Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರವಾಸಿಗರನ್ನು ಆಕರ್ಷಿಸುತ್ತಿರುವ...

ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಾರವಾರದ ಯುದ್ಧ ವಿಮಾನ ಮೂಸ್ಯಿಯಂ

ಶ್ರೀನಿವಾಸ್ ಬಾಡ್ಕರ್ಶ್ರೀನಿವಾಸ್ ಬಾಡ್ಕರ್16 Sept 2024 3:21 PM IST
share
ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಾರವಾರದ ಯುದ್ಧ ವಿಮಾನ ಮೂಸ್ಯಿಯಂ

ಯುದ್ಧ ವಿಮಾನದ ಮೂಲ ಸೌಕರ್ಯ ಅಭಿವೃದ್ಧಿಗೆ ಸರಕಾರದಿಂದ 2 ಕೋಟಿ ರೂ. ಬಿಡುಗಡೆಯಾಗಿದೆ. ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು.

-ಜೆ.ಜಯಂತ್ , ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹತ್ತಾರು ಪ್ರವಾಸಿ ತಾಣಗಳಿದ್ದರೂ ಕಾರವಾರ ನಗರದ ಟ್ಯಾಗೋರ್ ಕಡಲತೀರದಲ್ಲಿ ತಂದಿಡಲಾಗಿರುವ ಟುಪೊಲೆವ್ ನಿವೃತ್ತ ಯುದ್ಧ ವಿಮಾನ ಮ್ಯೂಸಿಯಂ ಪ್ರವಾಸಿಗರ ಹಾಟ್ ಸ್ಪಾಟ್ ಆಗುತ್ತಿದೆ. ಜೊತೆಗೆ ಪ್ರವಾಸೋದ್ಯಮ ಇಲಾಖೆಗೆ ಆದಾಯ ವೃದ್ಧಿಸುವ ಕೇಂದ್ರವೂ ಆಗಿದೆ.

1988ರಲ್ಲಿ ಭಾರತೀಯ ನೌಕಾ ಸೇನೆ ಸೇರಿದ ರಶ್ಯ ಮೂಲದ ಟುಪೊಲೆವ್ 142 ಯುದ್ಧ ವಿಮಾನಗಳು 29 ವರ್ಷ ಸೇವೆ ಸಲ್ಲಿಸಿದ ನಂತರ 2017ರಲ್ಲಿ ನಿವೃತ್ತಿಯಾಗಿತ್ತು. ಜಲಾಂತರ್ಗಾಮಿಗಳನ್ನು ಹೊಡೆದುರುಳಿಸಬಹುದಾದ ಸಾಮರ್ಥ್ಯ ಹೊಂದಿದ ವಿಶೇಷ ಯುದ್ಧ ವಿಮಾನ ಇದಾಗಿವೆ. ನಿವೃತ್ತಿಯ ಬಳಿಕ ಯುದ್ಧ ವಿಮಾನ ಅಥವಾ ನೌಕೆಗಳನ್ನು ಒಡೆದು ನಾಶ ಮಾಡಲಾಗುತ್ತದೆ. ಆದರೆ, ಟಪೊಲೆವ್ 2 ವಿಮಾನಗಳನ್ನು ವಸ್ತು ಸಂಗ್ರಹಾಲಯವಾಗಿ ಮಾಡಲು ನಿರ್ಧರಿಸಿದ ನೌಕಾಸೇನೆ ಒಂದನ್ನು ಕರ್ನಾಟಕಕ್ಕೂ ಇನ್ನೊಂದನ್ನು ಆಂಧ್ರ ಪ್ರದೇಶಕ್ಕೂ ನೀಡಿತ್ತು. ಆಂಧ್ರ ಪ್ರದೇಶ ರಾಜ್ಯದಲ್ಲಿ 2017ರಲ್ಲಿಯೇ ಅದು ವಸ್ತು ಸಂಗ್ರಹಾಲಯವಾಗಿದೆ.

ಸಾಕಷ್ಟು ಪತ್ರ ವ್ಯವಹಾರದ ಬಳಿಕ ರಕ್ಷಣಾ ಇಲಾಖೆಯ ವೆಚ್ಚದಲ್ಲಿ ಭಾರತೀಯ ನೌಕಾಸೇನೆಯಿಂದ ವಿಮಾನವನ್ನು ಕಾರವಾರಕ್ಕೆ ಸಾಗಿಸಿ 2023ರ ಅಕ್ಟೋಬರ್ನಿಂದ ಮರು ಜೋಡಣೆ ಕಾರ್ಯ ಪ್ರಾರಂಭಿಸಲಾಗಿತ್ತು. ಸುಮಾರು 8 ತಿಂಗಳು ಕಾದ ಬಳಿಕ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಿದೆ. ದೇಶದಲ್ಲಿರುವ ಎರಡೇ ನಿಜವಾದ ಯುದ್ಧ ವಿಮಾನ ವಸ್ತು ಸಂಗ್ರಹಾಲಯಗಳಲ್ಲಿ ಇದೂ ಒಂದಾಗಿರುವುದು ವಿಶೇಷ. ಸಾಕಷ್ಟು ದಿನಗಳ ಬಳಿಕ ಜೂನ್ 29ರಿಂದ ಟುಪೊಲೆವ್ ಯುದ್ಧ ವಿಮಾನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಯುದ್ಧ ವಿಮಾನ ಸಾರ್ವಜನಿಕ ವೀಕ್ಷಣೆಗೆ ಬಿಟ್ಟಿದ್ದರೂ ಇನ್ನೂ ಕೆಲವು ಸೌಲಭ್ಯಗಳು ಬೇಕಾಗಿವೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮೂಲಕ ಗೋವಾಕ್ಕೆ ತೆರಳುವವರು ಹಾಗೂ ಗೋವಾದಿಂದ ಆಗಮಿಸುವ ನೂರಾರು ಪ್ರವಾಸಿಗರಿಗೆ ಟುಪೊಲೆವ್ ನಿವೃತ್ತ ಯುದ್ಧ ವಿಮಾನ ಮ್ಯೂಸಿಯಂ ಪ್ರವಾಸಿಗರ ಸೆಲ್ಫಿ ಪಾಯಿಂಟ್ ಆಗಿದೆ.

ಕಾರವಾರದಲ್ಲಿ ಟುಪೊಲೆವ್ ಯುದ್ಧ ವಿಮಾನ ಮ್ಯೂಸಿಯಂ ಸ್ಥಾಪನೆಯಾದ ಬಳಿಕ 5,500 ಕ್ಕೂ ಅಧಿಕ ಜನರು ವೀಕ್ಷಣೆ ಮಾಡಿದ್ದಾರೆ. ವೀಕ್ಷಣೆಗೆ ಪ್ರವೇಶ ಶುಲ್ಕ ಪಡೆಯಲಾಗುತ್ತಿದ್ದು, ಕೇವಲ ಒಂದೂವರೆ ತಿಂಗಳಲ್ಲಿ 1,06,475 ರೂ. ಆದಾಯವಾಗಿದೆ. ಮಳೆಗಾಲದ ಬಳಿಕ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ. ಅದರಂತೆ ನಿರ್ಮಿತಿ ಕೇಂದ್ರ ಪ್ರಾಥಮಿಕವಾಗಿ ಪ್ಲಾಟ್ ಫಾರ್ಮ್ ಮಾತ್ರ ಮಾಡಿದೆ. ಕೆಫೆಟೇರಿಯಾ, ಗಾರ್ಡನ್ ಸೇರಿ ಇನ್ನಷ್ಟು ಪ್ರವಾಸಿಗರ ಆಕರ್ಷಣೆಯ ಕಾರ್ಯ ಮಾಡಲು ಯೋಜಿಸಲಾಗಿದೆ. ಮಳೆಗಾಲ ಮುಗಿಯುತ್ತಿದ್ದಂತೆ ಶೀಘ್ರದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ಶ್ರೀನಿವಾಸ್ ಬಾಡ್ಕರ್
ಶ್ರೀನಿವಾಸ್ ಬಾಡ್ಕರ್
Next Story
X