಬಟರ್ ಫ್ರೂಟ್ ವ್ಯಾಪಾರದೊಂದಿಗೆ ಅದರ ಬೀಜದ ವ್ಯಾಪಾರಕ್ಕೂ ತೊಡಗಿ ಒಳ್ಳೆಯ ಲಾಭಗಳಿಸುತ್ತಿದ್ದಾರೆ. ಒಂದು ಬಟರ್ ಫ್ರೂಟ್ ಬೀಜ 6 ರಿಂದ 8ರೂ.ವರೆಗೆ ಮಾರಾಟವಾಗುತ್ತಿದೆ.

ಕಸಿ ಮಾಡಿರುವ ಗಿಡಗಳಿಗೆ ಬೇಡಿಕೆ: ಕಸಿ ಮಾಡಿರುವ ವಿವಿಧ ಬಟರ್ ಫ್ರೂಟ್ ತಳಿಗಳು ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ ರಾಜ್ಯಗಳಿಗೆ ಕೊಡಗು ಜಿಲ್ಲೆಯಿಂದ ಸರಬರಾಜಾಗುತ್ತಿದೆ. ಕಸಿ ಮಾಡಿರುವ ಬಟರ್ ಫ್ರೂಟ್‌ಗಿಡಗಳು 100 ರಿಂದ 150 ರೂ.ಗಳವರೆಗೆ ಮಾರಾಟವಾಗುತ್ತಿವೆ. ಹೊರ ರಾಜ್ಯಕ್ಕೆ ವಾರ್ಷಿಕವಾಗಿ ಲಕ್ಷಾಂತರ ಗಿಡಗಳು ಸರಬರಾಜಾಗುತ್ತಿದೆ.

ಯಾರಿಗೂ ಬೇಡದೆ ತೋಟದಲ್ಲಿ ಕೊಳೆತು ಬಿದ್ದಿದ್ದ ಬಟರ್ ಫ್ರೂಟ್ ಬೀಜಗಳಿಗೆ ಇದೀಗ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ನರ್ಸರಿ ಕೃಷಿಯಲ್ಲಿ ತೊಡಗಿಕೊಂಡಿರುವವರು ಬೆಣ್ಣೆ ಹಣ್ಣು ಬೆಳೆದಿರುವವರಿಂದ ಬೀಜಗಳನ್ನು ಖರೀದಿಸುತ್ತಿದ್ದಾರೆ. ಅದಲ್ಲದೇ ಬಟರ್ ಫ್ರೂಟ್ ಕೊಯ್ಲಿನ ಸಂದರ್ಭದಲ್ಲಿ ವ್ಯಾಪಾರಿಗಳು 2ರಿಂದ 3 ರೂ.ಗಳಿಗೆ ಬಟರ್ ಫ್ರೂಟ್ ಬೀಜಗಳನ್ನು ಖರೀದಿಸಿ 6 ರಿಂದ 8 ರೂ.ವರೆಗೆ ನರ್ಸರಿ ಮಾಡುವವರಿಗೆ ಮಾರಾಟ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಬಟರ್ ಫ್ರೂಟ್‌ಗೆ ಬೇಡಿಕೆ ಹೆಚ್ಚಾದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬಟರ್ ಫ್ರೂಟ್ ಗಿಡಗಳ ನರ್ಸರಿ ಕೂಡ ಹೆಚ್ಚಾಗಿದೆ. ಮನೆಯ ಹಿಂಭಾಗದ ಸಣ್ಣ ಭಾಗದಲ್ಲೂ ಬಟರ್ ಫ್ರೂಟ್ ಕಸಿ ಮಾಡಿರುವ ಗಿಡಗಳನ್ನು ಬೆಳೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ಇದೀಗ ಬಟರ್ ಫ್ರೂಟ್ ಬೀಜಕ್ಕೆ ಹೆಚ್ಚು ಬೇಡಿಕೆ ಇದೆ. ಬಹುತೇಕ ಭಾಗಗಳಲ್ಲಿ ಬಟರ್ ಫ್ರೂಟ್ ಗಿಡಗಳ ನರ್ಸರಿಗಳು ಹೆಚ್ಚಳವಾಗುತ್ತಿದೆ. ಕಸಿ ಮಾಡುವ ಗಿಡಗಳಿಗೆ ಬಟರ್ ಫ್ರೂಟ್ ಬೀಜ ಬೇಕು. ನರ್ಸರಿ ಮಾಡುವವರು ಕಸಿ ಮಾಡಿರುವ ಗಿಡಗಳನ್ನು ಹೆಚ್ಚಾಗಿ ತಯಾರಿಸುತ್ತಿದ್ದಾರೆ. ಎಲ್ಲ ಕಡೆಗಳಲ್ಲಿ ಬಟರ್ ಫ್ರೂಟ್ ವ್ಯಾಪಾರಿಗಳು ಇರುವುದರಿಂದ ಬೀಜ ಸಿಗುವುದು ಕಡಿಮೆಯಾಗಿದೆ. ಹಣ್ಣಾಗಿರುವ ಬಟರ್ ಫ್ರೂಟ್‌ಗಳಿಂದ ಬೀಜ ತೆಗೆದು ಇದೀಗ ಮಾರಾಟ ಮಾಡುತ್ತಿದ್ದೇವೆ.

-ರಂಶೀದ್ ಅಮ್ಮತ್ತಿ, ಬಟರ್ ಫ್ರೂಟ್ ವ್ಯಾಪಾರಿ.

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X