Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಿಳಿಗಿರಿ ರಂಗನ ಬೆಟ್ಟದಲ್ಲಿ ಆದಿವಾಸಿಗಳ...

ಬಿಳಿಗಿರಿ ರಂಗನ ಬೆಟ್ಟದಲ್ಲಿ ಆದಿವಾಸಿಗಳ ಅಧ್ಯಯನಕ್ಕೆ ‘ಕಾನು’ ಗ್ರಂಥಾಲಯ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್26 Aug 2024 1:34 PM IST
share
ಬಿಳಿಗಿರಿ ರಂಗನ ಬೆಟ್ಟದಲ್ಲಿ ಆದಿವಾಸಿಗಳ ಅಧ್ಯಯನಕ್ಕೆ ‘ಕಾನು’ ಗ್ರಂಥಾಲಯ

ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಆದಿವಾಸಿಗಳ ಕುರಿತು ಅಧ್ಯಯನ ಮಾಡಲು ಎದುರಾಗುವ ವಿಷಯ ವಸ್ತು ಕೊರತೆ ನೀಗಿಸಲು, ಆದಿವಾಸಿಗಳಲ್ಲಿ ಸಂಶೋಧನಾತ್ಮಕ ಲೇಖನ ಬರೆಯುವ ಸಂಸ್ಕೃತಿ ಹುಟ್ಟುಹಾಕಲು ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟದಲ್ಲಿ ‘ಕಾನು’ ಗ್ರಂಥಾಲಯ ಸೃಷ್ಟಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಮಾರಿಗುಡಿ ಪಕ್ಕದ ಆದಿವಾಸಿ ಆರೋಗ್ಯ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ‘ಕಾನು’ ಹೆಸರಿನಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗಿದೆ. ಆದಿವಾಸಿ ಸಮುದಾಯದ ಸಮಾನ ಮನಸ್ಕರು ಒಗ್ಗೂಡಿ ದಕ್ಷಿಣ ಭಾರತ ಆದಿವಾಸಿ ಜ್ಞಾನ ಕೇಂದ್ರದ ಮೂಲಕ ಈ ಗ್ರಂಥಾಲಯ ಸ್ಥಾಪನೆ ಮಾಡಿದ್ದಾರೆ.

ಆದಿವಾಸಿಗಳು ಸಮಾಜದ ಪ್ರಾಚೀನ ಸಮುದಾಯವಾಗಿದ್ದರೂ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಪ್ರಸ್ತುತ ಸಮಾಜದ ಕಟ್ಟಕಡೆಯ ಜನಾಂಗವಾಗಿ ಉಳಿದುಬಿಟ್ಟಿದ್ದಾರೆ. ಇವರ ಜೀವನ, ಸಂಸ್ಕೃತಿ, ಆಚಾರ, ವಿಚಾರಗಳು ವಿಭಿನ್ನವಾಗಿವೆ. ಅಧ್ಯಯನಕ್ಕೆ ಆಸಕ್ತಿದಾಯಕವಾಗಿರುವ ಆದಿವಾಸಿಗಳ ಕುರಿತು ಸಂಶೋಧಕರಿಗೆ ರಾಜ್ಯದಲ್ಲಿ ಎಲ್ಲೂ ಒಂದೇ ಕಡೆ ವಿಷಯ ವಸ್ತುಗಳು ಸಿಗುವುದಿಲ್ಲ. ದಕ್ಷಿಣ ಭಾರತದಲ್ಲಿ ಆದಿವಾಸಿಗಳ ಕುರಿತು ಅಧ್ಯಯನ ನಡೆದಿರುವುದು ಮತ್ತು ಆದಿವಾಸಿಗಳಲ್ಲಿರುವ ಬೆರಳೆಣಿಕೆಯಷ್ಟು ಬರಹಗಾರರನ್ನು ಪ್ರೋತ್ಸಾಹಿಸಿ ಲೇಖನಗಳನ್ನು ಬರೆಸಿರುವುದೂ ಕಡಿಮೆ. ಈ ಕೊರಗನ್ನು ನೀಗಿಸಲು ಮತ್ತು ಆದಿವಾಸಿಗಳಲ್ಲಿ ಅಕ್ಷರ ಸಂಸ್ಕೃತಿಯನ್ನು ಉತ್ತೇಜಿಸಲು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಕಾನು ಗ್ರಂಥಾಲಯವನ್ನು ಸ್ಥಾಪನೆಯಾಗಿದೆ.

ಕಾನು ಹೆಸರಿನ ಗ್ರಂಥಾಲಯದಲ್ಲಿ ದಕ್ಷಿಣ ಭಾರತದ ಆದಿವಾಸಿಗಳ ಕುರಿತು ಅಧ್ಯಯನ ಮಾಡುವವರಿಗೆ ಸಂಶೋಧನಾತ್ಮಕ, ಲೇಖನಗಳು, ಪುಸ್ತಕಗಳು ಸಿಗಲಿವೆ. ಶಿಕ್ಷಣ, ಆರೋಗ್ಯ, ಅರಣ್ಯ, ಅರಣ್ಯ ಕಾಯ್ದೆ, ಜೀವನ ನಿರ್ವಹಣೆ, ಸಂಸ್ಕೃತಿ, ಭಾಷೆ ಇನ್ನಿತರ ವಿಷಯಗಳ ಕುರಿತು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು. ಅಲ್ಲದೇ ಬೇರೆ ಕಡೆ ಸಂಗ್ರಹಿಸಿರುವ ಲೇಖನಗಳನ್ನೂ ಆನ್‌ಲೈನ್ ಮೂಲಕ ಇಲ್ಲಿ ಪಡೆಯಬಹುದು.

ತಮಿಳುನಾಡು ಕೇರಳದಲ್ಲಿರುವ ಮತ್ತು ಆದಿವಾಸಿಗಳ ಇತಿಹಾಸ ಮತ್ತು ವಾಸ್ತವವನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಿದ ವಿಮರ್ಶಾತ್ಮಕ ಟಿಪ್ಪಣಿಗಳು 1,200ಕ್ಕೂ ಹೆಚ್ಚಿನ ಪುಸ್ತಕಗಳನ್ನು ಗ್ರಂಥಾಲಯದಲ್ಲಿ ಇಡಲಾಗಿದೆ. ಅಲ್ಲದೇ, ಲೇಖನಗಳು, ಬ್ಲಾಗ್‌ಗಳನ್ನು ಸಹ ಗ್ರಂಥಾಲಯದಲ್ಲಿ ನೋಡಬಹುದು. ಇವೆಲ್ಲವೂ ಭಾಗಶಃ ಇಂಗ್ಲೀಷ್‌ನಲ್ಲಿ ಇರಲಿವೆ. ಆದಿವಾಸಿಗಳ ಕುರಿತು ಅಧ್ಯಯನ ಮಾಡುವ ಸಂಶೋಧಕರಿಗೆ ಕಾನು ಗ್ರಂಥಾಲಯ ಜ್ಞಾನದ ಮೂಲವಾಗಲಿದೆ.

ಕಾನು ಗ್ರಂಥಾಲಯವು ಪುಸ್ತಕಗಳ ಸಂಗ್ರಹ ಮಾತ್ರ ಮಾಡುವುದಲ್ಲದೆ ಆದಿವಾಸಿ ಬರಹಗಾರರಿಗೂ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಈ ಜನಾಂಗದಲ್ಲಿ ಸಾಹಿತ್ಯ ಜ್ಞಾನ ಹೊಂದಿರುವವರು ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಇದ್ದಾರೆ. ಇವರಲ್ಲಿರುವ ಬರವಣಿಗೆಯ ಕೌಶಲ್ಯವನ್ನು ವೃದ್ಧಿಸಿ, ಪ್ರೋತ್ಸಾಹ ನೀಡಿ ಆದಿವಾಸಿಗಳ ಕುರಿತ ಲೇಖಗಳನ್ನು ಬರೆಸಲು ಕಾನು ಗ್ರಂಥಾಲಯ ತಂಡ ಮುಂದಾಗಲಿದೆ. ಈವರೆಗೆ ಆದಿವಾಸಿಗಳ ಕುರಿತು ಬೇರೆಯವರು ಬರೆದಿದ್ದಾರೆ. ಆದಿವಾಸಿಗಳೇ ಬರೆದಿರುವುದು ತೀರಾವಿರಳ. ಹೀಗಾಗಿ ಅದಿವಾಸಿ ಬರಹಗಾರರನ್ನು ಗುರುತಿಸುವ ಪ್ರಯತ್ನ ನಡೆಯಲಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಆದಿವಾಸಿ ಜನಾಂಗಕ್ಕೆ ಸೇರಿದ ಮೂವರು ಮಾತ್ರ ಪಿಎಚ್‌ಡಿ ಮಾಡಿದ್ದಾರೆ. ಬಿಳಿಗಿರಿರಂಗನಬೆಟ್ಟದ ಬಂಗ್ಲೆಪೋಡಿನ ಡಾ.ಮಾದೇಗೌಡ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಹೊಸಪೋಡಿನ ಜಡೆಗೌಡ, ಗುಂಡ್ಲುಪೇಟೆಯ ಮದ್ದೂರು ಕಾಲನಿಯ ರತ್ನಮ್ಮ ಕೂಡ ಪಿಎಚ್‌ಡಿ ಮಾಡಿದ್ದಾರೆ. ಇವರೆಲ್ಲರ ಸಂಶೋಧನಾತ್ಮಕ ಪುಸ್ತಕಗಳು ಕಾನು ಗ್ರಂಥಾಲಯಗಳಲ್ಲಿ ಇರಲಿವೆ.

ದಕ್ಷಿಣ ಭಾರತದಲ್ಲಿ ಆದಿವಾಸಿಗಳ ಕುರಿತ ಸಂಶೋಧನಾತ್ಮಕ ಲೇಖನಗಳು ಬಹಳ ಕಡಿಮೆ. ಇವುಗಳನ್ನು ಹೆಚ್ಚು ಮಾಡಲು ಮತ್ತು ಇರುವ ಮಾಹಿತಿಗಳೆಲ್ಲವನ್ನೂ ಒಂದು ಕಡೆ ಸೇರಿಸಲು ಆದಿವಾಸಿ ಸಮಾನ ಮನಸ್ಕರು ಒಗ್ಗೂಡಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ’ ಕಾನು’ ಎಂಬ ಹೆಸರಿನಲ್ಲಿ ಗ್ರಂಥಾಲಯ ಸ್ಥಾಪಿಸಿದ್ದೇವೆ.

-ಡಾ.ಸಿ.ಮಾದೇಗೌಡ, ಬಿಳಿಗಿರಿರಂಗನಬೆಟ್ಟ

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X