Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೇಸಿಗೆಯಲ್ಲಿ ಲಿಂಬೆ ಹಣ್ಣಿಗೆ ಹೆಚ್ಚಿದ...

ಬೇಸಿಗೆಯಲ್ಲಿ ಲಿಂಬೆ ಹಣ್ಣಿಗೆ ಹೆಚ್ಚಿದ ಬೇಡಿಕೆ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.15 April 2024 3:15 PM IST
share
ಬೇಸಿಗೆಯಲ್ಲಿ ಲಿಂಬೆ ಹಣ್ಣಿಗೆ ಹೆಚ್ಚಿದ ಬೇಡಿಕೆ

ಹೊಸಕೋಟೆ: ಬಿಸಿಲ ಬೇಗೆ ಹೆಚ್ಚಿದ್ದು, ಜನ ಬಾಯಾರಿಕೆ ನೀಗಿಸಲು ಲಿಂಬೆ ಹಣ್ಣಿನ ಜ್ಯೂಸ್‌ನ ಮೊರೆ ಹೋಗಿದ್ದಾರೆ. ಇದು ಲಿಂಬೆ ಹಣ್ಣಿನ ದರದ ಏರಿಕೆಗೂ ಕಾರಣವಾಗಿದೆ.

ಲಿಂಬೆ ಹಣ್ಣು ಕೇವಲ ಜ್ಯೂಸ್‌ಗಷ್ಟೇ ಅಲ್ಲ. ಇತರ ಅಡುಗೆ ಅವಶ್ಯಕತೆಗಳಿಗೂ ಬೇಕಾಗುತ್ತದೆ. ಆದರೆ ಗಗನಕ್ಕೇರಿರುವ ದರದಿಂದಾಗಿ ಜನ ಲಿಂಬೆ ಹಣ್ಣು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಈ ದರ ಹೆಚ್ಚಳ ಮೇ ಅಂತ್ಯದವರೆಗೂ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.

ಹವಾಮಾನ ವೈಪರೀತ್ಯದಿಂದ ಲಿಂಬೆ ಹಣ್ಣಿನ ಇಳುವರಿಯೂ ಕಡಿಮೆಯಾಗಿದ್ದು, ಮಾರುಕಟ್ಟೆಯಲ್ಲಿ ಲಿಂಬೆ ಹಣ್ಣಿನ ಲಭ್ಯತೆಯೂ ಕಡಿಮೆಯಾಗಿದೆ.

ಮಾರುಕಟ್ಟೆಯಲ್ಲಿ ಎಷ್ಟಿದೆ ಬೆಲೆ?: ಮಾರುಕಟ್ಟೆಯಲ್ಲಿ 1,000 ಲಿಂಬೆಹಣ್ಣಿನ ಬೆಲೆ 5,500ರೂ. ರಿಂದ 7,000 ರೂ.ವರೆಗೆ ತಲುಪಿದೆ. ಈ ಹಿಂದೆ ದರ 2,500 ರೂ.ಯಿಂದ 3,000 ರೂ.ವರೆಗೆ ಇತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ 20 ರೂ.ಗೆ ಚಿಕ್ಕ ಗಾತ್ರದ ಮೂರು ಲಿಂಬೆಹಣ್ಣು ಸಿಗುತ್ತಿವೆ. ಉತ್ತಮ ಗಾತ್ರದ ಲಿಂಬೆ ಹಣ್ಣಿಗೆ 10 ರೂ. ಇದೆ. ಹಾಗಾಗಿ, ಗ್ರಾಹಕರು ಲಿಂಬೆಹಣ್ಣು ಖರೀದಿಗೆ ಹಿಂಜರಿಯುವಂತಾಗಿದೆ.

ಮಳೆಗಾಲದಲ್ಲಾದರೆ 10 ರೂ.ಗೆ 5 ಲಿಂಬೆ ಹಣ್ಣುಸಿಗುತ್ತಿತ್ತು. ಆದರೆ, ಬೇಸಿಗೆಯ ಈ ಸಂದರ್ಭದಲ್ಲಿ 10 ರೂ. ಕೊಟ್ಟರೆ ಉತ್ತಮ ಗ್ರಾತ್ರದ ಒಂದು ಅಥವಾ 20 ರೂ.ಗೆ ಸಣ್ಣಗಾತ್ರದ ಮೂರು ಲಿಂಬೆ ಸಿಗುತ್ತಿದೆ. ವಿಧಿಯಿಲ್ಲದೆ ಖರೀದಿಸುವಂತಾಗಿದೆ.

ರಂಜಿತಾ, ಗೃಹಿಣಿ ಚಿಕ್ಕಕೋಲಿಗ

ಬೇಸಿಗೆಯಲ್ಲಿ ಲಿಂಬೆ ಹಣ್ಣಿನ ಪಾನೀಯಗಳಿಗೆ ಹೆಚ್ಚು ಮೊರೆ ಹೋಗುತ್ತಿದ್ದು, ಇದರಿಂದ ಮಾರುಕಟ್ಟೆಯಲ್ಲಿ ಲಿಂಬೆಹಣ್ಣಿನ ಬೆಲೆ ಹೆಚ್ಚಾಗಿದೆ. ನಾವು ಅನಿವಾರ್ಯವಾಗಿ ಒಂದೇ ಬಾರಿ ಹೆಚ್ಚು ಹಣ್ಣು ಖರೀದಿಸುತ್ತೇವೆ. ಇದರಿಂದ ಸ್ವಲ್ಪಅನುಕೂಲ ಆಗುತ್ತಿದೆ.

ಕೃಷ್ಣಪ್ಪ, ಜ್ಯೂಸ್ ವ್ಯಾಪಾರಿ

ಪ್ರತೀ ಬೇಸಿಗೆಯಲ್ಲಿ ಲಿಂಬೆ ಹಣ್ಣಿನ ಇಳುವರಿ ಕಡಿಮೆಯಾಗುತ್ತದೆ. ಜತೆಗೆ ಮಳೆ ಇಲ್ಲದೇ ಇರುವುದು ಇಳುವರಿ ಕಡಿಮೆಯಾಗಲು ಕಾರಣವಾಗಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಲಿಂಬೆಹಣ್ಣು ಬರುತ್ತಿಲ್ಲ. ಹಾಗಾಗಿ ದರ ಹೆಚ್ಚಾಗಿದೆ.

ಮಹಾಲಿಂಗಪ್ಪ, ವ್ಯಾಪಾರಿ ಹೊಸಕೋಟೆ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X