Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಂಕೋಲಾದ ಕರಿಇಶಾಡ ಮಾವಿನ ಹಣ್ಣಿಗೆ...

ಅಂಕೋಲಾದ ಕರಿಇಶಾಡ ಮಾವಿನ ಹಣ್ಣಿಗೆ ಹೆಚ್ಚಿದ ಬೇಡಿಕೆ

ನಾಗರಾಜ ಮಂಜಗುಣಿನಾಗರಾಜ ಮಂಜಗುಣಿ1 Jun 2026 3:27 PM IST
share
ಅಂಕೋಲಾದ ಕರಿಇಶಾಡ ಮಾವಿನ ಹಣ್ಣಿಗೆ ಹೆಚ್ಚಿದ ಬೇಡಿಕೆ

ಅಂಕೋಲಾ: ಅಂಕೋಲಾದ ಕರಿಇಶಾಡ ಮಾವಿನಹಣ್ಣು ಕರ್ನಾಟಕದ ಕರಾವಳಿ ಭಾಗದ ಅತ್ಯಂತ ರುಚಿಕರ ಮತ್ತು ಅಪರೂಪದ ಮಾವಿನ ತಳಿಗಳಲ್ಲಿ ಒಂದಾಗಿದೆ. ಇದು ಮುಖ್ಯವಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಸೀಮಿತವಾಗಿದೆ. ಅಂಕೋಲಾದ ಮಣ್ಣಿನ ಗುಣಗಳಿಂದಾಗಿಯೇ ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ. ಬ್ರಿಟಿಷರ ಆಡಳಿತದ ಕಾಲದಲ್ಲಿ ದೊಡ್ಡ ಮಾರುಕಟ್ಟೆಗೆ ತೆರಳುತ್ತಿತ್ತು. ಆದರೆ ಈಗ ಹುಬ್ಬಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರಮುಖ ಬೇಡಿಕೆಗಳಿವೆ.

ಜಿಐ ಟ್ಯಾಗ್: ಅಂಕೋಲಾದ ಕರಿ ಇಶಾಡ ಮಾವು 2023ರಲ್ಲಿ ಪ್ರತಿಷ್ಠಿತ ಭೌಗೋಳಿಕ ಗುರುತು ಮಾನ್ಯತೆಯನ್ನು ಪಡೆದಿದೆ. ರುಚಿ ಮತ್ತು ಸುವಾಸನೆ ಈ ಮಾವಿನಹಣ್ಣಿನ ವಿಶೇಷ ಗುಣವಾಗಿದೆ. ದಪ್ಪನೆಯ ತಿರುಳು ಮತ್ತು ಅತ್ಯಂತ ರುಚಿಕರವಾದ ಸಿಹಿಗೆ ಹೆಸರುವಾಸಿಯಾಗಿದೆ.

ಬೆಳೆಯುವ ಪ್ರದೇಶ: ಅಂಕೋಲಾದ ನಂತರ ಸಣ್ಣ ಪ್ರಮಾಣದಲ್ಲಿ ಕಾರವಾರ ಮತ್ತು ಕುಮಟಾದ ಕೆಲವು ಭಾಗಗಳಲ್ಲಿ ಕರಿಇಶಾಡ ಮಾವಿನಹಣ್ಣು ಬೆಳೆಯಲಾಗುತ್ತದೆ. ಹಾಲಕ್ಕಿ ಸಮುದಾಯದವರು ಈ ಹಣ್ಣನ್ನು ಸಾಂಪ್ರದಾಯಿಕವಾಗಿ ಬೆಳೆಯುತ್ತಾರೆ. ಹಣ್ಣು ಬಲಿತಾಗ ಕಡು ಹಸಿರು ಅಥವಾ ಕಪ್ಪು ಮಿಶ್ರಿತ ಹಸಿರು ಬಣ್ಣದಲ್ಲಿರುತ್ತದೆ. ಗಾತ್ರದಲ್ಲಿ ಮಧ್ಯಮದಿಂದ ದೊಡ್ಡದಾಗಿರುತ್ತದೆ. ಈ ಕರಿಇಶಾಡ ಮಾವಿನಹಣ್ಣು ಮೇ-ಜೂನ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ. ತಾಲೂಕಿನ ಸುಮಾರು 537 ಎಕರೆ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಇದರಿಂದಾಗಿ ಪ್ರತಿ ವರ್ಷ ಸುಮಾರು 2 ಕೋಟಿ 93 ಲಕ್ಷ ರೂ. ಆದಾಯವನ್ನು ಮಾವು ಬೆಳೆಗಾರರು ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೆಲವೊಮ್ಮೆ ವಾತಾವರಣಗಳ ಬದಲಾವಣೆಯಿಂದಾಗಿ ನಿರೀಕ್ಷಿತ ಆದಾಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮಾರುಕಟ್ಟೆ: ಇಲ್ಲಿ ಬೆಳೆದ ಮಾವನ್ನು ಬಿದಿರಿನ ಬುಟ್ಟಿಯಲ್ಲಿ ತುಂಬಿ ಅದನ್ನು ಗೋವಾ ಮತ್ತು ಹುಬ್ಬಳ್ಳಿ ಮಾರುಕಟ್ಟೆಗೆ ಸಾಗಿಸಲಾಗುತ್ತದೆ. ಬೆಳೆಗಾರರಿಂದ ನೇರವಾಗಿಯೇ ಏಜೆಂಟರು ಖರೀದಿಸಿ ಅದನ್ನು ಬೇರೆ ಬೇರೆ ಸ್ಥಳಗಳಲ್ಲಿ ಮಾರುಕಟ್ಟೆಗೆ ಸ್ಥಳಾಂತರಿಸಲಾಗುತ್ತಿದೆ. ಹೀಗಾಗಿ ಬೆಳೆಗಾರರಿಗೂ ಕೂಡ ಇದು ಅನುಕೂಲ. ಆದರೆ ಈ ವರ್ಷ ಮೋಡ ಮುಸುಕಿದ ವಾತಾವರಣ ಮತ್ತು ವಿಪರೀತ ಬಿಸಿಲಿನಿಂದಾಗಿ ಬಹುತೇಕ ಮಾವಿನ ಬೆಳೆಯು ನೆಲಕಚ್ಚಿದಂತಾಗಿದೆ.

ದರ: ಅಂಕೋಲಾ ಮಾರುಕಟ್ಟೆಯಲ್ಲಿ ಈಗ ಒಂದು ಡಜನ್ ಮಾವಿನ ಹಣ್ಣಿಗೆ 300ರಿಂದ 400 ರೂ.ವರೆಗೆ ದರವಿದೆ. ಆದರೂ ಮಾವು ಪ್ರಿಯರು ಇದನ್ನು ಖರೀದಿಸುತ್ತಾರೆ. ಹಾಲಕ್ಕಿ ಮಹಿಳೆಯರು ಸ್ಥಳೀಯ ಬೆಳೆಗಾರರಿಂದ ಮಾವು ಖರೀದಿಸಿ ಪಟ್ಟಣದ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಬೆಳೆಗಾರರ ಸಮಿತಿಯ ಪ್ರಮುಖರಾದ ನಾಗರಾಜ ನಾಯಕ ಅವರು ಮಾವು ಮೇಳವನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ. ಮಾವು ಮೇಳದಲ್ಲಿ ಅಂಕೋಲಾದಲ್ಲಿ ಬೆಳೆದ ವಿವಿಧ ಪ್ರಭೇದದ ಮಾವುಗಳು ಕೂಡ ಆಗಮಿಸುತ್ತವೆ. ಏನೇ ಆಗಲಿ ಅಂಕೋಲಾ ಕರಿಇಶಾಡ ಮಾವಿನಹಣ್ಣಿಗೆ ಭಾರೀ ಬೇಡಿಕೆ ಇದ್ದು, ತನ್ನ ಘನತೆಯನ್ನು ಜಿಐ ಟ್ಯಾಗ್ ಮೂಲಕ ಇನ್ನಷ್ಟು ಇಮ್ಮಡಿಗೊಳಿಸಿಕೊಂಡಿದೆ.

ಕರಿಇಶಾಡ ಮಾವಿನ ಬೆಳೆ ನಮಗೆ ವರದಾನವಾಗಿದೆ. ಆದರೆ ಕೆಲವು ವರ್ಷಗಳಲ್ಲಿ ಲಾಭದ ಪ್ರಮಾಣವು ತಗ್ಗುತ್ತಿದೆ. ಹವಾಮಾನ ವೈಪರೀತ್ಯದ ಮೇಲೆ ಮಾವಿನ ಬೆಳೆಯು ನಿರ್ಧಾರವಾಗುತ್ತದೆ. ಈ ವರ್ಷ ಕರಿಇಶಾಡ ಮಾವಿನಹಣ್ಣು ಅಂಕೋಲಾ ತಾಲೂಕಿನಲ್ಲಿ ಸ್ವಲ್ಪ ಕಡಿಮೆ ಇಳುವರಿ ಬಂದಿದೆ.

-ಸೋಮು ಗೌಡ , ಮಾವು ಬೆಳೆಗಾರ, ಹೊಸಗದ್ದೆ

share
ನಾಗರಾಜ ಮಂಜಗುಣಿ
ನಾಗರಾಜ ಮಂಜಗುಣಿ
Next Story
X