Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾಮಾಜಿಕ ಕಳಕಳಿಯ ಕನಕದಾಸರು

ಸಾಮಾಜಿಕ ಕಳಕಳಿಯ ಕನಕದಾಸರು

ಇಂದು ಕನಕದಾಸ ಜಯಂತಿ

ಸಂಗಮೇಶ ಎನ್. ಜವಾದಿ, ಬೀದರ್ಸಂಗಮೇಶ ಎನ್. ಜವಾದಿ, ಬೀದರ್18 Nov 2024 10:23 AM IST
share
Photo of  Kanakadasa Jayanti

ಭಕ್ತ ಕನಕದಾಸರು ಕರ್ನಾಟಕದಲ್ಲಿ 15-16ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಪ್ರಮುಖರಾಗಿದ್ದವರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರೂ ಹೌದು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದ ಬಚ್ಚಮ್ಮ ಮತ್ತು ಬೀರಪ್ಪನಾಯಕ ದಂಪತಿಯ ಮಗನಾಗಿ 1509ರಲ್ಲಿ ಜನಿಸಿದರು. ಆ ಸಮಯದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿ, ಜಾತ್ಯತೀತತೆಯ ಭಾವನೆ ಸರ್ವರಲ್ಲಿಯೂ ಮೂಡಿಸಲು ಪ್ರಯತ್ನಿಸಿದರು ಕನಕದಾಸರು ಎಂಬುದು ಕಾಣುತ್ತೇವೆ.

ಕನಕದಾಸರ ಕೀರ್ತನೆಗಳು: ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಸೃಷ್ಟಿಕರ್ತನನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹಿಮನಾಗಿ ಅವರು ಕಂಡಿದ್ದಾರೆ. ‘ಬಾ ರಂಗ ಎನ್ನ ಮನಕೆ ಎಂದೂ ಹೃದಯ ಸದನಕ್ಕೆ ’ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- ‘ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ’ ಎಂದು ಸಂತೋಷಪಟ್ಟಿದ್ದಾರೆ. ‘ಎಲ್ಲಿ ನೋಡಿದರಲ್ಲಿ ಸೃಷ್ಟಿಕರ್ತ’ ಎಂಬ ಅನುಭೂತಿಯಲ್ಲಿ ಸೃಷ್ಟಿಕರ್ತನನ್ನು ಕಂಡ ಬಳಿಕ ‘ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು’ ಎಂಬ ಧನ್ಯತಾಭಾವ. ‘ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳ ಪರಮಪಾಪಿ’ ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ ‘ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ ಎನ್ನುತ್ತಾರೆ. ಇನ್ನು ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಮೌಖಿಕವಾಗಿವೆ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ ಹಾಗೂ ಕನ್ನಡ ಸಾಹಿತ್ಯ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು. ಅದೇ ರೀತಿ ‘ಕುಲಕುಲಕುಲವೆಂದು ಹೊಡೆದಾಡದಿರಿ’ ಎಂದು ಜನಕ್ಕೆ ಎಚ್ಚರಿಸುತ್ತಾರೆ.

ಕನಕದಾಸರ ಸಾಮಾಜಿಕ ಕಳಕಳಿಯ ಮೌಲ್ಯಾಧಾರಿತ ಸಾಹಿತ್ಯ: ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಮೌಲ್ಯಾಧಾರಿತ ಸಾಹಿತ್ಯ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ,ಹರಿಭಕ್ತಿಸಾರ,ನೃಸಿಂಹಸ್ತವ ಕನಕರು ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಮಾಡಿದ ನಿರಂತರವಾದ ಚಟುವಟಿಕೆಗಳು ಮತ್ತು ಅಧ್ಯಯನಗಳು ಜನಪರ ಚಿಂತನೆಗಳಿಗೆ ಬೆಳಕಾಗಿವೆ.ಅವರು ಅನುಭವಿಸಿದ ಯಾತನೆಗಳು, ಭಾವಗೀತೆಯಂತಹ ಕೀರ್ತನೆಗಳಲ್ಲಿ ಬಹಳ ಸಮರ್ಥವಾದ ಅಭಿವ್ಯಕ್ತಿಯನ್ನು ಪಡೆದಿವೆ. ಕನಕದಾಸರ ಹಿರಿಯರೂ, ಸಮಕಾಲೀನರೂ ಆದ ವ್ಯಾಸರಾಯರು, ಪುರಂದರದಾಸರು ಮುಂತಾದವರು ಅವರ ಭಕ್ತಿ ಮತ್ತು ಪ್ರತಿಭೆಗಳನ್ನು ಮೆಚ್ಚಿ ಕೊಂಡಾಡಿದ್ದಾರೆ. ಅಲ್ಲದೆ ಕನಕದಾಸರ ಕೀರ್ತನೆಗಳು ಜಾತಿಪದ್ಧತಿಯ ಪರಿಣಾಮವಾದ ಅಸಮಾನತೆಯ ವಿರುದ್ಧ ಗಟ್ಟಿಯಾದ ದನಿಯೆತ್ತುತ್ತವೆ. ಅನೇಕ ಕೀರ್ತನೆಗಳು ದ್ವೈತಸಿದ್ಧಾಂತದ ಚೌಕಟ್ಟಿನಿಂದ ಆಚೆಗೆ ಹೋಗುವುದಿಲ್ಲವೆನ್ನುವುದು ನಿಜವಾದರೂ ಅವುಗಳೊಳಗೆ ಆಳವಾದ ವಿಷಾದವೂ ಇದೆ. ಅದೇ ರೀತಿ ಭಾಮಿನಿ ಷಟ್ಪದಿಯಲ್ಲಿ ರಚಿತವಾಗಿರುವ ‘ನಳಚರಿತೆ’ ಕನ್ನಡದ ಜನಪ್ರಿಯ ಕಾವ್ಯಗಳಲ್ಲಿ ಒಂದು. ಇದರಲ್ಲಿ ಒಂಭತ್ತು ಅಧ್ಯಾಯಗಳಿದ್ದು ಅವು ಸುಮಾರು 480 ಪದ್ಯಗಳನ್ನು ಒಳಗೊಂಡಿವೆ. ಹಾಗೆಯೇ ‘ನಳಚರಿತೆ’ ಮುಖ್ಯವಾಗಿ ಮನುಷ್ಯಜೀವಿಗಳ ಕಷ್ಟಸುಖಗಳ ಹಂಚಿಕೊಳ್ಳುವಿಕೆಯೇ ವಿನಾ ತಾತ್ವಿಕವಾದ ಉಪದೇಶವಲ್ಲ.‘ಮೋಹನತರಂಗಿಣಿ’ ಸಾಂಗತ್ಯವೆಂಬ ಛಂದೋಪ್ರಕಾರವನ್ನು ಬಳಸಿಕೊಂಡಿರುವ ದೊಡ್ಡ ಗಾತ್ರದ ಕಾವ್ಯವಾಗಿದೆ. ಅದೆಲ್ಲಕ್ಕಿಂತ ಮುಖ್ಯವಾಗಿ ಮೋಹನತರಂಗಿಣಿಯು ತನ್ನ ಕಾಲದ ಕರ್ನಾಟಕದ ಜೀವನಶೈಲಿಯ ಮೇಲೆ ಬೆಳಕು ಚೆಲ್ಲುತ್ತದೆ.

ಇನ್ನು ‘ರಾಮಧಾನ್ಯಚರಿತ್ರೆ’ಯು ಇಡೀ ಕನ್ನಡ ಸಾಹಿತ್ಯಚರಿತ್ರೆಯಲ್ಲಿಯೇ ಬಹಳ ಶ್ರೇಷ್ಠ ಕಾವ್ಯ. ಜಾತಿಪದ್ಧತಿ ಮತ್ತು ಜನಾಂಗಿಕ ಭೇದದಿಂದ ಉಂಟಾಗುವ ದಾರುಣ ಯಾತನೆಯನ್ನು ಬಹಳ ಸಾಂಕೇತಿಕವಾಗಿ ಮತ್ತು ಅನುಪಮವಾದ ಕಲ್ಪನಾಶಕ್ತಿಯ ಬಲದಿಂದ ಕಟ್ಟಿಕೊಡುವುದು ಈ ಕಾವ್ಯದ ಹೆಗ್ಗಳಿಕೆಯಾಗಿದೆ. ಕನಕದಾಸರ ಸಾಮಾಜಿಕ ಮೌಲ್ಯ :

ಕನಕದಾಸರ ಕೀರ್ತನೆಗಳು ಭಾವಪೂರ್ಣವಾಗಿವೆ. ಈ ಕೀರ್ತನೆಗಳ ಮೂಲಕ ಭಗವಂತನಲ್ಲಿ ಭಕ್ತಿಯನ್ನು ಸಾರುವುದರ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಕೆಲವು ಅಸಾಂಪ್ರದಾಯಿಕ ಆಚರಣೆಗಳನ್ನು ಒರೆಗಲ್ಲಿಗೆ ಹಚ್ಚಿ ಪ್ರಶ್ನಿಸಿದ್ದಾರೆ. ಸ್ವಸ್ಥಸಮಾಜದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರಿಗೂ ಮಾನಸಿಕ ನೆಮ್ಮದಿಯ ಅವಶ್ಯಕತೆ ಇದೆ ಎಂದಿದ್ದಾರೆ. ಡಾಂಭಿಕ ಭಕ್ತಿಯನ್ನು ಅವರು ಎಂದೂ ಒಪ್ಪುತ್ತಿರಲಿಲ್ಲ. ‘ಜಪವಮಾಡಿದರೇನು ತಪವಮಾಡಿದರೇನು, ವಿಪರೀತ ಕಪಟಗುಣಕಲುಷವಿದ್ದವರು’ ಎಂದು ದೂಷಿಸಿದ್ದಾರೆ. ಕನಕದಾಸರು ಸಮಾಜದ ಒಳಿತಿಗೆ ಧರ್ಮಾಚರಣೆಯ ಅಗತ್ಯವನ್ನು ಒತ್ತಿಹೇಳಿದ್ದಾರೆ. ಸಮಾಜದಲ್ಲಿ ಸತ್ಯ, ಧರ್ಮಗಳು ಮಾಯವಾಗುತ್ತಿರುವುದನ್ನು ನೋಡಿ ಮರುಕ ಪಟ್ಟಿದ್ದಾರೆ.

ಧರ್ಮವಿಲ್ಲದ ಅರಸು ಮುರಿದಕಾಲಿನ ಹೊರಸು

ನಿರ್ಮಲವಿಲ್ಲದ ಮನಸು ಅದು ಕಜ್ಜಿ ತಿನಿಸು.

ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆ

ಉತ್ತಮರ ಜೀವನಕೆ ದಾರಿಯಿಲ್ಲ

ನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲ

ಅರ್ಥಸಂಪದರಾಗಿ ಅನುಭವಿಸುತಿಹರು.

ಎನ್ನುತ್ತಾರೆ.

ಅದೇ ರೀತಿ ಮತ್ತೊಂದರಲ್ಲಿ ...

ಕುಲಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ

ಕುಲದ ನೆಲೆಯನೇನಾದರೂ ಬಲ್ಲಿರಾ?

ಕುಲಕುಲ ಕುಲವೆನ್ನುತಿಹರೋ

ಕುಲವಾವುದು ಸತ್ಯ ಸುಜನರಿಗೆ ಎಂದು ನಮ್ಮನ್ನೆಲ್ಲರನ್ನು ಎಚ್ಚರಿಸುತ್ತಾ..... ಮಾನವರು ಮೋಸದ ಜೀವನ, ಅನ್ಯಾಯದ ಜೀವನವನ್ನು ನಡೆಸುವುದು ಸರಿಯಲ್ಲ ಸತ್ಯದ ಹಾದಿಯಲ್ಲಿ ಸಾಗುವಂತ ಕೆಲಸ ಮಾಡಿ, ಸರ್ವರಿಗೂ ಮಾದರಿಯಾಗುವ ಕಾಯಕ ಮಾಡಬೇಕೆಂದು ತಿಳಿಸಿದ್ದಾರೆ.

ಹಾಗೆಯೇ ಹುಟ್ಟಿದ ಕುಲ ಮುಖ್ಯವಲ್ಲ ಗುಣಮುಖ್ಯ. ಉತ್ತಮ ಗುಣಗಳಿದ್ದರೆ ದೇವರು ಅಂಥವರನ್ನು ಮೆಚ್ಚುತ್ತಾನೆ ಎಂಬುದನ್ನು ಸ್ವ ಅನುಭವದ ಮೂಲಕ ಜಗತ್ತಿಗೆ ತೋರಿಸಿಕೊಟ್ಟ ಮಹಾಮಹಿಮರು ಕನಕದಾಸರು ಮಾರ್ಮಿಕವಾಗಿ ನಮ್ಮನ್ನು ಎಚ್ಚರಿಸಿದ್ದಾರೆ.

share
ಸಂಗಮೇಶ ಎನ್. ಜವಾದಿ, ಬೀದರ್
ಸಂಗಮೇಶ ಎನ್. ಜವಾದಿ, ಬೀದರ್
Next Story
X