Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೃಷಿಯಲ್ಲಿ ಯಶಸ್ಸು ಸಾಧಿಸಿ ಮಾದರಿಯಾದ...

ಕೃಷಿಯಲ್ಲಿ ಯಶಸ್ಸು ಸಾಧಿಸಿ ಮಾದರಿಯಾದ ಬಿಎ ಪದವೀಧರ ಕಿರಣ್

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ29 Jan 2024 2:19 PM IST
share
ಕೃಷಿಯಲ್ಲಿ ಯಶಸ್ಸು ಸಾಧಿಸಿ ಮಾದರಿಯಾದ ಬಿಎ ಪದವೀಧರ ಕಿರಣ್

ಮಡಿಕೇರಿ: ತಮ್ಮದೇ ತೋಟ ಗದ್ದೆಗಳಲ್ಲಿ ಕೃಷಿ ಮಾಡಿದರೆ ತಿಂಗಳ ವೇತನಕ್ಕಾಗಿ ಯಾರ ಮುಂದೆಯೂ ಕೈ ಚಾಚುವ ಅವಶ್ಯಕತೆ ಇರುವುದಿಲ್ಲ ಎಂದು ಅರಿತ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ ಗ್ರಾಮದ ಯುವಕ ಎ.ಜಿ. ಕಿರಣ್ ಕೃಷಿಯತ್ತ ಮುಖ ಮಾಡಿ ಯಶಸ್ಸು ಸಾಧಿಸಿ ಇತರ ಕೃಷಿಕರಿಗೆ ಮಾದರಿಯಾಗಿದ್ದಾರೆ.

ಮೈಸೂರು ಯೂನಿವರ್ಸಿಟಿಯಲ್ಲಿ ಬಿಎ ಪದವಿ ಮುಗಿಸಿ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತಹ ಸಂದರ್ಭದಲ್ಲೂ ಬೆಳಗ್ಗೆ ಸಂಜೆ ಹಾಗೂ ರಜಾ ದಿನಗಳಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು ಎ.ಜಿ. ಕಿರಣ್. 6 ವರ್ಷಗಳ ಹಿಂದೆ ತಂದೆ ಮೃತಪಟ್ಟ ನಂತರ ಕೃಷಿಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಸುಮಾರು 4ಎಕರೆ ಜಾಗದಲ್ಲಿ ಕಾಫಿ, ಕಾಳುಮೆಣಸು,ಏಲಕ್ಕಿ, ಯಾಶ್ ಹಾಗೂ ಪಿಂಕ್ ಕಾಟನ್ ಥಳಿಯಂತ ಬಟರ್ ಫ್ರೂಟ್, ಸಪೋಟ, ಸೇಬಿನ ಗಿಡ, ಸೀಬೆ, ದಾಳಿಂಬೆ ಗಿಡ, ಬಾಳೆ ಗಿಡಗಳು, ತೋಟದ ಶುಂಠಿ ಇನ್ನಿತರ ಬೆಳೆಗಳನ್ನು ಬೆಳೆಯುವ ಮೂಲಕ ಉತ್ತಮ ಆದಾಯಗಳಿಸುತ್ತಿದ್ದಾರೆ.

ತೋಟದ ಮಧ್ಯದಲ್ಲಿ ಪಕ್ಷಿಗಳಿಗೋಸ್ಕರ ಪಪ್ಪಾಯ ಗಿಡಗಳನ್ನು ಹಾಕಿದ್ದಾರೆ. ಕೆಸವಿನಗೆಂಡೆ, ತರಕಾರಿಗಳು,ಮರಗೆಣಸು, ನೆಲ್ಲಿಕಾಯಿ ಮರ, ಕಿತ್ತಳೆ ಮರಗಳನ್ನೂ ಬೆಳೆಸಿದ್ದ ಇವರು ನಾಟಿಕೋಳಿ ಸಾಕಣೆ, ಹಂದಿ, ಜೇನುಹುಳ ಸಾಕಣೆ ಹೀಗೆ ಇತ್ಯಾದಿ ಕೃಷಿಯಲ್ಲಿ ತೊಡಗಿಸಿ ಕೊಂಡು ಯುವ ಕೃಷಿಕರಿಗೆ ಮಾದರಿಯಾಗಿದ್ದಾರೆ. ಕಾಫಿ ತಳಿಗಳಾದ ಅರೆಬಿಕಾ, ರೋಬಸ್ಟಾ ಕಾಫಿ ಬೆಳೆದಿದ್ದಾರೆ. ಪ್ರತಿ ವರ್ಷ ಅರೆಬಿಕಾ ಸುಮಾರು 25 ಚೀಲ ಪಾರ್ಚ್ ಮೆಂಟ್ ,ರೋಬಸ್ಟಾ 35 ಚೀಲ ಚರಿ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ 1,280ಕೆಜಿ ಕಾಳು ಮೆಣಸು ಮಾರಾಟ ಮಾಡಿದ್ದಾರೆ. ಇದರ ಜತೆಗೆ ಕಾಫಿ ಹಾಗೂ ಕಾಳುಮೆಣಸು ನರ್ಸರಿಯನ್ನೂ ಮಾಡುತ್ತಿದ್ದ ಎ.ಜಿ. ಕಿರಣ್ ಅವರು ಕೂಲಿಯಾಳುಗಳನ್ನು ಕೆಲಸಕ್ಕೆ ಕರೆಯದೇ ತಾವೇ ಸಂಪೂರ್ಣ ತೋಟದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಾರೆ.

ಸುಮಾರು 200 ಅಡಿಕೆ ಮರ, ತೆಂಗಿನ ಮರಗಳನ್ನು ಸಹ ನೆಟ್ಟಿದ್ದು , ಇದೀಗ ಅಡಿಕೆ ಮರಗಳು ಫಸಲು ನೀಡುವ ಹಂತಕ್ಕೆ ಬಂದಿವೆ. ಅಷ್ಟೇ ಅಲ್ಲದೆ ತಮ್ಮ ಜಾಗದಲ್ಲಿ ಕೆರೆ ತೋಡಿಸಿ ಅದರಲ್ಲಿ ವಿವಿಧ ಜಾತಿಯ ಮೀನು ಸಾಕಣೆ ಮಾಡಿ ಯಶಸ್ಸು ಗಳಿಸಿದ್ದಾರೆ. ಆ ಮೀನುಗಳಿಗೆ ಉತ್ತಮ ಮಾರುಕಟ್ಟೆ ಸಿಗುತ್ತಿದೆ. ಅವರು ಬೆಳೆದ ತರಕಾರಿಗಳನ್ನು ಶನಿವಾರಸಂತೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಕೃಷಿಯಲ್ಲಿ ಸಾಧನೆ ಮಾಡಿದ ಕಿರಣ್ ಅವರು ಅತ್ಯುತ್ತಮ ತಾಲೂಕು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಿರಣ್ ಅವರ ಕೃಷಿ ಚಟುವಟಿಕೆಗಳಿಗೆ ಪತ್ನಿ ಪೂರ್ಣಿಮಾ ಹಾಗೂ ತಾಯಿಯ ಸಹಕಾರವೂ ಇದ್ದು, ಅವರೂ ತೋಟದ ಕೆಲಸ ಹಾಗೂ ಇನ್ನಿತರ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕೃಷಿಗೆ ಸಂಬಂಧಪಟ್ಟ ಆತ್ಮಯೋಜನೆಯ ಸಲಹಾ ಸಮಿತಿಯ ಸದಸ್ಯರಾಗಿ ಪ್ರತಿ ಜಿಲ್ಲೆಯಿಂದ ಒಬ್ಬರನ್ನು ಆಯ್ಕೆಮಾಡಿಕೊಳ್ಳ

ಲಾಗುತ್ತದೆ. ಅದರಂತೆ ಕೊಡಗು ಜಿಲ್ಲೆಯಿಂದ ಕಿರಣ್ ಅವರನ್ನು ನೇಮಕ ಮಾಡಲಾಗಿದೆ.

ಕೋಳಿ ಗೊಬ್ಬರವನ್ನು ದನದ ಗೊಬ್ಬರದ ಜೊತೆಗೆ ಮಿಕ್ಸ್ ಮಾಡಿಕೊಂಡು ತೋಟಕ್ಕೆ ಬಳಸುವುದರಿಂದ ಉತ್ತಮ ಇಳುವರಿ ಪಡೆಯಬಹುದು. ನಿರಂತರವಾಗಿ ತೋಟಗಳಲ್ಲಿ ಸಮಯಕ್ಕೆ ಸರಿಯಾಗಿ ಎಲ್ಲ ಕೆಲಸ ನಿರ್ವಹಿಸಬೇಕು.ಆಗ ಮಾತ್ರ ಉತ್ತಮ ಫಸಲು ಪಡೆಯಲು ಸಾಧ್ಯ. ರೈತರು ಖರೀದಿಸುವ ರಸ ಗೊಬ್ಬರ ಸೇರಿದಂತೆ ಇನ್ನಿತರ ವಸ್ತುಗಳಿಗೆ ಸಂಪೂರ್ಣವಾಗಿ ರಿಯಾಯಿತಿ ನೀಡ ಬೇಕು. ಪತ್ನಿ ಹಾಗೂ ತಾಯಿ ನನ್ನ ಕೆಲಸಕ್ಕೆ ಸಹಕಾರ ನೀಡುತ್ತಿರುವುದರಿಂದ ಕೃಷಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಯಿತು.

► ಎ.ಜಿ. ಕಿರಣ್,ಯುವ ಕೃಷಿಕ ಅಪ್ಪಶೆಟ್ಟಳ್ಳಿ

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X