Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ...

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಗೋಲ್ಮಾಲ್

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವು24 July 2026 12:02 AM IST
share
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಗೋಲ್ಮಾಲ್
ಆಯುಕ್ತರ ಹೆಸರಿನಲ್ಲಿ ಖಾತೆ ಸೃಷ್ಠಿಸಿ 7.80 ಲಕ್ಷ ರೂ. ನುಂಗಿದ ಹೊರ ಗುತ್ತಿಗೆ ನೌಕರ

ಕೊಪ್ಪಳ: ನಿವೇಶನ ಕೊಡಿಸುವುದಾಗಿ ನಂಬಿಸಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಆಯುಕ್ತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ 7.80 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಕುಡಾದ ಮಾಜಿ ಹೊರಗುತ್ತಿಗೆ ನೌಕರ ರವೀಂದ್ರಕುಮಾರ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗಾವತಿಯ ಬಸವಣ್ಣ ಸರ್ಕಲ್ ನಿವಾಸಿ ಬನಶಂಕರಿ ಅವರು ಕುಡಾದ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕುಡಾ ಕಚೇರಿಯಲ್ಲಿ ಹೊರಗುತ್ತಿಗೆ ನೌಕರನಾಗಿ ಕಾರ್ಯನಿರ್ವಹಿಸಿದ್ದ ರವೀಂದ್ರಕುಮಾರ್, ನಿವೇಶನ ಮಂಜೂರು ಮಾಡಿಸುವುದಾಗಿ ನಂಬಿಸಿ ಆಯುಕ್ತರ ಹೆಸರಿನ ನಕಲಿ ಬ್ಯಾಂಕ್ ಖಾತೆಗೆ 7.80 ಲಕ್ಷ ರೂ. ಜಮಾ ಮಾಡಿಸಿಕೊಂಡು ವಂಚನೆ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಹಣ ಪಾವತಿಸಿದ ಬಳಿಕ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಬನಶಂಕರಿ ಅವರು ಕುಡಾ ಆಯುಕ್ತರನ್ನು ಸಂಪರ್ಕಿಸಿ ಲಿಖಿತ ದೂರು ನೀಡಿದಾಗ ಪ್ರಕರಣ ಬಹಿರಂಗವಾಗಿದೆ.

15 ವರ್ಷ ಸೇವೆ, ಬಳಿಕ ವಜಾ :

ರವೀಂದ್ರಕುಮಾರ್ ಸುಮಾರು 15 ವರ್ಷಗಳ ಕಾಲ ದಿನಗೂಲಿ ಆಧಾರದ ಮೇಲೆ ಕುಡಾದ ಲೆಕ್ಕಪತ್ರ ಮತ್ತು ಇಎಸ್ಟಿ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ. ದುರ್ನಡತೆಯ ಆರೋಪದ ಹಿನ್ನೆಲೆಯಲ್ಲಿ ಈ ವರ್ಷದ ಜನವರಿ 12ರಂದು ಸೇವೆಯಿಂದ ವಜಾಗೊಳಿಸಲಾಗಿತ್ತು. ಬಳಿಕ ವೀರೇಶ ಸೌಡಿ ಅವರನ್ನು ನೇಮಕ ಮಾಡಲಾಗಿದ್ದರೂ, ಕಚೇರಿ ದಾಖಲೆಗಳ ಹಸ್ತಾಂತರಕ್ಕೆ ರವೀಂದ್ರ ಸಹಕರಿಸಿರಲಿಲ್ಲ ಎಂದು ತಿಳಿದುಬಂದಿದೆ.

ಆಯುಕ್ತರ ಹೆಸರಿನಲ್ಲಿ ಖಾತೆ, ಚೆಕ್‌ಗೂ ನಕಲಿ ಸಹಿ :

ಕುಡಾದ ವಿವಿಧ ಬ್ಯಾಂಕ್ ಖಾತೆಗಳ ಮಾಹಿತಿ ಹೊಂದಿದ್ದ ರವೀಂದ್ರ, ಜೂನ್ 11ರಂದು ಆಯುಕ್ತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಬಳಸಿ ಬನಶಂಕರಿಯಿಂದ ಹಣ ಜಮಾ ಮಾಡಿಸಿಕೊಂಡಿದ್ದಾನೆ. ಬಳಿಕ ಆಯುಕ್ತರ ಚೆಕ್‌ಗೆ ನಕಲಿ ಸಹಿ ಹಾಕಿ, ಕಚೇರಿಯ ಮುದ್ರೆ ಬಳಸಿ ಆರ್‌ಟಿಜಿಎಸ್ ಮೂಲಕ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಅಧಿಕಾರಿಗಳಿಗೂ ಗೊತ್ತಿರದ ಖಾತೆ :

ಕೊಪ್ಪಳದ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎರಡು ವರ್ಷಗಳ ಹಿಂದೆ ಆಯುಕ್ತರ ಹೆಸರಿನಲ್ಲಿ ಖಾತೆ ತೆರೆಯಲಾಗಿದ್ದು, ಅದರ ಮಾಹಿತಿ ಕುಡಾ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಅಧ್ಯಕ್ಷರಿಗೂ ಇರಲಿಲ್ಲ ಎಂದು ತಿಳಿದು ಬಂದಿದೆ. ನಗರದ ವಿವಿಧ ಬ್ಯಾಂಕ್‌ಗಳಲ್ಲಿ ಆಯುಕ್ತರ ಹೆಸರಿನಲ್ಲಿ ಒಟ್ಟು 11 ಖಾತೆಗಳಿದ್ದು, ಅವುಗಳ ಸಂಪೂರ್ಣ ಮಾಹಿತಿ ಅಧಿಕಾರಿಗಳ ಬಳಿ ಇರಲಿಲ್ಲ ಎನ್ನಲಾಗಿದೆ.

ತನಿಖೆ ಆರಂಭ :

ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕುಡಾ ಅಧಿಕಾರಿಗಳು ಸಭೆ ನಡೆಸಿ ರವೀಂದ್ರಕುಮಾರ್ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಜಮಾ ಮಾಡಿದ್ದ ಹಣವನ್ನು ಆರೋಪಿಯು ಈಗಾಗಲೇ ಬ್ಯಾಂಕ್‌ನಿಂದ ಹಿಂಪಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕುಡಾ ಆಯುಕ್ತ ಶರಣಪ್ಪ, “ಇದೇ ರೀತಿಯ ಇನ್ನಷ್ಟು ವಂಚನೆ ಪ್ರಕರಣಗಳು ನಡೆದಿವೆಯೇ ಎಂಬುದು ಸಮಗ್ರ ತನಿಖೆಯ ಬಳಿಕವೇ ಗೊತ್ತಾಗಲಿದೆ. ಸದ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ,” ಎಂದು ತಿಳಿಸಿದ್ದಾರೆ.

Tags

Urban Development DepartmentKoppal
share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
Next Story
X