Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಿ ಗೋಮಾಳದಲ್ಲಿ ನಿಲ್ಲದ ಮಣ್ಣು...

ಸರಕಾರಿ ಗೋಮಾಳದಲ್ಲಿ ನಿಲ್ಲದ ಮಣ್ಣು ಲೂಟಿ: ಅಕ್ರಮ ತಡೆಯಲು ತಾಲೂಕು ಆಡಳಿತದಿಂದ ನಿರಂತರ ದಾಳಿ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್6 July 2024 10:36 AM IST
share
ಸರಕಾರಿ ಗೋಮಾಳದಲ್ಲಿ ನಿಲ್ಲದ ಮಣ್ಣು ಲೂಟಿ: ಅಕ್ರಮ ತಡೆಯಲು ತಾಲೂಕು ಆಡಳಿತದಿಂದ ನಿರಂತರ ದಾಳಿ

ಚಾಮರಾಜನಗರ: ಜಿಲ್ಲೆಯಲ್ಲಿ ಸರಕಾರಿ ಗೋಳಮಾಳದಿಂದ ಕೆಂಪು, ಕಪ್ಪುಮಣ್ಣು ಸಾಗಿಸುವ ಜಾಲ ಹೆಚ್ಚಾಗುತ್ತಿದ್ದು, ಅಕ್ರಮ ತಡೆಗೆ ಇದೀಗ ನಿರಂತರ ದಾಳಿಗಳು ನಡೆಯುತ್ತಿವೆ.

ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಗಡಿ ಚಾಮರಾಜನಗರ ಜಿಲ್ಲೆಯ ಎಲ್ಲ ತಾಲೂಕಿನ ಸರಕಾರಿ ಭೂಮಿಯಿಂದ ಮಣ್ಣು ತೆಗೆದು ಅಕ್ರಮ ಸಾಗಣೆ ಪ್ರಕರಣ ಬೆಳಕಿಗೆ ಬರುತ್ತಿದ್ದು, ಚಾಮರಾಜನಗರ ತಾಲೂಕಿನಲ್ಲಿ ತಹಶೀಲ್ದಾರ್ ಬಸವರಾಜು ಅಕ್ರಮ ಮಣ್ಣು ದಂಧೆ ನಡೆಯುತ್ತಿರುವ ಸ್ಥಳಕ್ಕೆ ದಾಳಿ ಮಾಡಿದ್ದಲ್ಲದೇ, ಅವರ ವಿರುದ್ಧ ಕ್ರಮ ಕೈಗೊಂಡು ದಂಧೆಕೋರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

2024ರ ಜನವರಿಂದ ಇಲ್ಲಿಯವರೆಗೆ ಚಾಮರಾಜನಗರ ತಾಲೂಕಿನ ಕೆಲ್ಲಂಬಳ್ಳಿ, ಜ್ಯೋತಿಗೌಡನಪುರ, ಹರದನಹಳ್ಳಿ, ಶಿವಪುರ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಕೆಲ್ಲಂಬಳ್ಳಿ ಗ್ರಾಮದ ಸರ್ವೇ ನಂ.135/1 ಮತ್ತು 134/1ರ ಜಮೀನಿನಲ್ಲಿ ಜೆಸಿಬಿ ಸಹಾಯದಿಂದ ಟಿಪ್ಪರ್‌ಗಳನ್ನು ಬಳಸಿಕೊಂಡು ಕೆಂಪು ಮಣ್ಣನ್ನು ತುಂಬುತ್ತಿರುವ ವೇಳೆ ದಾಳಿ ನಡೆಸಿ ಮೂರು ಟಿಪ್ಪರ್ ಮತ್ತು ಜೆಸಿಬಿಯನ್ನು ವಶಕ್ಕೆ ಪಡೆಯಲಾಗಿದೆ.

ಅಲ್ಲದೇ ಕೆಲ್ಲಂಬಳ್ಳಿಯಲ್ಲಿ ಕೆಐಎಡಿಬಿ ವಶದಲ್ಲಿರುವ ಜಾಗದಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಮಾಡಲಾಗುತ್ತಿತ್ತು. ಈ ವಿಷಯ ತಿಳಿದು ದಾಳಿ ನಡೆಸಿ ಒಂದು ಹಿಟಾಚಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಶಿವಪುರ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್, ಮೂಡ್ಲಹೊಸಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಅನ್ನು ವಶಕ್ಕೆ ಪಡೆಯಲಾಗಿತ್ತು.

ಹಣ ಸಂಪಾದನೆ ಮಾಡುವ ಮಾರ್ಗ: ಮಣ್ಣು ಕದಿಯುತ್ತಿರುವವರಿಗೆ ಸರಕಾರಿ ಜಮೀನುಗಳೇ ಟಾರ್ಗೆಟ್ ಆಗಿದೆ. ಖಾಸಗಿ ಜಮೀನುಗಳಲ್ಲಿ ಮಣ್ಣು ಕದ್ದರೆ ಸಿಕ್ಕಿ ಬೀಳುತ್ತಾರೆ. ಆದರೆ ಸರಕಾರಿ ಜಮೀನುಗಳಲ್ಲಿ ಮಣ್ಣು ಲೂಟಿ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿರುವ ದಂಧೆಕೋರರು ನಿರ್ಭಯವಾಗಿ ಮಣ್ಣು ಕದಿಯುತ್ತಿದ್ದಾರೆ. ಕದ್ದ ಮಣ್ಣನ್ನು ಇಟ್ಟಿಗೆ ಕಾರ್ಖಾನೆ ಮತ್ತು ವಿವಿಧ ಕೆಲಸಗಳಿಗೆ ಸಾಗಣೆ ಮಾಡಿ ಹಣ ಸಂಪಾದನೆ ಮಾಡುವ ಮಾರ್ಗ ಕಂಡುಕೊಂಡಿದ್ದಾರೆ.

ಜ್ಯೋತಿಗೌಡನಪುರದಲ್ಲಿ ನಡೆಯುತ್ತಿದೆ ದಂಧೆ: ಚಾಮರಾಜನಗರ ತಾಲೂಕಿನ ಚಂದಕವಾಡಿ ಹೋಬಳಿಯ ಜ್ಯೋತಿ ಗೌಡನಪುರ ಗ್ರಾಮದ ಸರ್ವೇ ನಂ.185ರ ಸರಕಾರಿ ಗೋಮಾಳದಲ್ಲಿ ಅನಧಿಕೃತವಾಗಿ ಮಣ್ಣು ತೆಗೆಯುತ್ತಿದ್ದಾಗ ದಾಳಿ ಮಾಡಲಾಗಿದ್ದು, ಈ ವೇಳೆ 7 ಟ್ರ್ಯಾಕ್ಟರ್ ಮತ್ತು 1 ಜೆಸಿಬಿಯನ್ನು ವಶ ಪಡಿಸಿಕೊಳ್ಳಲಾಗಿತ್ತು. ಹರದನಹಳ್ಳಿ ಹೋಬಳಿಯ ಎಚ್.ಡಿ.ಫಾರೆಸ್ಟ್ ಸರ್ವೇ ನಂ.3ರಲ್ಲಿ ಅನಧಿಕೃತ ಕಟ್ಟಡ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ದಾಳಿ ಮಾಡಿದಾಗ ಕಲ್ಲು ತುಂಬಿದ್ದ ಲಾರಿಯನ್ನೂ ಸೆರೆ ಹಿಡಿಯಲಾಗಿತ್ತು.

ಹಳ್ಳಿಗಳಲ್ಲಿನ ಕೆರೆಗಳಲ್ಲಿ ರೈತರಿಗೆ ಮಣ್ಣು ತೆಗೆಯಲು ಅವಕಾಶವಿದೆ. ಈ ಅವಕಾಶವನ್ನೇ ಮಣ್ಣು ಲೂಟಿಕೋರರು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ನಿಜವಾದ ರೈತರು ಹಳ್ಳ ಬಿದ್ದ ಜಮೀನುಗಳಲ್ಲಿ ನಡುಬಗ್ಗಿಸಿ ಕೃಷಿ ಮಾಡುತ್ತಿದ್ದಾರೆ. ಆದರೆ ರೈತರ ಹೆಸರನ್ನು ಹೇಳಿಕೊಂಡು ಮಣ್ಣು ತೆಗೆಯುತ್ತಿರುವವರು ಆ ಮಣ್ಣನ್ನು ತಮ್ಮ ಜಮೀನಿಗೆ ಹಾಕಿಕೊಳ್ಳುತ್ತೇನೆ ಎಂದು ಹೇಳಿ ಮಾರಾಟ ಮಾಡಿ ಹಣ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಪ್ರಾಕೃತಿಕ ಸಂಪತ್ತು ಲೂಟಿಯಾಗುತ್ತಿರುವಲ್ಲಿಗೆ ದಾಳಿ ಮಾಡಿ ಕಡಿವಾಣ ಹಾಕುತ್ತಿದ್ದೇವೆ. ಇಂತಹ ಪ್ರಕರಣಗಳನ್ನು ನಾವು ಸಹಿಸುವುದಿಲ್ಲ. ಒತ್ತಡಕ್ಕೆ ಮಣಿಯುವುದೂ ಇಲ್ಲ. ಹಾಗಾಗಿ ಅಕ್ರಮ ಎಂದು ಕಂಡುಬರುವುದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ.

ಬಸವರಾಜು - ತಹಶೀಲ್ದಾರ್, ಚಾಮರಾಜನಗರ

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X