Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚಿಂಚೋಳಿ ಅರಣ್ಯದಲ್ಲಿ ಕೆಂಪು ಮಣ್ಣಿನ...

ಚಿಂಚೋಳಿ ಅರಣ್ಯದಲ್ಲಿ ಕೆಂಪು ಮಣ್ಣಿನ ಅಕ್ರಮ ಸಾಗಾಟ

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ31 Dec 2025 3:47 PM IST
share
ಚಿಂಚೋಳಿ ಅರಣ್ಯದಲ್ಲಿ ಕೆಂಪು ಮಣ್ಣಿನ ಅಕ್ರಮ ಸಾಗಾಟ

ಕಲ್ಯಾಣ ಕರ್ನಾಟಕದಲ್ಲಿರುವ ಏಕೈಕ ಅರಣ್ಯಪ್ರದೇಶ ರಕ್ಷಿಸಿಕೊಳ್ಳುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಚಿಂಚೋಳಿ ಅರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ವಾಹನಗಳ ನಿಷೇಧವಿದ್ದರೂ ರಾತ್ರೋ ರಾತ್ರಿ ಬೃಹತ್ ವಾಹನಗಳ ಮೂಲಕ ಕೆಂಪು ಮಣ್ಣು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ.

134.88 ಚದರ ಕಿ.ಮೀ. ವಿಸ್ತೀರ್ಣ ಹೊಂದಿರುವ ಚಿಂಚೋಳಿ ಅರಣ್ಯ ವ್ಯಾಪ್ತಿ ಪ್ರದೇಶದಲ್ಲಿ ಗ್ರಾಮ, ತಾಂಡಾಗಳಿಗೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ಅದೇ ಇಕ್ಕಟ್ಟಾದ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು ಅಕ್ರಮ ಮಣ್ಣು ಸಾಗಾಟದಲ್ಲಿ ತೊಡಗಿರುವುದು ನಿಜಕ್ಕೂ ದುರಂತ. ಈ ಭಾಗದ ಏಕೈಕ ವನ್ಯಜೀವಿ ಧಾಮವಾಗಿರುವ ಅಂದದ ಪ್ರಕೃತಿಯನ್ನು ರಕ್ಷಣೆ ಮಾಡದೆ ಅಕ್ರಮಗಳ ಅಡ್ಡೆಯಾಗಿರುವುದು ಕಂಡರೆ ಮುಂದೊಂದು ದಿನ ಇಲ್ಲಿ ಪರಿಸರ ಉಳಿಯುವುದು ಕಷ್ಟಸಾಧ್ಯ ಎನ್ನುತ್ತಾರೆ ಸ್ಥಳೀಯರು.

ವನ್ಯಜೀವಿಗಳಿಗೆ ಪ್ರಾಣ ಸಂಕಟ :

ದೊಡ್ಡ ವಾಹನಗಳ ಆರ್ಭಟದಿಂದಾಗಿ ವನ್ಯಜೀವಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ವಾಹನಗಳ ಓಡಾಟದಿಂದ ಮಂಗ, ಜಿಂಕೆ, ವಿವಿಧ ಪ್ರಾಣಿ, ಪಕ್ಷಿಗಳು ಅಪಘಾತಕ್ಕೀಡಾಗಿವೆ. ರಸ್ತೆಯಲ್ಲಿ ಹೋಗುತ್ತಿದ್ದಂತೆ ಕಾಲು, ಕೈಗಳು ಮುರಿದುಕೊಂಡಿರುವ ಪ್ರಾಣಿಗಳನ್ನು ನೋಡುವುದು ಇಲ್ಲಿ ಸಹಜವೆಂಬಂತೆ ಆಗಿದೆ. ವನ್ಯಜೀವಿಗಳಿಗಾಗಿ ಮೀಸಲಿಟ್ಟ ಪ್ರದೇಶ ಸಂರಕ್ಷಿಸಲು ಅಧಿಕಾರಿಗಳೇ ಮುಂದಾಗದಿದ್ದರೆ, ಮುಂದೇನು? ಎನ್ನುವ ಪ್ರಶ್ನೆ ಪರಿಸರವಾದಿಗಳಲ್ಲಿ ಮೂಡಿದೆ.

ರಸ್ತೆಯೆಲ್ಲ ಕೆಂಧೂಳು :

ಕೊಂಚಾವರಂ ಕ್ರಾಸ್‌ನಿಂದ ಶಾದಿಪುರ ಗ್ರಾಮ ಮತ್ತಿತ್ತರ ತಾಂಡಾಗಳಿಗೆ ಹೋಗುವ ರಸ್ತೆಯು ಕೆಂಪು ಮಣ್ಣಿನ ಧೂಳಿನಿಂದಾಗಿ ಸಂಪೂರ್ಣ ಆವೃತ್ತಗೊಂಡಿದೆ. ನಿತ್ಯವೂ ಕೆಂಪು ಮಣ್ಣಿನ ಲಾರಿ, ಟ್ರಕ್‌ಗಳ ಓಡಾಟದಿಂದ ರಸ್ತೆಪೂರ್ತಿ ಮತ್ತು ಪಕ್ಕದಲ್ಲಿ ಗಿಡ ಮರಗಳಿಗೆ ಮಣ್ಣಿನ ಧೂಳು ಮೆತ್ತಿಕೊಂಡಿದೆ. ಇದರಿಂದ ಸೈಕಲ್, ಬೈಕ್ ಸವಾರರಿಗೆ ರಸ್ತೆಯಲ್ಲಿ ಸಂಚರಿಸುವುದೇ ಸವಾಲಾಗಿದೆ. ಮಿತಿ ಮೀರಿದ ಧೂಳು ವನ್ಯಜೀವಿಗಳಿಗೂ ಕಂಟಕವಾಗಿ ಪರಿಣಮಿಸಿದೆ.

ಎರಡು ಮಾರ್ಗಗಳಿಂದ ಸಾಗಾಟ : ಆರೋಪ

ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ಎರಡು ಮಾರ್ಗಗಳ ಮೂಲಕ ನಡೆಯುತ್ತಿದೆ. ಕೊಂಚಾವರ, ಚಿಂದಾನೂರ್ ತಾಂಡಾ, ಶಾದಿಪುರ, ಸೇವಾ ನಾಯಕ ತಾಂಡಾ ಒಂದು ಕಡೆಯಿಂದ ಸಾಗಾಟ ನಡೆಸಿದರೆ, ಉಮಲಾ ನಾಯಕ ತಾಂಡಾ, ಚಂದು ನಾಯಕ ತಾಂಡಾ, ಬಿಕ್ಕು ನಾಯಕ ತಾಂಡಾದಿಂದ ಮತ್ತೊಂದೆಡೆ ಸಾಗಾಟ ನಡೆಸಲಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸಚಿವ, ಅಧಿಕಾರಿಗಳ ಕುಮ್ಮಕ್ಕು? :

ಅಕ್ರಮ ಮಣ್ಣು ಸಾಗಾಣಿಕೆ ಸೇರಿದಂತೆ ಅರಣ್ಯ ಪ್ರದೇಶದಲ್ಲಿ ಅನೇಕ ಅಹಿತಕರ ಘಟನೆಗಳು ಸಂಭವಿಸುತ್ತಿವೆ. ಇದಕ್ಕೆ ಉಸ್ತುವಾರಿ ಸಚಿವ, ಶಾಸಕ, ಜಿಲ್ಲೆಯ ಹಾಗೂ ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕು ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಯಾಕೆಂದರೆ ಇಷ್ಟು ಗಾತ್ರದ ಭಾರೀ ವಾಹನಗಳು ಇಲ್ಲಿ ಓಡಾಟ ನಡೆಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನೇಕ ಸಂದೇಹಗಳಿಗೆ ಕಾರಣವಾಗಿದೆ.

ಚಿಂಚೋಳಿ ಕಡೆ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಯಾವುದೇ ದೂರುಗಳು ಬಂದಿಲ್ಲ. ಈಗಾಗಲೇ ನಮ್ಮ ಇಲಾಖೆಯ ಎರಡು ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ. ರಾತ್ರಿ ವೇಳೆ ಕೂಡ ಪರಿಶೀಲನೆ ನಡೆಸಲಾಗುವುದು.

-ಸೋಮಶೇಖರ್ ಎಂ., ಉಪನಿರ್ದೇಶಕರು, ಗಣಿ, ಭೂವಿಜ್ಞಾನ ಇಲಾಖೆ

ಚಿಂಚೋಳಿಯಿಂದ ಶಾದಿಪುರ ಕಡೆಗೆ ರಾತ್ರಿ ವೇಳೆ ಬರಲು ಹೆದರಿಕೆ ಹೆಚ್ಚಾಗುತ್ತದೆ. ಕೆಂಪು ಮಣ್ಣಿನ 200ಕ್ಕೂ ಹೆಚ್ಚು ವಾಹನಗಳು ರಾತ್ರಿ ಪೂರ್ತಿ ಓಡಾಟ ನಡೆಸುತ್ತವೆ. ಇರುವ ಚಿಕ್ಕ ರಸ್ತೆಯಲ್ಲಿ ಸಣ್ಣ ಪುಟ್ಟ ವಾಹನ ಸವಾರರಿಗೆ ತಿರುಗಾಡಲು ಭಯವಾಗುತ್ತಿದೆ.

-ನರೇಶ್, ಸ್ಥಳೀಯ ನಿವಾಸಿ

ನಮ್ಮ ಭಾಗದಲ್ಲಿ ಇರುವ ಒಂದೇ ಒಂದು ಅರಣ್ಯ ಸಂರಕ್ಷಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳಕುಮ್ಮಕ್ಕಿನಿಂದಾಗಿ ಅಕ್ರಮ ಕೆಂಪು ಮಣ್ಣಿನ ಸಾಗಾಟ ನಡೆಯುತ್ತಿದೆ. ಹೀಗಾದರೆ ಇರುವ ಪ್ರಕೃತಿ ಸಂರಕ್ಷಿಸುವವರು ಯಾರು?

-ಮಾರುತಿ ಗಂಜಗಿರಿ, ಚಿಂಚೋಳಿ ಹೋರಾಟಗಾರ

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X