Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉತ್ತರ ಕರ್ನಾಟಕದ ಸಹ್ಯಾದ್ರಿ...

ಉತ್ತರ ಕರ್ನಾಟಕದ ಸಹ್ಯಾದ್ರಿ ‘ಕಪ್ಪತ್ತಗುಡ್ಡ’

ಫಾರೂಕ್ ಮಕಾನದಾರಫಾರೂಕ್ ಮಕಾನದಾರ14 July 2025 2:15 PM IST
share
ಉತ್ತರ ಕರ್ನಾಟಕದ ಸಹ್ಯಾದ್ರಿ ‘ಕಪ್ಪತ್ತಗುಡ್ಡ’

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಆಯುರ್ವೇದದ ಸಸ್ಯಕಾಶಿ, ವನ್ಯಧಾಮ, ಅಪಾರ ಸಂಪತ್ತನ್ನು ಹೊಂದಿದ ‘ಕಪ್ಪತ್ತಗುಡ್ಡ’ ಇನ್ನು ಪರಿಸರ ಸೂಕ್ಷ್ಮ ವಲಯವಾಗಿದ್ದು, ಪರಿಸರವಾದಿ ಹಾಗೂ ಪರಿಸರ ಪ್ರೇಮಿಗಳಿಗೆ ಸಂತಸ ಮೂಡಿಸಿದೆ.

ಏಶ್ಯ ಖಂಡದಲ್ಲಿಯೇ ಅತಿಹೆಚ್ಚು ಗಾಳಿ ಬೀಸುವ ಪರ್ವತಗಳನ್ನು ಹೊಂದಿರುವ ಹಾಗೂ ದೇಶದಲ್ಲಿಯೇ ಶುದ್ಧಗಾಳಿಗೆ ಹೆಸರುವಾಸಿಯಾಗಿರುವ ಕಪ್ಪತ್ತಗುಡ್ಡ ವನ್ಯಧಾಮದಲ್ಲಿ ಅಪರೂಪದ ವನ್ಯಜೀವಿಗಳು ಹಾಗೂ ನೂರಾರು ಹೆಕ್ಟೇರ್ ಪ್ರದೇಶದಲ್ಲಿ 500ಕ್ಕೂ ಹೆಚ್ಚು ವಿವಿಧ ಅಪರೂಪದ ಔಷಧೀಯ ಸಸ್ಯಗಳ ಸಂಗ್ರಹಣೆಗೆ ಮೀಸಲಿಡಲಾಗಿದೆ.

ಕಪ್ಪತ್ತಗುಡ್ಡ ಮುಂಡರಗಿ ತಾಲೂಕಿನ ಸಿಂಗಟಾಲೂರಿನಿಂದ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದವರೆಗೆ ಹರಡಿದೆ. ಕಪ್ಪತ್ತಗುಡ್ಡ ವನ್ಯಜೀವಿಧಾಮದ 322 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ನಿಗದಿಪಡಿಸಿ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿದೆ. ಆಕ್ಷೇಪ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿತ್ತು, ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿದೆ.

ಪರಿಸರ ಸೂಕ್ಷ್ಮಪ್ರದೇಶದಲ್ಲಿ ಕಂದಾಯ ಗ್ರಾಮಗಳ 298.89 ಚದರ ಕಿ.ಮೀ. ಹಾಗೂ ಅಧಿಸೂಚಿತ ಅರಣ್ಯ ಪ್ರದೇಶಗಳ 23.80 ಕಿ.ಮೀ. ಸೇರಿವೆ. ಈ ಪ್ರದೇಶದಲ್ಲಿ 62 ಗ್ರಾಮಗಳು ಬರಲಿವೆ. ಪರಿಸರ ಸೂಕ್ಷ್ಮ ಪ್ರದೇಶವನ್ನು ಕನಿಷ್ಠ ಒಂದು ಕಿ.ಮೀ. ಯಿಂದ ಗರಿಷ್ಠ 4.30 ಕಿ.ಮೀ. ವರೆಗೆ ಗುರುತಿಸಲಾಗಿದೆ. ಉತ್ತರ ದಿಕ್ಕಿನಲ್ಲಿ 1 ಕಿ.ಮೀ.ಯಿಂದ 3.25 ಕಿ.ಮೀ ವರೆಗೆ, ಪಶ್ಚಿಮ ದಿಕ್ಕಿನಲ್ಲಿ 1 ಕಿ.ಮೀ.ಯಿಂದ 4.30 ಕಿ.ಮೀ ವರೆಗೆ, ವಾಯವ್ಯ ದಿಕ್ಕಿನಲ್ಲಿ 1.96 ಕಿ.ಮೀ. ವರೆಗೆ ಪರಿಸರ ಸೂಕ್ಷ್ಮ ಪ್ರದೇಶವೆಂದು ನಿಗದಿಪಡಿಸಲಾಗಿದ್ದು, ಉಳಿದ ದಿಕ್ಕುಗಳಲ್ಲಿ 1 ಕಿ.ಮೀ. ಮಾತ್ರ ಇದೆ. ಇದರಿಂದ ಗಣಿಗಾರಿಕೆ, ಕಲ್ಲು ಮತ್ತು ಮರಳು ಗಣಿಗಾರಿಕೆಯನ್ನು ಪೂರ್ಣ ನಿಷೇಧಿಸಲಾಗುತ್ತದೆ ಅಲ್ಲದೆ ಹೋಟೆಲ್, ರೆಸಾರ್ಟ್ ಸೇರಿದಂತೆ ವನ್ಯಜೀವಿಗಳಿಗೆ ತೊಂದರೆಯಾಗುವ ಎಲ್ಲ ಚಟುವಟಿಕೆಗಳಿಗೆ ಕಡಿವಾಣ ಬಿದ್ದಂತಾಗಿದೆ. ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿನ ಚಟುವಟಿಕೆಗಳನ್ನು ನಿಯಂತ್ರಿಸಲಾಗುತ್ತದೆ ಮತ್ತು ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಲಾಗುತ್ತದೆ.

ಹಚ್ಚಹಸಿರಿನಿಂದ ಕಂಗೊಳಿಸುವ ಸ್ವಚ್ಛಂದ ವಾತಾವರಣ ಕಪ್ಪತ್ತಗುಡ್ಡ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್ ಅವಕಾಶ ಕಲ್ಪಿಸಲಾಗಿದೆ ಹಾಗೂ ಸಾಕಷ್ಟು ಸೌಲಭ್ಯ ನೀಡಲಾಗಿದೆ.

ಕಪ್ಪತ್ತಗುಡ್ಡ ಒಡಲಿನಲ್ಲಿ ಹಾಗೂ ಸುತ್ತಮುತ್ತ ಹೆಮಟೈಟ್, ಲಿಮೋನೈಟ್, ತಾಮ್ರ, ಮ್ಯಾಂಗನೀಸ್ ಮತ್ತು ಚಿನ್ನ ಸೇರಿದಂತೆ ಹಲವು ಖನಿಜ ಸಂಪನ್ಮೂಲಗಳಿವೆ. ಅಲ್ಲದೆ ಸುತ್ತಮುತ್ತ ಕಲ್ಲಿನ ಗುಡ್ಡಗಳು ಹೆಚ್ಚಾಗಿ ಕಂಡು ಬರುತ್ತವೆ. ತುಂಗಭದ್ರಾ ನದಿ ಕಪ್ಪತ್ತಗುಡ್ಡ ಹೊಂದಿಕೊಂಡು ಹರಿಯುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಮರಳು ಇಲ್ಲಿ ಸಿಗುತ್ತದೆ. ಈ ಎಲ್ಲ ಸಂಪತ್ತಿನ ಮೇಲೆ ಹಿಂದಿನಿಂದಲೂ ಗಣಿಧಣಿಗಳ ಕಣ್ಣುಬಿದ್ದಿತ್ತು. ಕಪ್ಪತ್ತಗುಡ್ಡವನ್ನು ಸಂರಕ್ಷಿಸಲು ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಮಠದ ಮಠಾಧೀಶರು, ಹೋರಾಟಗಾರರು, ಚಿಂತಕರು, ಪರಿಸರ ಪ್ರೇಮಿಗಳು, ಜನಪರ, ಕನ್ನಡಪರ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಆ ಹೋರಾಟದ ಫಲವಾಗಿ ಕರ್ನಾಟಕ ಸರಕಾರದಿಂದ ಕಪ್ಪತ್ತಗುಡ್ಡ ವನ್ಯಜೀವಿಧಾಮ ಎಂದು 2019ರ ಮೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು.

share
ಫಾರೂಕ್ ಮಕಾನದಾರ
ಫಾರೂಕ್ ಮಕಾನದಾರ
Next Story
X