Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೂಜಿಗಲ್ಲಿನಂತೆ ಪ್ರವಾಸಿಗರನ್ನು...

ಸೂಜಿಗಲ್ಲಿನಂತೆ ಪ್ರವಾಸಿಗರನ್ನು ಸೆಳೆಯುತ್ತಿರುವ ಕೊಡಗಿನ ಜಲಪಾತಗಳು

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ29 July 2024 10:19 AM IST
share
ಸೂಜಿಗಲ್ಲಿನಂತೆ ಪ್ರವಾಸಿಗರನ್ನು ಸೆಳೆಯುತ್ತಿರುವ ಕೊಡಗಿನ ಜಲಪಾತಗಳು

ಮಡಿಕೇರಿ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೊಡಗು ಜಿಲ್ಲೆಯ ಬಹುತೇಕ ಜಲಪಾತಗಳು ಹಾಲ್ನೊರೆಯಂತೆ ಧುಮ್ಮಿಕ್ಕಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿವೆ.

ಮಡಿಕೇರಿಯ ಅಬ್ಬೀ ಫಾಲ್ಸ್, ಶ್ರೀಮಂಗಲ ಸಮೀಪದ ಇರ್ಪು ಜಲಪಾತ, ಸೋಮವಾರಪೇಟೆ ಸಮೀಪದ ಮಲ್ಲಳ್ಳಿ ಫಾಲ್ಸ್, ನಾಪೊಕ್ಲು ನರಿಯಂದಡ ಗ್ರಾಮ ಪಂಚಾಯತ್‌ವ್ಯಾಪ್ತಿಯ ಚೇಲಾವರ ಫಾಲ್ಸ್, ಮಡಿಕೇರಿ-ಮಂಗಳೂರು ರಸ್ತೆಯ ಕಲ್ಯಾಳ, ಚೆಟ್ಟಳ್ಳಿ- ಮಡಿಕೇರಿ ರಸ್ತೆಯ ಅಬ್ಯಾಲ ಫಾಲ್ಸ್, ಸೂರ್ಲಬ್ಬಿಯ ಮೇದೂರ ಫಾಲ್ಸ್, ಅಬ್ಬಿಮಠ ಕೊಡಗು ಜಿಲ್ಲೆಯಲ್ಲಿರುವ ಪ್ರಮುಖ ಜಲಪಾತಗಳು.

ಮಳೆಗಾಲದಲ್ಲಿ ಮೈದುಂಬಿ ಹರಿಯುವ ಜಲಪಾತಗಳನ್ನು ವೀಕ್ಷಿಸಲು ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಾರೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲೇ ಅತೀ ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವ ಜಲಪಾತಗಳು ಇವೆ. ಜಲಪಾತಗಳನ್ನು ವೀಕ್ಷಿಸಿ ಪ್ರಕೃತಿ ಸೌಂದರ್ಯವನ್ನು ಆನಂದಿಸಿದರೆ ತೊಂದರೆಯಿಲ್ಲ. ಆದರೆ ಜಾರುವ ಬಂಡೆ ಕಲ್ಲುಗಳ ಮೇಲೆ ನಿಂತು,ಸೆಲ್ಫಿ ಕ್ಲಿಕ್ಕಿಸುವ ಹುಚ್ಚಾಟಕ್ಕೆ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಸೆಲ್ಫಿ,ರೀಲ್ಸ್ ಹುಚ್ಚಾಟಕ್ಕೆ ಬಲಿಯಾಗದಿರಿ

ಕೊಡಗಿನ ಜಲಪಾತಗಳು ಎಷ್ಟು ಮನಮೋಹಕವೋ ಅಷ್ಟೇ ಅಪಾಯಕಾರಿಯೂ ಹೌದು. ಜಿಲ್ಲೆಯ ಮಲ್ಲಳ್ಳಿ ಫಾಲ್ಸ್, ಅಬ್ಬೀ ಫಾಲ್ಸ್, ಇರ್ಪು, ಚೇಲಾವರ ಜಲಪಾತಗಳಲ್ಲಿ ಮುಳುಗಿ ಸ್ಥಳೀಯರು ಹಾಗೂ ಪ್ರವಾಸಿಗರು ಮೃತಪಟ್ಟಿರುವ ಹಲವು ಘಟನೆಗಳೂ ನಡೆದಿವೆ.

ಪ್ರವಾಸಿಗರು ಬಂಡೆ ಕಲ್ಲುಗಳ ಮೇಲೆ ನಿಂತು ಸೆಲ್ಫಿ ಹಾಗೂ ರೀಲ್ಸ್ ಮಾಡುವ ಗೀಳಿಗೆ ಜಲಪಾತಗಳಿಗೆ ಜಾರಿ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ.

ಇದೀಗ ಮಳೆಗಾಲ ಆರಂಭವಾಗಿದ್ದರಿಂದ ಜಿಲ್ಲೆಯ ಜಲಪಾತಗಳ ಸೌಂದರ್ಯವನ್ನು ಸವಿಯಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬಹುತೇಕ ಜಲಪಾತಗಳಲ್ಲಿ ಯಾವುದೇ ಸುರಕ್ಷಿತ ಕ್ರಮಗಳಿಲ್ಲ. ಪ್ರವಾಸಿಗರು ಮತ್ತು ಸ್ಥಳೀಯರು ಜಲಪಾತಗಳ ಪಕ್ಕದಲ್ಲೇ ನಿಂತು ಫೋಟೊ ಕ್ಲಿಕ್ಕಿಸುವ ಹುಚ್ಚಾಟಕ್ಕೆ ಕೈ ಹಾಕಿ ಪ್ರಾಣಕ್ಕೇ ಆಪತ್ತು ತಂದುಕೊಳ್ಳುತ್ತಿದ್ದಾರೆ.

ಪ್ರವಾಸಿ ತಾಣಗಳು, ಜಲಪಾತಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳ ನಿಯಮಗಳನ್ನು ಗಾಳಿಗೆ ತೂರಿ ಹುಚ್ಚಾಟ ಮೆರೆಯುವ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿವೆ. ಪ್ರವಾಸಿಗರು ಮತ್ತು ಜಿಲ್ಲೆಯ ಯುವಕರು ಜಲಪಾತಕ್ಕಿಳಿಯುವ ದುಸ್ಸಾಹಸಕ್ಕೆ ಕೈ ಹಾಕಬೇಡಿ.

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X