Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. Kanakagiri | ಸ್ವಂತ ಕಟ್ಟಡದಲ್ಲಿಲ್ಲ...

Kanakagiri | ಸ್ವಂತ ಕಟ್ಟಡದಲ್ಲಿಲ್ಲ ಹಲವು ಅಂಗನವಾಡಿ ಕೇಂದ್ರಗಳು

ಬಾಡಿಗೆ ಶೆಡ್ಡಿನಲ್ಲಿ ಯಾತನೆ ಅನುಭವಿಸುತ್ತಿರುವ ಮಕ್ಕಳು!

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್13 Sept 2026 8:06 AM IST
share
Kanakagiri | ಸ್ವಂತ ಕಟ್ಟಡದಲ್ಲಿಲ್ಲ ಹಲವು ಅಂಗನವಾಡಿ ಕೇಂದ್ರಗಳು

ಕನಕಗಿರಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಸುಮಾರು 2-3 ವರ್ಷಗಳಿಂದ ಪಟ್ಟಣ ಹಾಗೂ ಗ್ರಾಮೀಣದಲ್ಲಿ ಒಂದು ಸಣ್ಣ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರಗಳು ನಡೆಯುತ್ತಿದ್ದು, ಈ ಬಾಡಿಗೆ ಮನೆ ತಗಡಿನ ಮೇಲ್ಛಾವಣಿ ಹೊಂದಿದೆ. ಮಕ್ಕಳು ಸರಿಯಾದ ಗಾಳಿ, ಬೆಳಕು ಇಲ್ಲದೆ ಪರಿತಪಿಸುವಂತಾಗಿದೆ. ಇಕ್ಕಟ್ಟಾದ ಸ್ಥಳದಲ್ಲೇ ಒಂದು ಮೂಲೆಯಲ್ಲಿ ಅಡುಗೆ ಮಾಡಿದರೆ, ಇನ್ನೊಂದು ಮೂಲೆಯಲ್ಲಿ ಸಾಮಗ್ರಿ, ಮಕ್ಕಳ ಕಲಿಕೆಗೆ ಅಗತ್ಯವಾದ ಪರಿಕರ ಇಡಲು ಬಳಸಲಾಗುತ್ತಿದೆ.

ಕೇಂದ್ರದ ಮಕ್ಕಳು, ಗರ್ಭಿಣಿಯರು ಮಧ್ಯಾಹ್ನ ಊಟ ಮಾಡಲು ಸ್ಥಳಾವಕಾಶ ಇಲ್ಲದಂತಾಗಿದೆ. ಹೀಗಾಗಿ ಊಟವನ್ನು ಗರ್ಭಿಣಿಯರು ಮನೆಗಳಿಗೆ ಕೊಂಡೊಯ್ಯುತ್ತಿದ್ದಾರೆ. 20 ಕ್ಕೂ ಹೆಚ್ಚು ಮಕ್ಕಳು ದನದ ಕೊಟ್ಟಿಗೆಯಂತಹ ಕೊಠಡಿಯಲ್ಲಿ ಇರುವಂತಾಗಿದೆ. ಸಂಬಂಧಪಟ್ಟವರು ಅಂಗನವಾಡಿ ಕೇಂದ್ರಕ್ಕೆ ಉತ್ತಮ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಬೇಕಿದೆ.

ತಾಲೂಕಿನ ಅಂಗನವಾಡಿ ಸ್ಥಿತಿಗತಿ :

ಕನಕಗಿರಿ ತಾಲೂಕಿನಲ್ಲಿ ಒಟ್ಟು 172 ಅಂಗನವಾಡಿ ಕೇಂದ್ರಗಳಿದ್ದು, ಅವುಗಳ ಪೈಕಿ ಪಟ್ಟಣದಲ್ಲಿ 17 ಮತ್ತು ಗ್ರಾಮೀಣ ಭಾಗದಲ್ಲಿ 108 ಕೇಂದ್ರಗಳು ಸ್ವಂತ ಕಟ್ಟಡ ಹೊಂದಿವೆ. ಪಟ್ಟಣದಲ್ಲಿ 17, ಗ್ರಾಮೀಣ ಭಾಗದಲ್ಲಿ 22 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಗ್ರಾಮೀಣ ಭಾಗದಲ್ಲಿ 7 ಸಮುದಾಯ ಭವನದಲ್ಲಿ, 4 ಶಾಲಾ ಕಟ್ಟಡದಲ್ಲಿ, 1 ಪಂಚಾಯತ್ ಕಟ್ಟಡದಲ್ಲಿ ಮತ್ತು 2 ಇತರೆ ಕಟ್ಟಡಗಳಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಶೌಚಾಲಯವೇ ಕಸದ ತೊಟ್ಟಿ! :

ಕನಕಗಿರಿ ತಾಲೂಕಿನ ಸುಳೇಕಲ್ ಗ್ರಾಪಂ ವ್ಯಾಪ್ತಿಯ ಕಲಕೇರಿ ಗ್ರಾಮದ ಕನಕದಾಸ ವೃತ್ತದಲ್ಲಿರುವ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಶೌಚಾಲಯದ ವ್ಯವಸ್ಥೆ ಇಲ್ಲ. ಅದು ಸಂಪೂರ್ಣ ಹಾಳಾಗಿ, ಕಸಕಡ್ಡಿ ತುಂಬಿ, ಬಳಕೆಗೆ ಯೋಗ್ಯವಿಲ್ಲದೆ ದುರ್ನಾತ ಬೀರುತ್ತಿದೆ. ಮಕ್ಕಳಿಗೆ ಕುಡಿಯಲು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದಂತಾಗಿದೆ.

ಕೆಲವು ಅಂಗನವಾಡಿ ಕೇಂದ್ರಗಳ ಕಾಮಗಾರಿ ಪ್ರಗತಿಯಲ್ಲಿವೆ. ಕೆಲವು ಕಡೆ ಜಾಗದ ಕೊರತೆ ಇದೆ. ಹೀಗಾಗಿ ಬಾಡಿಗೆ ಕಟ್ಟದಲ್ಲಿ ಅಂಗವನಾಡಿ ಕೇಂದ್ರಗಳು ನಡೆಯುತ್ತಿವೆ. ಅಂಗನವಾಡಿ ಕೇಂದ್ರಕ್ಕೆ ಜಾಗ ನೀಡಲು ಪಟ್ಟಣ ಪಂಚಾಯತ್‌ಗೆ ಈ ಹಿಂದೆ ಎರಡ್ಮೂರು ಬಾರಿ ಮನವಿ ಸಲ್ಲಿಸಲಾಗಿದೆ.

-ವಿಜಯಲಕ್ಷ್ಮೀ ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕನಕಗಿರಿ

Tags

Anganwadi centreKanakagiri
share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X